AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಯಾವುದೇ ಧರ್ಮ ಇರಲಿ ಇಲ್ಲಿ ಓಂ ಶ್ರೀ ಎಂದು ವಿದ್ಯಾರಂಭ ಮಾಡಲಾಗುತ್ತದೆ, ಇದು ಕೇರಳ:ಶಶಿ ತರೂರ್

ಟ್ವಿಟರ್​​ನಲ್ಲಿ ವಿದ್ಯಾರಂಭದ ಫೋಟೊ ಶೇರ್ ಮಾಡಿದ ತರೂರ್, ತಾನು 9 ಮಕ್ಕಳಿಗೆ ವಿದ್ಯಾರಂಭ ಮಾಡಿದ್ದೇನೆ. ಮೂರು ಭಾಷೆಯಲ್ಲಿ- ದೇವನಾಗರಿ, ಮಲಯಾಳಂ ಮತ್ತು ಇಂಗ್ಲಿಷ್ ನಲ್ಲಿ ಓಂ ಶ್ರೀ ಎಂದು ಬರೆಸಿದೆ.

ಯಾವುದೇ ಧರ್ಮ ಇರಲಿ ಇಲ್ಲಿ ಓಂ ಶ್ರೀ ಎಂದು ವಿದ್ಯಾರಂಭ ಮಾಡಲಾಗುತ್ತದೆ, ಇದು ಕೇರಳ:ಶಶಿ ತರೂರ್
ಶಶಿ ತರೂರ್
TV9 Web
| Edited By: ರಶ್ಮಿ ಕಲ್ಲಕಟ್ಟ|

Updated on: Oct 05, 2022 | 1:45 PM

Share

ತಿರುವನಂತಪುರಂ: ಕಲಿಕೆಗೆ ಧರ್ಮದ ಅಡ್ಡಿಯಿಲ್ಲ. ಹಿಂದೂ, ಮುಸ್ಲಿಂ ಮತ್ತು ಕ್ರೈಸ್ತ ಮಕ್ಕಳಿಗೆ ನಾನು ಮೂರು ಭಾಷೆಯಲ್ಲಿ ಓಂ ಶ್ರೀ ಎಂದು ಬರೆಸಿದೆ. ಇದು ಕೇರಳ (Kerala). ವಿದ್ಯಾರಂಭ ಎಂಬ ಹ್ಯಾಷ್ ಟ್ಯಾಗ್ ಜತೆ ಕಾಂಗ್ರೆಸ್ ಅಧ್ಯಕ್ಷ ಸ್ಥಾನದ ಅಭ್ಯರ್ಥಿ ಶಶಿ ತರೂರ್ (Shashi Tharoor) ಅವರು ತಮ್ಮ ಮನೆಯಲ್ಲಿ ನಡೆದ ವಿದ್ಯಾರಂಭದ (Vidyarambham)ಫೋಟೊವನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಶೇರ್ ಮಾಡಿದ್ದಾರೆ. ಹಿಂದೂ ಸಂಪ್ರದಾಯ ಪ್ರಕಾರ ಪುಟ್ಟ ಮಕ್ಕಳನ್ನ ಶಾಲೆಗೆ ಸೇರಿಸುವ ಮುನ್ನ  ವಿದ್ಯಾರಂಭ ಮಾಡಿಸಲಾಗುತ್ತದೆ. ಮೊದಲ ಬಾರಿ ಅಕ್ಷರವನ್ನು ಬರೆಸುವುದೇ ವಿದ್ಯಾರಂಭ. ಇದನ್ನು ವಿಜಯದಶಮಿ ದಿನ ಮಾಡಲಾಗುತ್ತದೆ. ಟ್ವಿಟರ್​​ನಲ್ಲಿ ವಿದ್ಯಾರಂಭದ ಫೋಟೊ ಶೇರ್ ಮಾಡಿದ ತರೂರ್, ತಾನು 9 ಮಕ್ಕಳಿಗೆ ವಿದ್ಯಾರಂಭ ಮಾಡಿದ್ದೇನೆ. ಮೂರು ಭಾಷೆಯಲ್ಲಿ- ದೇವನಾಗರಿ, ಮಲಯಾಳಂ ಮತ್ತು ಇಂಗ್ಲಿಷ್ ನಲ್ಲಿ ಓಂ ಶ್ರೀ ಎಂದು ಬರೆಸಿದೆ. ಕೇರಳದಲ್ಲಿನ ಶೈಕ್ಷಣಿಕ ದರವನ್ನು ಹೊಗಳಿದ ತರೂರ್ ,ತಮ್ಮ ಚುನಾವಣಾಕ್ಷೇತ್ರವಾದ ತಿರುವನಂತಪುರಂನ  ಪೂಜಪ್ಪುರದಲ್ಲಿನ ಸರಸ್ವತಿ ಮಂಟಪಕ್ಕೂ ಭೇಟಿ ನೀಡಿದ್ದು, ಅಲ್ಲಿನ ಅನುಭವವನ್ನು ಹಂಚಿಕೊಂಡಿದ್ದಾರೆ.

ನಾನು 2009 ರಿಂದ (ಎರಡು ಸಾಂಕ್ರಾಮಿಕ ವರ್ಷಗಳನ್ನು ಹೊರತುಪಡಿಸಿ), ನಾನು ಪೂಜಾಪುರದ ಸರಸ್ವತಿ ದೇವಸ್ಥಾನಕ್ಕೆ ಭೇಟಿ ನೀಡಿದ್ದೇನೆ. ಮಂಟಪದಲ್ಲಿ ಒಂದು ಗಂಟೆ ಕಳೆದು ಪೋಷಕರು  ಮಕ್ಕಳಿಗೆ ವರ್ಣಮಾಲೆಯನ್ನು ಕಲಿಸಿದೆ. ಓದುವ ಮತ್ತು ಬರೆಯುವ ಗೌರವವನ್ನು ಮೊದಲೇ ಹುಟ್ಟುಹಾಕಿರುವುದು ಕೇರಳದ ದೊಡ್ಡ ಶಕ್ತಿ, ”ಎಂದು ಅವರು ಟ್ವೀಟ್ ಮಾಡಿದ್ದಾರೆ.

ತರೂರ್ ಅವರು ಸಿಪಿಐಎಂನ ತಿರುವನಂತಪುರಂನ ಮಾಜಿ ಮೇಯರ್ ಕೆ. ಚಂದ್ರಿಕಾ ಮತ್ತು ಭಾರತೀಯ ಜನತಾ ಪಕ್ಷದ ಕೌನ್ಸಿಲರ್ ಡಾ.ವಿಜಯಲಕ್ಷ್ಮಿ ಅವರೊಂದಿಗೆ ದೇವಸ್ಥಾನಕ್ಕೆ ಬಂದಿದ್ದ ಚಿತ್ರವನ್ನು ಹಂಚಿಕೊಂಡಿದ್ದಾರೆ, ಸಂತೋಷವನ್ನು ವ್ಯಕ್ತಪಡಿಸಿದ ಅವರು ಬದಲಾವಣೆಯ ಉತ್ಸಾಹ ವ್ಯಾಪಕವಾಗಿದೆ  ಎಂದು ಹೇಳಿದರು.

ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ಶಶಿ ತರೂರ್ ಮತ್ತು ಅವರ ಪಕ್ಷದ ಸಹೋದ್ಯೋಗಿ ಮಲ್ಲಿಕಾರ್ಜುನ ಖರ್ಗೆ ಪರಸ್ಪರ ಪೈಪೋಟಿ ನಡೆಸುತ್ತಿದ್ದು, ಅಕ್ಟೋಬರ್ 17 ರಂದು ಮತದಾನ ನಡೆಯಲಿದೆ.

Follow Us
Web contact
Web contact

TV9 Kannada

Read More
ಎಷ್ಟೇ ಕಷ್ಟಪಟ್ಟರೂ ಮನೆ ಕಟ್ಟೋಕೆ ಸಾಧ್ಯವಾಗ್ತಿಲ್ವಾ?
ಎಷ್ಟೇ ಕಷ್ಟಪಟ್ಟರೂ ಮನೆ ಕಟ್ಟೋಕೆ ಸಾಧ್ಯವಾಗ್ತಿಲ್ವಾ?
ಇಂದು ಈ ರಾಶಿಯವರಿಗೆ ಖರ್ಚು ಹೆಚ್ಚಾಗುವ ಸಾಧ್ಯತೆ
ಇಂದು ಈ ರಾಶಿಯವರಿಗೆ ಖರ್ಚು ಹೆಚ್ಚಾಗುವ ಸಾಧ್ಯತೆ
150 ಕೋಟಿ ರೂಪಾಯಿ ಆಸ್ತಿ ಇದ್ದರೂ ಸುಡು ಬಿಸಿಲಲ್ಲಿ ಕೆಲಸ ಮಾಡುತ್ತಿರುವ ನಟ
150 ಕೋಟಿ ರೂಪಾಯಿ ಆಸ್ತಿ ಇದ್ದರೂ ಸುಡು ಬಿಸಿಲಲ್ಲಿ ಕೆಲಸ ಮಾಡುತ್ತಿರುವ ನಟ
ತಿಂಗಳೊಳಗೆ 4 ಹಿಂದೂ ವಿರೋಧಿಗಳು ಸಿಎಂ ಸ್ಥಾನ ಕಳೆದುಕೊಂಡ್ರು: ನಾರಾಯಣಸ್ವಾಮಿ
ತಿಂಗಳೊಳಗೆ 4 ಹಿಂದೂ ವಿರೋಧಿಗಳು ಸಿಎಂ ಸ್ಥಾನ ಕಳೆದುಕೊಂಡ್ರು: ನಾರಾಯಣಸ್ವಾಮಿ
ಮಳೆಯಲ್ಲಿ ರಸ್ತೆ ದಾಟಲು ಪರದಾಟ: ವಿಕಲಚೇತನ ಯುವಕನ ಸಹಾಯಕ್ಕೆ ಬಂದ ಪೊಲೀಸ್
ಮಳೆಯಲ್ಲಿ ರಸ್ತೆ ದಾಟಲು ಪರದಾಟ: ವಿಕಲಚೇತನ ಯುವಕನ ಸಹಾಯಕ್ಕೆ ಬಂದ ಪೊಲೀಸ್
ಪ್ಲೇಆಫ್‌ ಪಂದ್ಯಗಳಲ್ಲಿ ಮುಂದುವರೆದ ಯಶಸ್ವಿ ಜೈಸ್ವಾಲ್ ಕಳಪೆ ಪ್ರದರ್ಶನ
ಪ್ಲೇಆಫ್‌ ಪಂದ್ಯಗಳಲ್ಲಿ ಮುಂದುವರೆದ ಯಶಸ್ವಿ ಜೈಸ್ವಾಲ್ ಕಳಪೆ ಪ್ರದರ್ಶನ
ಡಿಕೆ ಶಿವಕುಮಾರ್​ ಬುಧಾದಿತ್ಯ ಯೋಗದ ಸೀಕ್ರೆಟ್ ಬಿಚ್ಚಿಟ್ಟ ಗುರೂಜಿ
ಡಿಕೆ ಶಿವಕುಮಾರ್​ ಬುಧಾದಿತ್ಯ ಯೋಗದ ಸೀಕ್ರೆಟ್ ಬಿಚ್ಚಿಟ್ಟ ಗುರೂಜಿ
ಕ್ವಾಲಿಫೈಯರ್ 2 ಪಂದ್ಯದಲ್ಲಿ ಎರಡೆರಡು ಬಾರಿ ನಡೆದ ಟಾಸ್
ಕ್ವಾಲಿಫೈಯರ್ 2 ಪಂದ್ಯದಲ್ಲಿ ಎರಡೆರಡು ಬಾರಿ ನಡೆದ ಟಾಸ್
ಧಾರಾಕಾರ ಮಳೆ: ಅಂಡರ್‌ಪಾಸ್‌ನಲ್ಲಿ ಸಿಲುಕಿದ ಕಾರು; ವಿಡಿಯೋ ನೋಡಿ
ಧಾರಾಕಾರ ಮಳೆ: ಅಂಡರ್‌ಪಾಸ್‌ನಲ್ಲಿ ಸಿಲುಕಿದ ಕಾರು; ವಿಡಿಯೋ ನೋಡಿ
40ಕ್ಕೂ ಹೆಚ್ಚು ಶಾಸಕರಿಂದ ಮಂತ್ರಿಗಿರಿಗಾಗಿ ತೀವ್ರ ಲಾಬಿ: ಯಾರ್ಯಾರು?
40ಕ್ಕೂ ಹೆಚ್ಚು ಶಾಸಕರಿಂದ ಮಂತ್ರಿಗಿರಿಗಾಗಿ ತೀವ್ರ ಲಾಬಿ: ಯಾರ್ಯಾರು?