AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಂದು ಸಂಸದನಾಗಿ, ಇಂದು ಶಾಸಕನಾಗಿ: ಪಕ್ಷಾಂತರ ನಿಷೇಧ ಕಾಯ್ದೆಯಡಿ ಲಾಲ್ಡುಹೋಮಾಗೆ ಗೇಟ್​ಪಾಸ್

ಪಕ್ಷಾಂತರ ನಿಷೇಧ ಕಾಯ್ದೆ ಅಡಿಯಲ್ಲಿ ಅನರ್ಹಗೊಂಡ ಪ್ರಪ್ರಥಮ ಲೋಕಸಭಾ ಸದಸ್ಯ ಎಂಬ ಅಪಖ್ಯಾತಿಗೂ ಇವರು ಪಾತ್ರರಾಗಬೇಕಾಯಿತು. ಇದೀಗ, ಇದೇ ಕಾಯ್ದೆಯಡಿಯಲ್ಲಿ ಶಾಸಕನಾಗಿ ಅನರ್ಹಗೊಂಡಿದ್ದಾರೆ.

ಅಂದು ಸಂಸದನಾಗಿ, ಇಂದು ಶಾಸಕನಾಗಿ: ಪಕ್ಷಾಂತರ ನಿಷೇಧ ಕಾಯ್ದೆಯಡಿ ಲಾಲ್ಡುಹೋಮಾಗೆ ಗೇಟ್​ಪಾಸ್
ಸ್ವತಂತ್ರ ಶಾಸಕ ಲಾಲ್ಡುಹೋಮಾ
shruti hegde
| Edited By: |

Updated on: Nov 29, 2020 | 3:42 PM

Share

ಐಜ್ವಾಲ್​: ಪಕ್ಷಾಂತರ ನಿಷೇಧ ಕಾಯ್ದೆ ಅಡಿಯಲ್ಲಿ ಶಾಸಕ ಲಾಲ್ಡುಹೋಮಾರನ್ನು ಕಳೆದ ಶುಕ್ರವಾರ ಮಿಜೋರಾಂ ವಿಧಾನಸಭಾ ಸದಸ್ಯತ್ವದಿಂದ ಅನರ್ಹಗೊಳಿಸಲಾಗಿದೆ. ಸ್ವತಂತ್ರ ಅಭ್ಯರ್ಥಿಯಾಗಿ ಚುನಾವಣೆ ಗೆದ್ದಿದ್ದ ಲಾಲ್ಡುಹೋಮಾ ತದ ನಂತರ ಜೊರಾಂ ಪೀಪಲ್ಸ್ ಮೂವ್​ಮೆಂಟ್(ZPM) ಪಕ್ಷ ಸೇರಿದ್ದ ಹಿನ್ನೆಲೆಯಲ್ಲಿ ಅವರನ್ನು ಅನರ್ಹಗೊಳಿಸಲಾಗಿದೆ.

ಲಾಲ್ಡುಹೋಮಾ 2018ರ ವಿಧಾನಸಭಾ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಆಯ್ಕೆಯಾಗಿದ್ದರು. ಈ ಹಿಂದೆ ತಾವಿದ್ದ ಕಾಂಗ್ರೆಸ್​ ಪಕ್ಷವನ್ನು ತೊರೆದು ಸ್ವತಂತ್ರ ಅಭ್ಯರ್ಥಿಯಾಗಿ ಚುನಾವಣಾ ಕಣಕ್ಕೆ ಇಳಿದಿದ್ದರು.

ಆದರೆ ಇದೀಗ, ಜೊರಾಂ ಪೀಪಲ್ಸ್ ಮೂವ್​ಮೆಂಟ್(ZPM) ಪಕ್ಷ ಸೇರಿದ ಹಿನ್ನೆಲೆಯಲ್ಲಿ ಪಕ್ಷಾಂತರ ನಿಷೇಧ ಕಾಯ್ದೆ ಉಲ್ಲಂಘಿಸಿದ್ದಕ್ಕಾಗಿ ಲಾಲ್ಡುಹೋಮಾರ ಸದಸ್ಯತ್ವ ರದ್ದಾಗಿದೆ ಎಂದು ಸ್ಪೀಕರ್ ಲಾಲ್ರೆನ್ಲಿಯಾನಾ ಸೈಲೊ ಹೇಳಿದ್ದಾರೆ. ಅಚ್ಚರಿಯ ಸಂಗತಿಯೆಂದರೆ, ಲಾಲ್ಡುಹೋಮಾ 1988ರಲ್ಲಿ ಲೋಕಸಭಾ ಸದಸ್ಯರಾಗಿದ್ದಾಗ ಕಾಂಗ್ರೆಸ್​ ಪಕ್ಷದಿಂದ ರಾಜೀನಾಮೆ ನೀಡಿದ್ದಕ್ಕೆ ಇದೇ ಕಾಯ್ದೆ ಅಡಿಯಲ್ಲಿ ಇವರನ್ನು ಸಂಸದನಾಗಿ ಅನರ್ಹಗೊಳಿಸಲಾಗಿತ್ತು. ಪಕ್ಷಾಂತರ ನಿಷೇಧ ಕಾಯ್ದೆ ಅಡಿಯಲ್ಲಿ ಅನರ್ಹಗೊಂಡ ಪ್ರಪ್ರಥಮ ಲೋಕಸಭಾ ಸದಸ್ಯ ಎಂಬ ಅಪಖ್ಯಾತಿಗೂ ಇವರು ಪಾತ್ರರಾಗಬೇಕಾಯಿತು. ಇದೀಗ, ಇದೇ ಕಾಯ್ದೆಯಡಿಯಲ್ಲಿ ಶಾಸಕನಾಗಿ ಅನರ್ಹಗೊಂಡಿದ್ದಾರೆ.

ಸಂವಿಧಾನದ 10ನೇ ಶೆಡ್ಯೂಲ್​ನ ಪ್ಯಾರಾ2(2) ಅನ್ನು ಉಲ್ಲಂಘಿಸಿದ ಆರೋಪದ ಮೇಲೆ ಲಾಲ್ಡುಹೋಮಾರನ್ನು ಅನರ್ಹಗೊಳಿಸುವಂತೆ ಮಿಜೋ ನ್ಯಾಷನಲ್ ಫ್ರಂಟ್ (ಎಂಎನ್​ಎಫ್​) ನ 12 ಶಾಸಕರು ಸ್ಪೀಕರ್​ಗೆ ಅರ್ಜಿ ಸಲ್ಲಿಸಿದ್ದರು. ಪರಿಶೀಲನೆಯ ಆಧಾರದ ಮೇಲೆ ಲಾಲ್ಡುಹೋಮಾ ತಮ್ಮ ಸದಸ್ಯತ್ವ ಕಳೆದುಕೊಂಡಿದ್ದಾರೆ ಎಂದು ಸ್ಪೀಕರ್ ಸೈಲೋ ಹೇಳಿದ್ದಾರೆ.

Follow Us
ತಮ್ಮ ಕ್ಷೇತ್ರದ ಜಾತ್ರೆಗೆ ಸಿಎಂ ಒಂದು ಲೋಡ್ ಸಿಲಿಂಡರ್ ಕೊಡಿಸಿದ್ರಾ ?
ತಮ್ಮ ಕ್ಷೇತ್ರದ ಜಾತ್ರೆಗೆ ಸಿಎಂ ಒಂದು ಲೋಡ್ ಸಿಲಿಂಡರ್ ಕೊಡಿಸಿದ್ರಾ ?
ಹೊಸ ಜೆರ್ಸಿ ಪ್ರೋಮೋದಲ್ಲಿ ಆರ್​ಸಿಬಿಯನ್ನು ಗೇಲಿ ಮಾಡಿದ ಕೆಕೆಆರ್
ಹೊಸ ಜೆರ್ಸಿ ಪ್ರೋಮೋದಲ್ಲಿ ಆರ್​ಸಿಬಿಯನ್ನು ಗೇಲಿ ಮಾಡಿದ ಕೆಕೆಆರ್
ಅಪಾರ್ಟ್​ಮೆಂಟ್ ಲಿಫ್ಟ್​ ಗೇಟಿನೊಳಗೆ ಸಿಲುಕಿತು ಮಗುವಿನ ಕೈ
ಅಪಾರ್ಟ್​ಮೆಂಟ್ ಲಿಫ್ಟ್​ ಗೇಟಿನೊಳಗೆ ಸಿಲುಕಿತು ಮಗುವಿನ ಕೈ
ಬಜೆಟ್​ ಬಗ್ಗೆ ಅಸಮಾಧಾನಗೊಂಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ ಕೈ ಶಾಸಕ
ಬಜೆಟ್​ ಬಗ್ಗೆ ಅಸಮಾಧಾನಗೊಂಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ ಕೈ ಶಾಸಕ
ತಂದೆಯ ಅಂತ್ಯಸಂಸ್ಕಾರ ನೆರವೇರಿಸಿ ಲಿಂಗಸಮಾನತೆಯ ಸಂದೇಶ ಸಾರಿದ ಸಹೋದರಿಯರು
ತಂದೆಯ ಅಂತ್ಯಸಂಸ್ಕಾರ ನೆರವೇರಿಸಿ ಲಿಂಗಸಮಾನತೆಯ ಸಂದೇಶ ಸಾರಿದ ಸಹೋದರಿಯರು
ಮನೆಯ ಅಂಗಳದಲ್ಲಿ ಮಲಗಿದ್ದ ವೃದ್ಧೆಗೆ ಕಡಿದೇ ಬಿಡ್ತು ಹಾವು!
ಮನೆಯ ಅಂಗಳದಲ್ಲಿ ಮಲಗಿದ್ದ ವೃದ್ಧೆಗೆ ಕಡಿದೇ ಬಿಡ್ತು ಹಾವು!
ಗ್ಯಾಸ್ ​ಇಲ್ಲದಿದ್ರೂ ಚಾಮುಂಡಿ ಬೆಟ್ಟಕ್ಕೆ ಬರುವ ಭಕ್ತರಿಗೆ ಪ್ರಸಾದ ಲಭ್ಯ!
ಗ್ಯಾಸ್ ​ಇಲ್ಲದಿದ್ರೂ ಚಾಮುಂಡಿ ಬೆಟ್ಟಕ್ಕೆ ಬರುವ ಭಕ್ತರಿಗೆ ಪ್ರಸಾದ ಲಭ್ಯ!
ನೀವು ಮಾಡುವ ಒಂದು ಸಣ್ಣ ತಪ್ಪಿನಿಂದ ದೊಡ್ಡ ಅಪಘಾತವೇ ಸಂಭವಿಸಬಹುದು ಎಚ್ಚರ
ನೀವು ಮಾಡುವ ಒಂದು ಸಣ್ಣ ತಪ್ಪಿನಿಂದ ದೊಡ್ಡ ಅಪಘಾತವೇ ಸಂಭವಿಸಬಹುದು ಎಚ್ಚರ
2 ನಿಮಿಷ ತಡವಾಗಿ ಬಂದ ಬಾಲಕನಿಗೆ 2 ಗಂಟೆ ಬಿಸಿಲಲ್ಲಿ ನಿಲ್ಲಿಸಿ ಶಿಕ್ಷೆ!
2 ನಿಮಿಷ ತಡವಾಗಿ ಬಂದ ಬಾಲಕನಿಗೆ 2 ಗಂಟೆ ಬಿಸಿಲಲ್ಲಿ ನಿಲ್ಲಿಸಿ ಶಿಕ್ಷೆ!
ಯುಗಾದಿ- ರಂಜಾನ್ ಹಬ್ಬಕ್ಕೂ ಮುನ್ನವೇ ಅಡುಗೆ ಎಣ್ಣೆ ಬೆಲೆ ಭಾರೀ ಏರಿಕೆ
ಯುಗಾದಿ- ರಂಜಾನ್ ಹಬ್ಬಕ್ಕೂ ಮುನ್ನವೇ ಅಡುಗೆ ಎಣ್ಣೆ ಬೆಲೆ ಭಾರೀ ಏರಿಕೆ