AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಜಸ್ಥಾನ ಗಡಿಯಲ್ಲಿ ಭಾರತ-ಪಾಕ್ ಸೈನಿಕರ ನಡುವೆ ಗುಂಡಿನ ಚಕಮಕಿ

ರಾಜಸ್ಥಾನದಲ್ಲಿರುವ ಭಾರತ ಮತ್ತು ಪಾಕಿಸ್ತಾನ ಗಡಿಯಲ್ಲಿ ಸೈನಿಕರ ನಡುವೆ ಗುಂಡಿನ ಚಕಮಕಿ ನಡೆಯುವುದು ಬಹಳ ವಿರಳವಾಗಿದೆ.

ರಾಜಸ್ಥಾನ ಗಡಿಯಲ್ಲಿ ಭಾರತ-ಪಾಕ್ ಸೈನಿಕರ ನಡುವೆ ಗುಂಡಿನ ಚಕಮಕಿ
ರಾಜಸ್ಥಾನ ಗಡಿಯಲ್ಲಿ ಭಾರತ-ಪಾಕ್ ಸೈನಿಕರ ನಡುವೆ ಗುಂಡಿನ ಚಕಾಮಕಿ Image Credit source: ಸಾಂದರ್ಭಿಕ ಚಿತ್ರ
TV9 Web
| Edited By: |

Updated on:Dec 10, 2022 | 8:07 AM

Share

ದೆಹಲಿ: ರಾಜಸ್ಥಾನದಲ್ಲಿನ ಭಾರತ-ಪಾಕಿಸ್ತಾನ ಅಂತಾರಾಷ್ಟ್ರೀಯ ಗಡಿ (Rajasthan IB)ಯಲ್ಲಿರುವ ಅನುಪ್‌ಗಢ (Anupgarh) ಸೆಕ್ಟರ್‌ನಲ್ಲಿ ಶುಕ್ರವಾರ ತಡರಾತ್ರಿ ಗಡಿ ಭದ್ರತಾ ಪಡೆ (BSF) ಪಡೆಗಳು ಮತ್ತು ಪಾಕ್ ರೇಂಜರ್‌ಗಳ ನಡುವೆ ಗುಂಡಿನ ಚಕಮಕಿ ನಡೆದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಗುಂಡಿನ ಕಾಳಗದಲ್ಲಿ ಭಾರತದ ಯೋಧರಿಗೆ ಯಾವುದೇ ಗಾಯಗಳಾಗಲಿಲ್ಲ ಎಂದು ಬಿಎಸ್‌ಎಫ್ ವಕ್ತಾರರು ತಿಳಿಸಿದ್ದಾರೆ. ಗಡಿ ಮುಂದೆ ಕರ್ತವ್ಯದಲ್ಲಿದ್ದ ಬಿಎಸ್‌ಎಫ್ ಪಡೆಗಳ ಮೇಲೆ ಪಾಕ್ ರೇಂಜರ್‌ಗಳು 6-7 ಸುತ್ತು ಗುಂಡು ಹಾರಿಸಿದ್ದಾರೆ. ಪ್ರತಿಕಾರವಾಗಿ ಬಿಎಸ್ಎಫ್ ‘ಕಿಸಾನ್ ಗಾರ್ಡ್’, ಪಾಕ್ ರೇಂಜರ್‌ಗಳ ಮೇಲೆ ಸುಮಾರು 18 ಸುತ್ತು ಗುಂಡು ಹಾರಿಸಿದೆ ಎಂದು ವಕ್ತಾರರು ತಿಳಿಸಿದ್ದಾರೆ.

ಮೊದಲು ಪಾಕಿಸ್ತಾನದ ಕಡೆಯಿಂದ ಗುಂಡಿನ ದಾಳಿ ನಡೆಸಲಾಗಿದೆ, ನಂತರ ಬಿಎಸ್ಎಫ್ ಪಡೆಗಳು ಪ್ರತಿದಾಳಿ ನಡೆಸಿವೆ ಎಂದು ಭಾರತದ ಸ್ಥಳೀಯರು ಹೇಳಿದರು. ಸದ್ಯ ಬಿಎಸ್‌ಎಫ್ ತಮ್ಮ ಗಡಿಯಾಚೆಗಿನ ಸಹವರ್ತಿಗಳೊಂದಿಗೆ ಧ್ವಜ ಸಭೆ (Flag meeting )ಗೆ ಕರೆ ನೀಡಿದೆ. ಈ ಸಭೆಯು ಶನಿವಾರದಂದು ರಾಜ್ಯದ ಶ್ರೀಗಂಗಾನಗರ ಜಿಲ್ಲೆಯ ಅನುಪ್‌ಗಢ ವಲಯದಲ್ಲಿ ನಡೆಯಲಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಇದನ್ನೂ ಓದಿ: Belagavi border row: ಕೇಂದ್ರ ಗೃಹಸಚಿವರನ್ನು ಭೇಟಿಯಾಗುವಂತೆ ಕರ್ನಾಟಕದ ಸಂಸದರಿಗೆ ಸಿಎಂ ಬೊಮ್ಮಾಯಿ ಸೂಚನೆ

ಗುಜರಾತ್, ಪಂಜಾಬ್ ಮತ್ತು ಜಮ್ಮುವಿನ ಉದ್ದಕ್ಕೂ ಇರುವ ಅಂತಾರಾಷ್ಟ್ರೀಯ ಗಡಿಯಲ್ಲಿ ಹಾಗೂ ರಾಜಸ್ಥಾನ ಮುಂಭಾಗದಲ್ಲಿನ ಅಂತಾರಾಷ್ಟ್ರೀಯ ಗಡಿಯಲ್ಲಿ ಸೈನಿಕರ ನಡುವೆ ಗುಂಡಿನ ಚಕಾಮಕಿ ನಡೆಯುವುದು ಬಹಳ ಅಪರೂಪವಾಗಿದೆ. ಘಟನೆಯ ಕುರಿತು ಹೆಚ್ಚಿನ ವಿವರಗಳಿಗಾಗಿ ನಿರೀಕ್ಷಿಸಲಾಗುತ್ತಿದೆ ಎಂದು ಗಡಿ ಪಡೆಯ ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಮತ್ತಷ್ಟು ದೇಶದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 8:00 am, Sat, 10 December 22

ಭಾರತ ಹಿಂದೂ ರಾಷ್ಟ್ರ, ಅದಕ್ಕೆ ಯಾವುದೇ ಸಾಂವಿಧಾನಿಕ ಅನುಮೋದನೆ ಬೇಕಿಲ್ಲ
ಭಾರತ ಹಿಂದೂ ರಾಷ್ಟ್ರ, ಅದಕ್ಕೆ ಯಾವುದೇ ಸಾಂವಿಧಾನಿಕ ಅನುಮೋದನೆ ಬೇಕಿಲ್ಲ
ಅಪ್ಪನೇ ಗರ್ಭಿಣಿ ಮಗಳ ಕುರಿ ಕಡಿದಂಗೆ ಕಡಿದವ್ನೆ: ಭೀಕರತೆ ಬಿಚ್ಚಿಟ್ಟ ಮಹಿಳೆ
ಅಪ್ಪನೇ ಗರ್ಭಿಣಿ ಮಗಳ ಕುರಿ ಕಡಿದಂಗೆ ಕಡಿದವ್ನೆ: ಭೀಕರತೆ ಬಿಚ್ಚಿಟ್ಟ ಮಹಿಳೆ
ILT20: ಸೋತರೂ ಪ್ಲೇಆಫ್​ಗೇರಿದ ಡೆಸರ್ಟ್ ವೈಪರ್ಸ್
ILT20: ಸೋತರೂ ಪ್ಲೇಆಫ್​ಗೇರಿದ ಡೆಸರ್ಟ್ ವೈಪರ್ಸ್
ಕುಕ್ಕೆ ಕಿರುಷಷ್ಠಿ: ಖಾದರ್ ಸೇರಿ ಅನ್ಯಧರ್ಮದ ನಾಯಕರ ಕರೆಸಿದ್ದಕ್ಕೆ ಆಕ್ರೋಶ
ಕುಕ್ಕೆ ಕಿರುಷಷ್ಠಿ: ಖಾದರ್ ಸೇರಿ ಅನ್ಯಧರ್ಮದ ನಾಯಕರ ಕರೆಸಿದ್ದಕ್ಕೆ ಆಕ್ರೋಶ
ಅಶ್ವಿನಿ-ಗಿಲ್ಲಿ ಮಧ್ಯೆ ಮತ್ತೆ ಶುರುವಾಯ್ತು ಮುನಿಸಿ; ಆರಂಭವಾಯ್ತು ಫೈಟ್
ಅಶ್ವಿನಿ-ಗಿಲ್ಲಿ ಮಧ್ಯೆ ಮತ್ತೆ ಶುರುವಾಯ್ತು ಮುನಿಸಿ; ಆರಂಭವಾಯ್ತು ಫೈಟ್
4719 ಎಸೆತಗಳಲ್ಲಿ ನಿರ್ಧಾರವಾದ ಆ್ಯಶಸ್ ಸರಣಿ ಫಲಿತಾಂಶ
4719 ಎಸೆತಗಳಲ್ಲಿ ನಿರ್ಧಾರವಾದ ಆ್ಯಶಸ್ ಸರಣಿ ಫಲಿತಾಂಶ
ಹುಬ್ಬಳ್ಳಿ ಮಂದಿಗೆ ಸುದೀಪ್ ಥ್ಯಾಂಕ್ಸ್ ಹೇಳಿದ್ದು ಹೇಗೆ ನೋಡಿ
ಹುಬ್ಬಳ್ಳಿ ಮಂದಿಗೆ ಸುದೀಪ್ ಥ್ಯಾಂಕ್ಸ್ ಹೇಳಿದ್ದು ಹೇಗೆ ನೋಡಿ
ದೆಹಲಿಗೆ ಡಿಕೆ ಶಿವಕುಮಾರ್: ಕಾರ್ಯಕಾರಿಣಿಗೂ ಮುನ್ನ ರಾಹುಲ್ ಭೇಟಿಗೆ ಪ್ರಯತ್ನ
ದೆಹಲಿಗೆ ಡಿಕೆ ಶಿವಕುಮಾರ್: ಕಾರ್ಯಕಾರಿಣಿಗೂ ಮುನ್ನ ರಾಹುಲ್ ಭೇಟಿಗೆ ಪ್ರಯತ್ನ
ಇಸ್ಲಾಮಿಸ್ಟ್​ಗಳು, ಇಸ್ಲಾಮಿಸಂ ಇಡೀ ವಿಶ್ವಕ್ಕೆ ದೊಡ್ಡ ಬೆದರಿಕೆ: ತುಳಸಿ
ಇಸ್ಲಾಮಿಸ್ಟ್​ಗಳು, ಇಸ್ಲಾಮಿಸಂ ಇಡೀ ವಿಶ್ವಕ್ಕೆ ದೊಡ್ಡ ಬೆದರಿಕೆ: ತುಳಸಿ
ಇಂದು ಈ ರಾಶಿಯವರು ಇತರರನ್ನು ನಂಬಿ ಮೋಸ ಹೋಗುವ ಸಾಧ್ಯತೆ
ಇಂದು ಈ ರಾಶಿಯವರು ಇತರರನ್ನು ನಂಬಿ ಮೋಸ ಹೋಗುವ ಸಾಧ್ಯತೆ