AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತಿರುಪತಿ ತಿಮ್ಮಪ್ಪನ ದರ್ಶನ ಪಡೆದ ಲಾಲು ಪ್ರಸಾದ್ ಯಾದವ್ ಕುಟುಂಬ

ಲಾಲು ಪ್ರಸಾದ್ ಯಾದವ್ ತಮ್ಮ ಕುಟುಂಬದ ಜತೆಗೆ ತಿರುಪತಿ ತಿಮ್ಮಪ್ಪನ ದರ್ಶನ ಪಡೆದಿದ್ದಾರೆ. ಲಾಲು ಪ್ರಸಾದ್ ಯಾದವ್ ಜತೆಗೆ ಅವರ ಪತ್ನಿ ರಾಬ್ರಿ ದೇವಿ, ಅವರ ಪುತ್ರ ಹಾಗೂ ಬಿಹಾರದ ಉಪಮುಖ್ಯಮಂತ್ರಿ ತೇಜಸ್ವಿ ಯಾದವ್ ಮತ್ತು ಅವರ ಕುಟುಂಬ ಜತೆಗೆ ಶನಿವಾರ ಆಂಧ್ರಪ್ರದೇಶದ ತಿರುಪತಿ ಬಾಲಾಜಿ ದೇವಸ್ಥಾನದಲ್ಲಿ ಪ್ರಾರ್ಥನೆ ಸಲ್ಲಿಸಿದ್ದಾರೆ.

ತಿರುಪತಿ ತಿಮ್ಮಪ್ಪನ ದರ್ಶನ ಪಡೆದ ಲಾಲು ಪ್ರಸಾದ್ ಯಾದವ್ ಕುಟುಂಬ
ತಿರುಪತಿ ತಿಮ್ಮಪ್ಪನ ದರ್ಶನ ಪಡೆದ ಲಾಲು ಪ್ರಸಾದ್ ಯಾದವ್ ಕುಟುಂಬ
ಅಕ್ಷಯ್​ ಪಲ್ಲಮಜಲು​​
|

Updated on: Dec 09, 2023 | 2:37 PM

Share

ಅಮರಾವತಿ, ಡಿ.9: ರಾಷ್ಟ್ರೀಯ ಜನತಾ ದಳದ ಅಧ್ಯಕ್ಷ ಲಾಲು ಪ್ರಸಾದ್ ಯಾದವ್ ತಮ್ಮ ಕುಟುಂಬದ ಜತೆಗೆ ತಿರುಪತಿ ತಿಮ್ಮಪ್ಪನ ದರ್ಶನ ಪಡೆದಿದ್ದಾರೆ. ಲಾಲು ಪ್ರಸಾದ್ ಯಾದವ್ ಜತೆಗೆ ಅವರ ಪತ್ನಿ ರಾಬ್ರಿ ದೇವಿ, ಅವರ ಪುತ್ರ ಹಾಗೂ ಬಿಹಾರದ ಉಪಮುಖ್ಯಮಂತ್ರಿ ತೇಜಸ್ವಿ ಯಾದವ್ ಮತ್ತು ಅವರ ಕುಟುಂಬ ಜತೆಗೆ ಶನಿವಾರ ಆಂಧ್ರಪ್ರದೇಶದ ತಿರುಪತಿ ತಿಮ್ಮಪ್ಪನ ದೇವಸ್ಥಾನದಲ್ಲಿ ಪ್ರಾರ್ಥನೆ ಸಲ್ಲಿಸಿದ್ದಾರೆ.

ಲಾಲು ಪ್ರಸಾದ್ ಯಾದವ್ ಮತ್ತು ಅವರು ಕುಟುಂಬ ದೇವಸ್ಥಾನದಲ್ಲಿ ನಡೆಸಲಾದ ಸುಪ್ರಭಾತಂ ಸೇವೆಯಲ್ಲಿ ಭಾಗವಹಿಸಿದರು. ಈ ಬಗ್ಗೆ ಲಾಲು ಪ್ರಸಾದ್ ಯಾದವ್ ಅವರು ಪುತ್ರ ತೇಜಸ್ವಿ ಯಾದವ್ ಎಕ್ಸ್​​ ಖಾತೆಯಲ್ಲಿ ಹಂಚಿಕೊಂಡಿದ್ದಾರೆ.

ನಾನು ಮತ್ತು ನನ್ನ ಕುಟುಂಬ, ನನ್ನ ತಾಯಿ, ತಂದೆ, ಸಹೋದರ, ನನ್ನ ಹೆಂಡತಿ ಮತ್ತು ನನ್ನ ಮಗಳು, ಕಾತ್ಯಾಯನಿಯೊಂದಿಗೆ ಭಗವಾನ್ ಬಾಲಾಜಿಯ ಆಶೀರ್ವಾದ ಪಡೆಯಲು ಇಲ್ಲಿಗೆ ಬಂದಿದ್ದೇವೆ. ನನ್ನ ಮಗಳ ಮುಂಡನ ಸಂಸ್ಕಾರವನ್ನು ಇಲ್ಲಿ ನಡೆಸಿದ್ದೇವೆ, ಎಲ್ಲರ ಯೋಗಕ್ಷೇಮಕ್ಕಾಗಿ ಪ್ರಾರ್ಥಿಸಿದ್ದೇವೆ. ದೇಶವು ಪ್ರಗತಿಯಾಗಲಿ ಮತ್ತು ಎಲ್ಲರೂ ಅಭಿವೃದ್ಧಿ ಹೊಂದಲಿ ಎಂದು ದೇವರಲ್ಲಿ ಪ್ರಾರ್ಥಸಿದ್ದೇವೆ ಎಂದು ತೇಜಸ್ವಿ ಯಾದವ್ ಎಕ್ಸ್​​​ನಲ್ಲಿ ಬರೆದುಕೊಂಡಿದ್ದಾರೆ.

ಇದನ್ನೂ ಓದಿ:ಭಾರತ ಮತ್ತು ಇಂಡಿಯಾ ನಡುವಿನ ವ್ಯತ್ಯಾಸ ವಿವರಿಸುವ ಲಾಲು ಪ್ರಸಾದ್ ಯಾದವ್ ಹಳೇ ವಿಡಿಯೊ ವೈರಲ್ 

ತೇಜಸ್ವಿ ಯಾದವ್ ದಂಪತಿಗಳ ಮದುವೆ ವಾರ್ಷಿಕೋತ್ಸವದ ಪ್ರಯುಕ್ತ ಈ ಭೇಟಿ ನೀಡಲಾಗಿದೆ ಎಂದು ಹೇಳಿದ್ದಾರೆ. ಶುಕ್ರವಾರ ಬಿಹಾರದಿಂದ ಹೊರಟು, ಶನಿವಾರ ಬೆಳಿಗ್ಗೆ ಬಾಲಾಜಿಯ ದರ್ಶನ ಮಾಡಲಾಗಿದೆ. ನಾವು ದೇವರಲ್ಲಿ ರಾಜ್ಯದ ಜನರಿಗೆ ಸುಖ, ಶಾಂತಿ, ಸಮೃದ್ಧಿ ಮತ್ತು ಕಲ್ಯಾಣ ಮಾಡಲಿ ಎಂದು ಪ್ರಾರ್ಥಿಸಿದ್ದೇವೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ಪ್ರಜಾಕೀಯ ಜೊತೆ ಜೊತೆಗೆ ರಾಜ್ಯ ರಾಜಕಾರಣದ ಬಗ್ಗೆ ಉಪ್ಪಿ ಮಾತು
ಪ್ರಜಾಕೀಯ ಜೊತೆ ಜೊತೆಗೆ ರಾಜ್ಯ ರಾಜಕಾರಣದ ಬಗ್ಗೆ ಉಪ್ಪಿ ಮಾತು
ಅತ್ಯಂತ ದುರಾದೃಷ್ಟಕರ ರೀತಿಯಲ್ಲಿ ಔಟಾದ ರಹಾನೆ, ರಘುವಂಶಿ
ಅತ್ಯಂತ ದುರಾದೃಷ್ಟಕರ ರೀತಿಯಲ್ಲಿ ಔಟಾದ ರಹಾನೆ, ರಘುವಂಶಿ
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ