AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆರೋಗ್ಯ ಕಾರ್ಯಕರ್ತರಿಗೆ ಕೊವಿನ್​ ಆ್ಯಪ್​ನಲ್ಲಿ ಹೆಸರು ನೋಂದಾಯಿಸಿಕೊಳ್ಳಲು ನಾಳೆ ಕಡೆಯ ದಿನ

ಕೊರೊನಾ ಲಸಿಕೆ ಪಡೆಯಬಯಸುವವರು ಸರ್ಕಾರದ ಅಧಿಕೃತ ಆ್ಯಪ್​ ಕೊವಿನ್​ನಲ್ಲಿ ಹೆಸರು ನೋಂದಾಯಿಸಿಕೊಳ್ಳಬೇಕೆಂದು ಸರ್ಕಾರ ಈಗಾಗಲೇ ತಿಳಿಸಿದೆ. ಅದರಂತೆಯೇ ಆರೋಗ್ಯ ಕಾರ್ಯಕರ್ತರಿಗೆ ಹೆಸರು ನೋಂದಣಿ ಮಾಡಿಸಿಕೊಳ್ಳಲು ನಾಳೆ (ಜ.12) ಕೊನೆಯ ದಿನವಾಗಿದೆ.

ಆರೋಗ್ಯ ಕಾರ್ಯಕರ್ತರಿಗೆ ಕೊವಿನ್​ ಆ್ಯಪ್​ನಲ್ಲಿ ಹೆಸರು ನೋಂದಾಯಿಸಿಕೊಳ್ಳಲು ನಾಳೆ ಕಡೆಯ ದಿನ
ಸಾಂದರ್ಭಿಕ ಚಿತ್ರ
Skanda
| Edited By: |

Updated on: Jan 11, 2021 | 3:51 PM

Share

ದೆಹಲಿ: ದೇಶಾದ್ಯಂತ ಕೊರೊನಾ ಲಸಿಕೆ ವಿತರಣೆಗೆ ದಿನಗಣನೆ ಆರಂಭವಾಗಿದೆ. ಜ.16ರಿಂದ ಮೊದಲ ಹಂತದಲ್ಲಿ ಲಸಿಕೆ ವಿತರಣೆ ಆಗಲಿದ್ದು, ಅಂದಾಜು 3 ಕೋಟಿ ಆರೋಗ್ಯ ಕಾರ್ಯಕರ್ತರು ಮತ್ತು ಫ್ರಂಟ್​ಲೈನ್ ವಾರಿಯರ್ಸ್​ ಲಸಿಕೆ ಸ್ವೀಕರಿಸಲಿದ್ದಾರೆ ಎಂದು ಕೇಂದ್ರ ಆರೋಗ್ಯ ಇಲಾಖೆ ಮಾಹಿತಿ ನೀಡಿದೆ.

ಕೊರೊನಾ ಲಸಿಕೆ ಪಡೆಯಬಯಸುವವರು ಸರ್ಕಾರದ ಅಧಿಕೃತ ಆ್ಯಪ್​ ಕೊವಿನ್​ನಲ್ಲಿ ಹೆಸರು ನೋಂದಾಯಿಸಿಕೊಳ್ಳಬೇಕೆಂದು ಸರ್ಕಾರ ಈಗಾಗಲೇ ತಿಳಿಸಿದೆ. ಅದರಂತೆಯೇ ಆರೋಗ್ಯ ಕಾರ್ಯಕರ್ತರಿಗೆ ಹೆಸರು ನೋಂದಣಿ ಮಾಡಿಸಿಕೊಳ್ಳಲು ನಾಳೆ (ಜ.12) ಕೊನೆಯ ದಿನವಾಗಿದೆ. ನಂತರದಲ್ಲಿ ಬಂದ ಹೆಸರುಗಳನ್ನು ಪರಿಗಣಿಸಲಾಗುವುದಿಲ್ಲ ಎಂದು ಸರ್ಕಾರ ಸ್ಪಷ್ಟವಾಗಿ ತಿಳಿಸಿದೆ.

ಆರೋಗ್ಯ ಕಾರ್ಯಕರ್ತರ ನಂತರ ಕೊರೊನಾ ಲಸಿಕೆ ಸ್ವೀಕರಿಸಲಿರುವ ಫ್ರಂಟ್​ಲೈನ್​ ವಾರಿಯರ್ಸ್​ಗಳಿಗೆ ಜನವರಿ 25ಕೊನೆಯ ದಿನಾಂಕವಾಗಿದ್ದು, ಅದಕ್ಕೂ ಮುನ್ನ ಹೆಸರು ನೋಂದಾಯಿಸಿಕೊಳ್ಳುವಂತೆ ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸೂಚನೆ ನೀಡಿದೆ. ಯಾವುದೇ ಫಲಾನುಭವಿಗಳು ಲಸಿಕೆಯಿಂದ ವಂಚಿತರಾಗದಂತೆ ನೋಡಿಕೊಳ್ಳಿ, ಅವಧಿಗೂ ಮುನ್ನವೇ ಹೆಸರು ನೋಂದಾಯಿಸಲು ಅರ್ಹರಿಗೆ ತಿಳಿಸಿ ಎಂದು ರಾಜ್ಯ ಸರ್ಕಾರಗಳಿಗೂ ನಿರ್ದೇಶನ ನೀಡಲಾಗಿದೆ.

ಆರೋಗ್ಯ ಕಾರ್ಯಕರ್ತರು ಮತ್ತು ಫ್ರಂಟ್​ಲೈನ್ ವಾರಿಯರ್ಸ್​ಗಳ ನಂತರ ಬೇರೆ ಬೇರೆ ಕಾಯಿಲೆಗಳಿಂದ ಬಳಲುತ್ತಿರುವ 50 ವರ್ಷ ಮೇಲ್ಪಟ್ಟವರಿಗೆ ಕೊರೊನಾ ಲಸಿಕೆ ವಿತರಣೆ ಮಾಡಲಾಗುವುದು. ಅಂತಹ ವ್ಯಕ್ತಿಗಳನ್ನು ಗುರುತಿಸುವ ಪ್ರಕ್ರಿಯೆ ಈಗಾಗಲೇ ಆರಂಭವಾಗಿದೆ ಎಂದು ಆರೋಗ್ಯ ಇಲಾಖೆ ತಿಳಿಸಿದೆ.

ಸರ್ಕಾರಕ್ಕೂ ಮುನ್ನವೇ ‘ಕೊವಿನ್​’ ಆ್ಯಪ್​ ಬಿಡುಗಡೆ ಮಾಡಿದ ಕಿಡಿಗೇಡಿಗಳು

ರಾಜಶೇಖರ್​​ ಕುಟುಂಬಕ್ಕೆ 25 ಲಕ್ಷ ರೂ ಪರಿಹಾರ: ಸಚಿವ ಜಮೀರ್ ವಿರುದ್ಧ ದೂರು
ರಾಜಶೇಖರ್​​ ಕುಟುಂಬಕ್ಕೆ 25 ಲಕ್ಷ ರೂ ಪರಿಹಾರ: ಸಚಿವ ಜಮೀರ್ ವಿರುದ್ಧ ದೂರು
ಸ್ಪಂದನಾ ಫ್ಯಾಮಿಲಿಗೆ ಗಿಲ್ಲಿ ಇಷ್ಟ ಆಗಿದ್ದೇ ಈ ಕಾರಣಕ್ಕೆ; ವಿವರಿಸಿದ ನಟಿ
ಸ್ಪಂದನಾ ಫ್ಯಾಮಿಲಿಗೆ ಗಿಲ್ಲಿ ಇಷ್ಟ ಆಗಿದ್ದೇ ಈ ಕಾರಣಕ್ಕೆ; ವಿವರಿಸಿದ ನಟಿ
ಗುಡ್ ಲಕ್; ಸಿದ್ದರಾಮಯ್ಯಗೆ ಡಿಸಿಎಂ ಡಿಕೆ ಶಿವಕುಮಾರ್ ಅಭಿನಂದನೆ
ಗುಡ್ ಲಕ್; ಸಿದ್ದರಾಮಯ್ಯಗೆ ಡಿಸಿಎಂ ಡಿಕೆ ಶಿವಕುಮಾರ್ ಅಭಿನಂದನೆ
ಅರ್ಧಶತಕ ಬಾರಿಸಿಯೂ ತಂಡವನ್ನು ಗೆಲ್ಲಿಸದ ವಾರ್ನರ್
ಅರ್ಧಶತಕ ಬಾರಿಸಿಯೂ ತಂಡವನ್ನು ಗೆಲ್ಲಿಸದ ವಾರ್ನರ್
ಸಾಕ್ಷಿ ನಾಶ ಹಿನ್ನೆಲೆ ರಾಜಶೇಖರ್​ ಶವ ಸುಟ್ಟು ಹಾಕಿದ್ದಾರೆ ಎಂದ ಶ್ರೀರಾಮುಲು
ಸಾಕ್ಷಿ ನಾಶ ಹಿನ್ನೆಲೆ ರಾಜಶೇಖರ್​ ಶವ ಸುಟ್ಟು ಹಾಕಿದ್ದಾರೆ ಎಂದ ಶ್ರೀರಾಮುಲು
ಕೊಡಗು ಜಿಲ್ಲೆಯ ನಂಬರ್ ಒನ್ ಟ್ಯಾಕ್ಸ್ ಪೇಯರ್ ರಶ್ಮಿಕಾ ಮಂದಣ್ಣ
ಕೊಡಗು ಜಿಲ್ಲೆಯ ನಂಬರ್ ಒನ್ ಟ್ಯಾಕ್ಸ್ ಪೇಯರ್ ರಶ್ಮಿಕಾ ಮಂದಣ್ಣ
ರಕ್ಷಿತಾ ಬೆಂಬಲಕ್ಕೆ ಬಂದ ಗಿಲ್ಲಿ, ರಾಶಿಕಾ ಜೊತೆ ಜಗಳ: ವಿಡಿಯೋ
ರಕ್ಷಿತಾ ಬೆಂಬಲಕ್ಕೆ ಬಂದ ಗಿಲ್ಲಿ, ರಾಶಿಕಾ ಜೊತೆ ಜಗಳ: ವಿಡಿಯೋ
ಸಿದ್ದರಾಮಯ್ಯ ಇಲ್ಲ ಅಂದ್ರೆ ಕಾಂಗ್ರೆಸ್ ಪಕ್ಷ ಇಲ್ಲ: ರಾಜಣ್ಣ ಖಡಕ್​​ ಮಾತು
ಸಿದ್ದರಾಮಯ್ಯ ಇಲ್ಲ ಅಂದ್ರೆ ಕಾಂಗ್ರೆಸ್ ಪಕ್ಷ ಇಲ್ಲ: ರಾಜಣ್ಣ ಖಡಕ್​​ ಮಾತು
ರಾಜಶೇಖರ್​ ತಾಯಿಗೆ ಡಿಕೆ ಶಿವಕುಮಾರ್​ ಸಾಂತ್ವನ: ಸರ್ಕಾರದಿಂದ ನೆರವು ಭರವಸೆ
ರಾಜಶೇಖರ್​ ತಾಯಿಗೆ ಡಿಕೆ ಶಿವಕುಮಾರ್​ ಸಾಂತ್ವನ: ಸರ್ಕಾರದಿಂದ ನೆರವು ಭರವಸೆ
ಸನ್​ರೂಫ್ ಬಳಿ ನಿಂತು ಕೈ ಬೀಸುತ್ತಿದ್ದಾಗ ಬ್ರೇಕ್ ಹಾಕಿದ ಕಾರು
ಸನ್​ರೂಫ್ ಬಳಿ ನಿಂತು ಕೈ ಬೀಸುತ್ತಿದ್ದಾಗ ಬ್ರೇಕ್ ಹಾಕಿದ ಕಾರು