AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Lakhimpur Kheri Violence: ಲಖನೌದಲ್ಲಿ ಪೊಲೀಸ್​ ವಾಹನಕ್ಕೆ ಬೆಂಕಿ; ಅಖಿಲೇಶ್​ ಯಾದವ್​ಗೆ ಗೃಹಬಂಧನ

ಇಂದು ಬೆಳಗ್ಗೆ ಲಖನೌನಲ್ಲಿ ಪೊಲೀಸ್ ವಾಹನವೊಂದಕ್ಕೆ ಬೆಂಕಿ ಹಚ್ಚಲಾಗಿದ್ದು, ವಿಡಿಯೋ ವೈರಲ್​ ಆಗಿದೆ. ಈ ದುಷ್ಕೃತ್ಯ ಮಾಡಿದವರು ಯಾರೆಂದು ಗೊತ್ತಿಲ್ಲ ಎಂದು ಪೊಲೀಸರು ಹೇಳಿದ್ದಾರೆ.

Lakhimpur Kheri Violence: ಲಖನೌದಲ್ಲಿ ಪೊಲೀಸ್​ ವಾಹನಕ್ಕೆ ಬೆಂಕಿ; ಅಖಿಲೇಶ್​ ಯಾದವ್​ಗೆ ಗೃಹಬಂಧನ
ಲಖನೌದಲ್ಲಿ ಪೊಲೀಸ್​ ವಾಹನಕ್ಕೆ ಬೆಂಕಿ ಹಚ್ಚಿದ ಪ್ರತಿಭಟನಾಕಾರರು
TV9 Web
| Edited By: |

Updated on:Oct 04, 2021 | 11:54 AM

Share

ಉತ್ತರಪ್ರದೇಶದ ಲಖಿಂಪುರ ಖೇರಿಯಲ್ಲಿ ಹಿಂಸಾಚಾರ (Lakhimpur Kheri Violence) ಭುಗಿಲೆದ್ದಿದ್ದು, ಉದ್ವಿಗ್ನರ ಗುಂಪೊಂದು ಇಂದು ಲಖನೌದಲ್ಲಿ ಪೊಲೀಸ್ ವಾಹನಕ್ಕೂ ಬೆಂಕಿ ಹಚ್ಚಿದೆ. ನಿನ್ನೆ ಕೇಂದ್ರ ಸಚಿವ ಅಜಯ್​ ಮಿಶ್ರಾ ಮತ್ತು ಯುಪಿ ಉಪಮುಖ್ಯಮಂತ್ರಿ ಕೇಶವ ಪ್ರಸಾದ್​ ಮೌರ್ಯ ಭೇಟಿಯನ್ನು ವಿರೋಧಿಸಿ ಲಖಿಂಪುರ ಖೇರಿಯಲ್ಲಿ ರೈತರು ಪ್ರತಿಭಟನೆ ನಡೆಸುತ್ತಿದ್ದರು.ಈ ವೇಳೆ ಎರಡು ಕಾರು ಅವರ ಮೇಲೆ ಹರಿದು ಇಬ್ಬರು ರೈತರು ಮೃತಪಟ್ಟಿದ್ದರು. ಈ ಘಟನೆ ಬಳಿಕ ಅಲ್ಲಿ ಹಿಂಸಾಚಾರ ಶುರುವಾಗಿ ಇಲ್ಲಿಯವರೆಗೆ 8 ಮಂದಿ ಜೀವ ಕಳೆದುಕೊಂಡಿದ್ದಾರೆ. ಈ ಮಧ್ಯೆ ಘಟನೆಯ ಮುಖ್ಯ ರೂವಾರಿ ಕೇಂದ್ರ ಸಚಿವ ಅಜಯ್​ ಮಿಶ್ರಾ ಪುತ್ರ ಆಶೀಶ್​ ಮಿಶ್ರಾ ಎಂಬ ಆರೋಪ ಕೇಳಿಬಂದಿದ್ದು ಅವರ ವಿರುದ್ಧ ಕೊಲೆ ಪ್ರಕರಣವೂ ದಾಖಲಾಗಿದೆ. ಆದರೆ ಇಂದೂ ಕೂಡ ಗಲಭೆ ನಡೆಯುತ್ತಲೇ ಇದೆ. 

ಇಂದು ಬೆಳಗ್ಗೆ ಲಖನೌನಲ್ಲಿ ಪೊಲೀಸ್ ವಾಹನವೊಂದಕ್ಕೆ ಬೆಂಕಿ ಹಚ್ಚಲಾಗಿದ್ದು, ವಿಡಿಯೋ ವೈರಲ್​ ಆಗಿದೆ. ವಾಹನಕ್ಕೆ ತಗುಲಿರುವ ಬೆಂಕಿ ನಂದಿಸಲು ಪೊಲೀಸ್​ ಸಿಬ್ಬಂದಿಯೊಬ್ಬರು ಪ್ರಯತ್ನಿಸುವುದನ್ನೂ ವಿಡಿಯೋದಲ್ಲಿ ನೋಡಬಹುದು. ಯಾರು ಬೆಂಕಿ ಹಚ್ಚಿದ್ದಾರೆಂದು ಗೊತ್ತಾಗಲಿಲ್ಲ ಎಂದೂ ಪೊಲೀಸ್​ ತಿಳಿಸಿದ್ದಾರೆ. ಅದೂ ಕೂಡ ಉತ್ತರಪ್ರದೇಶ ಮಾಜಿ ಮುಖ್ಯಮಂತ್ರಿ ಅಖಿಲೇಶ್​ ಯಾದವ್ ಮನೆ ಸಮೀಪವೇ ಈ ಘಟನೆ ನಡೆದಿದೆ.

ಅಖಿಲೇಶ್​ ಯಾದವ್​​ಗೆ ಗೃಹಬಂಧನ ಲಖಿಂಪುರ ಖೇರಿಯಲ್ಲಿ ರೈತರ ಮೇಲೆ ಕಾರು ಹರಿದ ಬೆನ್ನಲ್ಲೇ ಮಾಜಿ ಸಿಎಂ ಅಖಿಲೇಶ್​ ಯಾದವ್​ ತಮ್ಮ ನಿವಾಸದ ಹೊರಗೆ ಧರಣಿ ಕುಳಿತಿದ್ದರು. ರೈತರ ಮೇಲೆ ಬಿಜೆಪಿ ಸರ್ಕಾರ ನಡೆಸುತ್ತಿರುವಷ್ಟು ದೌರ್ಜನ್ಯವನ್ನು ಬ್ರಿಟೀಷರೂ ನಮ್ಮ ದೇಶ ವಾಸಿಗಳ ಮೇಲೆ ನಡೆಸಲಿಲ್ಲ ಎಂದು ಅವರು ಆರೋಪಿಸಿದ್ದಾರೆ. ಅಷ್ಟೇ ಅಲ್ಲ, ಘಟನೆಯಲ್ಲಿ ಮೃತಪಟ್ಟ ರೈತರ ಕುಟುಂಬಕ್ಕೆ 2 ಕೋಟಿ ರೂಪಾಯಿ ಪರಿಹಾರ ನೀಡಬೇಕು. ಮೃತರ ಹತ್ತಿರದ ಸಂಬಂಧಿಗಳಿಗೆ ಸರ್ಕಾರಿ ಉದ್ಯೋಗ ನೀಡಬೇಕು ಎಂದು ಆಗ್ರಹಿಸಿದ್ದಾರೆ.  ಅದಾದ ಬಳಿಕ ಲಖಿಂಪುರಕ್ಕೆ ಹೋಗಲು ಮುಂದಾದ ಅವರನ್ನು ಪೊಲೀಸರು ವಶಕ್ಕೆ ಪಡೆದು, ಲಖನೌದಲ್ಲಿರುವ ಇಕೋ ಗಾರ್ಡನ್​ಗೆ ಕರೆದುಕೊಂಡುಹೋಗಿದ್ದಾರೆ.

ಇದನ್ನೂ ಓದಿ: Coronavirus cases in India: ದೇಶದಲ್ಲಿ 20,799 ಹೊಸ ಕೊವಿಡ್ ಪ್ರಕರಣ ಪತ್ತೆ, ಚೇತರಿಕೆ ಪ್ರಮಾಣ ಶೇ 97.89

Cyclone Shaheen: ಓಮನ್, ಇರಾನ್​ನಲ್ಲಿ ಶಾಹೀನ್ ಚಂಡಮಾರುತದಿಂದ 9ಕ್ಕೂ ಹೆಚ್ಚು ಜನ ಸಾವು

Published On - 11:01 am, Mon, 4 October 21

Follow Us
ಗ್ಯಾಸ್​ ಇಲ್ಲಿದೇ ಬೆಂಗಳೂರಿನ ಗಲ್ಲಿ ಗಲ್ಲಿಯಲ್ಲೂ ನಿಂತ ಆಟೋಗಳು!
ಗ್ಯಾಸ್​ ಇಲ್ಲಿದೇ ಬೆಂಗಳೂರಿನ ಗಲ್ಲಿ ಗಲ್ಲಿಯಲ್ಲೂ ನಿಂತ ಆಟೋಗಳು!
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ