AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಟೆನ್ನಿಸ್​ ಆಟದಲ್ಲಿ ಮಿಂಚಿದ್ದ ಲಿಯಾಂಡರ್​ ಪೇಸ್​ ತೃಣಮೂಲ ಕಾಂಗ್ರೆಸ್​ ಸೇರ್ಪಡೆ; ದೀದಿ ಸಮ್ಮುಖದಲ್ಲಿ ಪಕ್ಷದ ಬಾವುಟ ಹಿಡಿದ ಟೆನ್ನಿಸ್​ ಐಕಾನ್​

ಟಿಎಂಸಿ ಸೇರ್ಪಡೆಯಾದ ಬಳಿಕ ಮಾತನಾಡಿದ ಲಿಯಾಂಡರ್ ಪೇಸ್​, ನಾನು ಟೆನ್ನಿಸ್​​ನಿಂದ ನಿವೃತ್ತನಾಗಿದ್ದೇನೆ. ಇನ್ನು ಮುಂದೆ ರಾಜಕೀಯ ಎಂಬ ವಾಹನವನ್ನೇರಿ ಜನ ಸೇವೆ ಮಾಡಲು ನಿರ್ಧಾರ ಮಾಡಿದ್ದೇನೆ ಎಂದು ಹೇಳಿದ್ದಾರೆ.

ಟೆನ್ನಿಸ್​ ಆಟದಲ್ಲಿ ಮಿಂಚಿದ್ದ ಲಿಯಾಂಡರ್​ ಪೇಸ್​ ತೃಣಮೂಲ ಕಾಂಗ್ರೆಸ್​ ಸೇರ್ಪಡೆ; ದೀದಿ ಸಮ್ಮುಖದಲ್ಲಿ ಪಕ್ಷದ ಬಾವುಟ ಹಿಡಿದ ಟೆನ್ನಿಸ್​ ಐಕಾನ್​
ಟಿಎಂಸಿ ಸೇರ್ಪಡೆಯಾದ ಲಿಯಾಂಡರ್​ ಪೇಸ್​
TV9 Web
| Edited By: |

Updated on:Oct 29, 2021 | 2:42 PM

Share

ಗೋವಾದಲ್ಲಿ ಬರುವ ವರ್ಷ ನಡೆಯಲಿರುವ ವಿಧಾನಸಭೆ ಚುನಾವಣೆ (Goa Assembly Election) ಸಮೀಪಿಸುತ್ತಿರುವ ಬೆನ್ನಲ್ಲೇ ಟೆನ್ನಿಸ್​ ಹಿರಿಯ ಆಟಗಾರ ಲಿಯಾಂಡರ್​ ಪೇಸ್​​ ಇಂದು ತೃಣಮೂಲ ಕಾಂಗ್ರೆಸ್​ ಸೇರ್ಪಡೆಯಾದರು. ಗೋವಾಕ್ಕೆ ಭೇಟಿ ನೀಡಿರುವ ಟಿಎಂಸಿ ನಾಯಕಿ, ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸಮ್ಮುಖದಲ್ಲಿ ಇಂದು ಟಿಎಂಸಿಗೆ ಸೇರಿದ್ದಾರೆ. ​ಅದಕ್ಕೂ ಮೊದಲು ಬಾಲಿವುಡ್​ ನಟಿ ನಫೀಸಾ ಅಲಿ  ಮತ್ತು ಮೃಣಾಲಿನಿ ದೇಶಪ್ರಭು ಇಂದು ಇಂದು ದೀದಿ ನೇತೃತ್ವದಲ್ಲಿ ತೃಣಮೂಲ ಕಾಂಗ್ರೆಸ್​​ನ್ನು ಸೇರ್ಪಡೆಯಾಗಿದ್ದಾರೆ.   

ಟಿಎಂಸಿ ಸೇರ್ಪಡೆಯಾದ ಬಳಿಕ ಮಾತನಾಡಿದ ಲಿಯಾಂಡರ್ ಪೇಸ್​, ನಾನು ಟೆನ್ನಿಸ್​​ನಿಂದ ನಿವೃತ್ತನಾಗಿದ್ದೇನೆ. ಇನ್ನು ಮುಂದೆ ರಾಜಕೀಯ ಎಂಬ ವಾಹನವನ್ನೇರಿ ಜನ ಸೇವೆ ಮಾಡಲು ನಿರ್ಧಾರ ಮಾಡಿದ್ದೇನೆ. ಮಮತಾ ಬ್ಯಾನರ್ಜಿ ನಿಜಕ್ಕೂ ಒಬ್ಬ ಚಾಂಪಿಯನ್​ ಎಂದು ಹೇಳಿದರು. ಅವರಿಗೆ 48 ವರ್ಷ ವಯಸ್ಸಾಗಿದ್ದು, 2020ರಲ್ಲಿ ಟೆನ್ನಿಸ್​​ನಿಂದ ನಿವೃತ್ತರಾಗಿದ್ದಾರೆ.

ಬರುವ ವರ್ಷ ಗೋವಾದಲ್ಲಿ ಚುನಾವಣೆ ನಡೆಯಲಿರುವ ಹಿನ್ನೆಲೆಯಲ್ಲಿ ಅಲ್ಲಿ ಬಿಜೆಪಿಯನ್ನು ಸೋಲಿಸಲು ಮುಂದಾಗಿರುವ ಮಮತಾ ಬ್ಯಾನರ್ಜಿ ನಿನ್ನೆಯಿಂದ ಮೂರು ದಿನಗಳ ಗೋವಾ ಪ್ರವಾಸ ಹಮ್ಮಿಕೊಂಡಿದ್ದಾರೆ. ಇಂದು ಪಣಜಿಯಲ್ಲಿ ಮಾತನಾಡಿರುವ ಅವರು, ನನಗೆ ಗೋವಾದಲ್ಲಿ ಅಧಿಕಾರ ಬೇಡ..ನಾನಿಲ್ಲಿ ಮುಖ್ಯಮಂತ್ರಿ ಹುದ್ದೆ ಏರಲು ಬಂದವಳಲ್ಲ. ಆದರೆ ಇಲ್ಲಿ ಬಿಜೆಪಿ ಸರ್ಕಾರದ ದಾದಾಗಿರಿ ನಡೆಯುಲು ಬಿಡುವುದಿಲ್ಲ. ಇಲ್ಲಿನ ಜನರಿಗೆ ಸಹಾಯ ಮಾಡಲು ಬಂದಿದ್ದೇನೆ ಎಂದು ಹೇಳಿದ್ದಾರೆ. ಹಾಗೇ, ನಾಳೆ ಸುದ್ದಿಗೋಷ್ಠಿಯನ್ನೂ ಹಮ್ಮಿಕೊಂಡಿದ್ದಾರೆ.

ಇದನ್ನೂ ಓದಿ: Puneeth Rajkumar: ಪುನೀತ್​ ರಾಜ್​ಕುಮಾರ್​ ಹೃದಯಾಘಾತದಿಂದ ನಿಧನ; ಕರ್ನಾಟಕದ ಪಾಲಿಗೆ ಕರಾಳ ಶುಕ್ರವಾರ

Home Loan: ಜಂಟಿಯಾಗಿ ಗೃಹ ಸಾಲ ಪಡೆಯುವುದರ ಲಾಭಗಳೇನು ಗೊತ್ತೆ? ಇಲ್ಲಿದೆ ಮಾಹಿತಿ

Published On - 2:31 pm, Fri, 29 October 21

Follow Us
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!