AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಾಬಾ ಸಿದ್ದಿಕ್ ಹತ್ಯೆ ಆರೋಪಿ ಲಾರೆನ್ಸ್ ಬಿಷ್ಣೋಯ್ ಸೋದರ ಅನ್ಮೋಲ್ ಬಿಷ್ಣೋಯ್ ಅಮೆರಿಕದಲ್ಲಿ ಬಂಧನ

ಬಾಬಾ ಸಿದ್ದಿಕ್ ಹತ್ಯೆ ಪ್ರಕರಣ ಸೇರಿದಂತೆ ಕೆಲವು ಪ್ರಮುಖ ಅಪರಾಧಗಳಲ್ಲಿ ಅನ್ಮೋಲ್ ಬಿಷ್ಣೋಯ್ ಹೆಸರು ಕಾಣಿಸಿಕೊಂಡಿದೆ. ಲಾರೆನ್ಸ್ ಬಿಷ್ಣೋಯ್ ಅವರ ಸಹೋದರ ಅನ್ಮೋಲ್ ಬಿಷ್ಣೋಯ್ ಹೆಸರು ಅಕ್ಟೋಬರ್‌ನಲ್ಲಿ ಮುಂಬೈನಲ್ಲಿನ ಅವರ ಮಗನ ಕಚೇರಿಯ ಹೊರಗೆ ಎನ್‌ಸಿಪಿ ನಾಯಕ ಬಾಬಾ ಸಿದ್ದಿಕ್ ಅವರ ಹತ್ಯೆಯ ನಂತರ ಸುದ್ದಿಯಲ್ಲಿದೆ.

ಬಾಬಾ ಸಿದ್ದಿಕ್ ಹತ್ಯೆ ಆರೋಪಿ ಲಾರೆನ್ಸ್ ಬಿಷ್ಣೋಯ್ ಸೋದರ ಅನ್ಮೋಲ್ ಬಿಷ್ಣೋಯ್ ಅಮೆರಿಕದಲ್ಲಿ ಬಂಧನ
ಅನ್ಮೋಲ್ ಬಿಷ್ಣೋಯ್
ಸುಷ್ಮಾ ಚಕ್ರೆ
|

Updated on: Nov 18, 2024 | 8:05 PM

Share

ನವದೆಹಲಿ: ಜೈಲಿನಲ್ಲಿರುವ ದರೋಡೆಕೋರ ಲಾರೆನ್ಸ್ ಬಿಷ್ಣೋಯ್ ಅವರ ಸಹೋದರ ಅನ್ಮೋಲ್ ಬಿಷ್ಣೋಯ್ ಅವರನ್ನು ಅಮೆರಿಕದ ಕ್ಯಾಲಿಫೋರ್ನಿಯಾದಲ್ಲಿ ಬಂಧಿಸಲಾಗಿದೆ. ಬಾಬಾ ಸಿದ್ಧಿಕ್ ಹತ್ಯೆ ಪ್ರಕರಣದಲ್ಲಿ ಅನ್ಮೋಲ್ ಬಿಷ್ಣೋಯ್ ಅವರನ್ನು ಕ್ಯಾಲಿಫೋರ್ನಿಯಾದಲ್ಲಿ ಬಂಧಿಸಲಾಯಿತು. ಕಳೆದ ವರ್ಷ ಭಾರತದಿಂದ ಪಲಾಯನ ಮಾಡಿದ ಅನ್ಮೋಲ್‌ನ ಹಸ್ತಾಂತರಕ್ಕೆ ಮುಂಬೈ ಪೊಲೀಸರು ಪ್ರಸ್ತಾವನೆಯನ್ನು ಕಳುಹಿಸಿದ ಕೆಲವೇ ದಿನಗಳಲ್ಲಿ ಅಮೆರಿಕ ತನ್ನ ಪ್ರದೇಶದಲ್ಲಿ ಅನ್ಮೋಲ್​ ಇರುವಿಕೆಯನ್ನು ಖಚಿತಪಡಿಸಿದೆ.

ಪ್ರಸ್ತುತ ಸಬರಮತಿಯ ಜೈಲಿನಲ್ಲಿರುವ ಲಾರೆನ್ಸ್ ಬಿಷ್ಣೋಯ್ ತನ್ನ ಗ್ಯಾಂಗ್‌ನ ಆಡಳಿತವನ್ನು ಅನ್ಮೋಲ್‌ಗೆ ಹಸ್ತಾಂತರಿಸಿದ್ದರು. ಲಾರೆನ್ಸ್ ಬಿಷ್ಣೋಯ್ ಸಹೋದರ ಅನ್ಮೋಲ್ ಬಿಷ್ಣೋಯ್ ಅವರನ್ನು ಅಮೆರಿಕದ ಕ್ಯಾಲಿಫೋರ್ನಿಯಾದಲ್ಲಿ ಬಂಧಿಸಲಾಗಿದೆ ಎಂದು ಮೂಲಗಳು ತಿಳಿಸಿವೆ. ಭಾರತವು ಹಸ್ತಾಂತರ ಪ್ರಕ್ರಿಯೆಯನ್ನು ಪ್ರಾರಂಭಿಸಿತು.

ಇದನ್ನೂ ಓದಿ: ಸಲ್ಮಾನ್ ಖಾನ್​ ಕೇಸ್​ನಿಂದ ದೂರವಿರು; ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್​ನಿಂದ ಪಪ್ಪು ಯಾದವ್​ಗೆ ಜೀವ ಬೆದರಿಕೆ

“ಅನ್ಮೋಲ್ ಬಿಷ್ಣೋಯ್ ಕ್ಯಾಲಿಫೋರ್ನಿಯಾ ಪೊಲೀಸರ ಬಂಧನದಲ್ಲಿದ್ದಾರೆ. ಎನ್ಐಎ ಮತ್ತು ಮಹಾರಾಷ್ಟ್ರ ಪೊಲೀಸರು ಸೇರಿದಂತೆ ಭಾರತೀಯ ಏಜೆನ್ಸಿಗಳು ಹಸ್ತಾಂತರದ ಕೆಲಸ ಮಾಡುತ್ತಿವೆ” ಎಂದು ಮೂಲಗಳು ತಿಳಿಸಿವೆ. ಅನ್ಮೋಲ್ ಹಲವಾರು ಹೈ ಪ್ರೊಫೈಲ್ ಪ್ರಕರಣಗಳಲ್ಲಿ ಬೇಕಾಗಿದ್ದಾರೆ. ಇತ್ತೀಚಿನ ಪ್ರಕರಣವೆಂದರೆ ಎನ್‌ಸಿಪಿ ನಾಯಕ ಬಾಬಾ ಸಿದ್ದಿಕ್ ಅವರನ್ನು ಅಕ್ಟೋಬರ್ 12ರಂದು ಮುಂಬೈನಲ್ಲಿರುವ ಅವರ ಮಗ ಜೀಶನ್ ಸಿದ್ದಿಕ್ ಅವರ ಕಚೇರಿಯ ಹೊರಗೆ ಗುಂಡಿಕ್ಕಿ ಹತ್ಯೆ ಮಾಡಲಾಗಿತ್ತು. ದರೋಡೆಕೋರ ಸಿದ್ದಿಕ್ ಹತ್ಯೆ ಪ್ರಕರಣದಲ್ಲಿ ಪ್ರಮುಖ ಆರೋಪಿಯಾಗಿದ್ದಾನೆ.

ಇದನ್ನೂ ಓದಿ: ಲಾರೆನ್ಸ್​ ಬಿಷ್ಣೋಯ್​ ಗ್ಯಾಂಗ್​ನಿಂದ ನಟ ಸಲ್ಮಾನ್​ ಖಾನ್​ಗೆ ಮತ್ತೆ ಕೊಲೆ ಬೆದರಿಕೆ

ಈ ತಿಂಗಳ ಮೊದಲ ವಾರದಲ್ಲಿ ಮುಂಬೈ ಪೊಲೀಸರು ಅನ್ಮೋಲ್ ಹಸ್ತಾಂತರಕ್ಕೆ ಔಪಚಾರಿಕ ಪ್ರಸ್ತಾವನೆಯನ್ನು ಕಳುಹಿಸಿದ್ದರು. ಅನ್ಮೋಲ್ ಬಿಷ್ಣೋಯ್ ತಮ್ಮ ದೇಶದಲ್ಲಿ ಇರುವ ಬಗ್ಗೆ ಅಮೆರಿಕದ ಅಧಿಕಾರಿಗಳು ಮುಂಬೈ ಪೊಲೀಸರಿಗೆ ಮಾಹಿತಿ ನೀಡಿದ ನಂತರ ಈ ಪ್ರಸ್ತಾಪವನ್ನು ಕಳುಹಿಸಲಾಗಿತ್ತು. ಮುಂಬೈ ಪೊಲೀಸರು ಅನ್ಮೋಲ್ ಬಿಷ್ಣೋಯ್ ಅವರ ಹಸ್ತಾಂತರದ ಪ್ರಸ್ತಾವನೆಯನ್ನು ಗೃಹ ಸಚಿವಾಲಯಕ್ಕೆ ಕಳುಹಿಸಿದ್ದರು.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಇಂದಿನಿಂದ ಫ್ರೀ ಬಸ್ ಪಾಸ್​ಗೆ ಅರ್ಜಿ ಸಲ್ಲಿಕೆ
ಇಂದಿನಿಂದ ಫ್ರೀ ಬಸ್ ಪಾಸ್​ಗೆ ಅರ್ಜಿ ಸಲ್ಲಿಕೆ
ಕಾರವಾರ-ಅಂಕೋಲಾ ಘಾಟ್ ರಸ್ತೆಯಲ್ಲಿ ಮೈದುಂಬಿದ ಜಲಧಾರೆಗಳು
ಕಾರವಾರ-ಅಂಕೋಲಾ ಘಾಟ್ ರಸ್ತೆಯಲ್ಲಿ ಮೈದುಂಬಿದ ಜಲಧಾರೆಗಳು
ನೆಲಮಂಗಲದಲ್ಲಿ ಶೂ ರ್ಯಾಕ್ ಒಳಗೆ ಕುಳಿತಿತ್ತು ದೈತ್ಯ ನಾಗರಹಾವು
ನೆಲಮಂಗಲದಲ್ಲಿ ಶೂ ರ್ಯಾಕ್ ಒಳಗೆ ಕುಳಿತಿತ್ತು ದೈತ್ಯ ನಾಗರಹಾವು
ನಾನು ಬೆಳೆದು ಬಂದ ಸಂಸ್ಕೃತಿಯ ಆಚರಣೆ; ವಿಡಿಯೋ ಹಂಚಿಕೊಂಡು ಭಾವುಕರಾದ ರಿಷಬ್
ನಾನು ಬೆಳೆದು ಬಂದ ಸಂಸ್ಕೃತಿಯ ಆಚರಣೆ; ವಿಡಿಯೋ ಹಂಚಿಕೊಂಡು ಭಾವುಕರಾದ ರಿಷಬ್
ಇಂದು ವಟಸಾವಿತ್ರಿ ವೃತವನ್ನು ಆಚರಿಸುವ ಪವಿತ್ರ ದಿನ!
ಇಂದು ವಟಸಾವಿತ್ರಿ ವೃತವನ್ನು ಆಚರಿಸುವ ಪವಿತ್ರ ದಿನ!
ಮಗನಿಗೆ ಬಣ್ಣ ಹಚ್ಚಿಸಿದ ರಿಷಬ್ ಶೆಟ್ಟಿ: ಯಕ್ಷಗಾನ ವೇದಿಕೆಯಲ್ಲಿ ರನ್ವಿತ್
ಮಗನಿಗೆ ಬಣ್ಣ ಹಚ್ಚಿಸಿದ ರಿಷಬ್ ಶೆಟ್ಟಿ: ಯಕ್ಷಗಾನ ವೇದಿಕೆಯಲ್ಲಿ ರನ್ವಿತ್
ಬಿಡದಿ ಟೌನ್​ಶಿಪ್: ರಾಜ್ಯವ್ಯಾಪಿ ಜನಾಂದೋಲನಕ್ಕೆ ಕುಮಾರಸ್ವಾಮಿ ತಂತ್ರ
ಬಿಡದಿ ಟೌನ್​ಶಿಪ್: ರಾಜ್ಯವ್ಯಾಪಿ ಜನಾಂದೋಲನಕ್ಕೆ ಕುಮಾರಸ್ವಾಮಿ ತಂತ್ರ
ರಾಮಮಂದಿರ ದೇಣಿಗೆ ಲೂಟಿ; ಬೀದರ್​ ಶಾಸಕನ ವಿರುದ್ಧವೂ ಎಸ್​ಐಟಿಗೆ ದೂರು
ರಾಮಮಂದಿರ ದೇಣಿಗೆ ಲೂಟಿ; ಬೀದರ್​ ಶಾಸಕನ ವಿರುದ್ಧವೂ ಎಸ್​ಐಟಿಗೆ ದೂರು
ಪುತ್ರನ ಕಳೆದುಕೊಂಡ ಭಾಮಾ ಹರೀಶ್ ಅವರ ತಬ್ಬಿ ಸಂತೈಸಿದ ಧ್ರುವ ಸರ್ಜಾ
ಪುತ್ರನ ಕಳೆದುಕೊಂಡ ಭಾಮಾ ಹರೀಶ್ ಅವರ ತಬ್ಬಿ ಸಂತೈಸಿದ ಧ್ರುವ ಸರ್ಜಾ
ಶಾಲೆ ಒಳಗಡೆ ಬೆಂಕಿ ಹಚ್ಚಿದ ಕಿಡಿಗೇಡಿಗಳು: ಯೂನಿಫಾರ್ಮ್ ಬೆಂಕಿಗಾಹುತಿ
ಶಾಲೆ ಒಳಗಡೆ ಬೆಂಕಿ ಹಚ್ಚಿದ ಕಿಡಿಗೇಡಿಗಳು: ಯೂನಿಫಾರ್ಮ್ ಬೆಂಕಿಗಾಹುತಿ