AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗ್ಯಾಂಗ್​ಸ್ಟರ್ ಲಾರೆನ್ಸ್​ ಬಿಷ್ಣೋಯ್ ಪ್ರೇಯಸಿಯನ್ನು ಜೀವಂತವಾಗಿ ಸುಟ್ಟು ಹಾಕಿದ್ರಾ?

ಗಾಯಕ ಸಿಧು ಮೂಸೆವಾಲಾ, ಮಹಾರಾಷ್ಟ್ರದ ಮಾಜಿ ಸಚಿವ ಬಾಬಾ ಸಿದ್ದಿಕಿ ಹತ್ಯೆ ಹಿಂದಿರುವ ಗ್ಯಾಂಗ್​ಸ್ಟರ್​ ಲಾರೆನ್ಸ್​ ಬಿಷ್ಣೋಯ್​ ಪ್ರೇಯಸಿಯನ್ನು ಜೀವಂತವಾಗಿ ಸುಟ್ಟುಹಾಕಲಾಗಿತ್ತು ಎನ್ನುವ ಮಾಹಿತಿ ಲಭ್ಯವಾಗಿದೆ. ಬ್ಯುಸಿನೆಸ್ ಟುಡೇ ಈ ಕುರಿತು ವರದಿ ಮಾಡಿದೆ

ಗ್ಯಾಂಗ್​ಸ್ಟರ್ ಲಾರೆನ್ಸ್​ ಬಿಷ್ಣೋಯ್ ಪ್ರೇಯಸಿಯನ್ನು ಜೀವಂತವಾಗಿ ಸುಟ್ಟು ಹಾಕಿದ್ರಾ?
ಲಾರೆನ್ಸ್​ ಬಿಷ್ಣೋಯ್
ನಯನಾ ರಾಜೀವ್
|

Updated on:Oct 15, 2024 | 8:40 PM

Share

ಗಾಯಕ ಸಿಧು ಮೂಸೆವಾಲಾ, ಮಹಾರಾಷ್ಟ್ರದ ಮಾಜಿ ಸಚಿವ ಬಾಬಾ ಸಿದ್ದಿಕಿ ಹತ್ಯೆ ಹಿಂದಿರುವ ಗ್ಯಾಂಗ್​ಸ್ಟರ್​ ಲಾರೆನ್ಸ್​ ಬಿಷ್ಣೋಯ್​ ಪ್ರೇಯಸಿಯನ್ನು ಜೀವಂತವಾಗಿ ಸುಟ್ಟುಹಾಕಲಾಗಿತ್ತು ಎನ್ನುವ ಮಾಹಿತಿ ಲಭ್ಯವಾಗಿದೆ. ಬ್ಯುಸಿನೆಸ್ ಟುಡೇ ಈ ಕುರಿತು ವರದಿ ಮಾಡಿದೆ, ಲಾರೆನ್ಸ್​ ಬಿಷ್ಣೋಯ್ ಇದೀಗ ಸಬರಮತಿ ಕೇಂದ್ರ ಕಾರಾಗೃಹದಲ್ಲಿದ್ದಾರೆ, ಪಂಜಾಬ್, ಹರ್ಯಾಣ ರಾಜಸ್ಥಾನ, ಮಹಾರಾಷ್ಟ್ರ ಮತ್ತು ಉತ್ತರ ಪ್ರದೇಶದಾದ್ಯಂತ ಹಲವು ಅಪರಾಧ ಪ್ರಕರಣಗಳಲ್ಲಿ ಈತ ಭಾಗಿಯಾಗಿದ್ದ.

ಪೊಲೀಸ್​ ಪೇದೆಯ ಮಗನಾಗಿದ್ದು, ಗ್ಯಾಂಗ್​ಸ್ಟರ್​ ಆಗಿ ಬದಲಾಗಿದ್ಹೇಗೆ ಎಂಬುದರ ಕುರಿತು ಮಾಹಿತಿ ಇಲ್ಲಿದೆ, ಕಾಲೇಜು ವಿದ್ಯಾರ್ಥಿಯಾಗಿದ್ದಾಗ ಚುನಾವಣೆಯ ಸಂದರ್ಭದಲ್ಲಿ ಆತನ ಗೆಳತಿಯನ್ನು ಜೀವಂತವಾಗಿ ಸುಟ್ಟು ಹಾಕಲಾಗಿತ್ತು, ಪ್ರೇಮ ಕಥೆ ದುರಂತ ಅಂತ್ಯ ಕಂಡಿತ್ತು.

ವರದಿಗಳ ಪ್ರಕಾರ, ಲಾರೆನ್ಸ್ ಬಿಷ್ಣೋಯ್ ಉತ್ತಮ ಕುಟುಂಬದಲ್ಲಿ ಬೆಳೆದವರು ಅವರ ತಂದೆ ಹರ್ಯಾಣ ಪೊಲೀಸ್ ಅಧಿಕಾರಿಯಾಗಿದ್ದು, ಕುಟುಂಬದ ಒಡೆತನದ ಜಮೀನು ಕೋಟಿಗಟ್ಟಲೆ ಬೆಲೆಬಾಳುತ್ತದೆ. ಅವರ ವಿಶೇಷ ಹಿನ್ನೆಲೆಯ ಹೊರತಾಗಿಯೂ, ಬಿಷ್ಣೋಯ್ ಅಂತಿಮವಾಗಿ ಅಪರಾಧ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡ.

ನ್ಯೂಸ್ 18 ಹಿಂದಿ ಉಲ್ಲೇಖಿಸಿದಂತೆ, ಅಬೋಹರ್‌ನ ಕಾನ್ವೆಂಟ್ ಶಾಲೆಯಲ್ಲಿ ಓದುತ್ತಿದ್ದಾಗ ಬಿಷ್ಣೋಯ್ ಸಹಪಾಠಿಯೊಬ್ಬಳ ಜತೆ ಪ್ರೀತಿಯ ಅಂಕುರವಾಗಿತ್ತು. ಇಬ್ಬರೂ ಉನ್ನತ ವ್ಯಾಸಂಗಕ್ಕಾಗಿ ಚಂಡೀಗಢದ ಡಿಎವಿ ಕಾಲೇಜಿಗೆ ಸೇರಿದಾಗ ಈ ಪ್ರೀತಿಯು ಪರಸ್ಪರ ಸಂಬಂಧಕ್ಕೆ ತಿರುಗಿತು, ಅಲ್ಲಿ  ತಮ್ಮ ಸಂಬಂಧವನ್ನು ಮುಂದುವರೆಸಿದರು.

ಮತ್ತಷ್ಟು ಓದಿ: ಸಲ್ಮಾನ್ ಖಾನ್ ಹತ್ಯೆಗೆಂದು 60 ಶೂಟರ್​ಗಳನ್ನು ನೇಮಿಸಿದ್ದ ಲಾರೆನ್ಸ್ ಬಿಷ್ಣೋಯ್​

ವಿದ್ಯಾರ್ಥಿ ಸಂಘದ ಅಧ್ಯಕ್ಷೀಯ ಚುನಾವಣೆಯಲ್ಲಿ ಪ್ರತಿಸ್ಪರ್ಧಿ ಗುಂಪಿನಿಂದ ಸೋತ ನಂತರ, ಲಾರೆನ್ಸ್​ ಕೋಪಗೊಂಡಿದ್ದ. 2011 ರಲ್ಲಿ, ಬಿಷ್ಣೋಯಿ ಅವರ ಗುಂಪು ಮತ್ತು ಅವರ ವಿರೋಧಿಗಳ ನಡುವಿನ ಉದ್ವಿಗ್ನತೆಗಳು ಉಲ್ಬಣಗೊಂಡವು. ಇದು ಹಿಂಸಾತ್ಮಕ ಘಟನೆಗಳಿಗೆ ಕಾರಣವಾಯಿತು.

ಆಕೆಯ ಮರಣದ ನಂತರ, ಬಿಷ್ಣೋಯ್ ಹಲವಾರು ವಿದ್ಯಾರ್ಥಿ ನಾಯಕರ ವಿರುದ್ಧ ಸೇಡು ತೀರಿಸಿಕೊಳ್ಳಲು ಪ್ರಯತ್ನಿಸಿದ್ದ ಎಂದು ಹೇಳಲಾಗುತ್ತದೆ.  ಇತ್ತೀಚೆಗೆ ನಡೆದ ಮಹಾರಾಷ್ಟ್ರ ಮಾಜಿ ಸಚಿವ ಬಾಬಾ ಸಿದ್ದಿಕಿ ಹತ್ಯೆ ಹಿಂದೆ ಲಾರೆನ್ಸ್ ಕೈವಾಡವಿರುವುದು ತಿಳಿದುಬಂದಿದೆ. ಅಷ್ಟೇ ಅಲ್ಲದೆ ಸಲ್ಮಾನ್ ಖಾನ್ ಹತ್ಯೆಗೆ ಆತ 60 ಶೂಟರ್ಸ್​ಗಳನ್ನು ನೇಮಿಸಿಕೊಂಡಿದ್ದ ಎನ್ನುವ ಮಾಹಿತಿಯೂ ಲಭ್ಯವಾಗಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 8:28 pm, Tue, 15 October 24

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ