Sign In

By signing in or creating an account, you agree with Associated Broadcasting Company's Terms & Conditions and Privacy Policy.

ಲಖಿಂಪುರ ಖೇರಿ ಹಿಂಸಾಚಾರ ಪ್ರಕರಣ: ಮತ್ತೆ ಇಬ್ಬರು ಆರೋಪಿಗಳನ್ನು ಬಂಧಿಸಿದ ಎಸ್‌ಐಟಿ

ಮೂವರು ಬಿಜೆಪಿ ಕಾರ್ಯಕರ್ತರ ಹತ್ಯೆಗೆ ಸಂಬಂಧಿಸಿದಂತೆ ಇದುವರೆಗೆ ಆರು ರೈತರನ್ನು ಬಂಧಿಸಲಾಗಿದೆ. ಶಂಕಿತ ಆರೋಪಿಗಳೆಂದು ಗುರುತಿಸಿದ ನಂತರ ವಿಚಿತ್ರಾ ಸಿಂಗ್, ಗುರ್ವಿಂದರ್ ಸಿಂಗ್, ಅವತಾರ್ ಸಿಂಗ್ ಮತ್ತು ರಂಜೀತ್ ಸಿಂಗ್ ಅವರನ್ನು ಎಸ್‌ಐಟಿ ಈ ಹಿಂದೆ ಬಂಧಿಸಿತ್ತು.

ಲಖಿಂಪುರ ಖೇರಿ ಹಿಂಸಾಚಾರ ಪ್ರಕರಣ: ಮತ್ತೆ ಇಬ್ಬರು ಆರೋಪಿಗಳನ್ನು ಬಂಧಿಸಿದ ಎಸ್‌ಐಟಿ
ಲಖಿಂಪುರದಲ್ಲಿ ಉದ್ವಿಗ್ನ ವಾತಾವರಣ (ಪಿಟಿಐ ಚಿತ್ರ)
Follow us
TV9 Web
| Updated By: ರಶ್ಮಿ ಕಲ್ಲಕಟ್ಟ

Updated on:Jan 02, 2022 | 6:02 PM

ದೆಹಲಿ: ಕಳೆದ ವರ್ಷ ಅಕ್ಟೋಬರ್ 3 ರಂದು ಲಖಿಂಪುರ ಖೇರಿಯಲ್ಲಿ(Lakhimpur Kheri) ಭುಗಿಲೆದ್ದ ಹಿಂಸಾಚಾರದ ಸಂದರ್ಭದಲ್ಲಿ ಮೂವರು ಬಿಜೆಪಿ(BJP) ಕಾರ್ಯಕರ್ತರನ್ನು ಹತ್ಯೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಶೇಷ ತನಿಖಾ ತಂಡ (SIT-Special Investigation Team) ಇಬ್ಬರು ರೈತರನ್ನು ಬಂಧಿಸಿದೆ. ಎಸ್‌ಐಟಿ ಮೂಲಗಳ ಪ್ರಕಾರ ಇಬ್ಬರು ರೈತರನ್ನು ಕಮಲ್‌ಜೀತ್ ಸಿಂಗ್, 29 ಮತ್ತು ಕವಲ್ಜೀತ್ ಸಿಂಗ್ ಸೋನು, 35 ಎಂದು ಗುರುತಿಸಲಾಗಿದೆ. ಎಸ್‌ಐಟಿ ಈ ಹಿಂದೆ ಕೆಲವು ಶಂಕಿತರ ಚಿತ್ರಗಳನ್ನು ಬಿಡುಗಡೆ ಮಾಡಿತ್ತು, ಅದರಲ್ಲಿ ಇಬ್ಬರು ಸೇರಿದ್ದಾರೆ. ವರದಿಗಳ ಪ್ರಕಾರ ಅವರು ಸುಮಾರು ಎರಡು ತಿಂಗಳ ಕಾಲ ಪೊಲೀಸರಿಂದ ತಲೆಮರೆಸಿಕೊಂಡಿದ್ದರು ಎಂದು ಆರೋಪಿಸಲಾಗಿದೆ. ಇಬ್ಬರನ್ನೂ ಈಗ ಮ್ಯಾಜಿಸ್ಟ್ರೇಟ್ ಮುಂದೆ ಹಾಜರುಪಡಿಸಲಾಗುವುದು ಮತ್ತು ಅವರ ಕಸ್ಟಡಿಗೆ ತನಿಖಾಧಿಕಾರಿಗಳು ಕೋರಿದ್ದಾರೆ. ಮೂವರು ಬಿಜೆಪಿ ಕಾರ್ಯಕರ್ತರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇದುವರೆಗೆ ಆರು ರೈತರನ್ನು ಬಂಧಿಸಲಾಗಿದೆ. ಶಂಕಿತ ಆರೋಪಿಗಳೆಂದು ಗುರುತಿಸಿದ ನಂತರ ವಿಚಿತ್ರಾ ಸಿಂಗ್, ಗುರ್ವಿಂದರ್ ಸಿಂಗ್, ಅವತಾರ್ ಸಿಂಗ್ ಮತ್ತು ರಂಜೀತ್ ಸಿಂಗ್ ಅವರನ್ನು ಎಸ್‌ಐಟಿ ಈ ಹಿಂದೆ ಬಂಧಿಸಿತ್ತು.

ಹಿಂಸಾಚಾರದ ವೇಳೆ ನಾಲ್ವರು ರೈತರು ಮತ್ತು ಪತ್ರಕರ್ತನ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಗೃಹ ಖಾತೆ ರಾಜ್ಯ ಸಚಿವ ಅಜಯ್ ಮಿಶ್ರಾ ಟೆನಿ ಅವರ ಪುತ್ರ ಆಶಿಶ್ ಮಿಶ್ರಾ ಜೊತೆಗೆ ಸಹ ಆರೋಪಿಯಾಗಿರುವ ಬಿಜೆಪಿ ಕಾರ್ಯಕರ್ತ ಸುಮಿತ್ ಜೈಸ್ವಾಲ್ ಹಿಂಸಾಚಾರದ ಸಮಯದಲ್ಲಿ ನಾಲ್ವರು ರೈತರು ಮತ್ತು ಪತ್ರಕರ್ತರ ಸಾವಿಗೆ ಸಂಬಂಧಿಸಿದಂತೆ ಎಫ್‌ಐಆರ್ ದಾಖಲಿಸಿದ ನಂತರ, ಆರಂಭದಲ್ಲಿ ‘ಅಪರಿಚಿತ ರೈತರ’ ವಿರುದ್ಧ ಕೊಲೆ ಮತ್ತು ಗಲಭೆಯ ಆರೋಪಗಳನ್ನು ಹೊರಿಸಲಾಯಿತು.

ಸುಮಿತ್ ಸಲ್ಲಿಸಿದ ಎಫ್‌ಐಆರ್‌ನಲ್ಲಿ ಆಶಿಶ್‌ನ ಬೆಂಗಾವಲು ಪಡೆ ಹೊಡೆದುರುಳಿಸಿದ ಐವರ ಸಾವಿನ ಬಗ್ಗೆ ಉಲ್ಲೇಖಿಸಲಾಗಿಲ್ಲ. ಆಶಿಶ್ ಮತ್ತು ಇತರರ ವಿರುದ್ಧ ರೈತರು ನೀಡಿದ ದೂರಿನ ಆಧಾರದ ಮೇಲೆ ಹಿಂಸಾಚಾರಕ್ಕೆ ಸಂಬಂಧಿಸಿದ ಮೊದಲ ಎಫ್‌ಐಆರ್ ಅನ್ನು ಪೊಲೀಸರು ದಾಖಲಿಸಿದ್ದಾರೆ. ಆ ಪ್ರಕರಣದಲ್ಲಿ 13 ಜನರನ್ನು ಬಂಧಿಸಿದ ನಂತರ ಎಸ್ಐಟಿ ಘಟನೆಯನ್ನು “ಯೋಜಿತ” ಎಂದು ಬಣ್ಣಿಸಿದೆ.

ನವೆಂಬರ್ 2021 ರಲ್ಲಿ ಸುಪ್ರೀಂಕೋರ್ಟ್ ಎಸ್ಐಟಿ ಅನ್ನು ಪುನರ್ರಚಿಸಿತ್ತು ಮತ್ತು ಹೊಸ ಸದಸ್ಯರನ್ನು ಸೇರಿಸಿತು. ಐಪಿಎಸ್ ಅಧಿಕಾರಿಗಳಾದ ಎಸ್.ಬಿ. ಶಿರಾಡ್ಕರ್, ಪ್ರೀತೀಂದರ್ ಸಿಂಗ್ ಮತ್ತು ಪದ್ಮಜಾ ಚೌಹಾಣ್, ಪಂಜಾಬ್ ಮತ್ತು ಹರ್ಯಾಣ ಹೈಕೋರ್ಟ್‌ನ ನಿವೃತ್ತ ನ್ಯಾಯಾಧೀಶ ರಾಕೇಶ್ ಕುಮಾರ್ ಜೈನ್ ಲಖಿಂಪುರ ಖೇರಿ ಹಿಂಸಾಚಾರದ ತನಿಖೆ ನಡೆಸುತ್ತಿದ್ದಾರೆ.

ಇದನ್ನೂ ಓದಿ: Lakhimpur Kheri violence ಲಖಿಂಪುರ ಖೇರಿ ಹಿಂಸಾಚಾರ ಉದ್ದೇಶಪೂರ್ವಕ ನಡೆದ ಕೃತ್ಯ, 13 ಆರೋಪಿಗಳ ವಿರುದ್ಧ ಕೊಲೆ ಯತ್ನ ಆರೋಪಕ್ಕೆ ಎಸ್‌ಐಟಿ ಆಗ್ರಹ

Published On - 5:59 pm, Sun, 2 January 22

ಕರಾವಳಿ ಜಿಲ್ಲೆಗಳ ಸಮಸ್ಯೆಯನ್ನು ಸದನದ ಗಮನಕ್ಕೆ ತಂದ ಸುನೀಲ ಕುಮಾರ
ಕರಾವಳಿ ಜಿಲ್ಲೆಗಳ ಸಮಸ್ಯೆಯನ್ನು ಸದನದ ಗಮನಕ್ಕೆ ತಂದ ಸುನೀಲ ಕುಮಾರ
ಎಸ್ಸಿಎಸ್ಪಿ-ಟಿಎಸ್ಪಿ ಕಾಯ್ದೆ ಜಾರಿ ಮಾಡಿದ್ದು ಅವರಿಗೆ ಅನೂಕೂಲವಾಗಲು: ಸಚಿವ
ಎಸ್ಸಿಎಸ್ಪಿ-ಟಿಎಸ್ಪಿ ಕಾಯ್ದೆ ಜಾರಿ ಮಾಡಿದ್ದು ಅವರಿಗೆ ಅನೂಕೂಲವಾಗಲು: ಸಚಿವ
ಮಾತು ವಾಪಸ್ ಪಡೆಯುತ್ತೇನೆಂದರೂ ಬಿಡದ ಯತ್ನಾಳ್, ಕೊನೆಗೆ ಕೈಮುಗಿದ ಖಾದರ್​​
ಮಾತು ವಾಪಸ್ ಪಡೆಯುತ್ತೇನೆಂದರೂ ಬಿಡದ ಯತ್ನಾಳ್, ಕೊನೆಗೆ ಕೈಮುಗಿದ ಖಾದರ್​​
ಸಂಘರ್ಷದ ಹಾದಿ ಬೇಡ, ಸಮಾಜಕ್ಕಾಗಿ ಎಲ್ಲರೂ ಒಟ್ಟಾಗಿ ಹೋಗೋಣ: ರೇಣುಕಾಚಾರ್ಯ
ಸಂಘರ್ಷದ ಹಾದಿ ಬೇಡ, ಸಮಾಜಕ್ಕಾಗಿ ಎಲ್ಲರೂ ಒಟ್ಟಾಗಿ ಹೋಗೋಣ: ರೇಣುಕಾಚಾರ್ಯ
ಅಶ್ವಥ್ ನಾರಾಯಣಗೆ ಹೇಳೋದು ಪೂರ್ತಿ ಕೇಳು ತಮ್ಮಾ ಎಂದ ಸಿದ್ದರಾಮಯ್ಯ
ಅಶ್ವಥ್ ನಾರಾಯಣಗೆ ಹೇಳೋದು ಪೂರ್ತಿ ಕೇಳು ತಮ್ಮಾ ಎಂದ ಸಿದ್ದರಾಮಯ್ಯ
ಲಲಿತ್ ಮಹಲ್​ನಲ್ಲಿ ‘ಡೆವಿಲ್’ ಶೂಟಿಂಗ್, ದರ್ಶನ್ ಭಾಗಿ: ವಿಡಿಯೋ
ಲಲಿತ್ ಮಹಲ್​ನಲ್ಲಿ ‘ಡೆವಿಲ್’ ಶೂಟಿಂಗ್, ದರ್ಶನ್ ಭಾಗಿ: ವಿಡಿಯೋ
ಸಮರಾಭ್ಯಾಸ ಶುರು ಮಾಡಿದ ಆರ್​ಸಿಬಿ; ವಿಡಿಯೋ ನೋಡಿ
ಸಮರಾಭ್ಯಾಸ ಶುರು ಮಾಡಿದ ಆರ್​ಸಿಬಿ; ವಿಡಿಯೋ ನೋಡಿ
ಮಂತ್ರಿಗಳಿದ್ದಾರೆ, ಅವರಿಗೆ ಪ್ರಶ್ನೆ ಕೇಳಿ ಎಂದ ಡೆಪ್ಯುಟಿ ಸ್ಪೀಕರ್ ಲಮಾಣಿ
ಮಂತ್ರಿಗಳಿದ್ದಾರೆ, ಅವರಿಗೆ ಪ್ರಶ್ನೆ ಕೇಳಿ ಎಂದ ಡೆಪ್ಯುಟಿ ಸ್ಪೀಕರ್ ಲಮಾಣಿ
ಶಾಸಕ ಈಗ ಬಂದು ಗಮನ ಸೆಳೆಯುವ ಪ್ರಯತ್ನ ಮಾಡುತ್ತಿದ್ದಾರೆಂದ ಸ್ಪೀಕರ್
ಶಾಸಕ ಈಗ ಬಂದು ಗಮನ ಸೆಳೆಯುವ ಪ್ರಯತ್ನ ಮಾಡುತ್ತಿದ್ದಾರೆಂದ ಸ್ಪೀಕರ್
ಭಾಷಾಂತರಕ್ಕೆ ಭಾಷಾ ಮತ್ತು ವಿಷಯ ತಜ್ಞ ಜೊತೆಯಲ್ಲಿ ಕೂರಬೇಕು: ಈಶ್ವರ್
ಭಾಷಾಂತರಕ್ಕೆ ಭಾಷಾ ಮತ್ತು ವಿಷಯ ತಜ್ಞ ಜೊತೆಯಲ್ಲಿ ಕೂರಬೇಕು: ಈಶ್ವರ್