AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಲಖಿಂಪುರ ಖೇರಿ ಹಿಂಸಾಚಾರ: ಮೃತ ರೈತರಿಗೆ ಅಂತಿಮ ನಮನ ಸಲ್ಲಿಸಲು ಇಂದು ಶಹೀದ್​ ರೈತರ ದಿನ ಆಚರಣೆ

ಶಾಹೀದ್​ ಕಿಸಾನ್​ ದಿವಸ್​ ನಿಮಿತ್ತ, ಲಖಿಂಪುರ ಖೇರಿಯ ಸಾಹೀಬ್​ಜಾದಾ ಇಂಟರ್​ ಕಾಲೇಜಿನ ಎದುರು ಮೃತ ರೈತರಿಗೆ ಅಂತಿಮ್​ ಅರದಾಸ್​ ನಡೆಯಲಿದ್ದು, ಅದಕ್ಕಾಗಿ ಎಲ್ಲ ಸಿದ್ಧತೆಗಳೂ ನಡೆದಿವೆ.

ಲಖಿಂಪುರ ಖೇರಿ ಹಿಂಸಾಚಾರ: ಮೃತ ರೈತರಿಗೆ ಅಂತಿಮ ನಮನ ಸಲ್ಲಿಸಲು ಇಂದು ಶಹೀದ್​ ರೈತರ ದಿನ ಆಚರಣೆ
ರೈತರ ಪ್ರತಿಭಟನೆ (ಸಂಗ್ರಹ ಚಿತ್ರ)
TV9 Web
| Edited By: |

Updated on:Oct 12, 2021 | 9:28 AM

Share

ಕೇಂದ್ರ ಸರ್ಕಾರದ ಮೂರು ಕೃಷಿ ಕಾಯ್ದೆಗಳ ವಿರುದ್ಧ ಪ್ರತಿಭಟನೆ ನಡೆಸುತ್ತಿರುವ ರೈತ ಸಂಘಟನೆಗಳು ಇಂದು ಹುತಾತ್ಮ ರೈತರ ದಿನವನ್ನು ಆಚರಿಸಲು ನಿರ್ಧರಿಸಿವೆ. ಲಖಿಂಪುರ ಖೇರಿ ಹಿಂಸಾಚಾರದಲ್ಲಿ ಮೃತಪಟ್ಟ ರೈತರಿಗೆ ಶ್ರದ್ಧಾಂಜಲಿ ಸಲ್ಲಿಸುವ ನಿಟ್ಟಿನಲ್ಲಿ ಇಂದು ಶಹೀದ್​ ಕಿಸಾನ್​ ದಿವಸ್​ ಆಚರಣೆ ಮಾಡುತ್ತಿರುವುದಾಗಿ ಸಂಯುಕ್ತ ಕಿಸಾನ್​ ಮೋರ್ಚಾ ತಿಳಿಸಿದೆ.  ಈ ದಿನ ದೇಶಾದ್ಯಂತ ಇರುವ ವಿವಿಧ ರೈತ ಸಂಘಟನೆಗಳು, ಪ್ರಾರ್ಥನೆ, ಗೌರವ ಅರ್ಪಣೆ ಸಭೆಗಳನ್ನು ನಡೆಸಬೇಕು. ಸಂಜೆ ಕ್ಯಾಂಡಲ್​ ಲೈಟ್​ ಮೆರವಣಿಗೆ (ಮೇಣದ ಬತ್ತಿ ಹಿಡಿದು ಮೆರವಣಿಗೆ) ನಡೆಸಬೇಕು ಎಂದು ಕಿಸಾನ್​ ಮೋರ್ಚಾ ರೈತರಿಗೆ ಸೂಚಿಸಿದೆ. 

ಇಂದು ಶಹೀದ್​ ಕಿಸಾನ್​ ದಿವಸ್​ ನಿಮಿತ್ತ, ಲಖಿಂಪುರ ಖೇರಿಯ ಸಾಹೀಬ್​ಜಾದಾ ಇಂಟರ್​ ಕಾಲೇಜಿನ ಎದುರು ಮೃತ ರೈತರಿಗೆ ಅಂತಿಮ್​ ಅರದಾಸ್​(ಕೊನೇ ಪ್ರಾರ್ಥನೆ) ನಡೆಯಲಿದ್ದು, ಅದಕ್ಕಾಗಿ ಎಲ್ಲ ಸಿದ್ಧತೆಗಳೂ ನಡೆದಿವೆ. ಈ ಪ್ರಾರ್ಥನೆಯಲ್ಲಿ ಸುಮಾರು 10 ಸಾವಿರ ರೈತರು ಪಾಲ್ಗೊಳ್ಳುವ ನಿರೀಕ್ಷೆ ಇದೆ ಎಂದೂ ಸಂಯುಕ್ತ ಕಿಸಾನ್​ ಮೋರ್ಚಾ ತಿಳಿಸಿದೆ.  ಅದರಾಚೆಗೆ, ದೇಶದ ಪ್ರತಿಯೊಬ್ಬರೂ ಇಂದು ಸಂಜೆ 8 ಗಂಟೆಗೆ ತಮ್ಮ ಮನೆಯ ಹೊರಗೆ 5 ಮೇಣದ ಬತ್ತಿಗಳನ್ನು ಹಚ್ಚಬೇಕು ಎಂದು ಮನವಿ ಮಾಡಿದೆ.

ಇನ್ನು ಲಖಿಂಪುರ ಖೇರಿಯಲ್ಲಿ ನಡೆದ ಹಿಂಸಾಚಾರದಲ್ಲಿ ಆಶಿಶ್​ ಮಿಶ್ರಾರ ಪಾತ್ರವಿದೆ ಎಂದು ಅವರನ್ನು ಬಂಧಿಸಲಾಗಿದೆ. ಆದರೆ ಬೆಂಗಾವಲು ವಾಹನ ಕೇಂದ್ರ ಸಚಿವ ಅಜಯ್​ ಮಿಶ್ರಾರದ್ದು. ಅಷ್ಟಾದರೂ ಅಜಯ್​ ಮಿಶ್ರಾ ವಿರುದ್ಧ ಕ್ರಮ ಕೈಗೊಳ್ಳಲಿಲ್ಲ. ಅವರನ್ನು ಹುದ್ದೆಯಿಂದ ವಜಾಗೊಳಿಸಲಿಲ್ಲ ಎಂದು ರೈತ ಸಂಘಟನೆಗಳು ಆರೋಪಿಸಿವೆ. ಅಜಯ್​ ಮಿಶ್ರಾ ತೇನಿಯವರನ್ನು ವಜಾಗೊಳಿಸದೆ ಇರುವುದು ಮೋದಿ ಸರ್ಕಾರಕ್ಕೆ ನಾಚಿಕೆಗೇಡು ಎಂದೂ ಹೇಳಿವೆ. ಅಕ್ಟೋಬರ್​ 15ರಂದು ಅಂದರೆ ವಿಜಯದಶಮಿಯಂದು ಬಿಜೆಪಿ ನಾಯಕರ ಪ್ರತಿಕೃತಿ ದಹನ ಮಾಡುವುದಾಗಿಯೂ ಹೇಳಿದ್ದಾರೆ.

ಇದನ್ನೂ ಓದಿ: ನೀವು ಕುಡಿಯುವ ಹಾಲು ಶುದ್ಧವಾಗಿದೆಯೇ? ಈ ಸರಳ ಮಾರ್ಗಗಳಿಂದ ಹಾಲಿನ ಕಲಬೆರಕೆಯನ್ನು ಕಂಡುಕೊಳ್ಳಿ

ಬೆಂಗಳೂರಿನಲ್ಲಿ ಮಳೆ ಅವಾಂತರ; ಏರ್ಪೋರ್ಟ್ ರೋಡ್​ನಲ್ಲಿ ಕೆಟ್ಟು ನಿಂತ 20ಕ್ಕೂ ಹೆಚ್ಚು ಕಾರುಗಳು

Published On - 9:03 am, Tue, 12 October 21

Follow Us
Web contact
Web contact

TV9 Kannada

Read More
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​
ಸಿಎಂ ಆಗುವ ಮುನ್ನವೇ ಡಿಕೆಶಿ ರಾಜಕೀಯ ತಂತ್ರಗಾರಿಕೆ
ಸಿಎಂ ಆಗುವ ಮುನ್ನವೇ ಡಿಕೆಶಿ ರಾಜಕೀಯ ತಂತ್ರಗಾರಿಕೆ
ಡಿಕೆಶಿ ಜೊತೆಗಿನ 25 ವರ್ಷದ ಆತ್ಮೀಯತೆ ಹಂಚಿಕೊಂಡ ಕಡಲೆಕಾಯಿ ವ್ಯಾಪಾರಿ
ಡಿಕೆಶಿ ಜೊತೆಗಿನ 25 ವರ್ಷದ ಆತ್ಮೀಯತೆ ಹಂಚಿಕೊಂಡ ಕಡಲೆಕಾಯಿ ವ್ಯಾಪಾರಿ