AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Poonch Attack: ಪೂಂಚ್​ನಲ್ಲಿ ವಾಯುಪಡೆಯ ವಾಹನದ ಮೇಲೆ ದಾಳಿ ಮಾಡಿದ ಲಷ್ಕರ್ ಉಗ್ರರ ಸುಳಿವು ಪತ್ತೆ

Poonch Terrorist Attack: ಜಮ್ಮು ಮತ್ತು ಕಾಶ್ಮೀರದ ಪೂಂಚ್‌ನಲ್ಲಿ ವಾಯುಪಡೆಯ ಬೆಂಗಾವಲು ವಾಹನದ ಮೇಲೆ ಉಗ್ರರು ದಾಳಿ ನಡೆಸಿದ್ದು ಇಡೀ ದೇಶಾದ್ಯಂತ ಸುದ್ದಿಯಾಗಿತ್ತು. ಇದಾದ ಕೆಲವು ದಿನಗಳ ನಂತರ ಈ ದಾಳಿಯ ಹಿಂದಿನ ಮೂವರು ಭಯೋತ್ಪಾದಕರ ವಿವರಗಳನ್ನು ಕಲೆಹಾಕಿದೆ.

Poonch Attack: ಪೂಂಚ್​ನಲ್ಲಿ ವಾಯುಪಡೆಯ ವಾಹನದ ಮೇಲೆ ದಾಳಿ ಮಾಡಿದ ಲಷ್ಕರ್ ಉಗ್ರರ ಸುಳಿವು ಪತ್ತೆ
ಭಯೋತ್ಪಾದಕ ದಾಳಿ ನಡೆಸಿದ ಉಗ್ರರು
ಸುಷ್ಮಾ ಚಕ್ರೆ
|

Updated on: May 08, 2024 | 7:11 PM

Share

ಶ್ರೀನಗರ: ಜಮ್ಮು ಕಾಶ್ಮೀರದ ಪೂಂಚ್​ನಲ್ಲಿ (Poonch) ನಡೆದ ಉಗ್ರರ ದಾಳಿಯಲ್ಲಿ (Terrorists Attack) IAF ಕಾರ್ಪೋರಲ್ ವಿಕ್ಕಿ ಪಹಡೆ ಸಾವನ್ನಪ್ಪಿ, ನಾಲ್ವರು ಗಾಯಗೊಂಡಿದ್ದರು. ಬಳಿಕ ಈ ಪ್ರಕರಣದ ಕುರಿತು ತನಿಖೆಯನ್ನು ಪ್ರಾರಂಭಿಸಲಾಯಿತು. ಮೂಲಗಳ ಪ್ರಕಾರ, ಪೂಂಚ್ ದಾಳಿಯ ತನಿಖೆಯಲ್ಲಿ ಮೂರು ಹೆಸರುಗಳು ಬಂದಿವೆ. ಅವುಗಳೆಂದರೆ, ಇಲಿಯಾಸ್ (ಮಾಜಿ ಪಾಕ್ ಆರ್ಮಿ ಕಮಾಂಡೋ), ಅಬು ಹಮ್ಜಾ (ಲಷ್ಕರ್ ಕಮಾಂಡರ್) ಮತ್ತು ಹಾಡೂನ್. ಈ ಮೂವರು ಉಗ್ರರ ಸಿಸಿಟಿವಿ ದೃಶ್ಯಾವಳಿಗಳು ಲಭ್ಯವಾಗಿದ್ದು, ಇವರೇ ಈ ದಾಳಿಯ ಹಿಂದಿನ ಕಾರಣಕರ್ತರು ಎನ್ನಲಾಗಿದೆ.

ಈ ದಾಳಿಯಲ್ಲಿ ಮೂವರೂ ಉನ್ನತ ಶಕ್ತಿಯ ಆಕ್ರಮಣಕಾರಿ ರೈಫಲ್‌ಗಳು, ಅಮೆರಿಕಾ ನಿರ್ಮಿತ M4 ಮತ್ತು ರಷ್ಯಾದ ನಿರ್ಮಿತ AK-47 ಬಂದೂಕುಗಳನ್ನು ಬಳಸಿದ್ದಾರೆ ಎಂದು ವರದಿಯಾಗಿದೆ. ಜಮ್ಮು ಕಾಶ್ಮೀರದ ಪೋಲಿಸ್‌ನ ರೇಖಾಚಿತ್ರದ ಪ್ರಕಾರ, ಹಮ್ಜಾ 30ರಿಂದ 32 ವರ್ಷ ವಯಸ್ಸಿನ ಮಧ್ಯಮ ಮೈಕಟ್ಟು ಮತ್ತು ತೆಳ್ಳಗಿನ ಮೈಬಣ್ಣದ ವ್ಯಕ್ತಿ ಎಂದು ವಿವರಿಸಲಾಗಿದೆ. ಆತ ಗಡ್ಡವನ್ನು ಟ್ರಿಮ್ ಮಾಡಿಸಿದ್ದಾನೆ.

ಇದನ್ನೂ ಓದಿ: ಕಾಶ್ಮೀರದಲ್ಲಿ ವಾಯುಪಡೆಯ ವಾಹನದ ಮೇಲೆ ಉಗ್ರರ ದಾಳಿ; ಸೇನಾ ಅಧಿಕಾರಿಗಳಿಗೆ ಗಾಯ

ಆತ ಕೊನೆಯದಾಗಿ ಕಂದು ಶಾಲು ಮತ್ತು ಕಿತ್ತಳೆ ಬಣ್ಣದ ಬ್ಯಾಗ್‌ನೊಂದಿಗೆ ಪಠಾನಿ ಸೂಟ್ ಧರಿಸಿದ್ದ. ಆತನ ಬಗ್ಗೆ ಮಾಹಿತಿ ನೀಡಿದವರಿಗೆ 10 ಲಕ್ಷ ರೂ. ಬಹುಮಾನ ನೀಡಲಾಗುವುದು.

ಜೈಶ್-ಎ-ಮೊಹಮ್ಮದ್‌ನ ಅಂಗಸಂಸ್ಥೆಯಾದ ಪೀಪಲ್ಸ್ ಆ್ಯಂಟಿ ಫ್ಯಾಸಿಸ್ಟ್ ಫ್ರಂಟ್ (ಪಿಎಎಫ್‌ಎಫ್) ಸೂಚನೆಯಂತೆ ಉಗ್ರರು ಈ ದಾಳಿ ನಡೆಸಿದ್ದಾರೆ ಎಂದು ಮೂಲಗಳು ತಿಳಿಸಿವೆ. ದಾಳಿ ನಡೆಸಿದ ಉಗ್ರರ ಪತ್ತೆಗಾಗಿ ರಾಜೌರಿ ಮತ್ತು ಪೂಂಚ್ ಅರಣ್ಯಗಳಲ್ಲಿ ಭಾರೀ ಶೋಧ ಕಾರ್ಯಾಚರಣೆ ನಡೆಯುತ್ತಿದೆ ಎಂದು ಮೂಲಗಳು ತಿಳಿಸಿವೆ. ಅಧಿಕಾರಿಗಳು ಹಲವಾರು ಶಂಕಿತರ ಮಾಹಿತಿ ಕಲೆಹಾಕಿದ್ದಾರೆ ಮತ್ತು ಮೂವರು ಭಯೋತ್ಪಾದಕರೊಂದಿಗೆ ಅವರ ಸಂಪರ್ಕದ ಕುರಿತು ಹಲವರನ್ನು ಪ್ರಶ್ನಿಸಲಾಗಿದೆ.

ಇದನ್ನೂ ಓದಿ: ಪೂಂಚ್​ನಲ್ಲಿ ಉಗ್ರ ದಾಳಿ; ಇಬ್ಬರು ಭಯೋತ್ಪಾದಕರ ಸ್ಕೆಚ್ ಬಿಡುಗಡೆ; 20 ಲಕ್ಷ ರೂ ತಲೆದಂಡ ಘೋಷಣೆ

PAFF ಜೈಶ್ ಬೆಂಬಲಿತ ಭಯೋತ್ಪಾದಕ ಗುಂಪಾಗಿದ್ದು, ಕಳೆದ ವರ್ಷ ಡಿಸೆಂಬರ್‌ನಲ್ಲಿ ಪೂಂಚ್‌ನಲ್ಲಿ ನಾಲ್ವರು ಸೈನಿಕರನ್ನು ಕೊಂದ ಸೇನಾ ವಾಹನದ ಮೇಲಿನ ದಾಳಿಯ ಹಿಂದೆ ತಮ್ಮ ಕೈವಾಡವಿರುವುದಾಗಿ ಅದು ಹೇಳಿಕೊಂಡಿತ್ತು. ಮೇ 4ರಂದು ಪೂಂಚ್ ಜಿಲ್ಲೆಯ ಶಾಸಿತಾರ್ ಬಳಿ ಭಯೋತ್ಪಾದಕ ದಾಳಿ ನಡೆದಿತ್ತು. ಆ ದಾಳಿಯಲ್ಲಿ ಐವರು ಐಎಎಫ್ ಸಿಬ್ಬಂದಿಗೆ ಬುಲೆಟ್ ಗಾಯಗಳಾಗಿದ್ದು, ಅವರನ್ನು ಹತ್ತಿರದ ಸೇನಾ ಆಸ್ಪತ್ರೆಗೆ ಸ್ಥಳಾಂತರಿಸಲಾಗಿತ್ತು. ಚಿಕಿತ್ಸೆ ವೇಳೆ ಒಬ್ಬರು ಸಾವನ್ನಪ್ಪಿದ್ದರು.

ಈ ದಾಳಿಯ ನಂತರ ಉಗ್ರರು ಅರಣ್ಯಕ್ಕೆ ಪರಾರಿಯಾಗಿದ್ದಾರೆ ಎನ್ನಲಾಗಿದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?