AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಟೆನ್ನಿಸ್​ ಆಟದಲ್ಲಿ ಮಿಂಚಿದ್ದ ಲಿಯಾಂಡರ್​ ಪೇಸ್​ ತೃಣಮೂಲ ಕಾಂಗ್ರೆಸ್​ ಸೇರ್ಪಡೆ; ದೀದಿ ಸಮ್ಮುಖದಲ್ಲಿ ಪಕ್ಷದ ಬಾವುಟ ಹಿಡಿದ ಟೆನ್ನಿಸ್​ ಐಕಾನ್​

ಟಿಎಂಸಿ ಸೇರ್ಪಡೆಯಾದ ಬಳಿಕ ಮಾತನಾಡಿದ ಲಿಯಾಂಡರ್ ಪೇಸ್​, ನಾನು ಟೆನ್ನಿಸ್​​ನಿಂದ ನಿವೃತ್ತನಾಗಿದ್ದೇನೆ. ಇನ್ನು ಮುಂದೆ ರಾಜಕೀಯ ಎಂಬ ವಾಹನವನ್ನೇರಿ ಜನ ಸೇವೆ ಮಾಡಲು ನಿರ್ಧಾರ ಮಾಡಿದ್ದೇನೆ ಎಂದು ಹೇಳಿದ್ದಾರೆ.

ಟೆನ್ನಿಸ್​ ಆಟದಲ್ಲಿ ಮಿಂಚಿದ್ದ ಲಿಯಾಂಡರ್​ ಪೇಸ್​ ತೃಣಮೂಲ ಕಾಂಗ್ರೆಸ್​ ಸೇರ್ಪಡೆ; ದೀದಿ ಸಮ್ಮುಖದಲ್ಲಿ ಪಕ್ಷದ ಬಾವುಟ ಹಿಡಿದ ಟೆನ್ನಿಸ್​ ಐಕಾನ್​
ಟಿಎಂಸಿ ಸೇರ್ಪಡೆಯಾದ ಲಿಯಾಂಡರ್​ ಪೇಸ್​
TV9 Web
| Edited By: |

Updated on:Oct 29, 2021 | 2:42 PM

Share

ಗೋವಾದಲ್ಲಿ ಬರುವ ವರ್ಷ ನಡೆಯಲಿರುವ ವಿಧಾನಸಭೆ ಚುನಾವಣೆ (Goa Assembly Election) ಸಮೀಪಿಸುತ್ತಿರುವ ಬೆನ್ನಲ್ಲೇ ಟೆನ್ನಿಸ್​ ಹಿರಿಯ ಆಟಗಾರ ಲಿಯಾಂಡರ್​ ಪೇಸ್​​ ಇಂದು ತೃಣಮೂಲ ಕಾಂಗ್ರೆಸ್​ ಸೇರ್ಪಡೆಯಾದರು. ಗೋವಾಕ್ಕೆ ಭೇಟಿ ನೀಡಿರುವ ಟಿಎಂಸಿ ನಾಯಕಿ, ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸಮ್ಮುಖದಲ್ಲಿ ಇಂದು ಟಿಎಂಸಿಗೆ ಸೇರಿದ್ದಾರೆ. ​ಅದಕ್ಕೂ ಮೊದಲು ಬಾಲಿವುಡ್​ ನಟಿ ನಫೀಸಾ ಅಲಿ  ಮತ್ತು ಮೃಣಾಲಿನಿ ದೇಶಪ್ರಭು ಇಂದು ಇಂದು ದೀದಿ ನೇತೃತ್ವದಲ್ಲಿ ತೃಣಮೂಲ ಕಾಂಗ್ರೆಸ್​​ನ್ನು ಸೇರ್ಪಡೆಯಾಗಿದ್ದಾರೆ.   

ಟಿಎಂಸಿ ಸೇರ್ಪಡೆಯಾದ ಬಳಿಕ ಮಾತನಾಡಿದ ಲಿಯಾಂಡರ್ ಪೇಸ್​, ನಾನು ಟೆನ್ನಿಸ್​​ನಿಂದ ನಿವೃತ್ತನಾಗಿದ್ದೇನೆ. ಇನ್ನು ಮುಂದೆ ರಾಜಕೀಯ ಎಂಬ ವಾಹನವನ್ನೇರಿ ಜನ ಸೇವೆ ಮಾಡಲು ನಿರ್ಧಾರ ಮಾಡಿದ್ದೇನೆ. ಮಮತಾ ಬ್ಯಾನರ್ಜಿ ನಿಜಕ್ಕೂ ಒಬ್ಬ ಚಾಂಪಿಯನ್​ ಎಂದು ಹೇಳಿದರು. ಅವರಿಗೆ 48 ವರ್ಷ ವಯಸ್ಸಾಗಿದ್ದು, 2020ರಲ್ಲಿ ಟೆನ್ನಿಸ್​​ನಿಂದ ನಿವೃತ್ತರಾಗಿದ್ದಾರೆ.

ಬರುವ ವರ್ಷ ಗೋವಾದಲ್ಲಿ ಚುನಾವಣೆ ನಡೆಯಲಿರುವ ಹಿನ್ನೆಲೆಯಲ್ಲಿ ಅಲ್ಲಿ ಬಿಜೆಪಿಯನ್ನು ಸೋಲಿಸಲು ಮುಂದಾಗಿರುವ ಮಮತಾ ಬ್ಯಾನರ್ಜಿ ನಿನ್ನೆಯಿಂದ ಮೂರು ದಿನಗಳ ಗೋವಾ ಪ್ರವಾಸ ಹಮ್ಮಿಕೊಂಡಿದ್ದಾರೆ. ಇಂದು ಪಣಜಿಯಲ್ಲಿ ಮಾತನಾಡಿರುವ ಅವರು, ನನಗೆ ಗೋವಾದಲ್ಲಿ ಅಧಿಕಾರ ಬೇಡ..ನಾನಿಲ್ಲಿ ಮುಖ್ಯಮಂತ್ರಿ ಹುದ್ದೆ ಏರಲು ಬಂದವಳಲ್ಲ. ಆದರೆ ಇಲ್ಲಿ ಬಿಜೆಪಿ ಸರ್ಕಾರದ ದಾದಾಗಿರಿ ನಡೆಯುಲು ಬಿಡುವುದಿಲ್ಲ. ಇಲ್ಲಿನ ಜನರಿಗೆ ಸಹಾಯ ಮಾಡಲು ಬಂದಿದ್ದೇನೆ ಎಂದು ಹೇಳಿದ್ದಾರೆ. ಹಾಗೇ, ನಾಳೆ ಸುದ್ದಿಗೋಷ್ಠಿಯನ್ನೂ ಹಮ್ಮಿಕೊಂಡಿದ್ದಾರೆ.

ಇದನ್ನೂ ಓದಿ: Puneeth Rajkumar: ಪುನೀತ್​ ರಾಜ್​ಕುಮಾರ್​ ಹೃದಯಾಘಾತದಿಂದ ನಿಧನ; ಕರ್ನಾಟಕದ ಪಾಲಿಗೆ ಕರಾಳ ಶುಕ್ರವಾರ

Home Loan: ಜಂಟಿಯಾಗಿ ಗೃಹ ಸಾಲ ಪಡೆಯುವುದರ ಲಾಭಗಳೇನು ಗೊತ್ತೆ? ಇಲ್ಲಿದೆ ಮಾಹಿತಿ

Published On - 2:31 pm, Fri, 29 October 21

‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಹೈಕಮಾಂಡ್ ನಮಗಿಬ್ರಿಗೂ ಏನೋ ಹೇಳಿದೆ: ಡಿಕೆಶಿ ಅಚ್ಚರಿಯ ಹೇಳಿಕೆ
ಹೈಕಮಾಂಡ್ ನಮಗಿಬ್ರಿಗೂ ಏನೋ ಹೇಳಿದೆ: ಡಿಕೆಶಿ ಅಚ್ಚರಿಯ ಹೇಳಿಕೆ
ಪಾವಗಡ ಕಡಮಲಕುಂಟೆ ಬಳಿ ಭೀಕರ ಅಪಘಾತ: ಕಾರು ಚಾಲಕ ಸಾವು
ಪಾವಗಡ ಕಡಮಲಕುಂಟೆ ಬಳಿ ಭೀಕರ ಅಪಘಾತ: ಕಾರು ಚಾಲಕ ಸಾವು
‘45’ ಶೂಟ್​​ನಲ್ಲಿ ಸಾವಿನ ಬಗ್ಗೆ ಮಾತನಾಡಿದ್ದ ಶಿವಣ್ಣ; ಜನ್ಯ, ರಾಜ್
‘45’ ಶೂಟ್​​ನಲ್ಲಿ ಸಾವಿನ ಬಗ್ಗೆ ಮಾತನಾಡಿದ್ದ ಶಿವಣ್ಣ; ಜನ್ಯ, ರಾಜ್
2026ರಲ್ಲಿ ಕಟಕ ರಾಶಿಯವರ ವರ್ಷ ಭವಿಷ್ಯ ಹೇಗಿದೆ ನೋಡಿ
2026ರಲ್ಲಿ ಕಟಕ ರಾಶಿಯವರ ವರ್ಷ ಭವಿಷ್ಯ ಹೇಗಿದೆ ನೋಡಿ
ಅಶ್ವಗಂಧ ಹಾಗೂ ಸಾಂಪ್ರದಾಯಿಕ ಔಷಧಿಗಳ ಬಗ್ಗೆ ಪ್ರಧಾನಿ ಮೋದಿ ಹೇಳಿದ್ದೇನು?
ಅಶ್ವಗಂಧ ಹಾಗೂ ಸಾಂಪ್ರದಾಯಿಕ ಔಷಧಿಗಳ ಬಗ್ಗೆ ಪ್ರಧಾನಿ ಮೋದಿ ಹೇಳಿದ್ದೇನು?