AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Lakhimpur Kheri ಲಖಿಂಪುರ್ ಖೇರಿ ಪ್ರಕರಣ ತನಿಖೆ ನಡೆಸುತ್ತಿದ್ದ ಎಸ್‌ಐಟಿ ಮುಖ್ಯಸ್ಥರಿಗೆ ಹೊಸ ಹುದ್ದೆ

SIT head Upendra Kumar ಎಸ್ಐಟಿ ನೇತೃತ್ವ ವಹಿಸಿರುವ ಉಪ ಪೊಲೀಸ್ ಇನ್ಸ್‌ಪೆಕ್ಟರ್ ಜನರಲ್ (ಡಿಐಜಿ) ಉಪೇಂದ್ರ ಕುಮಾರ್ ಅಗರ್ವಾಲ್ ಅವರಿಗೆ ಉತ್ತರ ಪ್ರದೇಶ ಸರ್ಕಾರ ಶುಕ್ರವಾರ ಗೊಂಡ ವಲಯದ ಡಿಐಜಿಯಾಗಿ ಅಧಿಕಾರ ವಹಿಸಿಕೊಳ್ಳುವಂತೆ ಸೂಚಿಸಿದೆ

Lakhimpur Kheri ಲಖಿಂಪುರ್ ಖೇರಿ ಪ್ರಕರಣ ತನಿಖೆ ನಡೆಸುತ್ತಿದ್ದ ಎಸ್‌ಐಟಿ ಮುಖ್ಯಸ್ಥರಿಗೆ ಹೊಸ ಹುದ್ದೆ
ಲಖಿಂಪುರ್ ಖೇರಿ
TV9 Web
| Edited By: |

Updated on: Oct 22, 2021 | 5:41 PM

Share

ಲಖನೌ: ಲಖಿಂಪುರ್ ಖೇರಿ ಘಟನೆ ಕುರಿತು ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡದ (SIT) ನೇತೃತ್ವ ವಹಿಸಿರುವ ಉಪ ಪೊಲೀಸ್ ಇನ್ಸ್‌ಪೆಕ್ಟರ್ ಜನರಲ್ (ಡಿಐಜಿ) ಉಪೇಂದ್ರ ಕುಮಾರ್ ಅಗರ್ವಾಲ್ ಅವರಿಗೆ ಉತ್ತರ ಪ್ರದೇಶ ಸರ್ಕಾರ ಶುಕ್ರವಾರ ಗೊಂಡ ವಲಯದ ಡಿಐಜಿಯಾಗಿ ಅಧಿಕಾರ ವಹಿಸಿಕೊಳ್ಳುವಂತೆ ಸೂಚಿಸಿದೆ. 2005 ರ ಬ್ಯಾಚ್‌ನ ಐಪಿಎಸ್ ಅಧಿಕಾರಿಯಾಗಿರುವ ಅಗರ್‌ವಾಲ್ ಲಕ್ನೋದಲ್ಲಿರುವ ಯುಪಿ ಡೈರೆಕ್ಟರ್ ಜನರಲ್ ಆಫ್ ಪೋಲಿಸ್ ಪ್ರಧಾನ ಕಚೇರಿಗೆ ಸೇರಿದವರಾಗಿದ್ದಾರೆ. ಹೆಚ್ಚುವರಿ ಮಹಾನಿರ್ದೇಶಕ (ಕಾನೂನು ಮತ್ತು ಸುವ್ಯವಸ್ಥೆ) ಪ್ರಶಾಂತ್ ಕುಮಾರ್ ಅವರು ಅಗರ್ವಾಲ್ ಅವರ ಹೊಸ ಹುದ್ದೆ ಹೊರತಾಗಿಯೂ ಎಸ್ಐಟಿಯ ಮುಖ್ಯಸ್ಥರಾಗಿ ಮುಂದುವರಿಯುತ್ತಾರೆ.

ಲಖಿಂಪುರ್ ಖೇರಿ ಜಿಲ್ಲೆಯು ಗೊಂಡ ವ್ಯಾಪ್ತಿಗೆ ಬರುವುದಿಲ್ಲ, ಅದು ಲಖನೌ ವ್ಯಾಪ್ತಿಯಲ್ಲಿದೆ ಹಾಗಾಗಿ ಹೊಸ ನೇಮಕಾತಿ ಎಲ್ಲರನ್ನು ಅಚ್ಚರಿಗೊಳಿಸಿದೆ.

ಲಖಿಂಪುರ್ ಖೇರಿ ಪ್ರಕರಣದಲ್ಲಿ ರಾಜ್ಯ ಸಚಿವ ಅಜಯ್ ಮಿಶ್ರಾ ಅವರ ಪುತ್ರ ಆಶಿಶ್ ಮಿಶ್ರಾ ಸೇರಿದಂತೆ 10 ಮಂದಿಯನ್ನು ಎಸ್‌ಐಟಿ ಬಂಧಿಸಿದೆ. ಅಜಯ್ ಮಿಶ್ರಾ ಒಡೆತನದ ಮಹೀಂದ್ರ ಥಾರ್ ಪ್ರತಿಭಟನಾಕಾರರ ಮೇಲೆ ಹರಿದಿತ್ತು. ಅಕ್ಟೋಬರ್ 3 ರಂದು ಲಖಿಂಪುರ್ ಖೇರಿಯಲ್ಲಿ ನಡೆದ ಈ ಘಟನೆಯಲ್ಲಿ ನಾಲ್ವರು ರೈತರು ಸಾವನ್ನಪ್ಪಿದ್ದರೆ, ನಂತರ ನಡೆದ ಘರ್ಷಣೆಯಲ್ಲಿ ಒಬ್ಬ ಪತ್ರಕರ್ತ ಸೇರಿದಂತೆ ನಾಲ್ವರು ಸಾವನ್ನಪ್ಪಿದ್ದಾರೆ. ಪ್ರಕರಣದ ತನಿಖೆಗಾಗಿ ರಾಜ್ಯ ಸರ್ಕಾರ ಅಗರ್ವಾಲ್ ನೇತೃತ್ವದಲ್ಲಿ ಒಂಬತ್ತು ಸದಸ್ಯರ ಎಸ್ಐಟಿಯನ್ನು ರಚಿಸಿತ್ತು. ಆಶಿಶ್ ಮಿಶ್ರಾ, ಅಂಕಿತ್ ದಾಸ್, ಅವರ ಚಾಲಕ ಶೇಖರ್ ಭಾರತಿ ಮತ್ತು ಅವರ ಖಾಸಗಿ ಗನ್ನರ್ ಲತೀಫ್ ಸೇರಿದಂತೆ ಮೂವರನ್ನು ಪೊಲೀಸ್ ಕಸ್ಟಡಿಗೆ ಕೋರಿ ಎಸ್ಐಟಿ ಸಲ್ಲಿಸಿರುವ ಅರ್ಜಿಯನ್ನು ಲಖಿಂಪುರ್ ಖೇರಿ ನ್ಯಾಯಾಲಯ ಶುಕ್ರವಾರ ವಿಚಾರಣೆ ನಡೆಸಲಿದೆ.

ಇದನ್ನೂ ಓದಿ: Lakhimpur Kheri Violence ಲಖೀಂಪುರ್ ಖೇರಿ ಪ್ರಕರಣ: ಸುಪ್ರೀಂಕೋರ್ಟ್ ಮುಂದಿನ ವಿಚಾರಣೆ ಅಕ್ಟೋಬರ್ 26ಕ್ಕೆ

ಎಕ್ಸಾಂ ಹಾಲ್ ಟಿಕೆಟ್ ತೋರಿಸಿದ್ರೆ ಬಾಲಕರಿಗೂ ಉಚಿತ ಪ್ರಯಾಣ
ಎಕ್ಸಾಂ ಹಾಲ್ ಟಿಕೆಟ್ ತೋರಿಸಿದ್ರೆ ಬಾಲಕರಿಗೂ ಉಚಿತ ಪ್ರಯಾಣ
ಮಕ್ಕಳ ಪರೀಕ್ಷಾ ಒತ್ತಡ ನಿವಾರಣೆಗೆ ಪೋಷಕರು ಮಾಡಬೇಕಾದ್ದು ಏನು?
ಮಕ್ಕಳ ಪರೀಕ್ಷಾ ಒತ್ತಡ ನಿವಾರಣೆಗೆ ಪೋಷಕರು ಮಾಡಬೇಕಾದ್ದು ಏನು?
ಮಧುರ ಪ್ರೇಮಕ್ಕೆ 10 ವರ್ಷ; ಮೊದಲ ಭೇಟಿಯ ಫೋಟೋ ಹಂಚಿಕೊಂಡ ಚೈತ್ರಾ ಕುಂದಾಪುರ
ಮಧುರ ಪ್ರೇಮಕ್ಕೆ 10 ವರ್ಷ; ಮೊದಲ ಭೇಟಿಯ ಫೋಟೋ ಹಂಚಿಕೊಂಡ ಚೈತ್ರಾ ಕುಂದಾಪುರ
ಬೇಸಿಗೆಗೂ ಮುನ್ನ ಮಂತ್ರಾಲಯದಲ್ಲಿ ನೀರಿಗೆ ತತ್ವಾರ: ಪುಣ್ಯಸ್ನಾನಕ್ಕೂ ಪರದಾಟ
ಬೇಸಿಗೆಗೂ ಮುನ್ನ ಮಂತ್ರಾಲಯದಲ್ಲಿ ನೀರಿಗೆ ತತ್ವಾರ: ಪುಣ್ಯಸ್ನಾನಕ್ಕೂ ಪರದಾಟ
ಪುಸ್ತಕ ಹಿಡಿದುಕೊಂಡು ಓದಲು ಕುಳಿತಾಗಲೇ ನಿದ್ದೆ ಬರುತ್ತಾ?
ಪುಸ್ತಕ ಹಿಡಿದುಕೊಂಡು ಓದಲು ಕುಳಿತಾಗಲೇ ನಿದ್ದೆ ಬರುತ್ತಾ?
ರಾಜ್ಯ ಸರ್ಕಾರದ ಹಿರಿಯ ಸಚಿವರಲ್ಲೇ ಅಸಮಾಧಾನ: ಬೇಸರಕ್ಕೆ ಕಾರಣ ಇಲ್ಲಿದೆ
ರಾಜ್ಯ ಸರ್ಕಾರದ ಹಿರಿಯ ಸಚಿವರಲ್ಲೇ ಅಸಮಾಧಾನ: ಬೇಸರಕ್ಕೆ ಕಾರಣ ಇಲ್ಲಿದೆ
ಒಟ್ಟಾಗಿ ಹೊಸ ಪ್ರಾಜೆಕ್ಟ್ ಘೋಷಣೆ ಮಾಡಿದ ಧನುಶ್ ಹಾಗೂ ಸ್ಪಂದನಾ
ಒಟ್ಟಾಗಿ ಹೊಸ ಪ್ರಾಜೆಕ್ಟ್ ಘೋಷಣೆ ಮಾಡಿದ ಧನುಶ್ ಹಾಗೂ ಸ್ಪಂದನಾ
ಮನುಷ್ಯರು ಅಷ್ಟೇ ಅಲ್ಲ ಪ್ರಾಣಿಗಳಿಗೂ ಕೂಡ ಒಂಟಿಯಾಗಿರೋದು ಕಷ್ಟ
ಮನುಷ್ಯರು ಅಷ್ಟೇ ಅಲ್ಲ ಪ್ರಾಣಿಗಳಿಗೂ ಕೂಡ ಒಂಟಿಯಾಗಿರೋದು ಕಷ್ಟ
ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲುತೂರಾಟ: ಘಟನೆಗೆ ಕಾರಣ ರಿವೀಲ್​​
ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲುತೂರಾಟ: ಘಟನೆಗೆ ಕಾರಣ ರಿವೀಲ್​​
ತಟ್ಟೆಯಲ್ಲಿ ಉಳಿದಿದ್ದ ಆಹಾರವನ್ನು ಒಟ್ಟು ಮಾಡಿದ ಯುಪಿಎಸ್​​ಸಿ ಆಕಾಂಕ್ಷಿ
ತಟ್ಟೆಯಲ್ಲಿ ಉಳಿದಿದ್ದ ಆಹಾರವನ್ನು ಒಟ್ಟು ಮಾಡಿದ ಯುಪಿಎಸ್​​ಸಿ ಆಕಾಂಕ್ಷಿ