AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಜಸ್ಥಾನ ಗಡಿಯಲ್ಲಿ ಭಾರತ-ಪಾಕ್ ಸೈನಿಕರ ನಡುವೆ ಗುಂಡಿನ ಚಕಮಕಿ

ರಾಜಸ್ಥಾನದಲ್ಲಿರುವ ಭಾರತ ಮತ್ತು ಪಾಕಿಸ್ತಾನ ಗಡಿಯಲ್ಲಿ ಸೈನಿಕರ ನಡುವೆ ಗುಂಡಿನ ಚಕಮಕಿ ನಡೆಯುವುದು ಬಹಳ ವಿರಳವಾಗಿದೆ.

ರಾಜಸ್ಥಾನ ಗಡಿಯಲ್ಲಿ ಭಾರತ-ಪಾಕ್ ಸೈನಿಕರ ನಡುವೆ ಗುಂಡಿನ ಚಕಮಕಿ
ರಾಜಸ್ಥಾನ ಗಡಿಯಲ್ಲಿ ಭಾರತ-ಪಾಕ್ ಸೈನಿಕರ ನಡುವೆ ಗುಂಡಿನ ಚಕಾಮಕಿ Image Credit source: ಸಾಂದರ್ಭಿಕ ಚಿತ್ರ
TV9 Web
| Edited By: |

Updated on:Dec 10, 2022 | 8:07 AM

Share

ದೆಹಲಿ: ರಾಜಸ್ಥಾನದಲ್ಲಿನ ಭಾರತ-ಪಾಕಿಸ್ತಾನ ಅಂತಾರಾಷ್ಟ್ರೀಯ ಗಡಿ (Rajasthan IB)ಯಲ್ಲಿರುವ ಅನುಪ್‌ಗಢ (Anupgarh) ಸೆಕ್ಟರ್‌ನಲ್ಲಿ ಶುಕ್ರವಾರ ತಡರಾತ್ರಿ ಗಡಿ ಭದ್ರತಾ ಪಡೆ (BSF) ಪಡೆಗಳು ಮತ್ತು ಪಾಕ್ ರೇಂಜರ್‌ಗಳ ನಡುವೆ ಗುಂಡಿನ ಚಕಮಕಿ ನಡೆದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಗುಂಡಿನ ಕಾಳಗದಲ್ಲಿ ಭಾರತದ ಯೋಧರಿಗೆ ಯಾವುದೇ ಗಾಯಗಳಾಗಲಿಲ್ಲ ಎಂದು ಬಿಎಸ್‌ಎಫ್ ವಕ್ತಾರರು ತಿಳಿಸಿದ್ದಾರೆ. ಗಡಿ ಮುಂದೆ ಕರ್ತವ್ಯದಲ್ಲಿದ್ದ ಬಿಎಸ್‌ಎಫ್ ಪಡೆಗಳ ಮೇಲೆ ಪಾಕ್ ರೇಂಜರ್‌ಗಳು 6-7 ಸುತ್ತು ಗುಂಡು ಹಾರಿಸಿದ್ದಾರೆ. ಪ್ರತಿಕಾರವಾಗಿ ಬಿಎಸ್ಎಫ್ ‘ಕಿಸಾನ್ ಗಾರ್ಡ್’, ಪಾಕ್ ರೇಂಜರ್‌ಗಳ ಮೇಲೆ ಸುಮಾರು 18 ಸುತ್ತು ಗುಂಡು ಹಾರಿಸಿದೆ ಎಂದು ವಕ್ತಾರರು ತಿಳಿಸಿದ್ದಾರೆ.

ಮೊದಲು ಪಾಕಿಸ್ತಾನದ ಕಡೆಯಿಂದ ಗುಂಡಿನ ದಾಳಿ ನಡೆಸಲಾಗಿದೆ, ನಂತರ ಬಿಎಸ್ಎಫ್ ಪಡೆಗಳು ಪ್ರತಿದಾಳಿ ನಡೆಸಿವೆ ಎಂದು ಭಾರತದ ಸ್ಥಳೀಯರು ಹೇಳಿದರು. ಸದ್ಯ ಬಿಎಸ್‌ಎಫ್ ತಮ್ಮ ಗಡಿಯಾಚೆಗಿನ ಸಹವರ್ತಿಗಳೊಂದಿಗೆ ಧ್ವಜ ಸಭೆ (Flag meeting )ಗೆ ಕರೆ ನೀಡಿದೆ. ಈ ಸಭೆಯು ಶನಿವಾರದಂದು ರಾಜ್ಯದ ಶ್ರೀಗಂಗಾನಗರ ಜಿಲ್ಲೆಯ ಅನುಪ್‌ಗಢ ವಲಯದಲ್ಲಿ ನಡೆಯಲಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಇದನ್ನೂ ಓದಿ: Belagavi border row: ಕೇಂದ್ರ ಗೃಹಸಚಿವರನ್ನು ಭೇಟಿಯಾಗುವಂತೆ ಕರ್ನಾಟಕದ ಸಂಸದರಿಗೆ ಸಿಎಂ ಬೊಮ್ಮಾಯಿ ಸೂಚನೆ

ಗುಜರಾತ್, ಪಂಜಾಬ್ ಮತ್ತು ಜಮ್ಮುವಿನ ಉದ್ದಕ್ಕೂ ಇರುವ ಅಂತಾರಾಷ್ಟ್ರೀಯ ಗಡಿಯಲ್ಲಿ ಹಾಗೂ ರಾಜಸ್ಥಾನ ಮುಂಭಾಗದಲ್ಲಿನ ಅಂತಾರಾಷ್ಟ್ರೀಯ ಗಡಿಯಲ್ಲಿ ಸೈನಿಕರ ನಡುವೆ ಗುಂಡಿನ ಚಕಾಮಕಿ ನಡೆಯುವುದು ಬಹಳ ಅಪರೂಪವಾಗಿದೆ. ಘಟನೆಯ ಕುರಿತು ಹೆಚ್ಚಿನ ವಿವರಗಳಿಗಾಗಿ ನಿರೀಕ್ಷಿಸಲಾಗುತ್ತಿದೆ ಎಂದು ಗಡಿ ಪಡೆಯ ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಮತ್ತಷ್ಟು ದೇಶದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 8:00 am, Sat, 10 December 22

Follow Us
Web contact
Web contact

TV9 Kannada

Read More
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ