AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಟೆನ್ನಿಸ್​ ಆಟದಲ್ಲಿ ಮಿಂಚಿದ್ದ ಲಿಯಾಂಡರ್​ ಪೇಸ್​ ತೃಣಮೂಲ ಕಾಂಗ್ರೆಸ್​ ಸೇರ್ಪಡೆ; ದೀದಿ ಸಮ್ಮುಖದಲ್ಲಿ ಪಕ್ಷದ ಬಾವುಟ ಹಿಡಿದ ಟೆನ್ನಿಸ್​ ಐಕಾನ್​

ಟಿಎಂಸಿ ಸೇರ್ಪಡೆಯಾದ ಬಳಿಕ ಮಾತನಾಡಿದ ಲಿಯಾಂಡರ್ ಪೇಸ್​, ನಾನು ಟೆನ್ನಿಸ್​​ನಿಂದ ನಿವೃತ್ತನಾಗಿದ್ದೇನೆ. ಇನ್ನು ಮುಂದೆ ರಾಜಕೀಯ ಎಂಬ ವಾಹನವನ್ನೇರಿ ಜನ ಸೇವೆ ಮಾಡಲು ನಿರ್ಧಾರ ಮಾಡಿದ್ದೇನೆ ಎಂದು ಹೇಳಿದ್ದಾರೆ.

ಟೆನ್ನಿಸ್​ ಆಟದಲ್ಲಿ ಮಿಂಚಿದ್ದ ಲಿಯಾಂಡರ್​ ಪೇಸ್​ ತೃಣಮೂಲ ಕಾಂಗ್ರೆಸ್​ ಸೇರ್ಪಡೆ; ದೀದಿ ಸಮ್ಮುಖದಲ್ಲಿ ಪಕ್ಷದ ಬಾವುಟ ಹಿಡಿದ ಟೆನ್ನಿಸ್​ ಐಕಾನ್​
ಟಿಎಂಸಿ ಸೇರ್ಪಡೆಯಾದ ಲಿಯಾಂಡರ್​ ಪೇಸ್​
TV9 Web
| Edited By: |

Updated on:Oct 29, 2021 | 2:42 PM

Share

ಗೋವಾದಲ್ಲಿ ಬರುವ ವರ್ಷ ನಡೆಯಲಿರುವ ವಿಧಾನಸಭೆ ಚುನಾವಣೆ (Goa Assembly Election) ಸಮೀಪಿಸುತ್ತಿರುವ ಬೆನ್ನಲ್ಲೇ ಟೆನ್ನಿಸ್​ ಹಿರಿಯ ಆಟಗಾರ ಲಿಯಾಂಡರ್​ ಪೇಸ್​​ ಇಂದು ತೃಣಮೂಲ ಕಾಂಗ್ರೆಸ್​ ಸೇರ್ಪಡೆಯಾದರು. ಗೋವಾಕ್ಕೆ ಭೇಟಿ ನೀಡಿರುವ ಟಿಎಂಸಿ ನಾಯಕಿ, ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸಮ್ಮುಖದಲ್ಲಿ ಇಂದು ಟಿಎಂಸಿಗೆ ಸೇರಿದ್ದಾರೆ. ​ಅದಕ್ಕೂ ಮೊದಲು ಬಾಲಿವುಡ್​ ನಟಿ ನಫೀಸಾ ಅಲಿ  ಮತ್ತು ಮೃಣಾಲಿನಿ ದೇಶಪ್ರಭು ಇಂದು ಇಂದು ದೀದಿ ನೇತೃತ್ವದಲ್ಲಿ ತೃಣಮೂಲ ಕಾಂಗ್ರೆಸ್​​ನ್ನು ಸೇರ್ಪಡೆಯಾಗಿದ್ದಾರೆ.   

ಟಿಎಂಸಿ ಸೇರ್ಪಡೆಯಾದ ಬಳಿಕ ಮಾತನಾಡಿದ ಲಿಯಾಂಡರ್ ಪೇಸ್​, ನಾನು ಟೆನ್ನಿಸ್​​ನಿಂದ ನಿವೃತ್ತನಾಗಿದ್ದೇನೆ. ಇನ್ನು ಮುಂದೆ ರಾಜಕೀಯ ಎಂಬ ವಾಹನವನ್ನೇರಿ ಜನ ಸೇವೆ ಮಾಡಲು ನಿರ್ಧಾರ ಮಾಡಿದ್ದೇನೆ. ಮಮತಾ ಬ್ಯಾನರ್ಜಿ ನಿಜಕ್ಕೂ ಒಬ್ಬ ಚಾಂಪಿಯನ್​ ಎಂದು ಹೇಳಿದರು. ಅವರಿಗೆ 48 ವರ್ಷ ವಯಸ್ಸಾಗಿದ್ದು, 2020ರಲ್ಲಿ ಟೆನ್ನಿಸ್​​ನಿಂದ ನಿವೃತ್ತರಾಗಿದ್ದಾರೆ.

ಬರುವ ವರ್ಷ ಗೋವಾದಲ್ಲಿ ಚುನಾವಣೆ ನಡೆಯಲಿರುವ ಹಿನ್ನೆಲೆಯಲ್ಲಿ ಅಲ್ಲಿ ಬಿಜೆಪಿಯನ್ನು ಸೋಲಿಸಲು ಮುಂದಾಗಿರುವ ಮಮತಾ ಬ್ಯಾನರ್ಜಿ ನಿನ್ನೆಯಿಂದ ಮೂರು ದಿನಗಳ ಗೋವಾ ಪ್ರವಾಸ ಹಮ್ಮಿಕೊಂಡಿದ್ದಾರೆ. ಇಂದು ಪಣಜಿಯಲ್ಲಿ ಮಾತನಾಡಿರುವ ಅವರು, ನನಗೆ ಗೋವಾದಲ್ಲಿ ಅಧಿಕಾರ ಬೇಡ..ನಾನಿಲ್ಲಿ ಮುಖ್ಯಮಂತ್ರಿ ಹುದ್ದೆ ಏರಲು ಬಂದವಳಲ್ಲ. ಆದರೆ ಇಲ್ಲಿ ಬಿಜೆಪಿ ಸರ್ಕಾರದ ದಾದಾಗಿರಿ ನಡೆಯುಲು ಬಿಡುವುದಿಲ್ಲ. ಇಲ್ಲಿನ ಜನರಿಗೆ ಸಹಾಯ ಮಾಡಲು ಬಂದಿದ್ದೇನೆ ಎಂದು ಹೇಳಿದ್ದಾರೆ. ಹಾಗೇ, ನಾಳೆ ಸುದ್ದಿಗೋಷ್ಠಿಯನ್ನೂ ಹಮ್ಮಿಕೊಂಡಿದ್ದಾರೆ.

ಇದನ್ನೂ ಓದಿ: Puneeth Rajkumar: ಪುನೀತ್​ ರಾಜ್​ಕುಮಾರ್​ ಹೃದಯಾಘಾತದಿಂದ ನಿಧನ; ಕರ್ನಾಟಕದ ಪಾಲಿಗೆ ಕರಾಳ ಶುಕ್ರವಾರ

Home Loan: ಜಂಟಿಯಾಗಿ ಗೃಹ ಸಾಲ ಪಡೆಯುವುದರ ಲಾಭಗಳೇನು ಗೊತ್ತೆ? ಇಲ್ಲಿದೆ ಮಾಹಿತಿ

Published On - 2:31 pm, Fri, 29 October 21

Follow Us
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ