AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಕೀಲರು ಜನರ ಜತೆ ಸಂಪರ್ಕಕ್ಕೆ ಬಂದರಷ್ಟೇ ಜೀವನ ನಡೆಸಬಹುದು; ಸುಪ್ರೀಂಕೋರ್ಟ್

Supreme Court on Corona Vaccine : ನ್ಯಾಯಮೂರ್ತಿ ಎ.ಎಸ್.ಬೋಪಣ್ಣ ಮತ್ತು ವಿ.ರಾಮಸುಬ್ರಹ್ಮಣಿಯನ್ ಅವರುಗಳ ನ್ಯಾಯಪೀಠ, ದೆಹಲಿ ಹೈಕೋರ್ಟ್ ಈ ಕುರಿತು ಯಾವುದೇ ಆದೇಶ ಜಾರಿಗೊಳಿಸಿಲ್ಲ. ಲಸಿಕೆ ತಯಾರಿಕಾ ಕಂಪನಿಗಳ ಉತ್ಪಾನಾ ಸಾಮರ್ಥ್ಯ ಅರಿಯುವ ದೃಷ್ಟಿಯಿಂದ ದೆಹಲಿ ಕೋರ್ಟ್ ಈ ಅಭಿಪ್ರಾಯ ವ್ಯಕ್ತಪಡಿಸಿದೆಯಷ್ಟೇ ಎಂದು ಸರ್ವೋಚ್ಛ ನ್ಯಾಯಾಲಯ ಹೇಳಿದೆ.

ವಕೀಲರು ಜನರ ಜತೆ ಸಂಪರ್ಕಕ್ಕೆ ಬಂದರಷ್ಟೇ ಜೀವನ ನಡೆಸಬಹುದು; ಸುಪ್ರೀಂಕೋರ್ಟ್
ಸುಪ್ರೀಂ ಕೋರ್ಟ್
guruganesh bhat
| Updated By: Ghanashyam D M | ಡಿ.ಎಂ.ಘನಶ್ಯಾಮ|

Updated on: Mar 18, 2021 | 9:11 PM

Share

ದೆಹಲಿ: ವಕೀಲರು ಜನಸಾಮಾನ್ಯರ ಜತೆ ಸಂಪರ್ಕಕ್ಕೆ ಬಂದರೆ ಮಾತ್ರ ಜೀವನ ನಡೆಸಬಹುದು. ಕೊರೊನಾ ಭಯದಿಂದ ಅವರು ಜನಸಂಪರ್ಕಕ್ಕೆ ಬರದೇ ಇದ್ದರೆ ಜೀವನ ನಡೆಸಲು ಸಾಧ್ಯವಾಗದು. ಹೀಗಾಗಿ ವಕೀಲರಿಗೆ ಜನಸಂಪರ್ಕಕ್ಕೆ ಬಂದರೂ ತಮಗೆ ಏನೂ ಆಗದು, ಜೀವಕ್ಕೆ ಕುತ್ತು ಬರದು ಎಂಬ ಭರವಸೆ ನೀಡುವ ಅಗತ್ಯವಿದೆ ಎಂದು ಸುಪ್ರೀಂಕೋರ್ಟ್ ಅಬಿಪ್ರಾಯಪಟ್ಟಿದೆ. ನ್ಯಾಯಾಲಯದ ಸಿಬ್ಬಂದಿಗಳಿಗೆ ಆದ್ಯತೆಯ ಮೇರೆಗೆ ಕೊರೊನ ಲಸಿಕೆ ನೀಡಬೇಕು ಎಂದು ದೆಹಲಿ ಹೈಕೋರ್ಟ್ ದಾಖಲಿಸಿಕೊಂಡಿದ್ದ ಸ್ವಯಂ ಪ್ರೇರಿತ ದೂರಿನ ವಿರುದ್ಧ ಭಾರತ್ ಬಯೋಟೆಕ್ ಮತ್ತು ಸೆರಂ ಇನ್ಸ್​ಟಿಟ್ಯೂಟ್ ಆಫ್ ಇಂಡಿಯಾ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ಸುಪ್ರಿಂಕೋರ್ಟ್ ಈ ಅಭಿಪ್ರಾಯ ವ್ಯಕ್ತಪಡಿಸಿದೆ.

ನ್ಯಾಯಮೂರ್ತಿ ಎ.ಎಸ್.ಬೋಪಣ್ಣ ಮತ್ತು ವಿ.ರಾಮಸುಬ್ರಹ್ಮಣಿಯನ್ ಅವರುಗಳ ನ್ಯಾಯಪೀಠ, ದೆಹಲಿ ಹೈಕೋರ್ಟ್ ಈ ಕುರಿತು ಯಾವುದೇ ಆದೇಶ ಜಾರಿಗೊಳಿಸಿಲ್ಲ. ಲಸಿಕೆ ತಯಾರಿಕಾ ಕಂಪನಿಗಳ ಉತ್ಪಾನಾ ಸಾಮರ್ಥ್ಯ ಅರಿಯುವ ದೃಷ್ಟಿಯಿಂದ ದೆಹಲಿ ಕೋರ್ಟ್ ಈ ಅಭಿಪ್ರಾಯ ವ್ಯಕ್ತಪಡಿಸಿದೆಯಷ್ಟೇ ಎಂದು ಸರ್ವೋಚ್ಛ ನ್ಯಾಯಾಲಯ ಹೇಳಿದೆ.

ನಾವು ಜನಸಾಮಾನ್ಯರ ಸಂಪರ್ಕಕ್ಕೆ ಬರುತ್ತೇವೆ. ಹೀಗಾಗಿ ಕೊರೊನಾ ಲಸಿಕೆ ವಿತರಣೆ ಪ್ರಕ್ರಿಯೆಯಲ್ಲಿ ನಮಗೆ ಆದ್ಯತೆ ನೀಡಬೇಕು ಎಂದು ಕೋರಿ ಅರವಿಂದ್ ಸಿಂಗ್ ಎಂಬುವವರು ಕೋರ್ಟ್​ನ ಮೊರೆ ಹೋಗಿದ್ದರು.

ಈ ಬಗ್ಗೆ ನ್ಯಾಯಾಲಯಕ್ಕೆ ಪ್ರತಿಕ್ರಿಯಿಸಿದ್ದ ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣೆ ಇಲಾಖೆಯ ಹೆಚ್ಚುವರಿ ಕಾರ್ಯದರ್ಶಿ ಮನೋಹರ್​ ಅಗ್ನಾನಿ, ನ್ಯಾಯಾಲಯದಲ್ಲಿ ಕಾರ್ಯನಿರ್ವಹಿಸುವವರೆಂಬ ಕಾರಣಕ್ಕೆ ಪ್ರತ್ಯೇಕ ವ್ಯವಸ್ಥೆ ಕಲ್ಪಿಸಿಕೊಡಲಾಗುವುದಿಲ್ಲ. ಹಾಗೇನಾದರೂ ಮಾಡಿದಲ್ಲಿ ಅದು ಬೇರೆ ವಲಯದವರನ್ನು ತಾರತಮ್ಯ ಮಾಡಿದಂತಾಗುತ್ತದೆ ಎಂದು ಅಭಿಪ್ರಾಯಪಟ್ಟಿದ್ದರು.

ಈಗಿರುವ ನಿಯಮದ ಪ್ರಕಾರ ಜನಸಾಮಾನ್ಯರಿಗೆ ಅನ್ವಯಿಸುವಂತೆಯೇ 60 ವರ್ಷ ಮೇಲ್ಪಟ್ಟ ವಕೀಲರು, ನ್ಯಾಯಾಧೀಶರು ಅಥವಾ ಯಾವುದೇ ಸಿಬ್ಬಂದಿ ವರ್ಗದವರು ಕೊರೊನಾ ಲಸಿಕೆ ಸ್ವೀಕರಿಸಬಹುದು. ಅಂತೆಯೇ 45 ವರ್ಷ ಮೇಲ್ಪಟ್ಟು ವಿವಿಧ ಆರೋಗ್ಯ ಸಮಸ್ಯೆಗಳಿಂದ ಬಳಲುತ್ತಿರುವವರು ಸಹ ಲಸಿಕೆಯ ಉಪಯೋಗ ಪಡೆದುಕೊಳ್ಳಬಹುದು. ಹೀಗಾಗಿ ಅವರಿಗಾಗಿ ಪ್ರತ್ಯೇಕ ಅವಕಾಶ ಕಲ್ಪಿಸುವುದು ಸಮಂಜಸವಲ್ಲ ಎಂದು ಮನೋಹರ್​ ಅಗ್ನಾನಿ ತಿಳಿಸಿದ್ದರು.

ದೇಶದಲ್ಲಿ ಬೇರೆ ಬೇರೆ ಉದ್ಯಮಗಳಲ್ಲಿ, ವೃತ್ತಿಗಳಲ್ಲಿ ತೊಡಗಿಕೊಂಡವರೂ ಇರುತ್ತಾರೆ. ಹೀಗಿರುವಾಗ ನ್ಯಾಯಾಧೀಶರಿಗೆ ಅಥವಾ ವಕೀಲರಿಗಾಗಿಯೇ ವಿಶೇಷ ಅವಕಾಶ ಕಲ್ಪಿಸಿಕೊಡಲಾಗುವುದಿಲ್ಲ ಎಂದು ಸರ್ವೋಚ್ಛ ನ್ಯಾಯಾಲಯಕ್ಕೆ ನೀಡಿದ ಉತ್ತರದಲ್ಲಿ ತಿಳಿಸಲಾಗಿತ್ತು.

ಇದೇ ವಿಚಾರಕ್ಕೆ ಸಂಬಂಧಿಸಿದಂತೆ ಫೆಬ್ರವರಿ 4ರಂದು ದೆಹಲಿಯ ಉಚ್ಛ ನ್ಯಾಯಾಲಯ ಅರ್ಜಿಯೊಂದನ್ನು ತಿರಸ್ಕರಿಸಿತ್ತು. ಆದರೆ, ಅದರ ಬೆನ್ನಲ್ಲೇ ದೆಹಲಿಯ ಬಾರ್​ ಕೌನ್ಸಿಲ್​ ಪತ್ರವೊಂದರ ಆಧಾರದ ಮೇಲೆ ಸ್ವಯಂಪ್ರೇರಿತ ಪ್ರಕರಣ ದಾಖಲಿಸಿಕೊಂಡು ನ್ಯಾಯಾಂಗ ವ್ಯವಸ್ಥೆಯಲ್ಲಿ ಫ್ರಂಟ್​ಲೈನ್​ ವರ್ಕರ್ಸ್​ ಆಗಿ ದುಡಿದವರ ಬಗ್ಗೆ ಮಾಹಿತಿ ಕೇಳಿತ್ತು. ಇತ್ತ ಬಾಂಬೆ ಉಚ್ಛ ನ್ಯಾಯಾಲಯದಲ್ಲಿಯೂ ಇದೇ ಮಾದರಿಯ ಪ್ರಕರಣವೊಂದು ವಿಚಾರಣೆಗೆ ಬಾಕಿ ಉಳಿದಿತ್ತು. ಅಷ್ಟರಲ್ಲಿ ವಿಷಯ ಸುಪ್ರೀಂ ಕೋರ್ಟ್​ ಮೆಟ್ಟಿಲೇರಿದ ಕಾರಣ ವಿಚಾರಣೆಯನ್ನು ಮುಂದೂಡಲಾಗಿತ್ತು.

ಇದನ್ನೂ ಓದಿ: 

ಲೈಂಗಿಕ ದೌರ್ಜನ್ಯಕ್ಕೊಳಗಾದ ಮಹಿಳೆಗೆ ರಕ್ಷಾಬಂಧನ ಕಟ್ಟಲು ಆದೇಶ; ಸ್ಟೀರಿಯೊಟೈಪ್ ಬಿಟ್ಟುಬಿಡಿ ಎಂದ ಸುಪ್ರೀಂಕೋರ್ಟ್

ಚುನಾವಣಾ ಆಯುಕ್ತರಾಗಿ ಸರ್ಕಾರಿ ಅಧಿಕಾರಿಗಳ ನೇಮಕ ಸಲ್ಲ; ಸುಪ್ರೀಂ ಕೋರ್ಟ್

ಸುಳ್ಳು ಹೇಳಿದ್ರೆ ಒದ್ದು ಒಳಗೆ ಹಾಕ್ತೀನಿ: ಸಚಿವ ಎಂಬಿ ಪಾಟೀಲ್
ಸುಳ್ಳು ಹೇಳಿದ್ರೆ ಒದ್ದು ಒಳಗೆ ಹಾಕ್ತೀನಿ: ಸಚಿವ ಎಂಬಿ ಪಾಟೀಲ್
ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು
ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ