AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರವಾಸದ ನಾಯಕ; ರಾಹುಲ್ ಗಾಂಧಿಯ ಜರ್ಮನಿ ಭೇಟಿಗೆ ಬಿಜೆಪಿ ಲೇವಡಿ

ರಾಹುಲ್ ಗಾಂಧಿ ವಿರುದ್ಧ ಟೀಕಾಪ್ರಹಾರ ನಡೆಸಿರುವ ಬಿಜೆಪಿ ನಾಯಕರು ರಾಹುಲ್ ಗಾಂಧಿಯನ್ನು ಪ್ರವಾಸದ ನಾಯಕ ಎಂದು ಲೇವಡಿ ಮಾಡಿದ್ದಾರೆ. ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ, ಇದೀಗ ನಡೆಯುತ್ತಿರುವ ಸಂಸತ್ತಿನ ಚಳಿಗಾಲದ ಅಧಿವೇಶನದ ಸಮಯದಲ್ಲಿಯೇ ಜರ್ಮನಿಗೆ ಪ್ರಯಾಣಿಸಲಿದ್ದಾರೆ. ಆಗಾಗ ವಿದೇಶ ಪ್ರವಾಸ ಮಾಡುವ ಮೂಲಕ ಅವರು ತಮ್ಮ ಕರ್ತವ್ಯಗಳನ್ನು ನಿರ್ಲಕ್ಷಿಸುತ್ತಿದ್ದಾರೆ ಎಂದು ಬಿಜೆಪಿ ಆರೋಪಿಸಿದೆ.

ಪ್ರವಾಸದ ನಾಯಕ; ರಾಹುಲ್ ಗಾಂಧಿಯ ಜರ್ಮನಿ ಭೇಟಿಗೆ ಬಿಜೆಪಿ ಲೇವಡಿ
Rahul Gandhi
ಸುಷ್ಮಾ ಚಕ್ರೆ
|

Updated on: Dec 10, 2025 | 4:52 PM

Share

ನವದೆಹಲಿ, ಡಿಸೆಂಬರ್ 10: ಸಂಸತ್ತಿನ ಚಳಿಗಾಲದ ಅಧಿವೇಶನ ನಡೆಯುತ್ತಿದೆ. ಇದರ ಮಧ್ಯೆ ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ (Rahul Gandhi) ಅವರ ಮುಂಬರುವ ಜರ್ಮನಿ ಪ್ರವಾಸದ ಬಗ್ಗೆ ಬಿಜೆಪಿ ವಾಗ್ದಾಳಿ ನಡೆಸಿದೆ. ರಾಹುಲ್ ಗಾಂಧಿಯನ್ನು “ಪ್ರವಾಸದ ನಾಯಕ” ಎಂದು ಬಿಜೆಪಿ ಲೇವಡಿ ಮಾಡಿದೆ. ಚಳಿಗಾಲದ ಅಧಿವೇಶನ ಮುಗಿಯುವ ಮೊದಲೇ ವಿಪಕ್ಷ ನಾಯಕರಾದ ರಾಹುಲ್ ಗಾಂಧಿ ವಿದೇಶ ಪ್ರವಾಸಕ್ಕೆ ತೆರಳಲಿದ್ದಾರೆ. ಚಳಿಗಾಲದ ಅಧಿವೇಶನ ಡಿಸೆಂಬರ್ 19ರಂದು ಮುಕ್ತಾಯಗೊಳ್ಳಲಿದೆ.

ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ಡಿಸೆಂಬರ್ 15ರಿಂದ 20ರವರೆಗೆ ಬರ್ಲಿನ್ ಪ್ರವಾಸ ಕೈಗೊಳ್ಳಲಿದ್ದಾರೆ. ಈ ಸಮಯದಲ್ಲಿ ಅವರು ಜರ್ಮನ್ ಸರ್ಕಾರಿ ಅಧಿಕಾರಿಗಳನ್ನು ಭೇಟಿ ಮಾಡಿ ಭಾರತೀಯ ವಲಸೆಗಾರರೊಂದಿಗೆ ಸಂವಾದ ನಡೆಸುವ ನಿರೀಕ್ಷೆಯಿದೆ.

ಈ ಬಗ್ಗೆ ಎಕ್ಸ್​​​ನಲ್ಲಿ ಪೋಸ್ಟ್ ಮಾಡಿರುವ ಬಿಜೆಪಿ ವಕ್ತಾರ ಶೆಹಜಾದ್ ಪೂನಾವಾಲಾ, ರಾಹುಲ್ ಗಾಂಧಿಯನ್ನು “ಪ್ರವಾಸದ ನಾಯಕ” ಎಂದು ಕರೆದಿದ್ದಾರೆ.

ಇದನ್ನೂ ಓದಿ: ಕರ್ನಾಟಕ ಕಾಂಗ್ರೆಸ್ ಬಗ್ಗೆ ಮಲ್ಲಿಕಾರ್ಜುನ ಖರ್ಗೆ ಜತೆ ರಾಹುಲ್ ಗಾಂಧಿ ಮಹತ್ವದ ಸಭೆ

“ಬಿಹಾರದ ಚುನಾವಣೆಯ ಸಮಯದಲ್ಲಿ ರಾಹುಲ್ ಗಾಂಧಿ ಎಲ್ಲಿದ್ದರು? ಈಗ ಮತ್ತೊಂದು ಪ್ರವಾಸಕ್ಕೆ ಹೊರಟಿದ್ದಾರೆ. ಸಾಮಾನ್ಯ ಜನರು ಕೆಲಸದ ಅವಧಿಗಳ ನಡುವೆ ರಜೆ ತೆಗೆದುಕೊಳ್ಳುತ್ತಾರೆ. ಆದರೆ ಈ ವ್ಯಕ್ತಿ ಎರಡು ರಜಾ ಅವಧಿಗಳ ನಡುವೆ ಕೆಲಸ ಮಾಡುತ್ತಾರೆ ಅನಿಸುತ್ತದೆ” ಎಂದು ಅವರು ಹೇಳಿದ್ದಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಅಡ್ಡ ಮತದಾನದ ಭೀತಿ: ಕಾಂಗ್ರೆಸ್ ಶಾಸಕರಿಗೆ ಮತದಾನದ ತರಬೇತಿ
ಅಡ್ಡ ಮತದಾನದ ಭೀತಿ: ಕಾಂಗ್ರೆಸ್ ಶಾಸಕರಿಗೆ ಮತದಾನದ ತರಬೇತಿ
ಬಿಗ್​​ಬಾಸ್​ನಿಂದ ಜೀವನದಲ್ಲಾದ ಬದಲಾವಣೆ ಏನು: ಕರಿಬಸಪ್ಪ ಮಾತು
ಬಿಗ್​​ಬಾಸ್​ನಿಂದ ಜೀವನದಲ್ಲಾದ ಬದಲಾವಣೆ ಏನು: ಕರಿಬಸಪ್ಪ ಮಾತು
ಮೇಲ್ಮನೆ ಮೇಲಾಟ:ಕಾಂಗ್ರೆಸ್​​ ಕ್ಯಾಂಪ್​ ಸೇರಿಕೊಂಡ ಬಿಜೆಪಿ ಉಚ್ಛಾಟಿತ ಶಾಸಕ
ಮೇಲ್ಮನೆ ಮೇಲಾಟ:ಕಾಂಗ್ರೆಸ್​​ ಕ್ಯಾಂಪ್​ ಸೇರಿಕೊಂಡ ಬಿಜೆಪಿ ಉಚ್ಛಾಟಿತ ಶಾಸಕ
ಸಚಿವ ಸ್ಥಾನ ಸಂಬಂಧ ಜಮೀರ್​​ ಅಹ್ಮದ್​​ ಸ್ಫೋಟಕ ಹೇಳಿಕೆ
ಸಚಿವ ಸ್ಥಾನ ಸಂಬಂಧ ಜಮೀರ್​​ ಅಹ್ಮದ್​​ ಸ್ಫೋಟಕ ಹೇಳಿಕೆ
ಐಸೊಬ್ಯುಟನಾಲ್; ಶೀಘ್ರದಲ್ಲೇ ಬರಲಿದೆ ಪರಿಸರ ಸ್ನೇಹಿ ಬಯೋ ಡೀಸೆಲ್!
ಐಸೊಬ್ಯುಟನಾಲ್; ಶೀಘ್ರದಲ್ಲೇ ಬರಲಿದೆ ಪರಿಸರ ಸ್ನೇಹಿ ಬಯೋ ಡೀಸೆಲ್!
ಅವರು ಹೋಮಕ್ಕೆ ಕೋಟಿ ಸುರಿದರೆ, ನಾನು ರಂಗಭೂಮಿಗೆ ವ್ಯಯಿಸುತ್ತೇನೆ; ಪ್ರಕಾಶ್
ಅವರು ಹೋಮಕ್ಕೆ ಕೋಟಿ ಸುರಿದರೆ, ನಾನು ರಂಗಭೂಮಿಗೆ ವ್ಯಯಿಸುತ್ತೇನೆ; ಪ್ರಕಾಶ್
ಚಿನ್ನಯ್ಯ ತಮ್ಮ ಬಳಿ ಹೇಳಿದ್ದೇನು? ಬಹಿರಂಗಪಡಿಸಿದ ಪ್ರಕಾಶ್ ರೈ
ಚಿನ್ನಯ್ಯ ತಮ್ಮ ಬಳಿ ಹೇಳಿದ್ದೇನು? ಬಹಿರಂಗಪಡಿಸಿದ ಪ್ರಕಾಶ್ ರೈ
ಎದೆ ಉರಿ ಕಾಣಿಸಿಕೊಂಡು ನಾಲ್ಕು ವರ್ಷದ ಬಾಲಕ ವೈಷ್ಣವ್ ಸಾವು
ಎದೆ ಉರಿ ಕಾಣಿಸಿಕೊಂಡು ನಾಲ್ಕು ವರ್ಷದ ಬಾಲಕ ವೈಷ್ಣವ್ ಸಾವು
ಬೌರಿಂಗ್ ಆಸ್ಪತ್ರೆ ದುರಂತದ ಬಳಿಕವೂ ಎಚ್ಚೆತ್ತುಕೊಳ್ಳದ ಅಧಿಕಾರಿಗಳು!
ಬೌರಿಂಗ್ ಆಸ್ಪತ್ರೆ ದುರಂತದ ಬಳಿಕವೂ ಎಚ್ಚೆತ್ತುಕೊಳ್ಳದ ಅಧಿಕಾರಿಗಳು!
ಗ್ರೈಂಡರ್​​​ನಿಂದ ವಿದ್ಯುತ್​ ಪ್ರವಹಿಸಿ 4 ವರ್ಷದ ಬಾಲಕಿ ಸಾವು
ಗ್ರೈಂಡರ್​​​ನಿಂದ ವಿದ್ಯುತ್​ ಪ್ರವಹಿಸಿ 4 ವರ್ಷದ ಬಾಲಕಿ ಸಾವು