AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಉದ್ಯೋಗಕ್ಕಾಗಿ ಜಮೀನು ಪ್ರಕರಣ; ಲಾಲು ಪ್ರಸಾದ್ ಯಾದವ್ ವಿರುದ್ಧ ಸಿಬಿಐ ಚಾರ್ಜ್ ಶೀಟ್ ಸಲ್ಲಿಕೆ

2004ರಿಂದ 2009ರವರೆಗೆ ಭಾರತೀಯ ರೈಲ್ವೆ ಇಲಾಖೆಯ ವಿವಿಧ ವಲಯಗಳಲ್ಲಿ ಗ್ರೂಪ್ "ಡಿ" ಹುದ್ದೆಗಳಿಗೆ ಹಲವಾರು ಜನರನ್ನು ನೇಮಿಸಲಾಯಿತು. ಈ ಜನರು ತಮ್ಮ ಜಮೀನನ್ನು ಆಗಿನ ರೈಲ್ವೆ ಸಚಿವ ಲಾಲು ಪ್ರಸಾದ್ ಯಾದವ್ ಅವರ ಕುಟುಂಬದ ಸದಸ್ಯರಿಗೆ ವರ್ಗಾಯಿಸಿದ್ದಾರೆ ಎಂದು ಆರೋಪಿಸಲಾಗಿದೆ.

ಉದ್ಯೋಗಕ್ಕಾಗಿ ಜಮೀನು ಪ್ರಕರಣ; ಲಾಲು ಪ್ರಸಾದ್ ಯಾದವ್ ವಿರುದ್ಧ ಸಿಬಿಐ ಚಾರ್ಜ್ ಶೀಟ್ ಸಲ್ಲಿಕೆ
ಲಾಲು ಪ್ರಸಾದ್ ಯಾದವ್
ಸುಷ್ಮಾ ಚಕ್ರೆ
|

Updated on: Jun 07, 2024 | 9:32 PM

Share

ನವದೆಹಲಿ: ಉದ್ಯೋಗಕ್ಕಾಗಿ ಭೂಮಿ ಹಗರಣಕ್ಕೆ (Land for Jobs Scam) ಸಂಬಂಧಿಸಿದಂತೆ ರಾಷ್ಟ್ರೀಯ ಜನತಾ ದಳ (ಆರ್‌ಜೆಡಿ) ಮುಖ್ಯಸ್ಥ ಲಾಲು ಪ್ರಸಾದ್ ಯಾದವ್ (Lalu Prasad Yadav) ಮತ್ತು ಇತರ ಆರೋಪಿಗಳ ವಿರುದ್ಧ ಕೇಂದ್ರೀಯ ತನಿಖಾ ದಳ (ಸಿಬಿಐ) ನಿರ್ಣಾಯಕ ಚಾರ್ಜ್ ಶೀಟ್ ಸಲ್ಲಿಸಿದೆ. ಈ ಚಾರ್ಜ್ ಶೀಟ್ 78 ಆರೋಪಿಗಳನ್ನು ಒಳಗೊಂಡಿದೆ. ಸಕ್ಷಮ ಪ್ರಾಧಿಕಾರದಿಂದ ಇನ್ನೂ ಅನುಮತಿಗಾಗಿ ಕಾಯುತ್ತಿದ್ದೇವೆ ಎಂದು ಸಿಬಿಐ ನ್ಯಾಯಾಲಯಕ್ಕೆ ತಿಳಿಸಿದೆ.

ವಿಶೇಷ ಸಿಬಿಐ ನ್ಯಾಯಾಧೀಶ ವಿಶಾಲ್ ಗೋಗ್ನೆ ಅವರು ಜುಲೈ 6ರಂದು ಚಾರ್ಜ್ ಶೀಟ್‌ನಲ್ಲಿ ಪರಿಗಣನೆಗೆ ವಿಷಯವನ್ನು ಪಟ್ಟಿ ಮಾಡಿದ್ದಾರೆ. ಮೇ 29ರಂದು ಉದ್ಯೋಗ ಪ್ರಕರಣಕ್ಕೆ ಸಂಬಂಧಿಸಿದಂತೆ ತನ್ನ ನಿರ್ಣಾಯಕ ಚಾರ್ಜ್ ಶೀಟ್ ಸಲ್ಲಿಸುವಂತೆ ಸಿಬಿಐಗೆ ನಿರ್ದೇಶನ ನೀಡಿತು. ಕಾಲಾವಕಾಶ ನೀಡಿದರೂ ನಿರ್ಣಾಯಕ ಚಾರ್ಜ್ ಶೀಟ್ ಸಲ್ಲಿಸದಿರುವ ಬಗ್ಗೆ ನ್ಯಾಯಾಲಯವೂ ಅಸಮಾಧಾನ ವ್ಯಕ್ತಪಡಿಸಿತ್ತು.

17 ಆರೋಪಿಗಳ ವಿರುದ್ಧ ಎರಡನೇ ಆರೋಪಪಟ್ಟಿ:

2023ರ ಅಕ್ಟೋಬರ್ 4ರಂದು ಮಾಜಿ ರೈಲ್ವೆ ಸಚಿವ ಲಾಲು ಪ್ರಸಾದ್ ಯಾದವ್, ಬಿಹಾರದ ಉಪಮುಖ್ಯಮಂತ್ರಿ ತೇಜಸ್ವಿ ಯಾದವ್, ರಾಬ್ರಿ ದೇವಿ ಮತ್ತು ಇತರರಿಗೆ ಉದ್ಯೋಗಕ್ಕಾಗಿ ಜಮೀನು ಹಗರಣದ ಆರೋಪದಲ್ಲಿ ಹೊಸ ಚಾರ್ಜ್‌ಶೀಟ್‌ಗೆ ಸಂಬಂಧಿಸಿದಂತೆ ನ್ಯಾಯಾಲಯವು ಜಾಮೀನು ನೀಡಿತ್ತು. ಸಿಬಿಐ ಪ್ರಕಾರ, ಉದ್ಯೋಗಕ್ಕಾಗಿ ಜಮೀನು ಹಗರಣಕ್ಕೆ ಸಂಬಂಧಿಸಿದ ಪ್ರಕರಣದ 2ನೇ ಚಾರ್ಜ್‌ಶೀಟ್ ಆಗಿನ ಕೇಂದ್ರ ರೈಲ್ವೆ ಸಚಿವರು, ಅವರ ಪತ್ನಿ, ಮಗ, ಪಶ್ಚಿಮ ಮಧ್ಯ ರೈಲ್ವೆಯ (ಡಬ್ಲ್ಯುಸಿಆರ್) ಜಿಎಂ, ಡಬ್ಲ್ಯುಸಿಆರ್‌ನ ಇಬ್ಬರು ಸಿಪಿಒಗಳು, ಖಾಸಗಿ ವ್ಯಕ್ತಿಗಳು, ಖಾಸಗಿ ಕಂಪನಿ ಸೇರಿದಂತೆ 17 ಆರೋಪಿಗಳ ವಿರುದ್ಧ ಇದೆ.

ಇದನ್ನೂ ಓದಿ: ಲಾಲು ಪ್ರಸಾದ್ ಯಾದವ್ ನೀಡಿದ ಮುಸ್ಲಿಂ ಮೀಸಲಾತಿ ಹೇಳಿಕೆಗೆ ಪ್ರಧಾನಿ ಮೋದಿ ತಿರುಗೇಟು

ಆರೋಪಿಗಳ ಪೈಕಿ ಮಾಜಿ ಕೇಂದ್ರ ರೈಲ್ವೆ ಸಚಿವ ಲಾಲು ಪ್ರಸಾದ್ ಯಾದವ್ ಮತ್ತು ಅವರ ಕುಟುಂಬ ಸದಸ್ಯರು ಹಗರಣದಲ್ಲಿ ಭಾಗಿಯಾಗಿದ್ದಾರೆ ಎಂದು ಆರೋಪಿಸಲಾಗಿದೆ. ಲಾಲು ಪ್ರಸಾದ್ ಯಾದವ್ ಅವರು 2004ರಿಂದ 2009ರವರೆಗೆ ಕೇಂದ್ರ ರೈಲ್ವೇ ಸಚಿವರಾಗಿದ್ದ ಅವಧಿಯಲ್ಲಿ ತಮ್ಮ ಕುಟುಂಬ ಸದಸ್ಯರು ಮತ್ತು ಇತರರ ಹೆಸರಿಗೆ ಭೂ ಆಸ್ತಿ ವರ್ಗಾವಣೆಯ ಮೂಲಕ “ಆರ್ಥಿಕ ಅನುಕೂಲಗಳನ್ನು” ಸ್ವೀಕರಿಸಿದ್ದಾರೆ ಎಂಬುದು ಸಿಬಿಐ ಆರೋಪವಾಗಿದೆ.

ಇದನ್ನೂ ಓದಿ: ಬಿಹಾರ: ಲಾಲು ಪ್ರಸಾದ್ ಯಾದವ್ ಸೊಸೆ ರಾಜಶ್ರೀ ರಾಜಕೀಯಕ್ಕೆ ಎಂಟ್ರಿ, ರಾಜ್ಯಸಭಾ ಚುನಾವಣೆಯಲ್ಲಿ ಸ್ಪರ್ಧೆ

ಅದರ ಬದಲಾಗಿ ಪಾಟ್ನಾದ ನಿವಾಸಿಗಳಾಗಿರುವ ಬದಲಿದಾರರು ಅಥವಾ ಅವರ ಕುಟುಂಬದ ಸದಸ್ಯರ ಮೂಲಕ ಪಾಟ್ನಾದಲ್ಲಿರುವ ತಮ್ಮ ಭೂಮಿಯನ್ನು ಈ ಸಚಿವರ ಕುಟುಂಬ ಸದಸ್ಯರಿಗೆ ಮತ್ತು ಅವರ ಕುಟುಂಬ ಸದಸ್ಯರ ನಿಯಂತ್ರಣದಲ್ಲಿರುವ ಖಾಸಗಿ ಕಂಪನಿಗೆ ಮಾರಾಟ ಮಾಡಿ ಉಡುಗೊರೆಯಾಗಿ ನೀಡಿದ್ದಾರೆ ಎಂದು ಆರೋಪಿಸಲಾಗಿದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಸಂಕಷ್ಟದ ಸಮಯದಲ್ಲಿ 63 ರನ್ ಚಚ್ಚಿದ ರಜತ್ ಪಾಟಿದರ್
ಸಂಕಷ್ಟದ ಸಮಯದಲ್ಲಿ 63 ರನ್ ಚಚ್ಚಿದ ರಜತ್ ಪಾಟಿದರ್
ಮಳೆ: ಬೆಂಗಳೂರಿನಲ್ಲಿ ಲ್ಯಾಂಡ್​ ಆಗದೇ ವಾಪಸಾದ ರಾಜ್ಯಪಾಲರಿದ್ದ ವಿಮಾನ
ಮಳೆ: ಬೆಂಗಳೂರಿನಲ್ಲಿ ಲ್ಯಾಂಡ್​ ಆಗದೇ ವಾಪಸಾದ ರಾಜ್ಯಪಾಲರಿದ್ದ ವಿಮಾನ
ದಾವಣಗೆರೆ ಬೈ ಎಲೆಕ್ಷನ್ ರಿಸಲ್ಟ್ ಬಗ್ಗೆ ಜಾರಕಿಹೊಳಿ ಸ್ಫೋಟಕ ಹೇಳಿಕೆ
ದಾವಣಗೆರೆ ಬೈ ಎಲೆಕ್ಷನ್ ರಿಸಲ್ಟ್ ಬಗ್ಗೆ ಜಾರಕಿಹೊಳಿ ಸ್ಫೋಟಕ ಹೇಳಿಕೆ
‘ಕೋಟಿಗೊಬ್ಬ’ ಮರು ಬಿಡುಗಡೆ: ಫ್ಯಾನ್ಸ್ ಜೊತೆ ಸಿನಿಮಾ ನೋಡಿದ ಪ್ರಿಯಾಂಕಾ
‘ಕೋಟಿಗೊಬ್ಬ’ ಮರು ಬಿಡುಗಡೆ: ಫ್ಯಾನ್ಸ್ ಜೊತೆ ಸಿನಿಮಾ ನೋಡಿದ ಪ್ರಿಯಾಂಕಾ
ಅಮೆರಿಕದ ಜೊತೆ ಆಟವಾಡಬೇಡಿ; ಇರಾನ್​ಗೆ ಜೆಡಿ ವ್ಯಾನ್ಸ್ ಎಚ್ಚರಿಕೆ
ಅಮೆರಿಕದ ಜೊತೆ ಆಟವಾಡಬೇಡಿ; ಇರಾನ್​ಗೆ ಜೆಡಿ ವ್ಯಾನ್ಸ್ ಎಚ್ಚರಿಕೆ
ಪ್ರಗತಿ ಪರಿಶೀಲನಾ ಸಭೆಯಲ್ಲಿ ರುದ್ರಪ್ಪ ಲಮಾಣಿ ಕಣ್ಣೀರು
ಪ್ರಗತಿ ಪರಿಶೀಲನಾ ಸಭೆಯಲ್ಲಿ ರುದ್ರಪ್ಪ ಲಮಾಣಿ ಕಣ್ಣೀರು
ಮುಂಬರುವ ಚುನಾವಣೆಯಲ್ಲಿ ಸ್ಪರ್ಧಿಸುವ ಬಗ್ಗೆ ನಿಖಿಲ್ ಅಚ್ಚರಿ ಮಾತು
ಮುಂಬರುವ ಚುನಾವಣೆಯಲ್ಲಿ ಸ್ಪರ್ಧಿಸುವ ಬಗ್ಗೆ ನಿಖಿಲ್ ಅಚ್ಚರಿ ಮಾತು
ರಾಜಾರೋಷವಾಗಿ ಬೈಕ್‌ನಲ್ಲಿ ಬಂದು ಯುವತಿಯ ಬೆನ್ನು ಸವರಿದ ಕಾಮಪಿಶಾಚಿ
ರಾಜಾರೋಷವಾಗಿ ಬೈಕ್‌ನಲ್ಲಿ ಬಂದು ಯುವತಿಯ ಬೆನ್ನು ಸವರಿದ ಕಾಮಪಿಶಾಚಿ
2000 ಅಡಿ ಪ್ರಪಾತ, ದೊಡ್ಡ ಗಿಡ-ಮರಗಳು: ಶ್ರೀನಂದಾ ಬಿದ್ದ ಸ್ಥಳ ಭಯಾನಕವಾಗಿದೆ
2000 ಅಡಿ ಪ್ರಪಾತ, ದೊಡ್ಡ ಗಿಡ-ಮರಗಳು: ಶ್ರೀನಂದಾ ಬಿದ್ದ ಸ್ಥಳ ಭಯಾನಕವಾಗಿದೆ
ಟಿವಿ9 ಶಿಕ್ಷಣ ಎಕ್ಸ್​ಪೋ 2026: ನಿರ್ದೇಶಕ ಪ್ರೇಮ್, ನಟಿ ರೀಷ್ಮಾ ಮಾತು
ಟಿವಿ9 ಶಿಕ್ಷಣ ಎಕ್ಸ್​ಪೋ 2026: ನಿರ್ದೇಶಕ ಪ್ರೇಮ್, ನಟಿ ರೀಷ್ಮಾ ಮಾತು