AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪತಿಯನ್ನು ಕೊಂದು ಹೊಟ್ಟೆ ಸೀಳಿ ಕರುಳು ಹೊರತೆಗೆದ ಪತ್ನಿ, ಮಾಲೀಕನನ್ನು ಕಂಡು ಟೆರೇಸ್‌ನಿಂದ ಜಿಗಿತ

ಕುರುಕ್ಷೇತ್ರದಲ್ಲಿ ಭೀಕರ ಕೊಲೆ ಪ್ರಕರಣ ಬೆಳಕಿಗೆ ಬಂದಿದೆ. ಪತ್ನಿಯೊಬ್ಬಳು ತನ್ನ ಪತಿಯನ್ನು ಕೊಂದು, ಹೊಟ್ಟೆ ಸೀಳಿ ಕರುಳು ಹೊರತೆಗೆದು ಚೀಲಕ್ಕೆ ತುಂಬುತ್ತಿದ್ದಾಗ ಸಿಕ್ಕಿಬಿದ್ದಿದ್ದಾಳೆ. ಮರಣೋತ್ತರ ಪರೀಕ್ಷೆಯಲ್ಲಿ ಪತಿಯ ಯಕೃತ್ತು ಮತ್ತು ಬಲ ಮೂತ್ರಪಿಂಡ ಕಾಣೆಯಾಗಿರುವುದು ದೃಢಪಟ್ಟಿದೆ. ಇದು ಕೇವಲ ಕೌಟುಂಬಿಕ ಕಲಹವೋ ಅಥವಾ ಅಂಧಶ್ರದ್ಧೆ, ಮಾಟಮಂತ್ರದ ನರಬಲಿ ಕೃತ್ಯವೋ ಎಂಬ ಬಗ್ಗೆ ಪೊಲೀಸರು ತೀವ್ರ ತನಿಖೆ ನಡೆಸುತ್ತಿದ್ದಾರೆ.

ಪತಿಯನ್ನು ಕೊಂದು ಹೊಟ್ಟೆ ಸೀಳಿ ಕರುಳು ಹೊರತೆಗೆದ ಪತ್ನಿ, ಮಾಲೀಕನನ್ನು ಕಂಡು ಟೆರೇಸ್‌ನಿಂದ ಜಿಗಿತ
ಆರೋಪಿ
ನಯನಾ ರಾಜೀವ್
|

Updated on:Aug 24, 2026 | 7:22 AM

Share

ಕುರುಕ್ಷೇತ್ರ, ಆಗಸ್ಟ್​ 24: ಹರಿಯಾಣದ ಕುರುಕ್ಷೇತ್ರದಲ್ಲಿ ಮಾನವೀಯತೆಯೇ ತಲೆತಗ್ಗಿಸುವಂತಹ ಭೀಕರ ಹಾಗೂ ಅಮಾನವೀಯ ಕೊಲೆ(Murder) ಪ್ರಕರಣವೊಂದು ಬೆಳಕಿಗೆ ಬಂದಿದೆ. ಪೆಹೋವಾ ರಸ್ತೆಯ ಬಾಡಿಗೆ ಮನೆಯೊಂದರಲ್ಲಿ ಮಹಿಳೆಯೊಬ್ಬಳು ತನ್ನ ಪತಿಯನ್ನು ಕೊಂದು, ಹೊಟ್ಟೆ ಸೀಳಿ ಕರುಳನ್ನು ಹೊರತೆಗೆದು ಚೀಲಕ್ಕೆ ತುಂಬುತ್ತಿದ್ದಾಗ ಮನೆ ಮಾಲೀಕನಿಗೆ ರೆಡ್‌ಹ್ಯಾಂಡ್ ಆಗಿ ಸಿಕ್ಕಿಬಿದ್ದಿದ್ದಾಳೆ.

ಉತ್ತರ ಪ್ರದೇಶ ಮೂಲದ ರಾಜೇಶ್ (ಮೃತ) ಹಾಗೂ ವಿಮಲಾ ದೇವಿ (ಆರೋಪಿ) ಕುರುಕ್ಷೇತ್ರದಲ್ಲಿ ನೆಲೆಸಿದ್ದರು. ಗಲಾಟೆ ಕೇಳಿ ಟೆರೇಸ್‌ಗೆ ಬಂದ ಮನೆ ಮಾಲೀಕ ರಿಂಕು ಈ ಭೀಕರ ದೃಶ್ಯವನ್ನು ನೋಡಿದಾಗ, ಗಾಬರಿಗೊಂಡ ಆರೋಪಿ ಟೆರೇಸ್‌ನಿಂದ ಕೆಳಗೆ ಜಿಗಿದು ಗಾಯಗೊಂಡಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾಳೆ.

ಮರಣೋತ್ತರ ಪರೀಕ್ಷೆಯಲ್ಲಿ ಬಯಲಾದ ಆಘಾತಕಾರಿ ಸತ್ಯ ರಾಜೇಶ್‌ನ ಹೊಟ್ಟೆಯನ್ನು ಸುಮಾರು 35 ಸೆಂಟಿಮೀಟರ್‌ಗಳಷ್ಟು ಉದ್ದಕ್ಕೆ ಹರಿತವಾದ ಆಯುಧದಿಂದ ಸೀಳಿ ಕರುಳನ್ನು ಸಂಪೂರ್ಣವಾಗಿ ಹೊರತೆಗೆಯಲಾಗಿತ್ತು. ಮರಣೋತ್ತರ ಪರೀಕ್ಷೆಯ ವರದಿಯಲ್ಲಿ ರಾಜೇಶ್‌ನ ಯಕೃತ್ತಿನ (Liver) ಬಹುಪಾಲು ಭಾಗ ಹಾಗೂ ಬಲ ಮೂತ್ರಪಿಂಡ (Kidney) ಕಾಣೆಯಾಗಿರುವುದು ವೈದ್ಯರಿಗೆ ಆಘಾತ ಮೂಡಿಸಿದೆ.

ಮತ್ತಷ್ಟು ಓದಿ: ಬೆಂಗಳೂರಿನ ನಡು ರಸ್ತೆಯಲ್ಲಿಯೆ ವ್ಯಕ್ತಿಯ ಭೀಕರ ಹತ್ಯೆ: ಪ್ರತೀಕಾರಕ್ಕಾಗಿ ನಡೀತಾ ಕೊಲೆ?

ಅಪರಾಧ ನಡೆದ ಸ್ಥಳದಿಂದ ಪೊಲೀಸರು ರಕ್ತಸಿಕ್ತ ಮೂರು ಬೇರೆ ಬೇರೆ ಗಾತ್ರದ ಹರಿತವಾದ ಚಾಕುಗಳನ್ನು ವಶಪಡಿಸಿಕೊಂಡಿದ್ದಾರೆ.ದಂಪತಿಗೆ ಹಲವು ವರ್ಷಗಳಾದರೂ ಮಕ್ಕಳಿರಲಿಲ್ಲ. ವಿಮಲಾ ದೇವಿ ಸಾಂಪ್ರದಾಯಿಕ ಚಿಕಿತ್ಸೆ, ಮಾಟಮಂತ್ರ ಮತ್ತು ಭೂತೋಚ್ಚಾಟನೆ ಪದ್ಧತಿಗಳಲ್ಲಿ ತೊಡಗಿಸಿಕೊಂಡಿದ್ದಳು ಎಂದು ಸ್ಥಳೀಯರು ತಿಳಿಸಿದ್ದಾರೆ.

ಈ ಕೊಲೆಯು ಕೇವಲ ಕೌಟುಂಬಿಕ ಕಲಹವೋ ಅಥವಾ ಅಂಧಶ್ರದ್ಧೆ, ಮಾಟಮಂತ್ರದ ನರಬಲಿ ಪ್ರೇರಿತ ಕೃತ್ಯವೋ ಎಂಬ ಬಗ್ಗೆ ಕುರುಕ್ಷೇತ್ರ ಪೊಲೀಸರು ಮತ್ತು ವಿಧಿವಿಜ್ಞಾನ (FSL) ತಂಡಗಳು ತೀವ್ರ ತನಿಖೆ ನಡೆಸುತ್ತಿವೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 7:21 am, Mon, 24 August 26

Follow Us
ಇಂದು ಈ ರಾಶಿಯವರಿಗೆ ಅನಿರೀಕ್ಷಿತ ಲಾಭಗಳು ದೊರೆಯುವ ಸಾಧ್ಯತೆ
ಇಂದು ಈ ರಾಶಿಯವರಿಗೆ ಅನಿರೀಕ್ಷಿತ ಲಾಭಗಳು ದೊರೆಯುವ ಸಾಧ್ಯತೆ
‘ಟಾಕ್ಸಿಕ್’ಗೆ 100 ಪೀಸ್ ಆರ್ಕೆಸ್ಟ್ರಾ, ಅನುಭವ ಹಂಚಿಕೊಂಡ ಗಾಯಕ ಸಂತೋಷ್
‘ಟಾಕ್ಸಿಕ್’ಗೆ 100 ಪೀಸ್ ಆರ್ಕೆಸ್ಟ್ರಾ, ಅನುಭವ ಹಂಚಿಕೊಂಡ ಗಾಯಕ ಸಂತೋಷ್
ಕರಡಿ, ಚಿರತೆ ಆಯ್ತು ಈಗ ಕೊಪ್ಪಳದಲ್ಲಿ ಹುಲಿ ಕಾಟ
ಕರಡಿ, ಚಿರತೆ ಆಯ್ತು ಈಗ ಕೊಪ್ಪಳದಲ್ಲಿ ಹುಲಿ ಕಾಟ
ಕಳ್ಳ ಬೇಟೆ ತಡೆ ಶಿಬಿರ ಧ್ವಂಸ:ಶೂಟೌಟ್​​​​​​​​​ ಕೇಸಿನ ಗ್ರೌಂಡ್ ರಿಪೋರ್ಟ್
ಕಳ್ಳ ಬೇಟೆ ತಡೆ ಶಿಬಿರ ಧ್ವಂಸ:ಶೂಟೌಟ್​​​​​​​​​ ಕೇಸಿನ ಗ್ರೌಂಡ್ ರಿಪೋರ್ಟ್
100ರೂ.ನೀರಿನ ಬಾಟಲಿ ತಗೋತಾರೆ:50ರೂ. ಕೊಟ್ಟು ಸಕ್ಕರೆ ತೆಗೊಂಡ್ರೆ ಏನೂ ಆಗಲ್ಲ
100ರೂ.ನೀರಿನ ಬಾಟಲಿ ತಗೋತಾರೆ:50ರೂ. ಕೊಟ್ಟು ಸಕ್ಕರೆ ತೆಗೊಂಡ್ರೆ ಏನೂ ಆಗಲ್ಲ
ರೈತರಲ್ಲಿ ಆತಂಕ ತಂದ ಅರಣ್ಯ ಇಲಾಖೆ ಸಚಿವರ ಆ ಹೇಳಿಕೆ: ಹೇಳಿದ್ದೇನು?
ರೈತರಲ್ಲಿ ಆತಂಕ ತಂದ ಅರಣ್ಯ ಇಲಾಖೆ ಸಚಿವರ ಆ ಹೇಳಿಕೆ: ಹೇಳಿದ್ದೇನು?
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ