AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಉದ್ಯೋಗಕ್ಕಾಗಿ ಭೂಮಿ ಪ್ರಕರಣ: ಮಾರ್ಚ್ 25 ರಂದು ಸಿಬಿಐ ಮುಂದೆ ಹಾಜರಾಗುವಂತೆ ತೇಜಸ್ವಿ ಯಾದವ್​​ಗೆ ದೆಹಲಿ ಹೈಕೋರ್ಟ್ ಸೂಚನೆ

Land for jobs case: 2004 ಮತ್ತು 2009 ರ ನಡುವೆ ರೈಲ್ವೆ ಸಚಿವರಾಗಿದ್ದಾಗ ಲಾಲು ಪ್ರಸಾದ್ ಅವರ ಕುಟುಂಬಕ್ಕೆ ಉಡುಗೊರೆಯಾಗಿ ಅಥವಾ ಮಾರಾಟ ಮಾಡಿದ ಜಮೀನುಗಳಿಗೆ ಪ್ರತಿಯಾಗಿ ರೈಲ್ವೆಯಲ್ಲಿ ಅಕ್ರಮ ನೇಮಕಾತಿಗಳನ್ನು ಮಾಡಲಾಗಿದೆ ಎಂದು ಸಿಬಿಐ ತನ್ನ ಚಾರ್ಜ್‌ಶೀಟ್‌ನಲ್ಲಿ ಆರೋಪಿಸಿದೆ.

ಉದ್ಯೋಗಕ್ಕಾಗಿ ಭೂಮಿ ಪ್ರಕರಣ: ಮಾರ್ಚ್ 25 ರಂದು ಸಿಬಿಐ ಮುಂದೆ ಹಾಜರಾಗುವಂತೆ ತೇಜಸ್ವಿ ಯಾದವ್​​ಗೆ ದೆಹಲಿ ಹೈಕೋರ್ಟ್ ಸೂಚನೆ
ತೇಜಸ್ವಿ ಯಾದವ್
ರಶ್ಮಿ ಕಲ್ಲಕಟ್ಟ
ರಶ್ಮಿ ಕಲ್ಲಕಟ್ಟ|

Updated on:Mar 16, 2023 | 1:24 PM

Share

ಉದ್ಯೋಗಕ್ಕಾಗಿ ಭೂಮಿ ಪ್ರಕರಣಕ್ಕೆ (Land for jobs case) ಸಂಬಂಧಿಸಿದಂತೆ ದೆಹಲಿಯಲ್ಲಿ ಮಾರ್ಚ್ 25 ರಂದು ಸಿಬಿಐ (CBI) ಮುಂದೆ ಹಾಜರಾಗುವಂತೆ ದೆಹಲಿ ಹೈಕೋರ್ಟ್(Delhi high court) ಬಿಹಾರ ಉಪ ಮುಖ್ಯಮಂತ್ರಿ ತೇಜಸ್ವಿ ಯಾದವ್ (Tejashwi Yadav) ಅವರಿಗೆ ಸೂಚಿಸಿದೆ. ಸಿಬಿಐ ಪರ ವಕೀಲ ಡಿಪಿ ಸಿಂಗ್ ನ್ಯಾಯಾಲಯದ ಮುಂದೆ ಯಾದವ್ ಅವರು ಈ ತಿಂಗಳು ಖುದ್ದಾಗಿ ಹಾಜರಾಗಬಹುದು. ಸಿಬಿಐ ಅವರನ್ನು ಬಂಧಿಸಬಾರದು ಎಂದು ಹೇಳಿದ್ದಾರೆ. ಈ ಹಿನ್ನೆಲೆಯಲ್ಲಿ ಮಾರ್ಚ್ 25 ರಂದು ಹಾಜರಾಗುವುದಾಗಿ ಬಿಹಾರ ಉಪ ಮುಖ್ಯಮಂತ್ರಿ ವಕೀಲರು ತಿಳಿಸಿದ್ದಾರೆ. ಬುಧವಾರ, ರಾಷ್ಟ್ರೀಯ ಜನತಾ ದಳದ ನಾಯಕ ದೆಹಲಿ ಹೈಕೋರ್ಟ್‌ಗೆ ಕೇಂದ್ರ ಏಜೆನ್ಸಿಯ ಸಮನ್ಸ್ ಅನ್ನು ಪ್ರಶ್ನಿಸಿ ಅರ್ಜಿ ಸಲ್ಲಿಸಿದ್ದರು. ತನ್ನ ತಂದೆ ಲಾಲು ಪ್ರಸಾದ್ ಮತ್ತು ಇತರ ಅಧಿಕಾರಿಗಳ ವಿರುದ್ಧವಿರುವ ಆಪಾದಿತ ಅಪರಾಧಗಳು ಎಸಗಲಾಗಿದೆ ಎಂದು ಗೊತ್ತಾಗುವ ಹೊತ್ತಲ್ಲಿ ತಾನು ಅಪ್ರಾಪ್ತನಾಗಿದ್ದೆ ಎಂದು ಯಾದವ್ ತಮ್ಮ ಮನವಿಯಲ್ಲಿ ತಿಳಿಸಿದ್ದಾರೆ. ನವೆಂಬರ್ 2007 ರಲ್ಲಿ ತೇಜಸ್ವಿ ಯಾದವ್​​ಗೆ 18 ವರ್ಷ ತುಂಬಿತ್ತು.

ಈ ಪ್ರಕರಣದಲ್ಲಿ ದೆಹಲಿ ನ್ಯಾಯಾಲಯವು ತನ್ನ ತಾಯಿ ರಾಬ್ರಿ ದೇವಿ, ತಂದೆ ಲಾಲು ಪ್ರಸಾದ್, ಸಹೋದರಿ ಮಿಸಾ ಭಾರತಿ ಮತ್ತು ಇತರರಿಗೆ ಜಾಮೀನು ನೀಡಿದ ದಿನವೇ ಬಿಹಾರ ಉಪ ಮುಖ್ಯಮಂತ್ರಿಯ ಅರ್ಜಿಯು ಹೈಕೋರ್ಟ್‌ಗೆ ಬಂದಿದೆ.

2004 ಮತ್ತು 2009 ರ ನಡುವೆ ರೈಲ್ವೆ ಸಚಿವರಾಗಿದ್ದಾಗ ಲಾಲು ಪ್ರಸಾದ್ ಅವರ ಕುಟುಂಬಕ್ಕೆ ಉಡುಗೊರೆಯಾಗಿ ಅಥವಾ ಮಾರಾಟ ಮಾಡಿದ ಜಮೀನುಗಳಿಗೆ ಪ್ರತಿಯಾಗಿ ರೈಲ್ವೆಯಲ್ಲಿ ಅಕ್ರಮ ನೇಮಕಾತಿಗಳನ್ನು ಮಾಡಲಾಗಿದೆ ಎಂದು ಸಿಬಿಐ ತನ್ನ ಚಾರ್ಜ್‌ಶೀಟ್‌ನಲ್ಲಿ ಆರೋಪಿಸಿದೆ.

ಇದನ್ನೂ ಓದಿ: Manish Sisodia: ಮನೀಶ್‌ ಸಿಸೋಡಿಯಾ 7 ದಿನ ಜಾರಿ ನಿರ್ದೇಶನಾಲಯದ ವಶಕ್ಕೆ

ಅಭ್ಯರ್ಥಿಗಳು ನೇರವಾಗಿ ಅಥವಾ ನಿಕಟ ಸಂಬಂಧಿಗಳು ಮತ್ತು ಕುಟುಂಬದ ಸದಸ್ಯರ ಮೂಲಕ ತಮ್ಮ ಭೂಮಿಯನ್ನು ಆಗಿನ ರೈಲ್ವೆ ಸಚಿವರ ಕುಟುಂಬ ಸದಸ್ಯರಿಗೆ ಹೆಚ್ಚಿನ ರಿಯಾಯಿತಿ ದರದಲ್ಲಿ ಮಾರಾಟ ಮಾಡಿದ್ದಾರೆ ಎಂದು ಆರೋಪಪಟ್ಟಿಯಲ್ಲಿ ಆರೋಪಿಸಲಾಗಿದೆ. ಕಳೆದ ವರ್ಷ ಅಕ್ಟೋಬರ್ 10 ರಂದು 16 ಆರೋಪಿಗಳ ವಿರುದ್ಧ ಕ್ರಿಮಿನಲ್ ಪಿತೂರಿ ಮತ್ತು ಭ್ರಷ್ಟಾಚಾರದ ಅಪರಾಧಗಳಿಗಾಗಿ ಚಾರ್ಜ್ ಶೀಟ್ ಸಲ್ಲಿಸಲಾಗಿತ್ತು.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 1:02 pm, Thu, 16 March 23

Follow Us
Rashmi Kallakatta
Rashmi Kallakatta

ಊರು ಕಾಸರಗೋಡು. ಓದಿದ್ದು ಇಂಜಿನಿಯರಿಂಗ್, ಪಬ್ಲಿಕ್ ಅಡ್ಮಿನಿಸ್ಟ್ರೇಷನ್ ಮತ್ತು ಇಂಗ್ಲಿಷ್ ಸ್ನಾತಕೋತ್ತರ ಪದವಿ. ಕನ್ನಡಪ್ರಭ, ಪ್ರಜಾವಾಣಿ ಡಿಜಿಟಲ್ ಮತ್ತು ಪ್ರಿಂಟ್ ವಿಭಾಗದಲ್ಲಿ ಕೆಲಸದ ಅನುಭವ. ಬ್ಲಾಗರ್, ಸಾಹಿತ್ಯ ಪ್ರೇಮಿ. ಇಲ್ಲಿವರೆಗೆ 2 ಪುಸ್ತಕಗಳು ಪ್ರಕಟವಾಗಿವೆ. ಕಲೆ,ಸಾಹಿತ್ಯ,ತಂತ್ರಜ್ಞಾನ,ಸಂದರ್ಶನ, ಫ್ಯಾಕ್ಟ್ ಚೆಕಿಂಗ್ ಆಸಕ್ತಿಕರ ವಿಷಯಗಳು. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷ ಅನುಭವ

CLP Meeting: ಡಿಕೆಶಿ ಹೆಸರು ಘೋಷಿಸಿದ ಸಿದ್ರಾಮಯ್ಯ Exclusive ವಿಡಿಯೋ
CLP Meeting: ಡಿಕೆಶಿ ಹೆಸರು ಘೋಷಿಸಿದ ಸಿದ್ರಾಮಯ್ಯ Exclusive ವಿಡಿಯೋ
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!