AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರವಾಸದ ನಾಯಕ; ರಾಹುಲ್ ಗಾಂಧಿಯ ಜರ್ಮನಿ ಭೇಟಿಗೆ ಬಿಜೆಪಿ ಲೇವಡಿ

ರಾಹುಲ್ ಗಾಂಧಿ ವಿರುದ್ಧ ಟೀಕಾಪ್ರಹಾರ ನಡೆಸಿರುವ ಬಿಜೆಪಿ ನಾಯಕರು ರಾಹುಲ್ ಗಾಂಧಿಯನ್ನು ಪ್ರವಾಸದ ನಾಯಕ ಎಂದು ಲೇವಡಿ ಮಾಡಿದ್ದಾರೆ. ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ, ಇದೀಗ ನಡೆಯುತ್ತಿರುವ ಸಂಸತ್ತಿನ ಚಳಿಗಾಲದ ಅಧಿವೇಶನದ ಸಮಯದಲ್ಲಿಯೇ ಜರ್ಮನಿಗೆ ಪ್ರಯಾಣಿಸಲಿದ್ದಾರೆ. ಆಗಾಗ ವಿದೇಶ ಪ್ರವಾಸ ಮಾಡುವ ಮೂಲಕ ಅವರು ತಮ್ಮ ಕರ್ತವ್ಯಗಳನ್ನು ನಿರ್ಲಕ್ಷಿಸುತ್ತಿದ್ದಾರೆ ಎಂದು ಬಿಜೆಪಿ ಆರೋಪಿಸಿದೆ.

ಪ್ರವಾಸದ ನಾಯಕ; ರಾಹುಲ್ ಗಾಂಧಿಯ ಜರ್ಮನಿ ಭೇಟಿಗೆ ಬಿಜೆಪಿ ಲೇವಡಿ
Rahul Gandhi
ಸುಷ್ಮಾ ಚಕ್ರೆ
|

Updated on: Dec 10, 2025 | 4:52 PM

Share

ನವದೆಹಲಿ, ಡಿಸೆಂಬರ್ 10: ಸಂಸತ್ತಿನ ಚಳಿಗಾಲದ ಅಧಿವೇಶನ ನಡೆಯುತ್ತಿದೆ. ಇದರ ಮಧ್ಯೆ ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ (Rahul Gandhi) ಅವರ ಮುಂಬರುವ ಜರ್ಮನಿ ಪ್ರವಾಸದ ಬಗ್ಗೆ ಬಿಜೆಪಿ ವಾಗ್ದಾಳಿ ನಡೆಸಿದೆ. ರಾಹುಲ್ ಗಾಂಧಿಯನ್ನು “ಪ್ರವಾಸದ ನಾಯಕ” ಎಂದು ಬಿಜೆಪಿ ಲೇವಡಿ ಮಾಡಿದೆ. ಚಳಿಗಾಲದ ಅಧಿವೇಶನ ಮುಗಿಯುವ ಮೊದಲೇ ವಿಪಕ್ಷ ನಾಯಕರಾದ ರಾಹುಲ್ ಗಾಂಧಿ ವಿದೇಶ ಪ್ರವಾಸಕ್ಕೆ ತೆರಳಲಿದ್ದಾರೆ. ಚಳಿಗಾಲದ ಅಧಿವೇಶನ ಡಿಸೆಂಬರ್ 19ರಂದು ಮುಕ್ತಾಯಗೊಳ್ಳಲಿದೆ.

ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ಡಿಸೆಂಬರ್ 15ರಿಂದ 20ರವರೆಗೆ ಬರ್ಲಿನ್ ಪ್ರವಾಸ ಕೈಗೊಳ್ಳಲಿದ್ದಾರೆ. ಈ ಸಮಯದಲ್ಲಿ ಅವರು ಜರ್ಮನ್ ಸರ್ಕಾರಿ ಅಧಿಕಾರಿಗಳನ್ನು ಭೇಟಿ ಮಾಡಿ ಭಾರತೀಯ ವಲಸೆಗಾರರೊಂದಿಗೆ ಸಂವಾದ ನಡೆಸುವ ನಿರೀಕ್ಷೆಯಿದೆ.

ಈ ಬಗ್ಗೆ ಎಕ್ಸ್​​​ನಲ್ಲಿ ಪೋಸ್ಟ್ ಮಾಡಿರುವ ಬಿಜೆಪಿ ವಕ್ತಾರ ಶೆಹಜಾದ್ ಪೂನಾವಾಲಾ, ರಾಹುಲ್ ಗಾಂಧಿಯನ್ನು “ಪ್ರವಾಸದ ನಾಯಕ” ಎಂದು ಕರೆದಿದ್ದಾರೆ.

ಇದನ್ನೂ ಓದಿ: ಕರ್ನಾಟಕ ಕಾಂಗ್ರೆಸ್ ಬಗ್ಗೆ ಮಲ್ಲಿಕಾರ್ಜುನ ಖರ್ಗೆ ಜತೆ ರಾಹುಲ್ ಗಾಂಧಿ ಮಹತ್ವದ ಸಭೆ

“ಬಿಹಾರದ ಚುನಾವಣೆಯ ಸಮಯದಲ್ಲಿ ರಾಹುಲ್ ಗಾಂಧಿ ಎಲ್ಲಿದ್ದರು? ಈಗ ಮತ್ತೊಂದು ಪ್ರವಾಸಕ್ಕೆ ಹೊರಟಿದ್ದಾರೆ. ಸಾಮಾನ್ಯ ಜನರು ಕೆಲಸದ ಅವಧಿಗಳ ನಡುವೆ ರಜೆ ತೆಗೆದುಕೊಳ್ಳುತ್ತಾರೆ. ಆದರೆ ಈ ವ್ಯಕ್ತಿ ಎರಡು ರಜಾ ಅವಧಿಗಳ ನಡುವೆ ಕೆಲಸ ಮಾಡುತ್ತಾರೆ ಅನಿಸುತ್ತದೆ” ಎಂದು ಅವರು ಹೇಳಿದ್ದಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಕನ್ನಡ ಚಿತ್ರರಂಗಕ್ಕೆ 93ರ ಸಂಭ್ರಮ: ಒಂದೇ ವೇದಿಕೆಯಲ್ಲಿ ಸೆಲೆಬ್ರಿಟಿಗಳು
ಕನ್ನಡ ಚಿತ್ರರಂಗಕ್ಕೆ 93ರ ಸಂಭ್ರಮ: ಒಂದೇ ವೇದಿಕೆಯಲ್ಲಿ ಸೆಲೆಬ್ರಿಟಿಗಳು
ದರ್ಶನ್ ಜೊತೆ ‘ಭೀಮ ತೀರದಲ್ಲಿ’ ಸಿನಿಮಾ ಯಾಕೆ ಮಾಡಲಿಲ್ಲ? ಸಿಕ್ತು ಉತ್ತರ
ದರ್ಶನ್ ಜೊತೆ ‘ಭೀಮ ತೀರದಲ್ಲಿ’ ಸಿನಿಮಾ ಯಾಕೆ ಮಾಡಲಿಲ್ಲ? ಸಿಕ್ತು ಉತ್ತರ
ಇರಾನ್​ನ ಮೆಹ್ರಾಬಾದ್ ವಿಮಾನ ನಿಲ್ದಾಣದ ಮೇಲೆ ಬಾಂಬ್ ದಾಳಿ
ಇರಾನ್​ನ ಮೆಹ್ರಾಬಾದ್ ವಿಮಾನ ನಿಲ್ದಾಣದ ಮೇಲೆ ಬಾಂಬ್ ದಾಳಿ
ಇರಾನ್‌ನ ಸುಪ್ರೀಂ ಲೀಡರ್ ಆಯ್ಕೆ ಸಮಿತಿ ಕಟ್ಟಡದ ಮೇಲೆ ಇಸ್ರೇಲ್ ದಾಳಿ
ಇರಾನ್‌ನ ಸುಪ್ರೀಂ ಲೀಡರ್ ಆಯ್ಕೆ ಸಮಿತಿ ಕಟ್ಟಡದ ಮೇಲೆ ಇಸ್ರೇಲ್ ದಾಳಿ
ಚಂದ್ರ ಗ್ರಹಣದ ದಿನವೇ ಗದಗದಲ್ಲಿ ಸಪ್ತಪದಿ ತುಳಿದ 19 ಜೋಡಿಗಳು
ಚಂದ್ರ ಗ್ರಹಣದ ದಿನವೇ ಗದಗದಲ್ಲಿ ಸಪ್ತಪದಿ ತುಳಿದ 19 ಜೋಡಿಗಳು
‘ಭೀಮಾ ತೀರದಲ್ಲಿ’ ರೀ-ರಿಲೀಸ್: ಮಾಹಿತಿ ಹಂಚಿಕೊಂಡ ನಿರ್ಮಾಪಕ
‘ಭೀಮಾ ತೀರದಲ್ಲಿ’ ರೀ-ರಿಲೀಸ್: ಮಾಹಿತಿ ಹಂಚಿಕೊಂಡ ನಿರ್ಮಾಪಕ
ಸಂಚರಿಸುತ್ತಿದ್ದಾಗಲೇ ಬಸ್​​​​ನ ಇಂಜಿನ್‌ನಲ್ಲಿ ಕಾಣಿಸಿಕೊಂಡ ಬೆಂಕಿ
ಸಂಚರಿಸುತ್ತಿದ್ದಾಗಲೇ ಬಸ್​​​​ನ ಇಂಜಿನ್‌ನಲ್ಲಿ ಕಾಣಿಸಿಕೊಂಡ ಬೆಂಕಿ
ನಭೋಮಂಡಲದಲ್ಲಿ ಚಂದ್ರಗ್ರಹಣದ ಅದ್ಭುತ ಕ್ಷಣ
ನಭೋಮಂಡಲದಲ್ಲಿ ಚಂದ್ರಗ್ರಹಣದ ಅದ್ಭುತ ಕ್ಷಣ
ಪ್ರಧಾನಿ ಮುಂದೆ ಕಠಿಣ ಸವಾಲುಗಳು: ಮೋದಿ ಬಗ್ಗೆ ಪಂಡಿತರ ಸ್ಫೋಟಕ ಭವಿಷ್ಯ
ಪ್ರಧಾನಿ ಮುಂದೆ ಕಠಿಣ ಸವಾಲುಗಳು: ಮೋದಿ ಬಗ್ಗೆ ಪಂಡಿತರ ಸ್ಫೋಟಕ ಭವಿಷ್ಯ
ಬಂಡೆಮಹಾಕಾಳಿ ದೇವಾಲಯಕ್ಕೆ ತಟ್ಟದ ಚಂದ್ರಗ್ರಹಣ; ಕಾಳಿಯ ದರ್ಶನಕ್ಕೆ ಜನವೋ ಜನ!
ಬಂಡೆಮಹಾಕಾಳಿ ದೇವಾಲಯಕ್ಕೆ ತಟ್ಟದ ಚಂದ್ರಗ್ರಹಣ; ಕಾಳಿಯ ದರ್ಶನಕ್ಕೆ ಜನವೋ ಜನ!