AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಉತ್ತರ ಪ್ರದೇಶ: ದೇವಾಲಯಕ್ಕೆ ಕಾರಿನಲ್ಲೇ ಪ್ರದಕ್ಷಿಣೆ ಮಾಡಲು ಬಂದ ಲಾಲೂ ಪುತ್ರ ತೇಜ್ ಪ್ರತಾಪ್ ಯಾದವ್​​ಗೆ ತಡೆ

ಯಾದವ್ ಅವರು ಕಾರಿನಲ್ಲೇ ಪ್ರದಕ್ಷಿಣೆ ಮಾಡುವುದಕ್ಕೆ ಕೇಳಿಕೊಂಡರು ಎಂದು ಅಲ್ಲಿನ ಅಧಿಕಾರಿಗಳು ಹೇಳಿದ್ದಾರೆ. ಪೊಲೀಸ್ ಮೂಲಗಳ ಪ್ರಕಾರ ಯಾದವ್ ಅವರು ಮಥುರಾ ಮತ್ತು ಬೃಂದಾವನಕ್ಕೆ ಆಗಾಗ್ಗೆ ಭೇಟಿ ನೀಡುವವರಾಗಿದ್ದು, ನಿನ್ನೆ ದೇವಾಲಯಕ್ಕೆ ಬಂದಿದ್ದರು.

ಉತ್ತರ ಪ್ರದೇಶ: ದೇವಾಲಯಕ್ಕೆ ಕಾರಿನಲ್ಲೇ ಪ್ರದಕ್ಷಿಣೆ ಮಾಡಲು ಬಂದ ಲಾಲೂ ಪುತ್ರ ತೇಜ್ ಪ್ರತಾಪ್ ಯಾದವ್​​ಗೆ ತಡೆ
ತೇಜ್ ಪ್ರತಾಪ್ ಯಾದವ್
TV9 Web
| Edited By: |

Updated on:Jul 13, 2022 | 4:17 PM

Share

ಮಥುರಾ: ಆರ್ ಜೆಡಿ ನಾಯಕ, ಲಾಲೂ ಪ್ರಸಾದ್ ಯಾದವ್ (Lalu Prasad Yadav) ಅವರ ಹಿರಿಯ ಪುತ್ರ ತೇಜ್ ಪ್ರತಾಪ್ ಯಾದವ್ (Tej Pratap Yadav) ಅವರ ಕಾರು ಇಲ್ಲಿನ ಗಿರಿರಾಜ್ ಮಹಾರಾಜ್ ದೇವಾಲಯಕ್ಕೆ (Giriraj Maharaj temple) ಪ್ರವೇಶಿಸುತ್ತಿದ್ದಂತೆ ಪೊಲೀಸರು ತಡೆದಿದ್ದಾರೆ. ಬಿಹಾರದ ಮಾಜಿ ಸಚಿವರಾದ ಯಾದವ್, ಅಪ್ಪ ಲಾಲೂ ಯಾದವ್ ಅವರ ಉತ್ತಮ ಆರೋಗ್ಯಕ್ಕಾಗಿ ಪ್ರಾರ್ಥಿಸಲು ಮಂಗಳವಾರ ಗಿರಿರಾಜ್ ಮಹಾರಾಜ್ ದೇವಾಲಯಕ್ಕೆ ಬಂದಿದ್ದರು. ಆದರೆ ಪೊಲೀಸರು ಕಾರು ಪ್ರವೇಶಕ್ಕೆ ತಡೆಯೊಡ್ಡಿದ್ದರಿಂದ ಅವರು ದೇವಾಲಯಕ್ಕೆ ಭೇಟಿ ನೀಡದೆ ಮರಳಿದ್ದಾರೆ. ಮುಡಿಯಾ ಪೂರ್ಣಿಮಾ ಆಗಿದ್ದರಿಂದ ದೇವಾಲಯದಲ್ಲಿ ಭಾರೀ ಜನರು ಸೇರಿದ್ದರು. ಯಾದವ್ ಅವರು ಕಾರಿನಲ್ಲೇ ಪ್ರದಕ್ಷಿಣೆ ಮಾಡುವುದಕ್ಕೆ ಕೇಳಿಕೊಂಡರು ಎಂದು ಅಲ್ಲಿನ ಅಧಿಕಾರಿಗಳು ಹೇಳಿದ್ದಾರೆ. ಪೊಲೀಸ್ ಮೂಲಗಳ ಪ್ರಕಾರ ಯಾದವ್ ಅವರು ಮಥುರಾ ಮತ್ತು ಬೃಂದಾವನಕ್ಕೆ ಆಗಾಗ್ಗೆ ಭೇಟಿ ನೀಡುವವರಾಗಿದ್ದು, ನಿನ್ನೆ ದೇವಾಲಯಕ್ಕೆ ಬಂದಿದ್ದರು. ವಾಹನಗಳನ್ನು ಒಳಗೆ ತೆಗೆದುಕೊಂಡು ಹೋಗುವಂತಿಲ್ಲ. ವಾಹನಗಳ ಪ್ರವೇಶ ನಿಷೇಧಿಸಲಾಗಿದೆ ಎಂದು ಪೊಲೀಸರು ಯಾದವ್ ಕಾರನ್ನು ತಡೆದಿದ್ದಾರೆ. ಆಗ ತೇಜ್ ಪ್ರತಾಪ್ ಯಾದವ್ ಅಲ್ಲಿ ಜಗಳವಾಡಿದ್ದು, ಉತ್ತರ ಪ್ರದೇಶ ಪೊಲೀಸರು ತಮ್ಮ ಕಾರನ್ನು ತಡೆದಿರುವುದರ ಬಗ್ಗೆ ಸಾಮಾಜಿಕ ಮಾಧ್ಯಮಗಳಲ್ಲಿ ಪೋಸ್ಟ್ ಹಾಕಿದ್ದಾರೆ. ಇದಾದ ನಂತರ ಅವರು ಹತ್ತಿರದ ಪೊಲೀಸ್ ಠಾಣೆಗೆ ಹೋಗಿ ಕಾರಿಗೆ ಪ್ರವೇಶ ನೀಡುವಂತೆ ಮನವಿ ಮಾಡಿದ್ದಾರೆ. ಆದರೆ ಅಲ್ಲಿಯೂ ಪೊಲೀಸ್ ಠಾಣೆಯ ಅಧಿಕಾರಿ ಅನುಮತಿ ನಿರಾಕರಿಸಿದ್ದಾರೆ.

ಈ ಬಗ್ಗೆ ಮಾತನಾಡಿದ ಗೋವರ್ಧನದ ಸರ್ಕಲ್ ಆಫೀಸರ್ ಗೌರವ್ ತ್ರಿಪಾಠಿ, ಮುಡಿಯಾ ಪೂರ್ಣಿಮೆಯಂದು ಅಧಿಕ ಸಂಖ್ಯೆಯಲ್ಲಿ ಜನರು ಬರುವುದರಿಂದ ವಾಹನಗಳ ಪ್ರವೇಶ ನಿಷೇಧಿಸಲಾಗಿದೆ, ನಾವು ತುರ್ತು ವಾಹನಗಳಿಗೆ ಮಾತ್ರ ಅನುಮತಿ ನೀಡುತ್ತಿದ್ದೇವೆ. ದೇವಾಲಯದಲ್ಲಿ ಪ್ರಾರ್ಥನೆ ಮಾಡಬಯಸುವವರು ಕಾಲ್ನಡಿಗೆಯಲ್ಲೇ ಪ್ರದಕ್ಷಿಣೆ ಮಾಡಬೇಕು. ಆದರೆ ವಾಹನಗಳನ್ನು ಒಳಗೆ ತೆಗೆದುಕೊಂಡು ಹೋಗಲು ಅನುಮತಿ ಇಲ್ಲ ಎಂದು ತ್ರಿಪಾಠಿ ಹೇಳಿದ್ದಾರೆ.

Published On - 4:15 pm, Wed, 13 July 22

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ