AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಉದ್ಯೋಗಕ್ಕಾಗಿ ಭೂ ಹಗರಣ: ಲಾಲು ಪ್ರಸಾದ್ ಯಾದವ್ ಪತ್ನಿ, ಇಬ್ಬರು ಪುತ್ರಿಯರಿಗೆ ಮಧ್ಯಂತರ ಜಾಮೀನು

Land for employment scam: ಉದ್ಯೋಗಕ್ಕಾಗಿ ಭೂ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿ ಕೋರ್ಟ್​​ ಕಳೆದು ತಿಂಗಳು ಲಾಲು ಪ್ರಸಾದ್ ಯಾದವ್ ಪತ್ನಿ ರಾಬ್ರಿ ದೇವಿ ಸೇರಿದಂತೆ ಇಬ್ಬರು ಪುತ್ರಿಯರಾದ ಮಿಸಾ ಭಾರತಿ ಮತ್ತು ಹೇಮಾ ಯಾದವ್‌ ಅವರಿಗೆ ಸಮನ್ಸ್​​​​ ನೀಡಿತ್ತು. ಇದೀಗ ಮುಂದಿನ ವಿಚಾರಣೆ ನಡೆಯುವರೆಗೆ ಮೂವರಿಗೆ ಮಧ್ಯಂತರ ಜಾಮೀನು ನೀಡಿದೆ.

ಉದ್ಯೋಗಕ್ಕಾಗಿ ಭೂ ಹಗರಣ: ಲಾಲು ಪ್ರಸಾದ್ ಯಾದವ್ ಪತ್ನಿ, ಇಬ್ಬರು ಪುತ್ರಿಯರಿಗೆ ಮಧ್ಯಂತರ ಜಾಮೀನು
ಅಕ್ಷಯ್​ ಪಲ್ಲಮಜಲು​​
|

Updated on:Feb 09, 2024 | 11:48 AM

Share

ದೆಹಲಿ, ಫೆ.9: ಉದ್ಯೋಗಕ್ಕಾಗಿ ಭೂಮಿ ಹಗರಣ (Land for employment scam) ಪ್ರಕರಣದಲ್ಲಿ ಆರ್‌ಜೆಡಿ ಮುಖ್ಯಸ್ಥ ಲಾಲು ಪ್ರಸಾದ್ (Lalu Prasad Yadav) ಯಾದವ್ ಅವರ ಪತ್ನಿ ರಾಬ್ರಿ ದೇವಿ ಮತ್ತು ಇಬ್ಬರು ಪುತ್ರಿಯರಾದ ಮಿಸಾ ಭಾರತಿ ಮತ್ತು ಹೇಮಾ ಯಾದವ್‌ಗೆ ದೆಹಲಿ ನ್ಯಾಯಾಲಯವು ಮುಂದಿನ ವಿಚಾರಣೆಯ ದಿನಾಂಕದವರೆಗೆ ಇಂದು (ಫೆ.9) ಮಧ್ಯಂತರ ಜಾಮೀನು ನೀಡಿದೆ. ಕಳೆದ ತಿಂಗಳು, ರೈಲ್ವೇ ಜಮೀನು-ಉದ್ಯೋಗಕ್ಕಾಗಿ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಅವರ ವಿರುದ್ಧ ಜಾರಿ ನಿರ್ದೇಶನಾಲಯ ದೆಹಲಿ ಕೋರ್ಟ್​​ಗೆ ಚಾರ್ಜ್ ಶೀಟ್‌ನ ಸಲ್ಲಿಸಿತ್ತು. ನಂತರದಲ್ಲಿ ಮೂವರಿಗೂ ನ್ಯಾಯಾಲಯವು ಸಮನ್ಸ್ ನೀಡಿತ್ತು.

ಈ ಪ್ರಕರಣದ ವಿಚಾರಣೆಯನ್ನು ಫೆ.28ರಂದು ನಡೆಸಲಾಗುವುದು ಎಂದು ಹೇಳಿದೆ. ಇದಕ್ಕೂ ಮುನ್ನ ಪಿಎಂಎಲ್‌ಎ ನ್ಯಾಯಾಲಯವು ಅಮಿತ್ ಕಟ್ಯಾಲ್, ರಾಬ್ರಿ ದೇವಿ, ಮಿಶಾ ಭಾರತಿ, ಹೇಮಾ ಯಾದವ್ ಮತ್ತು ಹೃದಯಾನಂದ್ ಚೌಧರಿ ಫೆಬ್ರವರಿ 9 ರಂದು ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ಜಾರಿ ಮಾಡಿತ್ತು. ಇದರಂತೆ ರಾಬ್ರಿ, ಮಿಸಾ, ಹೇಮಾ ಅವರು ನ್ಯಾಯಲಯಕ್ಕೆ ಹಾಜರಾಗಿದ್ದರು. ಆದರೆ ಅಮಿತ್ ಕಟ್ಯಾಲ್ ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ ಹಾಜರಾಗಿದ್ದರು.

ಇಡಿ ಜನವರಿ 1, 2024 ರಂದು ಅಮಿತ್ ಕತ್ಯಾಲ್, ರಾಬ್ರಿ ದೇವಿ, ಮಿಶಾ ಭಾರತಿ, ಹೇಮಾ ಯಾದವ್, ಹೃದಯಾನಂದ್ ಚೌಧರಿ ಮತ್ತು ಎರಡು ಕಂಪನಿಗಳ ವಿರುದ್ಧ ಅಕ್ರಮ ಹಣ ವರ್ಗಾವಣೆ ತಡೆ ಕಾಯ್ದೆ (ಪಿಎಂಎಲ್‌ಎ), 2002 ರ ನಿಬಂಧನೆಗಳ ಅಡಿಯಲ್ಲಿ ಪ್ರಾಸಿಕ್ಯೂಷನ್ ದೂರು (ಪಿಸಿ) ದಾಖಲಿಸಿದೆ. ಈಗಾಗಲೇ ಎಕೆ ಇನ್ಫೋಸಿಸ್ಟಮ್ಸ್ ಪ್ರೈವೇಟ್ ಲಿಮಿಟೆಡ್, ಎಬಿ ಎಕ್ಸ್‌ಪೋರ್ಟ್ಸ್ ಪ್ರೈ. Ltd. ಪ್ರಕಣರಣ ನವದೆಹಲಿಯ ವಿಶೇಷ ನ್ಯಾಯಾಲಯದ (PMLA) ಮುಂದೆ ಇದೆ.

ಇದನ್ನೂ ಓದಿ: ಉದ್ಯೋಗಕ್ಕಾಗಿ ಭೂಮಿ ಪ್ರಕರಣ: ರಾಬ್ರಿ ದೇವಿ, ಮಗಳು ಮಿಸಾ ಭಾರತಿಗೆ ದೆಹಲಿ ನ್ಯಾಯಾಲಯದಿಂದ ಸಮನ್ಸ್

2004-2009ರ ಅವಧಿಯಲ್ಲಿ ಭಾರತೀಯ ರೈಲ್ವೇಯಲ್ಲಿ ಗ್ರೂಪ್ ಡಿ ಬದಲಿ ನೇಮಕಾತಿಗಾಗಿ ಆಗಿನ ರೈಲ್ವೆ ಸಚಿವರಾಗಿದ್ದ ಲಾಲು ಯಾದವ್ ಅವರು ಭ್ರಷ್ಟಾಚಾರ ಮಾಡಿದ್ದಾರೆ ಎಂದು ಆರೋಪಿಸಿ, ಉದ್ಯೋಗ ಹಗರಣಕ್ಕೆ ಸಂಬಂಧಿಸಿದಂತೆ ಸಿಬಿಐ ದಾಖಲಿಸಿದ ಎಫ್‌ಐಆರ್ ಆಧರಿಸಿ ಜಾರಿ ನಿರ್ದೇಶನಾಲಯ ತನಿಖೆ ನಡೆಸುತ್ತಿದೆ. ಎಫ್‌ಐಆರ್‌ನಲ್ಲಿ ತಿಳಿಸಿರುವ ಪ್ರಕಾರ ಭಾರತೀಯ ರೈಲ್ವೇಯಲ್ಲಿ ಉದ್ಯೋಗಕ್ಕೆ ಬದಲಾಗಿ ಭೂಮಿಯನ್ನು ಲಂಚ ರೂಪದಲ್ಲಿ ನೀಡುವ ಬಗ್ಗೆ ಅಭ್ಯರ್ಥಿಗಳಿಗೆ ತಿಳಿಸಲಾಗಿದೆ. ಈ ಬಗ್ಗೆ ಸಿಬಿಐ ಕೂಡ ಚಾರ್ಜ್ ಶೀಟ್ ಸಲ್ಲಿಸಿದೆ.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 11:16 am, Fri, 9 February 24

Follow Us
Akshay Pallamajalu
Akshay Pallamajalu

ಅಕ್ಷಯ್ ಕುಮಾರ್ ಪಲ್ಲಮಜಲು ಅವರು ದಕ್ಷಿಣ ಕನ್ನಡ ಜಿಲ್ಲೆ, ಬಂಟ್ವಾಳ ತಾಲ್ಲೂಕಿನವರು. ಡಿಜಿಟಲ್ ಸುದ್ದಿ ಮಾಧ್ಯಮದಲ್ಲಿ​ 3 ವರ್ಷಗಳ ಅನುಭವ ಇದೆ. ಇದರ ಜತೆಗೆ ಸೋಶಿಯಲ್ ಮೀಡಿಯಾದ ಬಗ್ಗೆ ಹೆಚ್ಚಿನ ಆಸಕ್ತಿಯನ್ನು ಹೊಂದಿದ್ದಾರೆ, ಪ್ರಸ್ತುತ ಟಿವಿ9 ಕನ್ನಡದಲ್ಲಿ ಸೋಶಿಯಲ್​​​ ಮೀಡಿಯಾವನ್ನು ನೋಡಿಕೊಳ್ಳುತ್ತಿದ್ದಾರೆ. ಡಿಜಿಟಲ್ ಕ್ಷೇತ್ರದಲ್ಲಿ ಆಸಕ್ತಿಯನ್ನು ಹೊಂದಿದ್ದು, ಸೋಶಿಯಲ್​​​ ಮೀಡಿಯಾದಲ್ಲಿ ಇನ್ನೂ ಹೆಚ್ಚಿನ ವಿಚಾರಗಳನ್ನು ತಿಳಿದುಕೊಳ್ಳವ ಆಸಕ್ತಿ ಇದೆ. ಇದರ ಜತೆಗೆ ರಾಷ್ಟ್ರೀಯ ಸುದ್ದಿ ಮತ್ತು ಬ್ರೇಕಿಂಗ್​ ಸುದ್ದಿಗಳನ್ನು ಬರೆಯುತ್ತಾರೆ.

Read More
ಡಿಕೆ ಶಿವಕುಮಾರ್ ಸಿಎಂ ಆಗುತ್ತಿದ್ದಂತೆಯೇ ಹಲವು ಅಧಿಕಾರಿಗಳಿಗೆ ಗೇಟ್ ಪಾಸ್
ಡಿಕೆ ಶಿವಕುಮಾರ್ ಸಿಎಂ ಆಗುತ್ತಿದ್ದಂತೆಯೇ ಹಲವು ಅಧಿಕಾರಿಗಳಿಗೆ ಗೇಟ್ ಪಾಸ್
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ