AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಉದ್ಯೋಗಕ್ಕಾಗಿ ಭೂಮಿ ಪ್ರಕರಣ: ಮಾರ್ಚ್ 25 ರಂದು ಸಿಬಿಐ ಮುಂದೆ ಹಾಜರಾಗುವಂತೆ ತೇಜಸ್ವಿ ಯಾದವ್​​ಗೆ ದೆಹಲಿ ಹೈಕೋರ್ಟ್ ಸೂಚನೆ

Land for jobs case: 2004 ಮತ್ತು 2009 ರ ನಡುವೆ ರೈಲ್ವೆ ಸಚಿವರಾಗಿದ್ದಾಗ ಲಾಲು ಪ್ರಸಾದ್ ಅವರ ಕುಟುಂಬಕ್ಕೆ ಉಡುಗೊರೆಯಾಗಿ ಅಥವಾ ಮಾರಾಟ ಮಾಡಿದ ಜಮೀನುಗಳಿಗೆ ಪ್ರತಿಯಾಗಿ ರೈಲ್ವೆಯಲ್ಲಿ ಅಕ್ರಮ ನೇಮಕಾತಿಗಳನ್ನು ಮಾಡಲಾಗಿದೆ ಎಂದು ಸಿಬಿಐ ತನ್ನ ಚಾರ್ಜ್‌ಶೀಟ್‌ನಲ್ಲಿ ಆರೋಪಿಸಿದೆ.

ಉದ್ಯೋಗಕ್ಕಾಗಿ ಭೂಮಿ ಪ್ರಕರಣ: ಮಾರ್ಚ್ 25 ರಂದು ಸಿಬಿಐ ಮುಂದೆ ಹಾಜರಾಗುವಂತೆ ತೇಜಸ್ವಿ ಯಾದವ್​​ಗೆ ದೆಹಲಿ ಹೈಕೋರ್ಟ್ ಸೂಚನೆ
ತೇಜಸ್ವಿ ಯಾದವ್
ರಶ್ಮಿ ಕಲ್ಲಕಟ್ಟ
|

Updated on:Mar 16, 2023 | 1:24 PM

Share

ಉದ್ಯೋಗಕ್ಕಾಗಿ ಭೂಮಿ ಪ್ರಕರಣಕ್ಕೆ (Land for jobs case) ಸಂಬಂಧಿಸಿದಂತೆ ದೆಹಲಿಯಲ್ಲಿ ಮಾರ್ಚ್ 25 ರಂದು ಸಿಬಿಐ (CBI) ಮುಂದೆ ಹಾಜರಾಗುವಂತೆ ದೆಹಲಿ ಹೈಕೋರ್ಟ್(Delhi high court) ಬಿಹಾರ ಉಪ ಮುಖ್ಯಮಂತ್ರಿ ತೇಜಸ್ವಿ ಯಾದವ್ (Tejashwi Yadav) ಅವರಿಗೆ ಸೂಚಿಸಿದೆ. ಸಿಬಿಐ ಪರ ವಕೀಲ ಡಿಪಿ ಸಿಂಗ್ ನ್ಯಾಯಾಲಯದ ಮುಂದೆ ಯಾದವ್ ಅವರು ಈ ತಿಂಗಳು ಖುದ್ದಾಗಿ ಹಾಜರಾಗಬಹುದು. ಸಿಬಿಐ ಅವರನ್ನು ಬಂಧಿಸಬಾರದು ಎಂದು ಹೇಳಿದ್ದಾರೆ. ಈ ಹಿನ್ನೆಲೆಯಲ್ಲಿ ಮಾರ್ಚ್ 25 ರಂದು ಹಾಜರಾಗುವುದಾಗಿ ಬಿಹಾರ ಉಪ ಮುಖ್ಯಮಂತ್ರಿ ವಕೀಲರು ತಿಳಿಸಿದ್ದಾರೆ. ಬುಧವಾರ, ರಾಷ್ಟ್ರೀಯ ಜನತಾ ದಳದ ನಾಯಕ ದೆಹಲಿ ಹೈಕೋರ್ಟ್‌ಗೆ ಕೇಂದ್ರ ಏಜೆನ್ಸಿಯ ಸಮನ್ಸ್ ಅನ್ನು ಪ್ರಶ್ನಿಸಿ ಅರ್ಜಿ ಸಲ್ಲಿಸಿದ್ದರು. ತನ್ನ ತಂದೆ ಲಾಲು ಪ್ರಸಾದ್ ಮತ್ತು ಇತರ ಅಧಿಕಾರಿಗಳ ವಿರುದ್ಧವಿರುವ ಆಪಾದಿತ ಅಪರಾಧಗಳು ಎಸಗಲಾಗಿದೆ ಎಂದು ಗೊತ್ತಾಗುವ ಹೊತ್ತಲ್ಲಿ ತಾನು ಅಪ್ರಾಪ್ತನಾಗಿದ್ದೆ ಎಂದು ಯಾದವ್ ತಮ್ಮ ಮನವಿಯಲ್ಲಿ ತಿಳಿಸಿದ್ದಾರೆ. ನವೆಂಬರ್ 2007 ರಲ್ಲಿ ತೇಜಸ್ವಿ ಯಾದವ್​​ಗೆ 18 ವರ್ಷ ತುಂಬಿತ್ತು.

ಈ ಪ್ರಕರಣದಲ್ಲಿ ದೆಹಲಿ ನ್ಯಾಯಾಲಯವು ತನ್ನ ತಾಯಿ ರಾಬ್ರಿ ದೇವಿ, ತಂದೆ ಲಾಲು ಪ್ರಸಾದ್, ಸಹೋದರಿ ಮಿಸಾ ಭಾರತಿ ಮತ್ತು ಇತರರಿಗೆ ಜಾಮೀನು ನೀಡಿದ ದಿನವೇ ಬಿಹಾರ ಉಪ ಮುಖ್ಯಮಂತ್ರಿಯ ಅರ್ಜಿಯು ಹೈಕೋರ್ಟ್‌ಗೆ ಬಂದಿದೆ.

2004 ಮತ್ತು 2009 ರ ನಡುವೆ ರೈಲ್ವೆ ಸಚಿವರಾಗಿದ್ದಾಗ ಲಾಲು ಪ್ರಸಾದ್ ಅವರ ಕುಟುಂಬಕ್ಕೆ ಉಡುಗೊರೆಯಾಗಿ ಅಥವಾ ಮಾರಾಟ ಮಾಡಿದ ಜಮೀನುಗಳಿಗೆ ಪ್ರತಿಯಾಗಿ ರೈಲ್ವೆಯಲ್ಲಿ ಅಕ್ರಮ ನೇಮಕಾತಿಗಳನ್ನು ಮಾಡಲಾಗಿದೆ ಎಂದು ಸಿಬಿಐ ತನ್ನ ಚಾರ್ಜ್‌ಶೀಟ್‌ನಲ್ಲಿ ಆರೋಪಿಸಿದೆ.

ಇದನ್ನೂ ಓದಿ: Manish Sisodia: ಮನೀಶ್‌ ಸಿಸೋಡಿಯಾ 7 ದಿನ ಜಾರಿ ನಿರ್ದೇಶನಾಲಯದ ವಶಕ್ಕೆ

ಅಭ್ಯರ್ಥಿಗಳು ನೇರವಾಗಿ ಅಥವಾ ನಿಕಟ ಸಂಬಂಧಿಗಳು ಮತ್ತು ಕುಟುಂಬದ ಸದಸ್ಯರ ಮೂಲಕ ತಮ್ಮ ಭೂಮಿಯನ್ನು ಆಗಿನ ರೈಲ್ವೆ ಸಚಿವರ ಕುಟುಂಬ ಸದಸ್ಯರಿಗೆ ಹೆಚ್ಚಿನ ರಿಯಾಯಿತಿ ದರದಲ್ಲಿ ಮಾರಾಟ ಮಾಡಿದ್ದಾರೆ ಎಂದು ಆರೋಪಪಟ್ಟಿಯಲ್ಲಿ ಆರೋಪಿಸಲಾಗಿದೆ. ಕಳೆದ ವರ್ಷ ಅಕ್ಟೋಬರ್ 10 ರಂದು 16 ಆರೋಪಿಗಳ ವಿರುದ್ಧ ಕ್ರಿಮಿನಲ್ ಪಿತೂರಿ ಮತ್ತು ಭ್ರಷ್ಟಾಚಾರದ ಅಪರಾಧಗಳಿಗಾಗಿ ಚಾರ್ಜ್ ಶೀಟ್ ಸಲ್ಲಿಸಲಾಗಿತ್ತು.

ಮತ್ತಷ್ಟು ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 1:02 pm, Thu, 16 March 23

ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್