Tirupati Laddu: ತಿರುಪತಿ ಲಡ್ಡಿನಲ್ಲಿ ಪ್ರಾಣಿಗಳ ಕೊಬ್ಬು, ತುಪ್ಪದ ಗುಣಮಟ್ಟ ಪರೀಕ್ಷೆಗೆ ಸಮಿತಿ ರಚನೆ

ತಿರುಪತಿ ಲಡ್ಡು ತಯಾರಿಕೆಯಲ್ಲಿ ಗುಣಮಟ್ಟವಿಲ್ಲದ ಪದಾರ್ಥಗಳು ಮತ್ತು ಪ್ರಾಣಿಗಳ ಕೊಬ್ಬನ್ನು ಬಳಸಲಾಗುತ್ತಿದೆ ಎಂದು ಸ್ವತಃ ಆಂಧ್ರ ಪ್ರದೇಶ ಸಿಎಂ ನಾಯ್ಡು ಆರೋಪಿಸಿದ ಬೆನ್ನಲ್ಲೇ, ತಿರುಪತಿ ಲಡ್ಡುವಿನಲ್ಲಿ ದನದ ಕೊಬ್ಬು, ಮೀನಿನ ಎಣ್ಣೆ ಬಳಸಿರುವುದು ಲ್ಯಾಬ್ ವರದಿಯಲ್ಲಿ ದೃಢಪಟ್ಟಿದ್ದು ತುಪ್ಪದ ಗುಣಮಟ್ಟವನ್ನು ಪರೀಕ್ಷಿಸಲು ಸಮಿತಿಯನ್ನು ದೇವಸ್ಥಾನದ ಆಡಳಿತ ಸ್ಥಾಪಿಸಿದೆ.

Tirupati Laddu: ತಿರುಪತಿ ಲಡ್ಡಿನಲ್ಲಿ ಪ್ರಾಣಿಗಳ ಕೊಬ್ಬು, ತುಪ್ಪದ ಗುಣಮಟ್ಟ ಪರೀಕ್ಷೆಗೆ ಸಮಿತಿ ರಚನೆ
ಲಡ್ಡು
Image Credit source: HMTVLive

Updated on: Sep 20, 2024 | 8:45 AM

ತಿರುಪತಿ ಲಡ್ಡು ತಯಾರಿಕೆಯಲ್ಲಿ ಗುಣಮಟ್ಟವಿಲ್ಲದ ಪದಾರ್ಥಗಳು ಮತ್ತು ಪ್ರಾಣಿಗಳ ಕೊಬ್ಬನ್ನು ಬಳಸಲಾಗುತ್ತಿದೆ ಎಂದು ಸ್ವತಃ ಆಂಧ್ರ ಪ್ರದೇಶ ಸಿಎಂ ನಾಯ್ಡು ಆರೋಪಿಸಿದ ಬೆನ್ನಲ್ಲೇ, ತಿರುಪತಿ ಲಡ್ಡುವಿನಲ್ಲಿ ದನದ ಕೊಬ್ಬು, ಮೀನಿನ ಎಣ್ಣೆ ಬಳಸಿರುವುದು ಲ್ಯಾಬ್ ವರದಿಯಲ್ಲಿ ದೃಢಪಟ್ಟಿದ್ದು ತುಪ್ಪದ ಗುಣಮಟ್ಟವನ್ನು ಪರೀಕ್ಷಿಸಲು ಸಮಿತಿಯನ್ನು ದೇವಸ್ಥಾನದ ಆಡಳಿತ ಸ್ಥಾಪಿಸಿದೆ.

ಡಾ.ಸುರೇಂದ್ರನಾಥ್, ಡಾ.ವಿಜಯ್ ಭಾಸ್ಕರ್ ರೆಡ್ಡಿ, ಡಾ.ಸ್ವರ್ಣಲತಾ ಮತ್ತು ಡಾ.ಮಹದೇವನ್ ಅವರನ್ನೊಳಗೊಂಡ ನಾಲ್ಕು ತಜ್ಞರ ಸಮಿತಿಯನ್ನು ರಚಿಸಲಾಗಿದ್ದು, ಒಂದು ವಾರದೊಳಗೆ ವರದಿ ಸಲ್ಲಿಸುವ ನಿರೀಕ್ಷೆಯಿದೆ ಎಂದು ತಿರುಮಲ ತಿರುಪತಿ ದೇವಸ್ಥಾನದ (ಟಿಟಿಡಿ) ಕಾರ್ಯನಿರ್ವಾಹಕ ಅಧಿಕಾರಿ ಜೆ ಶ್ಯಾಮಲಾ ರಾವ್ ಗುರುವಾರ ತಿಳಿಸಿದ್ದಾರೆ.

ಕಠಿಣ ಎಚ್ಚರಿಕೆ

ಟೆಂಡರ್‌ಗಳಲ್ಲಿ ಗುಣಮಟ್ಟದ ತುಪ್ಪವನ್ನು ಖರೀದಿಸಲು ಸೇರಿಸಬೇಕಾದ ನಿಯಮಗಳು ಮತ್ತು ಷರತ್ತುಗಳ ಬಗ್ಗೆ ಸಮಿತಿಯು ಸಲಹೆ ನೀಡಲಿದೆ ಎಂದು ಅವರು ಹೇಳಿದರು. ಗುತ್ತಿಗೆದಾರರು ಕಲಬೆರಕೆ ಮತ್ತು ಕಡಿಮೆ ಗುಣಮಟ್ಟದ ತುಪ್ಪವನ್ನು ಸರಬರಾಜು ಮಾಡಿದರೆ ಕಠಿಣ ಕ್ರಮದ ಎಚ್ಚರಿಕೆಯನ್ನೂ ನೀಡಲಾಗಿದೆ.

ಯಾವುದೇ ಕಲಬೆರಕೆ ಪರೀಕ್ಷಾ ಸಾಧನಗಳಿಲ್ಲದ ಕಾರಣ ಸಂಗ್ರಹಣೆಯ ಮೂಲಕ ಕಚ್ಚಾ ವಸ್ತುಗಳು ಮತ್ತು ತುಪ್ಪವನ್ನು ಸಂಸ್ಕರಿಸುವ ವ್ಯವಸ್ಥೆಗಳಲ್ಲಿ ಮಿತಿಗಳು ಮತ್ತು ನಿರ್ಬಂಧಗಳಿವೆ ಎಂದು ಒಪ್ಪಿಕೊಂಡರು.

ಚಂದ್ರಬಾಬು ನಾಯ್ಡು ಹೇಳಿದ್ದೇನು?

ಪತ್ರಿಕಾಗೋಷ್ಠಿಯೊಂದರಲ್ಲಿ ಆಂಧ್ರಪ್ರದೇಶ ಮುಖ್ಯಮಂತ್ರಿ ಎನ್. ಚಂದ್ರಬಾಬು ನಾಯ್ಡು ಮಾತನಾಡಿ,ಹಿಂದಿನ ವೈಎಸ್‌ಆರ್‌ಸಿಪಿ ಸರ್ಕಾರದ ಅವಧಿಯಲ್ಲಿ ಪ್ರಸಿದ್ಧ ತಿರುಪತಿ ಲಡ್ಡು ತಯಾರಿಕೆಯಲ್ಲಿ ಗುಣಮಟ್ಟವಿಲ್ಲದ ಪದಾರ್ಥಗಳು ಮತ್ತು ಪ್ರಾಣಿಗಳ ಕೊಬ್ಬನ್ನು ಬಳಸಲಾಗಿದೆ ಎಂದು ಆರೋಪಿಸಿದ್ದರು.

ಮತ್ತಷ್ಟು ಓದಿ: ತಿರುಪತಿ ಲಡ್ಡುಗಳಲ್ಲಿ ಪ್ರಾಣಿಗಳ ಕೊಬ್ಬು ಬಳಕೆ, ಚಂದ್ರಬಾಬು ನಾಯ್ಡು ಗಂಭೀರ ಆರೋಪ

ತಜ್ಞರ ಸಮಿತಿ ರಚನೆ

ತಿರುಮಲ ವೆಂಕಟೇಶ್ವರ ಸ್ವಾಮಿ ದೇವಸ್ಥಾನದ ಪಾವಿತ್ರ್ಯತೆಗೆ ಧಕ್ಕೆಯಾಗಿದೆ. ದೇವರಿಗೆ ಅರ್ಪಿಸುವ ನೈವೇದ್ಯವನ್ನು ಅಪವಿತ್ರಗೊಳಿಸಲಾಗಿದೆ ಎಂದು ಆರೋಪ ಮಾಡಿದ್ದಾರೆ. ಗುಣಮಟ್ಟದ ತುಪ್ಪ ಖರೀದಿಸಲು ನಾಲ್ವರು ಗಣ್ಯರನ್ನೊಳಗೊಂಡ ತಜ್ಞರ ಸಮಿತಿಯನ್ನೂ ಟಿಟಿಡಿ ರಚಿಸಿದೆ. ಈ ಸಮಿತಿಯ ಶಿಫಾರಸುಗಳ ಆಧಾರದ ಮೇಲೆ ಪ್ರಸ್ತುತ ಕರ್ನಾಟಕ ಸಹಕಾರಿ ಹಾಲು ಉತ್ಪನ್ನ ಕಂಪನಿಯಿಂದ ನೇರವಾಗಿ ತುಪ್ಪವನ್ನು ಖರೀದಿಸಲಾಗುತ್ತಿದೆ.

ಇದೇ ತುಪ್ಪವನ್ನು ತಿರುಮಲ ಲಡ್ಡು ತಯಾರಿಕೆಯಲ್ಲಿ ಸದ್ಯ ಬಳಸಲಾಗುತ್ತಿದೆ. ಮತ್ತೊಂದೆಡೆ ತಿರುಮಲ ತಿರುಪತಿ ದೇವಸ್ಥಾನದ ಇಒ ಶ್ಯಾಮಲಾ ರಾವ್ ಕೂಡ ಇತ್ತೀಚೆಗೆ ನಡೆದ ಸಭೆಯಲ್ಲಿ ತಿರುಮಲ ಲಡ್ಡು ಗುಣಮಟ್ಟ ಹೆಚ್ಚಿದ್ದು, ರುಚಿಯೂ ಚೆನ್ನಾಗಿದೆ ಎಂದು ಹೇಳಿದ್ದರು.

 

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 8:11 am, Fri, 20 September 24

Nayana Rajeev

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
Follow Us