AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಲಾಲು ಪ್ರಸಾದ್ ಸಹಾಯ ಮಾಡಿದ್ದು ತಮ್ಮ ಹೆಂಡತಿಗೆ ಮಾತ್ರ; ಚುನಾವಣಾ ರ್ಯಾಲಿಯಲ್ಲಿ ಆರ್‌ಜೆಡಿ ವಿರುದ್ಧ ನಿತೀಶ್ ಕುಮಾರ್ ವಾಗ್ದಾಳಿ

ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಬಿಹಾರಕ್ಕೆ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರದ ಬೆಂಬಲವನ್ನು ಒತ್ತಿ ಹೇಳಿದ್ದಾರೆ. ಲಾಲು ಪ್ರಸಾದ್ ಮಹಿಳೆಯರಿಗಾಗಿ ಯಾವುದೇ ಉತ್ತಮ ಕೆಲಸಗಳನ್ನು ಮಾಡಲಿಲ್ಲ, ಅವರು ಸಹಾಯ ಮಾಡಿದ್ದು ತಮ್ಮ ಹೆಂಡತಿಗೆ ಮಾತ್ರ ಎಂದು ಲೇವಡಿ ಮಾಡಿದ್ದಾರೆ. ಒಟ್ಟು 243 ಸ್ಥಾನಗಳಲ್ಲಿ, 121 ಕ್ಷೇತ್ರಗಳಿಗೆ ನವೆಂಬರ್ 6 ರಂದು ಮೊದಲ ಹಂತದಲ್ಲಿ ಮತದಾನ ನಡೆಯಲಿದೆ. ಎರಡನೇ ಹಂತದ ಮತದಾನ ನವೆಂಬರ್ 11ರಂದು ನಡೆಯಲಿದೆ. 

ಲಾಲು ಪ್ರಸಾದ್ ಸಹಾಯ ಮಾಡಿದ್ದು ತಮ್ಮ ಹೆಂಡತಿಗೆ ಮಾತ್ರ; ಚುನಾವಣಾ ರ್ಯಾಲಿಯಲ್ಲಿ ಆರ್‌ಜೆಡಿ ವಿರುದ್ಧ ನಿತೀಶ್ ಕುಮಾರ್ ವಾಗ್ದಾಳಿ
Cm Nitish Kumar
ಸುಷ್ಮಾ ಚಕ್ರೆ
|

Updated on: Oct 17, 2025 | 9:34 PM

Share

ಪಾಟ್ನಾ, ಅಕ್ಟೋಬರ್ 17: ಬಿಹಾರ ರಾಜ್ಯದಲ್ಲಿ ಎನ್‌ಡಿಎ ಬಣದಲ್ಲಿರುವ ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ವಿಧಾನಸಭಾ ಚುನಾವಣೆ (Bihar Elections) ಹಿನ್ನೆಲೆಯಲ್ಲಿ ಚುನಾವಣಾ ಪ್ರಚಾರವನ್ನು ಚುರುಕುಗೊಳಿಸಿದ್ದಾರೆ. ಈ ವೇಳೆ ಅವರು ಬಿಹಾರದ ಆರ್‌ಜೆಡಿ ನೇತೃತ್ವದ ವಿರೋಧ ಪಕ್ಷವನ್ನೂ ಗುರಿಯಾಗಿಸಿಕೊಂಡಿದ್ದಾರೆ. ಚುನಾವಣಾ ವೇಳಾಪಟ್ಟಿ ಘೋಷಣೆಯ ನಂತರ ತಮ್ಮ ಮೊದಲ ದೊಡ್ಡ ಚುನಾವಣಾ ರ್ಯಾಲಿಯನ್ನು ಉದ್ದೇಶಿಸಿ ಇಂದು ಮಾತನಾಡಿದ ನಿತೀಶ್ ಕುಮಾರ್, “ಕೇಂದ್ರ ಸರ್ಕಾರ ನಮಗೆ ದೊಡ್ಡ ಬೆಂಬಲವನ್ನು ನೀಡಿದೆ. ಪ್ರಧಾನಿ ಮೋದಿ ಬಿಹಾರಕ್ಕೆ ಸಾಕಷ್ಟು ಸಹಾಯ ಮಾಡಿದ್ದಾರೆ. ನಮಗೆ ಪ್ರದರ್ಶಿಸಲು ಹಲವು ಯೋಜನೆಗಳಿವೆ” ಎಂದು ಒತ್ತಿ ಹೇಳಿದ್ದಾರೆ.

“ನಾನು ಎಲ್ಲಾ ಗುಂಪುಗಳ ಅಭಿವೃದ್ಧಿಯನ್ನು ಮಾಡಿದ್ದೇನೆ. ಅದು ಹಿಂದೂಗಳು, ಮುಸ್ಲಿಮರು, ಹಿಂದುಳಿದವರಇರಲಿ ಎಲ್ಲರನ್ನೂ ಸಮಾನವಾಗಿ ಕಂಡಿದ್ದೇನೆ” ಎಂದು ಅವರು ಹೇಳಿದ್ದಾರೆ. ಇದೇ ವೇಳೆ ಮಾಜಿ ಸಿಎಂ ಹಾಗೂ ಆರ್​ಜೆಡಿ ಮುಖ್ಯಸ್ಥ ಲಾಲು ಪ್ರಸಾದ್ ಯಾದವ್ ಅವರ ವಿರುದ್ಧ ವಾಗ್ದಾಳಿ ನಡೆಸಿದ ನಿತೀಶ್ ಕುಮಾರ್, ಲಾಲು ಪ್ರಸಾದ್ ಮಹಿಳೆಯರಿಗಾಗಿ ಯಾವುದೇ ಉತ್ತಮ ಕೆಲಸಗಳನ್ನು ಮಾಡಲಿಲ್ಲ, ಅವರು ಸಹಾಯ ಮಾಡಿದ್ದು ತಮ್ಮ ಹೆಂಡತಿಗೆ ಮಾತ್ರ ಎಂದು ಲೇವಡಿ ಮಾಡಿದ್ದಾರೆ.

ಇದನ್ನೂ ಓದಿ: ಬಿಹಾರ ಚುನಾವಣೆಗೆ ಶಹಾಬುದ್ದೀನ್ ಮಗನನ್ನು ಕಣಕ್ಕಿಳಿಸಿದ್ದಕ್ಕೆ ಆರ್​ಜೆಡಿ ವಿರುದ್ಧ ಅಮಿತ್ ಶಾ ವಾಗ್ದಾಳಿ

ಈ ಹೇಳಿಕೆಯು 1997ರಲ್ಲಿ ಲಾಲು ಪ್ರಸಾದ್ ಯಾದವ್ ಮೇವು ಹಗರಣದಲ್ಲಿ ಸಿಲುಕಿದ ನಂತರ ತಮ್ಮ ಪತ್ನಿ ರಾಬ್ರಿ ದೇವಿಯನ್ನು ಬಿಹಾರದ ಮುಖ್ಯಮಂತ್ರಿಯನ್ನಾಗಿ ಮಾಡುವ ನಿರ್ಧಾರವನ್ನು ನೇರವಾಗಿ ಉಲ್ಲೇಖಿಸುತ್ತದೆ. ಈ ನಿರ್ಧಾರವನ್ನು ನಿತೀಶ್ ಕುಮಾರ್ ನಿರಂತರವಾಗಿ ಟೀಕಿಸುತ್ತಲೇ ಬಂದಿದ್ದಾರೆ.

ಬಿಹಾರ ವಿಧಾನಸಭಾ ಚುನಾವಣೆಯ ಮೊದಲ ಹಂತದ ನಾಮಪತ್ರ ಸಲ್ಲಿಕೆ ಇಂದು ಕೊನೆಗೊಂಡಿದೆ. ಒಟ್ಟು 243 ಸ್ಥಾನಗಳಲ್ಲಿ, 121 ಕ್ಷೇತ್ರಗಳಿಗೆ ನವೆಂಬರ್ 6 ರಂದು ಮೊದಲ ಹಂತದಲ್ಲಿ ಮತದಾನ ನಡೆಯಲಿದೆ. ಎರಡನೇ ಹಂತದ ಮತದಾನ ನವೆಂಬರ್ 11ರಂದು ನಡೆಯಲಿದ್ದು, ಮತ ಎಣಿಕೆ ನವೆಂಬರ್ 14ರಂದು ನಡೆಯಲಿದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಘಾರ್ಗ ಸಿನಿಮಾನಲ್ಲಿ ದರ್ಶನ್ ಸಿನಿಮಾದ ಹಾಡು ಏಕೆ: ಉತ್ತರ ಇಲ್ಲಿದೆ
ಘಾರ್ಗ ಸಿನಿಮಾನಲ್ಲಿ ದರ್ಶನ್ ಸಿನಿಮಾದ ಹಾಡು ಏಕೆ: ಉತ್ತರ ಇಲ್ಲಿದೆ
ಆ ಮಾತಿಗೆ ರೊಚ್ಚಿಗೆದ್ದು ವಿಪಕ್ಷ ಶಾಸಕರಿಗೆ ಏಕವಚನದಲ್ಲಿ ಬೈದ ಕೈ ಶಾಸಕ
ಆ ಮಾತಿಗೆ ರೊಚ್ಚಿಗೆದ್ದು ವಿಪಕ್ಷ ಶಾಸಕರಿಗೆ ಏಕವಚನದಲ್ಲಿ ಬೈದ ಕೈ ಶಾಸಕ
ತಮ್ಮ‌ ರಕ್ಷಣೆಗೆ ಬೋಟ್ ಆಂಬ್ಯುಲೆನ್ಸ್ ನಿರ್ಮಾಣ, ಮೀನುಗಾರರ ಮಾದರಿ ಹೆಜ್ಜೆ
ತಮ್ಮ‌ ರಕ್ಷಣೆಗೆ ಬೋಟ್ ಆಂಬ್ಯುಲೆನ್ಸ್ ನಿರ್ಮಾಣ, ಮೀನುಗಾರರ ಮಾದರಿ ಹೆಜ್ಜೆ
ಮನಸೋ ಇಚ್ಛೆ ಲೈಸೆನ್ಸ್: ಅಬಕಾರಿ ಇಲಾಖೆಯ ಮತ್ತಷ್ಟು ಕಳ್ಳಾಟ ಬಯಲು
ಮನಸೋ ಇಚ್ಛೆ ಲೈಸೆನ್ಸ್: ಅಬಕಾರಿ ಇಲಾಖೆಯ ಮತ್ತಷ್ಟು ಕಳ್ಳಾಟ ಬಯಲು
ಬೆಳಗಾವಿ: ಸಿಗರೇಟ್ ಹಣ ಕೇಳಿದ್ದಕ್ಕೆ ಬಿತ್ತು ಪಾನ್ ಶಾಪ್ ಮಾಲೀಕನ ಹೆಣ
ಬೆಳಗಾವಿ: ಸಿಗರೇಟ್ ಹಣ ಕೇಳಿದ್ದಕ್ಕೆ ಬಿತ್ತು ಪಾನ್ ಶಾಪ್ ಮಾಲೀಕನ ಹೆಣ
ಲವ್​​ ಹೆಸರಲ್ಲಿ ಮೋಸ ಮಾಡಿದವನ ಕಾಮುಕತೆ ಬಿಚ್ಚಿಟ್ಟ ಸಂತ್ರಸ್ತೆ
ಲವ್​​ ಹೆಸರಲ್ಲಿ ಮೋಸ ಮಾಡಿದವನ ಕಾಮುಕತೆ ಬಿಚ್ಚಿಟ್ಟ ಸಂತ್ರಸ್ತೆ
ಬಿಎಂಟಿಸಿ ಬಸ್ ಬಳಿಕ ವಿಕ್ಟೋರಿಯಾ ಆಸ್ಪತ್ರೆಯಲ್ಲೂ UPI ಸ್ಕ್ಯಾನರ್ ಸ್ಕ್ಯಾಮ್
ಬಿಎಂಟಿಸಿ ಬಸ್ ಬಳಿಕ ವಿಕ್ಟೋರಿಯಾ ಆಸ್ಪತ್ರೆಯಲ್ಲೂ UPI ಸ್ಕ್ಯಾನರ್ ಸ್ಕ್ಯಾಮ್
ಲಕ್ಕುಂಡಿಯ ಜೈನ ಬಸದಿಗಳಲ್ಲೂ ನಿಧಿ ಇದ್ಯಾ? ಸರ್ಪಗಳು ಕಾವಲು ಕಾಯ್ತಿದ್ಯಾ?
ಲಕ್ಕುಂಡಿಯ ಜೈನ ಬಸದಿಗಳಲ್ಲೂ ನಿಧಿ ಇದ್ಯಾ? ಸರ್ಪಗಳು ಕಾವಲು ಕಾಯ್ತಿದ್ಯಾ?
ಸದನದಲ್ಲಿ ವೈಯಕ್ತಿಕವಾಗಿ ಬೈದಾಡಿಕೊಂಡ ಶಾಸಕ ಶರಣು ಸಲಗಾರ್- ಶಿವಲಿಂಗೇಗೌಡ
ಸದನದಲ್ಲಿ ವೈಯಕ್ತಿಕವಾಗಿ ಬೈದಾಡಿಕೊಂಡ ಶಾಸಕ ಶರಣು ಸಲಗಾರ್- ಶಿವಲಿಂಗೇಗೌಡ
Video: ಬಾಲಕಿಯನ್ನು ಗೂಳಿಯ ದಾಳಿಯಿಂದ ಕಾಪಾಡಿದ ಜನ
Video: ಬಾಲಕಿಯನ್ನು ಗೂಳಿಯ ದಾಳಿಯಿಂದ ಕಾಪಾಡಿದ ಜನ