Lakhimpur Kheri Violence: ಲಖನೌದಲ್ಲಿ ಪೊಲೀಸ್​ ವಾಹನಕ್ಕೆ ಬೆಂಕಿ; ಅಖಿಲೇಶ್​ ಯಾದವ್​ಗೆ ಗೃಹಬಂಧನ

ಇಂದು ಬೆಳಗ್ಗೆ ಲಖನೌನಲ್ಲಿ ಪೊಲೀಸ್ ವಾಹನವೊಂದಕ್ಕೆ ಬೆಂಕಿ ಹಚ್ಚಲಾಗಿದ್ದು, ವಿಡಿಯೋ ವೈರಲ್​ ಆಗಿದೆ. ಈ ದುಷ್ಕೃತ್ಯ ಮಾಡಿದವರು ಯಾರೆಂದು ಗೊತ್ತಿಲ್ಲ ಎಂದು ಪೊಲೀಸರು ಹೇಳಿದ್ದಾರೆ.

Lakhimpur Kheri Violence: ಲಖನೌದಲ್ಲಿ ಪೊಲೀಸ್​ ವಾಹನಕ್ಕೆ ಬೆಂಕಿ; ಅಖಿಲೇಶ್​ ಯಾದವ್​ಗೆ ಗೃಹಬಂಧನ
ಲಖನೌದಲ್ಲಿ ಪೊಲೀಸ್​ ವಾಹನಕ್ಕೆ ಬೆಂಕಿ ಹಚ್ಚಿದ ಪ್ರತಿಭಟನಾಕಾರರು
Follow us
| Updated By: Digi Tech Desk

Updated on:Oct 04, 2021 | 11:54 AM

ಉತ್ತರಪ್ರದೇಶದ ಲಖಿಂಪುರ ಖೇರಿಯಲ್ಲಿ ಹಿಂಸಾಚಾರ (Lakhimpur Kheri Violence) ಭುಗಿಲೆದ್ದಿದ್ದು, ಉದ್ವಿಗ್ನರ ಗುಂಪೊಂದು ಇಂದು ಲಖನೌದಲ್ಲಿ ಪೊಲೀಸ್ ವಾಹನಕ್ಕೂ ಬೆಂಕಿ ಹಚ್ಚಿದೆ. ನಿನ್ನೆ ಕೇಂದ್ರ ಸಚಿವ ಅಜಯ್​ ಮಿಶ್ರಾ ಮತ್ತು ಯುಪಿ ಉಪಮುಖ್ಯಮಂತ್ರಿ ಕೇಶವ ಪ್ರಸಾದ್​ ಮೌರ್ಯ ಭೇಟಿಯನ್ನು ವಿರೋಧಿಸಿ ಲಖಿಂಪುರ ಖೇರಿಯಲ್ಲಿ ರೈತರು ಪ್ರತಿಭಟನೆ ನಡೆಸುತ್ತಿದ್ದರು.ಈ ವೇಳೆ ಎರಡು ಕಾರು ಅವರ ಮೇಲೆ ಹರಿದು ಇಬ್ಬರು ರೈತರು ಮೃತಪಟ್ಟಿದ್ದರು. ಈ ಘಟನೆ ಬಳಿಕ ಅಲ್ಲಿ ಹಿಂಸಾಚಾರ ಶುರುವಾಗಿ ಇಲ್ಲಿಯವರೆಗೆ 8 ಮಂದಿ ಜೀವ ಕಳೆದುಕೊಂಡಿದ್ದಾರೆ. ಈ ಮಧ್ಯೆ ಘಟನೆಯ ಮುಖ್ಯ ರೂವಾರಿ ಕೇಂದ್ರ ಸಚಿವ ಅಜಯ್​ ಮಿಶ್ರಾ ಪುತ್ರ ಆಶೀಶ್​ ಮಿಶ್ರಾ ಎಂಬ ಆರೋಪ ಕೇಳಿಬಂದಿದ್ದು ಅವರ ವಿರುದ್ಧ ಕೊಲೆ ಪ್ರಕರಣವೂ ದಾಖಲಾಗಿದೆ. ಆದರೆ ಇಂದೂ ಕೂಡ ಗಲಭೆ ನಡೆಯುತ್ತಲೇ ಇದೆ. 

ಇಂದು ಬೆಳಗ್ಗೆ ಲಖನೌನಲ್ಲಿ ಪೊಲೀಸ್ ವಾಹನವೊಂದಕ್ಕೆ ಬೆಂಕಿ ಹಚ್ಚಲಾಗಿದ್ದು, ವಿಡಿಯೋ ವೈರಲ್​ ಆಗಿದೆ. ವಾಹನಕ್ಕೆ ತಗುಲಿರುವ ಬೆಂಕಿ ನಂದಿಸಲು ಪೊಲೀಸ್​ ಸಿಬ್ಬಂದಿಯೊಬ್ಬರು ಪ್ರಯತ್ನಿಸುವುದನ್ನೂ ವಿಡಿಯೋದಲ್ಲಿ ನೋಡಬಹುದು. ಯಾರು ಬೆಂಕಿ ಹಚ್ಚಿದ್ದಾರೆಂದು ಗೊತ್ತಾಗಲಿಲ್ಲ ಎಂದೂ ಪೊಲೀಸ್​ ತಿಳಿಸಿದ್ದಾರೆ. ಅದೂ ಕೂಡ ಉತ್ತರಪ್ರದೇಶ ಮಾಜಿ ಮುಖ್ಯಮಂತ್ರಿ ಅಖಿಲೇಶ್​ ಯಾದವ್ ಮನೆ ಸಮೀಪವೇ ಈ ಘಟನೆ ನಡೆದಿದೆ.

ಅಖಿಲೇಶ್​ ಯಾದವ್​​ಗೆ ಗೃಹಬಂಧನ ಲಖಿಂಪುರ ಖೇರಿಯಲ್ಲಿ ರೈತರ ಮೇಲೆ ಕಾರು ಹರಿದ ಬೆನ್ನಲ್ಲೇ ಮಾಜಿ ಸಿಎಂ ಅಖಿಲೇಶ್​ ಯಾದವ್​ ತಮ್ಮ ನಿವಾಸದ ಹೊರಗೆ ಧರಣಿ ಕುಳಿತಿದ್ದರು. ರೈತರ ಮೇಲೆ ಬಿಜೆಪಿ ಸರ್ಕಾರ ನಡೆಸುತ್ತಿರುವಷ್ಟು ದೌರ್ಜನ್ಯವನ್ನು ಬ್ರಿಟೀಷರೂ ನಮ್ಮ ದೇಶ ವಾಸಿಗಳ ಮೇಲೆ ನಡೆಸಲಿಲ್ಲ ಎಂದು ಅವರು ಆರೋಪಿಸಿದ್ದಾರೆ. ಅಷ್ಟೇ ಅಲ್ಲ, ಘಟನೆಯಲ್ಲಿ ಮೃತಪಟ್ಟ ರೈತರ ಕುಟುಂಬಕ್ಕೆ 2 ಕೋಟಿ ರೂಪಾಯಿ ಪರಿಹಾರ ನೀಡಬೇಕು. ಮೃತರ ಹತ್ತಿರದ ಸಂಬಂಧಿಗಳಿಗೆ ಸರ್ಕಾರಿ ಉದ್ಯೋಗ ನೀಡಬೇಕು ಎಂದು ಆಗ್ರಹಿಸಿದ್ದಾರೆ.  ಅದಾದ ಬಳಿಕ ಲಖಿಂಪುರಕ್ಕೆ ಹೋಗಲು ಮುಂದಾದ ಅವರನ್ನು ಪೊಲೀಸರು ವಶಕ್ಕೆ ಪಡೆದು, ಲಖನೌದಲ್ಲಿರುವ ಇಕೋ ಗಾರ್ಡನ್​ಗೆ ಕರೆದುಕೊಂಡುಹೋಗಿದ್ದಾರೆ.

ಇದನ್ನೂ ಓದಿ: Coronavirus cases in India: ದೇಶದಲ್ಲಿ 20,799 ಹೊಸ ಕೊವಿಡ್ ಪ್ರಕರಣ ಪತ್ತೆ, ಚೇತರಿಕೆ ಪ್ರಮಾಣ ಶೇ 97.89

Cyclone Shaheen: ಓಮನ್, ಇರಾನ್​ನಲ್ಲಿ ಶಾಹೀನ್ ಚಂಡಮಾರುತದಿಂದ 9ಕ್ಕೂ ಹೆಚ್ಚು ಜನ ಸಾವು

Published On - 11:01 am, Mon, 4 October 21

ವೇದಿಕೆ ಏರುತ್ತಿದ್ದಂತೆ ಹಾಸ್ಯದ ಹೊಳೆ ಹರಿಸಿದಿ ಕಿಚ್ಚ ಸುದೀಪ್
ವೇದಿಕೆ ಏರುತ್ತಿದ್ದಂತೆ ಹಾಸ್ಯದ ಹೊಳೆ ಹರಿಸಿದಿ ಕಿಚ್ಚ ಸುದೀಪ್
Vastu Tips: ಮನೆಯಲ್ಲಿ ಆಮೆ ಇಡುವುದರ ಹಿಂದಿನ ಮಹತ್ವವೇನು?
Vastu Tips: ಮನೆಯಲ್ಲಿ ಆಮೆ ಇಡುವುದರ ಹಿಂದಿನ ಮಹತ್ವವೇನು?
ಮೈಸೂರು: ಕಾದಾಡುತ್ತಾ ಅರಮನೆ ಆವರಣದಿಂದ ರಸ್ತೆಗೆ ಬಂದ ದಸರಾ ಆನೆಗಳು
ಮೈಸೂರು: ಕಾದಾಡುತ್ತಾ ಅರಮನೆ ಆವರಣದಿಂದ ರಸ್ತೆಗೆ ಬಂದ ದಸರಾ ಆನೆಗಳು
ಇಂದು ಶಶ ರಾಜಯೋಗ, ಈ ರಾಶಿಯವರಿಗೆ ಶನಿದೇವನ ಕೃಪೆಯಿಂದ ಒಳಿತಾಗಲಿದೆ
ಇಂದು ಶಶ ರಾಜಯೋಗ, ಈ ರಾಶಿಯವರಿಗೆ ಶನಿದೇವನ ಕೃಪೆಯಿಂದ ಒಳಿತಾಗಲಿದೆ
‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ
‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ
ಕನ್ನಡದಲ್ಲಿ ಔಷಧಿ ಚೀಟಿ ಬರೆದು ಗಮನಸೆಳೆದ ಮತ್ತೋರ್ವ ಡಾಕ್ಟರ್
ಕನ್ನಡದಲ್ಲಿ ಔಷಧಿ ಚೀಟಿ ಬರೆದು ಗಮನಸೆಳೆದ ಮತ್ತೋರ್ವ ಡಾಕ್ಟರ್
ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು
ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು
ವಿಷ್ಣುವರ್ಧನ್ ಸಮಾಧಿ ಮುಂದೆ ಹೆಣ ಬೀಳುತ್ತೆ: ಅಭಿಮಾನಿ ಎಚ್ಚರಿಕೆ
ವಿಷ್ಣುವರ್ಧನ್ ಸಮಾಧಿ ಮುಂದೆ ಹೆಣ ಬೀಳುತ್ತೆ: ಅಭಿಮಾನಿ ಎಚ್ಚರಿಕೆ
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು