ಲಡಾಖ್​​ಗೆ ರಾಜ್ಯ ಸ್ಥಾನಮಾನ ನೀಡುವಂತೆ ಪ್ರತಿಭಟನೆ, 6 ತಿಂಗಳ ಹಿಂದೆ ಬಂಧನಕ್ಕೊಳಗಾಗಿದ್ದ ಸೋನಮ್ ವಾಂಗ್​​ಚುಕ್ ಶೀಘ್ರ ಬಿಡುಗಡೆ

ಸಾಮಾಜಿಕ ಕಾರ್ಯಕರ್ತ ಸೋನಮ್ ವಾಂಗ್ಚುಕ್ ಆರು ತಿಂಗಳ ಬಳಿಕ ಬಿಡುಗಡೆಯಾಗಿದ್ದಾರೆ. ಲಡಾಖ್​ಗೆ ರಾಜ್ಯ ಸ್ಥಾನಮಾನ ಮತ್ತು 6ನೇ ಶೆಡ್ಯೂಲ್ ಸೇರ್ಪಡೆಗಾಗಿ ನಡೆದ ಪ್ರತಿಭಟನೆಗಳನ್ನು ಪ್ರಚೋದಿಸಿದ ಆರೋಪದ ಮೇಲೆ ಅವರನ್ನು ರಾಷ್ಟ್ರೀಯ ಭದ್ರತಾ ಕಾಯ್ದೆ (NSA) ಅಡಿಯಲ್ಲಿ ಬಂಧಿಸಲಾಗಿತ್ತು. ಅವರ ಬಿಡುಗಡೆಯು ಲಡಾಖ್‌ನ ಭವಿಷ್ಯ, ಪರಿಸರ ಸಮಸ್ಯೆಗಳು ಮತ್ತು ಜನರ ಬೇಡಿಕೆಗಳ ಕುರಿತ ಚರ್ಚೆಯನ್ನು ಮತ್ತೆ ತೀವ್ರಗೊಳಿಸುವ ಸಾಧ್ಯತೆ ಇದೆ.

ಲಡಾಖ್​​ಗೆ ರಾಜ್ಯ ಸ್ಥಾನಮಾನ ನೀಡುವಂತೆ ಪ್ರತಿಭಟನೆ, 6 ತಿಂಗಳ ಹಿಂದೆ ಬಂಧನಕ್ಕೊಳಗಾಗಿದ್ದ ಸೋನಮ್ ವಾಂಗ್​​ಚುಕ್ ಶೀಘ್ರ ಬಿಡುಗಡೆ
ಸೋನಮ್
Image Credit source: India TV

Updated on: Mar 14, 2026 | 12:42 PM

ಲಡಾಖ್, ಮಾರ್ಚ್​ 14: ಲಡಾಕ್​ಗೆ ರಾಜ್ಯ ಸ್ಥಾನಮಾನ ನೀಡುವಂತೆ ಒತ್ತಾಯಿಸಿ  ಲೇಹ್ ಲಡಾಖ್(Ladakh)​ನಲ್ಲಿ ನಡೆಯುತ್ತಿದ್ದ ಶಾಂತಿಯುತ ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗಿದ ಬಳಿಕ ಬಂಧನಕ್ಕೊಳಗಾಗಿದ್ದ ಸಾಮಾಜಿಕ ಕಾರ್ಯಕರ್ತ ಸೋನಮ್ ವಾಂಗ್​ಚುಕ್ ಅವರನ್ನು ಇದೀಗ ಆರು ತಿಂಗಳ ಬಳಿಕ ಬಿಡುಗಡೆ ಮಾಡಲಾಗುತ್ತಿದೆ.ಸೋನಮ್ ವಾಂಗ್‌ಚುಕ್ ಅವರನ್ನು ಇಂದು ರಾಷ್ಟ್ರೀಯ ಭದ್ರತಾ ಕಾಯ್ದೆ (ಎನ್‌ಎಸ್‌ಎ) ಅಡಿಯಲ್ಲಿ ಬಂಧಿಸಲಾಯಿತು.

ಕೇಂದ್ರಾಡಳಿತ ಪ್ರದೇಶವಾದ ಲಡಾಖ್​​ಗೆ ರಾಜ್ಯ ಸ್ಥಾನಮಾನ ನೀಡುವಂತೆ ಒತ್ತಾಯಿಸುತ್ತಿರುವ ಪ್ರತಿಭಟನಾಕಾರರನ್ನು ಪ್ರಚೋದಿಸಿದ ಆರೋಪದ ಮೇಲೆ ಅವರನ್ನು ಬಂಧಿಸಲಾಗಿತ್ತು.15 ದಿನಗಳಿಂದ ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದ ಸೋನಮ್ ವಾಂಗ್​ಚುಕ್ ಪ್ರತಿಭಟನೆಯಿಂದ 4 ಜನರು ಸಾವನ್ನಪ್ಪಿದ ಬಳಿಕ ತಮ್ಮ ಉಪವಾಸವನ್ನು ನಿಲ್ಲಿಸಿದ್ದರು.

ನಡೆದ ಘರ್ಷಣೆಗಳ ನಂತರ, ಅಧಿಕಾರಿಗಳು ಲೇಹ್‌ನಲ್ಲಿ ಕರ್ಫ್ಯೂ ವಿಧಿಸಿದ್ದರು. ವಾಂಗ್‌ಚುಕ್ ಕೂಡ ತಮ್ಮ ಎರಡು ವಾರಗಳ ಉಪವಾಸ ಸತ್ಯಾಗ್ರಹವನ್ನು ಸಹ ರದ್ದುಗೊಳಿಸಿದ್ದರು. ರಾಜ್ಯ ಸ್ಥಾನಮಾನ ಮತ್ತು ಲಡಾಖ್ ಅನ್ನು ಸಂವಿಧಾನದ ಆರನೇ ವೇಳಾಪಟ್ಟಿಗೆ ಸೇರಿಸಬೇಕೆಂದು ಅವರು ಒತ್ತಾಯಿಸಿದ್ದರು.
ಈಗ, ಆಡಳಿತವು ಅವರನ್ನು ಬಿಡುಗಡೆ ಮಾಡಲು ನಿರ್ಧರಿಸಿದೆ. ಅವರ ಬಿಡುಗಡೆಯು ಲಡಾಖ್ ಮತ್ತು ಪರಿಸರಕ್ಕೆ ಸಂಬಂಧಿಸಿದ ವಿಷಯಗಳ ಕುರಿತು ಚರ್ಚೆಯನ್ನು ಮತ್ತೆ ಹುಟ್ಟುಹಾಕಬಹುದು ಎಂದು ಹೇಳಲಾಗುತ್ತಿದೆ.

ಮತ್ತಷ್ಟು ಓದಿ: ಲಡಾಖ್‌ನ ಹಿಂಸಾತ್ಮಕ ಪ್ರತಿಭಟನೆಗಳ ಬಳಿಕ ಸೋನಮ್ ವಾಂಗ್‌ಚುಕ್ ಬಂಧನ

ಲಡಾಖ್ ಮೂಲದ ಸಾಮಾಜಿಕ ಕಾರ್ಯಕರ್ತ ಸೋನಮ್ ವಾಂಗ್‌ಚುಕ್ ಅವರ ಬಂಧನವನ್ನು ಕೇಂದ್ರ ಸರ್ಕಾರ ಸುಪ್ರೀಂ ಕೋರ್ಟ್‌ನಲ್ಲಿ ಸಮರ್ಥಿಸಿಕೊಂಡಿತ್ತು, ಅವರ ಸಾರ್ವಜನಿಕ ಭಾಷಣಗಳು ಪ್ರಚೋದನೆ, ಪ್ರತ್ಯೇಕತಾವಾದಿ ಸಂದೇಶ ಮತ್ತು ರಾಷ್ಟ್ರೀಯ ಭದ್ರತೆಗೆ ಬೆದರಿಕೆಯಾಗಿದೆ, ವಿಶೇಷವಾಗಿ ಆಯಕಟ್ಟಿನ ಸೂಕ್ಷ್ಮ ಗಡಿ ಪ್ರದೇಶದಲ್ಲಿ ಬೆದರಿಕೆಯಾಗಿದೆ ಎಂದು ಕೇಂದ್ರ ಸರ್ಕಾರದ ಪರ ವಕೀಲರು ವಾದಿಸಿದ್ದರು.

ವಾಂಗ್​​ಚುಕ್ ಲಡಾಖ್ ನ್ನು ನೇಪಾಳ, ಬಾಂಗ್ಲಾದೇಶ ಮತ್ತು ಶ್ರೀಲಂಕಾದಂತಹ ಪರಿಸ್ಥಿತಿಯತ್ತ ತಳ್ಳಲು ಯುವ ಪೀಳಿಗೆಯನ್ನು ಪ್ರಚೋದಿಸಲು ಪ್ರಯತ್ನಿಸಿದ್ದಾರೆ ಎಂದು ಕೇಂದ್ರ ಸರ್ಕಾರದ ಪರವಾಗಿ ಹಾಜರಾದ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ನ್ಯಾಯಾಲಯಕ್ಕೆ ಹೇಳಿದರು. ಆ ದೇಶಗಳಲ್ಲಿನ ಹಿಂಸಾತ್ಮಕ ದಂಗೆಗಳು ಮತ್ತು ರಾಜಕೀಯ ಅಸ್ಥಿರತೆಯನ್ನು ಉದಾಹರಣೆಗಳಾಗಿ ಉಲ್ಲೇಖಿಸಿದ್ದರು.

ಲಡಾಖ್‌ಗೆ ಅಗತ್ಯವಿರುವ ಎಲ್ಲಾ ಸುರಕ್ಷತೆಗಳನ್ನು ಒದಗಿಸುವ ತನ್ನ ಬದ್ಧತೆಯನ್ನು ಸರ್ಕಾರ ಪುನರುಚ್ಚರಿಸಿದೆ. ಲಡಾಖ್‌ನ ಜನರ ಆಕಾಂಕ್ಷೆಗಳು ಮತ್ತು ಕಳವಳಗಳನ್ನು ಪರಿಹರಿಸುವ ಉದ್ದೇಶದಿಂದ ಕೇಂದ್ರ ಸರ್ಕಾರವು ಸಮುದಾಯದ ನಾಯಕರೊಂದಿಗೆ ಸಕ್ರಿಯವಾಗಿ ಮಾತುಕತೆ ನಡೆಸುತ್ತಿದೆ.

 

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

 

 

 

Published On - 12:41 pm, Sat, 14 March 26

Follow Us