AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

84ನೇ ವಯಸ್ಸಲ್ಲಿ ಒಲಿದು ಬಂತು ಪದ್ಮಶ್ರೀ; ಮೋದಿ ಭರವಸೆ ನೀಡಿದ್ದರೂ ಬೈಗಾ ಕಲೆಯ ಈ ಅಮ್ಮನಿಗೆ ಸಿಕ್ಕಿಲ್ಲ ಮನೆ

ಮಧ್ಯಪ್ರದೇಶದ ಉಮಾರಿಯಾ ಜಿಲ್ಲೆಯ ಲೋರ್ಹಾ ಗ್ರಾಮದ ಮಣ್ಣು ಮತ್ತು ಅಸ್ಬೆಸ್ಟೋಸ್ ಮನೆಯಲ್ಲಿ ವಾಸಿಸುವ ಬೈಗಾ ಆರ್ಟ್ ಮ್ಯೂರಲ್ ಪೇಂಟರ್, "ನನಗೆ ಪಕ್ಕಾ ಮನೆ ನೀಡುವಂತೆ ನಾನು ಪ್ರಧಾನಿ ಮೋದಿ ಮತ್ತು ಮುಖ್ಯಮಂತ್ರಿ ಶಿವರಾಜ್ ಚೌಹಾಣ್ ಇಬ್ಬರಿಗೂ ಕೈ ಜೋಡಿಸಿ ವಿನಂತಿಸುತ್ತೇನೆ" ಎಂದು ಹೇಳಿದ್ದಾರೆ

84ನೇ ವಯಸ್ಸಲ್ಲಿ ಒಲಿದು ಬಂತು ಪದ್ಮಶ್ರೀ; ಮೋದಿ ಭರವಸೆ ನೀಡಿದ್ದರೂ ಬೈಗಾ ಕಲೆಯ ಈ ಅಮ್ಮನಿಗೆ ಸಿಕ್ಕಿಲ್ಲ ಮನೆ
ಜೋಧಯ್ಯ ಬಾಯಿ ಬೈಗಾ
TV9 Web
| Edited By: ರಶ್ಮಿ ಕಲ್ಲಕಟ್ಟ|

Updated on:Jan 27, 2023 | 6:42 PM

Share

ಲೋರ್ಹಾ (ಮಧ್ಯಪ್ರದೇಶ): 84 ನೇ ವಯಸ್ಸಿನಲ್ಲಿ, ಕೂಲಿ-ಪೇಂಟರ್ ಜೋಧಯ್ಯ ಬಾಯಿ (Jodhaiya Bai) ಬೈಗಾ ‘ಅಮ್ಮ’ ಅವರಿಗೆ ಈ ವರ್ಷ ಪದ್ಮಶ್ರೀ (Padma Shri) ಪ್ರಶಸ್ತಿ ಒಲಿದು ಬಂದಿದೆ. ಆದರೆ ಪ್ರಧಾನಿ ನರೇಂದ್ರ ಮೋದಿಯವರ (Narendra Modi) ಭರವಸೆಯ ಹೊರತಾಗಿಯೂ  ಕಾಂಕ್ರೀಟ್ ಮನೆಗಾಗಿ ಅವರ ಕಾಯುವಿಕೆ ಮುಂದುವರೆದಿದೆ. ಮಧ್ಯಪ್ರದೇಶದ ಉಮಾರಿಯಾ ಜಿಲ್ಲೆಯ ಲೋರ್ಹಾ ಗ್ರಾಮದ ಮಣ್ಣು ಮತ್ತು ಅಸ್ಬೆಸ್ಟೋಸ್ ಮನೆಯಲ್ಲಿ ವಾಸಿಸುವ ಬೈಗಾ ಆರ್ಟ್ ಮ್ಯೂರಲ್ ಪೇಂಟರ್, “ನನಗೆ ಪಕ್ಕಾ ಮನೆ ನೀಡುವಂತೆ ನಾನು ಪ್ರಧಾನಿ ಮೋದಿ ಮತ್ತು ಮುಖ್ಯಮಂತ್ರಿ ಶಿವರಾಜ್ ಚೌಹಾಣ್ ಇಬ್ಬರಿಗೂ ಕೈ ಜೋಡಿಸಿ ವಿನಂತಿಸುತ್ತೇನೆ” ಎಂದು ಹೇಳಿದ್ದಾರೆ. 10 ತಿಂಗಳ ಹಿಂದೆ ದೆಹಲಿಯಲ್ಲಿ ನಾರಿ ಶಕ್ತಿ ಪುರಸ್ಕಾರ ನೀಡಿ ಗೌರವಿಸಿದಾಗ ಮನೆಯ ಭರವಸೆ ನೀಡಲಾಗಿತ್ತು. ನಾನು ಮೋದಿಜಿಯನ್ನು ತಬ್ಬಿಕೊಂಡೆ ಮತ್ತು ಪಕ್ಕಾ ಮನೆ ಇಲ್ಲದಿರುವ ಬಗ್ಗೆ ನನ್ನ ನೋವನ್ನು ಹಂಚಿಕೊಂಡಿದ್ದೇನೆ.ಅವರು ನನಗೆ ಮನೆ ನೀಡುವುದಾಗಿ ಭರವಸೆ ನೀಡಿದರು” ಅಂತಾರೆ ಜೋಧಯ್ಯ ಬಾಯಿ.

“ನಾನು ಅಂದಿನಿಂದ ಉಮಾರಿಯಾ ಮತ್ತು ರಾಜ್ಯದ ರಾಜಧಾನಿ ಭೋಪಾಲ್‌ನಲ್ಲಿರುವ ಸರ್ಕಾರಿ ಕಚೇರಿಗಳಿಗೆ ಭೇಟಿ ನೀಡಿದ್ದೇನೆ. ಆದರೆ ಪ್ರಯೋಜನವಾಗಲಿಲ್ಲ ಎಂದಿದ್ದಾರೆ ಅವರು. ಈ ವರ್ಷ ಭಾರತದ ನಾಲ್ಕನೇ ಅತ್ಯುನ್ನತ ನಾಗರಿಕ ಗೌರವ ಪದ್ಮಶ್ರೀಗೆ ಆಯ್ಕೆಯಾದ 91 ವ್ಯಕ್ತಿಗಳ ಪೈಕಿ ಇವರೂ ಒಬ್ಬರಾಗಿದ್ದಾರೆ.

ಇದನ್ನೂ ಓದಿ:ಸದನದಲ್ಲಿ ChatGPT ಬಳಸಿ ಬರೆದ ಭಾಷಣ ಓದಿದ ಅಮೆರಿಕದ ಶಾಸಕ ಜೇಕ್ ಆಚಿನ್‌ಕ್ಲೋಸ್

ಇವರ ಇಬ್ಬರು ಪುತ್ರರು ಕಾರ್ಮಿಕರಾಗಿದ್ದಾರೆ. ಇವರು ಪ್ರಧಾನ ಮಂತ್ರಿ ಆವಾಸ್ ಯೋಜನೆಯ ಭಾಗವಾಗಿ ಮನೆಗಳನ್ನು ಹೊಂದಿದ್ದು, ಜೋಧಯ್ಯ ಬಾಯಿ ಅಲ್ಲೇ ಪಕ್ಕದಲ್ಲಿ ವಾಸಿಸುತ್ತಿದ್ದಾರೆ.

ಪ್ರಧಾನ ಮಂತ್ರಿ ಆವಾಜ್ ಯೋಜನೆ ಫಲಾನುಭವಿಗಳ ಪಟ್ಟಿಯಲ್ಲಿ ಅವರ ಹೆಸರು ಇಲ್ಲ, ಆದರೆ ಅವರ ಪುತ್ರರು ಪ್ರಯೋಜನ ಪಡೆದಿದ್ದಾರೆ. ಸಬ್ಸಿಡಿ ಸಹಿತ LPG ಮತ್ತು ಇತರ ಯೋಜನೆಗಳ ಅಡಿಯಲ್ಲಿ ಪಿಂಚಣಿಯ ಪ್ರಯೋಜನಗಳನ್ನು ಅವರು ಪಡೆದುಕೊಂಡಿದ್ದಾರೆ. ಆದರೆ ಪ್ರಧಾನ ಮಂತ್ರಿ ಆವಾಸ್‌ಗೆ ಸಂಬಂಧಿಸಿದಂತೆ ರಾಜ್ಯ ಸರ್ಕಾರವು ನೀತಿ ನಿರ್ಧಾರವನ್ನು ತೆಗೆದುಕೊಳ್ಳಬೇಕಾಗುತ್ತದೆ ಎಂದು ಪಂಚಾಯತ್ ಹಿರಿಯ ಅಧಿಕಾರಿ ಕೆಕೆ ರೈಕ್ವಾರ್ ಹೇಳಿದ್ದಾರೆ.

ಅವರು 2019 ರಲ್ಲಿ ವರ್ಣಚಿತ್ರಕಾರರಾಗುವ ಮೊದಲು ಅವರು ತಮ್ಮ ಜೀವನದ ದಶಕಗಳನ್ನು ಕಟ್ಟಡ ಕಾರ್ಮಿಕರಾಗಿ ಕಳೆದರು. ಇದರ ನಡುವೆ ದೇಸೀ ಮದ್ಯವನ್ನು ಸಹ ಮಾರಾಟ ಮಾಡುತ್ತಿದ್ದರು. ಅವರು 70 ವರ್ಷದವರಾಗಿದ್ದಾಗ ಅವರಿಗಿಂತ 20 ವರ್ಷ ಕಿರಿಯ ಆಶಿಶ್ ಸ್ವಾಮಿ ಅವರಿಂದ ಈ ಕಲೆ ಕಲಿತಿದ್ದರು.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 6:18 pm, Fri, 27 January 23

Follow Us
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!