AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಲಖಿಂಪುರ ಖೇರಿ ಹಿಂಸಾಚಾರ ಪ್ರಕರಣ: ಮತ್ತೆ ಇಬ್ಬರು ಆರೋಪಿಗಳನ್ನು ಬಂಧಿಸಿದ ಎಸ್‌ಐಟಿ

ಮೂವರು ಬಿಜೆಪಿ ಕಾರ್ಯಕರ್ತರ ಹತ್ಯೆಗೆ ಸಂಬಂಧಿಸಿದಂತೆ ಇದುವರೆಗೆ ಆರು ರೈತರನ್ನು ಬಂಧಿಸಲಾಗಿದೆ. ಶಂಕಿತ ಆರೋಪಿಗಳೆಂದು ಗುರುತಿಸಿದ ನಂತರ ವಿಚಿತ್ರಾ ಸಿಂಗ್, ಗುರ್ವಿಂದರ್ ಸಿಂಗ್, ಅವತಾರ್ ಸಿಂಗ್ ಮತ್ತು ರಂಜೀತ್ ಸಿಂಗ್ ಅವರನ್ನು ಎಸ್‌ಐಟಿ ಈ ಹಿಂದೆ ಬಂಧಿಸಿತ್ತು.

ಲಖಿಂಪುರ ಖೇರಿ ಹಿಂಸಾಚಾರ ಪ್ರಕರಣ: ಮತ್ತೆ ಇಬ್ಬರು ಆರೋಪಿಗಳನ್ನು ಬಂಧಿಸಿದ ಎಸ್‌ಐಟಿ
ಲಖಿಂಪುರದಲ್ಲಿ ಉದ್ವಿಗ್ನ ವಾತಾವರಣ (ಪಿಟಿಐ ಚಿತ್ರ)
TV9 Web
| Edited By: ರಶ್ಮಿ ಕಲ್ಲಕಟ್ಟ|

Updated on:Jan 02, 2022 | 6:02 PM

Share

ದೆಹಲಿ: ಕಳೆದ ವರ್ಷ ಅಕ್ಟೋಬರ್ 3 ರಂದು ಲಖಿಂಪುರ ಖೇರಿಯಲ್ಲಿ(Lakhimpur Kheri) ಭುಗಿಲೆದ್ದ ಹಿಂಸಾಚಾರದ ಸಂದರ್ಭದಲ್ಲಿ ಮೂವರು ಬಿಜೆಪಿ(BJP) ಕಾರ್ಯಕರ್ತರನ್ನು ಹತ್ಯೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಶೇಷ ತನಿಖಾ ತಂಡ (SIT-Special Investigation Team) ಇಬ್ಬರು ರೈತರನ್ನು ಬಂಧಿಸಿದೆ. ಎಸ್‌ಐಟಿ ಮೂಲಗಳ ಪ್ರಕಾರ ಇಬ್ಬರು ರೈತರನ್ನು ಕಮಲ್‌ಜೀತ್ ಸಿಂಗ್, 29 ಮತ್ತು ಕವಲ್ಜೀತ್ ಸಿಂಗ್ ಸೋನು, 35 ಎಂದು ಗುರುತಿಸಲಾಗಿದೆ. ಎಸ್‌ಐಟಿ ಈ ಹಿಂದೆ ಕೆಲವು ಶಂಕಿತರ ಚಿತ್ರಗಳನ್ನು ಬಿಡುಗಡೆ ಮಾಡಿತ್ತು, ಅದರಲ್ಲಿ ಇಬ್ಬರು ಸೇರಿದ್ದಾರೆ. ವರದಿಗಳ ಪ್ರಕಾರ ಅವರು ಸುಮಾರು ಎರಡು ತಿಂಗಳ ಕಾಲ ಪೊಲೀಸರಿಂದ ತಲೆಮರೆಸಿಕೊಂಡಿದ್ದರು ಎಂದು ಆರೋಪಿಸಲಾಗಿದೆ. ಇಬ್ಬರನ್ನೂ ಈಗ ಮ್ಯಾಜಿಸ್ಟ್ರೇಟ್ ಮುಂದೆ ಹಾಜರುಪಡಿಸಲಾಗುವುದು ಮತ್ತು ಅವರ ಕಸ್ಟಡಿಗೆ ತನಿಖಾಧಿಕಾರಿಗಳು ಕೋರಿದ್ದಾರೆ. ಮೂವರು ಬಿಜೆಪಿ ಕಾರ್ಯಕರ್ತರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇದುವರೆಗೆ ಆರು ರೈತರನ್ನು ಬಂಧಿಸಲಾಗಿದೆ. ಶಂಕಿತ ಆರೋಪಿಗಳೆಂದು ಗುರುತಿಸಿದ ನಂತರ ವಿಚಿತ್ರಾ ಸಿಂಗ್, ಗುರ್ವಿಂದರ್ ಸಿಂಗ್, ಅವತಾರ್ ಸಿಂಗ್ ಮತ್ತು ರಂಜೀತ್ ಸಿಂಗ್ ಅವರನ್ನು ಎಸ್‌ಐಟಿ ಈ ಹಿಂದೆ ಬಂಧಿಸಿತ್ತು.

ಹಿಂಸಾಚಾರದ ವೇಳೆ ನಾಲ್ವರು ರೈತರು ಮತ್ತು ಪತ್ರಕರ್ತನ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಗೃಹ ಖಾತೆ ರಾಜ್ಯ ಸಚಿವ ಅಜಯ್ ಮಿಶ್ರಾ ಟೆನಿ ಅವರ ಪುತ್ರ ಆಶಿಶ್ ಮಿಶ್ರಾ ಜೊತೆಗೆ ಸಹ ಆರೋಪಿಯಾಗಿರುವ ಬಿಜೆಪಿ ಕಾರ್ಯಕರ್ತ ಸುಮಿತ್ ಜೈಸ್ವಾಲ್ ಹಿಂಸಾಚಾರದ ಸಮಯದಲ್ಲಿ ನಾಲ್ವರು ರೈತರು ಮತ್ತು ಪತ್ರಕರ್ತರ ಸಾವಿಗೆ ಸಂಬಂಧಿಸಿದಂತೆ ಎಫ್‌ಐಆರ್ ದಾಖಲಿಸಿದ ನಂತರ, ಆರಂಭದಲ್ಲಿ ‘ಅಪರಿಚಿತ ರೈತರ’ ವಿರುದ್ಧ ಕೊಲೆ ಮತ್ತು ಗಲಭೆಯ ಆರೋಪಗಳನ್ನು ಹೊರಿಸಲಾಯಿತು.

ಸುಮಿತ್ ಸಲ್ಲಿಸಿದ ಎಫ್‌ಐಆರ್‌ನಲ್ಲಿ ಆಶಿಶ್‌ನ ಬೆಂಗಾವಲು ಪಡೆ ಹೊಡೆದುರುಳಿಸಿದ ಐವರ ಸಾವಿನ ಬಗ್ಗೆ ಉಲ್ಲೇಖಿಸಲಾಗಿಲ್ಲ. ಆಶಿಶ್ ಮತ್ತು ಇತರರ ವಿರುದ್ಧ ರೈತರು ನೀಡಿದ ದೂರಿನ ಆಧಾರದ ಮೇಲೆ ಹಿಂಸಾಚಾರಕ್ಕೆ ಸಂಬಂಧಿಸಿದ ಮೊದಲ ಎಫ್‌ಐಆರ್ ಅನ್ನು ಪೊಲೀಸರು ದಾಖಲಿಸಿದ್ದಾರೆ. ಆ ಪ್ರಕರಣದಲ್ಲಿ 13 ಜನರನ್ನು ಬಂಧಿಸಿದ ನಂತರ ಎಸ್ಐಟಿ ಘಟನೆಯನ್ನು “ಯೋಜಿತ” ಎಂದು ಬಣ್ಣಿಸಿದೆ.

ನವೆಂಬರ್ 2021 ರಲ್ಲಿ ಸುಪ್ರೀಂಕೋರ್ಟ್ ಎಸ್ಐಟಿ ಅನ್ನು ಪುನರ್ರಚಿಸಿತ್ತು ಮತ್ತು ಹೊಸ ಸದಸ್ಯರನ್ನು ಸೇರಿಸಿತು. ಐಪಿಎಸ್ ಅಧಿಕಾರಿಗಳಾದ ಎಸ್.ಬಿ. ಶಿರಾಡ್ಕರ್, ಪ್ರೀತೀಂದರ್ ಸಿಂಗ್ ಮತ್ತು ಪದ್ಮಜಾ ಚೌಹಾಣ್, ಪಂಜಾಬ್ ಮತ್ತು ಹರ್ಯಾಣ ಹೈಕೋರ್ಟ್‌ನ ನಿವೃತ್ತ ನ್ಯಾಯಾಧೀಶ ರಾಕೇಶ್ ಕುಮಾರ್ ಜೈನ್ ಲಖಿಂಪುರ ಖೇರಿ ಹಿಂಸಾಚಾರದ ತನಿಖೆ ನಡೆಸುತ್ತಿದ್ದಾರೆ.

ಇದನ್ನೂ ಓದಿ: Lakhimpur Kheri violence ಲಖಿಂಪುರ ಖೇರಿ ಹಿಂಸಾಚಾರ ಉದ್ದೇಶಪೂರ್ವಕ ನಡೆದ ಕೃತ್ಯ, 13 ಆರೋಪಿಗಳ ವಿರುದ್ಧ ಕೊಲೆ ಯತ್ನ ಆರೋಪಕ್ಕೆ ಎಸ್‌ಐಟಿ ಆಗ್ರಹ

Published On - 5:59 pm, Sun, 2 January 22

Follow Us
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ