AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಂದು ಸಂಸದನಾಗಿ, ಇಂದು ಶಾಸಕನಾಗಿ: ಪಕ್ಷಾಂತರ ನಿಷೇಧ ಕಾಯ್ದೆಯಡಿ ಲಾಲ್ಡುಹೋಮಾಗೆ ಗೇಟ್​ಪಾಸ್

ಪಕ್ಷಾಂತರ ನಿಷೇಧ ಕಾಯ್ದೆ ಅಡಿಯಲ್ಲಿ ಅನರ್ಹಗೊಂಡ ಪ್ರಪ್ರಥಮ ಲೋಕಸಭಾ ಸದಸ್ಯ ಎಂಬ ಅಪಖ್ಯಾತಿಗೂ ಇವರು ಪಾತ್ರರಾಗಬೇಕಾಯಿತು. ಇದೀಗ, ಇದೇ ಕಾಯ್ದೆಯಡಿಯಲ್ಲಿ ಶಾಸಕನಾಗಿ ಅನರ್ಹಗೊಂಡಿದ್ದಾರೆ.

ಅಂದು ಸಂಸದನಾಗಿ, ಇಂದು ಶಾಸಕನಾಗಿ: ಪಕ್ಷಾಂತರ ನಿಷೇಧ ಕಾಯ್ದೆಯಡಿ ಲಾಲ್ಡುಹೋಮಾಗೆ ಗೇಟ್​ಪಾಸ್
ಸ್ವತಂತ್ರ ಶಾಸಕ ಲಾಲ್ಡುಹೋಮಾ
shruti hegde
| Edited By: |

Updated on: Nov 29, 2020 | 3:42 PM

Share

ಐಜ್ವಾಲ್​: ಪಕ್ಷಾಂತರ ನಿಷೇಧ ಕಾಯ್ದೆ ಅಡಿಯಲ್ಲಿ ಶಾಸಕ ಲಾಲ್ಡುಹೋಮಾರನ್ನು ಕಳೆದ ಶುಕ್ರವಾರ ಮಿಜೋರಾಂ ವಿಧಾನಸಭಾ ಸದಸ್ಯತ್ವದಿಂದ ಅನರ್ಹಗೊಳಿಸಲಾಗಿದೆ. ಸ್ವತಂತ್ರ ಅಭ್ಯರ್ಥಿಯಾಗಿ ಚುನಾವಣೆ ಗೆದ್ದಿದ್ದ ಲಾಲ್ಡುಹೋಮಾ ತದ ನಂತರ ಜೊರಾಂ ಪೀಪಲ್ಸ್ ಮೂವ್​ಮೆಂಟ್(ZPM) ಪಕ್ಷ ಸೇರಿದ್ದ ಹಿನ್ನೆಲೆಯಲ್ಲಿ ಅವರನ್ನು ಅನರ್ಹಗೊಳಿಸಲಾಗಿದೆ.

ಲಾಲ್ಡುಹೋಮಾ 2018ರ ವಿಧಾನಸಭಾ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಆಯ್ಕೆಯಾಗಿದ್ದರು. ಈ ಹಿಂದೆ ತಾವಿದ್ದ ಕಾಂಗ್ರೆಸ್​ ಪಕ್ಷವನ್ನು ತೊರೆದು ಸ್ವತಂತ್ರ ಅಭ್ಯರ್ಥಿಯಾಗಿ ಚುನಾವಣಾ ಕಣಕ್ಕೆ ಇಳಿದಿದ್ದರು.

ಆದರೆ ಇದೀಗ, ಜೊರಾಂ ಪೀಪಲ್ಸ್ ಮೂವ್​ಮೆಂಟ್(ZPM) ಪಕ್ಷ ಸೇರಿದ ಹಿನ್ನೆಲೆಯಲ್ಲಿ ಪಕ್ಷಾಂತರ ನಿಷೇಧ ಕಾಯ್ದೆ ಉಲ್ಲಂಘಿಸಿದ್ದಕ್ಕಾಗಿ ಲಾಲ್ಡುಹೋಮಾರ ಸದಸ್ಯತ್ವ ರದ್ದಾಗಿದೆ ಎಂದು ಸ್ಪೀಕರ್ ಲಾಲ್ರೆನ್ಲಿಯಾನಾ ಸೈಲೊ ಹೇಳಿದ್ದಾರೆ. ಅಚ್ಚರಿಯ ಸಂಗತಿಯೆಂದರೆ, ಲಾಲ್ಡುಹೋಮಾ 1988ರಲ್ಲಿ ಲೋಕಸಭಾ ಸದಸ್ಯರಾಗಿದ್ದಾಗ ಕಾಂಗ್ರೆಸ್​ ಪಕ್ಷದಿಂದ ರಾಜೀನಾಮೆ ನೀಡಿದ್ದಕ್ಕೆ ಇದೇ ಕಾಯ್ದೆ ಅಡಿಯಲ್ಲಿ ಇವರನ್ನು ಸಂಸದನಾಗಿ ಅನರ್ಹಗೊಳಿಸಲಾಗಿತ್ತು. ಪಕ್ಷಾಂತರ ನಿಷೇಧ ಕಾಯ್ದೆ ಅಡಿಯಲ್ಲಿ ಅನರ್ಹಗೊಂಡ ಪ್ರಪ್ರಥಮ ಲೋಕಸಭಾ ಸದಸ್ಯ ಎಂಬ ಅಪಖ್ಯಾತಿಗೂ ಇವರು ಪಾತ್ರರಾಗಬೇಕಾಯಿತು. ಇದೀಗ, ಇದೇ ಕಾಯ್ದೆಯಡಿಯಲ್ಲಿ ಶಾಸಕನಾಗಿ ಅನರ್ಹಗೊಂಡಿದ್ದಾರೆ.

ಸಂವಿಧಾನದ 10ನೇ ಶೆಡ್ಯೂಲ್​ನ ಪ್ಯಾರಾ2(2) ಅನ್ನು ಉಲ್ಲಂಘಿಸಿದ ಆರೋಪದ ಮೇಲೆ ಲಾಲ್ಡುಹೋಮಾರನ್ನು ಅನರ್ಹಗೊಳಿಸುವಂತೆ ಮಿಜೋ ನ್ಯಾಷನಲ್ ಫ್ರಂಟ್ (ಎಂಎನ್​ಎಫ್​) ನ 12 ಶಾಸಕರು ಸ್ಪೀಕರ್​ಗೆ ಅರ್ಜಿ ಸಲ್ಲಿಸಿದ್ದರು. ಪರಿಶೀಲನೆಯ ಆಧಾರದ ಮೇಲೆ ಲಾಲ್ಡುಹೋಮಾ ತಮ್ಮ ಸದಸ್ಯತ್ವ ಕಳೆದುಕೊಂಡಿದ್ದಾರೆ ಎಂದು ಸ್ಪೀಕರ್ ಸೈಲೋ ಹೇಳಿದ್ದಾರೆ.

Follow Us
ಗ್ಯಾಸ್​ ಇಲ್ಲಿದೇ ಬೆಂಗಳೂರಿನ ಗಲ್ಲಿ ಗಲ್ಲಿಯಲ್ಲೂ ನಿಂತ ಆಟೋಗಳು!
ಗ್ಯಾಸ್​ ಇಲ್ಲಿದೇ ಬೆಂಗಳೂರಿನ ಗಲ್ಲಿ ಗಲ್ಲಿಯಲ್ಲೂ ನಿಂತ ಆಟೋಗಳು!
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ