AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅರ್ಜೆಂಟ್ ಆಗಿ ಖಾರ್ಕೀವ್​​ನಿಂದ ಹೊರಟುಬಿಡಿ; ಅಲ್ಲಿರುವ ಭಾರತೀಯರಿಗೆ ರಾಯಭಾರಿ ಕಚೇರಿಯಿಂದ ಬಂತು ತುರ್ತು ಸಂದೇಶ

ನಿನ್ನೆ ಕೀವ್​​ನಲ್ಲಿರುವ ಭಾರತೀಯ ನಾಗರಿಕರಿಗೂ ಕೂಡ ಆದಷ್ಟು ಬೇಗ ಕೀವ್​ ಬಿಡುವಂತೆ ರಾಯಭಾರಿ ಕಚೇರಿ ಸೂಚನೆ ನೀಡಿತ್ತು. ಲಭ್ಯ ಇರುವ ರೈಲು ಮತ್ತು ಇತರ ಸಂಚಾರ ವ್ಯವಸ್ಥೆಯ ಮೂಲಕ ಕೀವ್​​ನಿಂದ ಹೊರಟು, ಗಡಿ ದೇಶಗಳನ್ನು ತಲುಪಿಕೊಳ್ಳಿ ಎಂದು ಹೇಳಿತ್ತು.

ಅರ್ಜೆಂಟ್ ಆಗಿ ಖಾರ್ಕೀವ್​​ನಿಂದ ಹೊರಟುಬಿಡಿ; ಅಲ್ಲಿರುವ ಭಾರತೀಯರಿಗೆ ರಾಯಭಾರಿ ಕಚೇರಿಯಿಂದ ಬಂತು ತುರ್ತು ಸಂದೇಶ
ಸಾಂದರ್ಭಿಕ ಚಿತ್ರ
TV9 Web
| Edited By: |

Updated on: Mar 02, 2022 | 5:48 PM

Share

ಉಕ್ರೆನ್​ನ ಎರಡನೇ ದೊಡ್ಡ ನಗರವಾದ ಖಾರ್ಕೀವ್(Kharkiv)​ ರಷ್ಯಾ ಆಕ್ರಮಣಕ್ಕೆ ಹೊತ್ತಿ ಉರಿಯುತ್ತಿರುವ ಬೆನ್ನಲ್ಲೇ ಉಕ್ರೇನ್​​ನಲ್ಲಿರುವ ಭಾರತೀಯ ರಾಯಭಾರಿ ಕಚೇರಿ ಹೊಸದಾದ  ಅಡ್ವೈಸರಿಯನ್ನು ಹೊರಡಿಸಿದೆ. ಖಾರ್ಕೀವ್​​ನಲ್ಲಿರುವ ಪ್ರತಿಯೊಬ್ಬ ಭಾರತೀಯರೂ ತುರ್ತಾಗಿ ನಗರವನ್ನು ತೊರೆಯಿರಿ. ಈಗ ಎದುರಾಗಿರುವ ಪರಿಸ್ಥಿತಿಯಲ್ಲಿ ಖಾರ್ಕೀವ್​ ಯಾವ ಕಾರಣಕ್ಕೂ ಸುರಕ್ಷಿತವಲ್ಲ. ಹಾಗಾಗಿ ಭಾರತೀಯರು ಅರ್ಜೆಂಟ್ ಆಗಿ ಪೆಸೊಚಿನ್, ಬಾಬಾಯೆ ಮತ್ತು ಬೆಜ್ಲ್ಯುಡೋವ್ಕಾ ವಸಾಹತು ಪ್ರದೇಶಗಳಿಗೆ ತಲುಪಿಕೊಳ್ಳುವಂತೆ ಹೇಳಿದೆ.

ಉಕ್ರೇನ್​​ನಲ್ಲಿರುವ ರಾಯಭಾರಿ ಕಚೇರಿ ಟ್ವೀಟ್ ಮೂಲಕ ಈ ಮನವಿ ಮಾಡಿದೆ. ಹಾಗೇ, ಟ್ವೀಟ್​ನಲ್ಲಿ ಪ್ರತಿ ಅಕ್ಷರವನ್ನೂ ಕ್ಯಾಪಿಟಲ್​ ಅಕ್ಷರಗಳಲ್ಲಿಯೇ ಇಡುವ ಮೂಲಕ, ಇದೊಂದು ಅತ್ಯಂತ ಮಹತ್ವದ ಅಡ್ವೈಸರಿ ಎಂಬುದನ್ನು ಸ್ಪಷ್ಟಪಡಿಸಿದೆ. ಹಾಗೇ, ಇಲ್ಲಿರುವ ಭಾರತೀಯರ ಸುರಕ್ಷತೆ ಮತ್ತು ಭದ್ರತೆ ದೃಷ್ಟಿಯಿಂದ ಅವರು ಖಾರ್ಕೀವ್​ನಿಂದ ಹೊರಡಲೇಬೇಕು ಎಂದು ಒತ್ತಿ ಹೇಳಿದೆ. ಇದಕ್ಕೂ ಮೊದಲು ಪೋಲ್ಯಾಂಡ್​ನಲ್ಲಿರುವ ಭಾರತೀಯ ರಾಯಭಾರಿ ಕಚೇರಿಯೂ ಅಡ್ವೈಸರಿ ಬಿಡುಗಡೆ ಮಾಡಿ, ಉಕ್ರೇನ್​​ನ ಪಶ್ಚಿಮ ಗಡಿ ಸಮೀಪದಲ್ಲಿರುವ ಭಾರತೀಯರು ಎಷ್ಟಾಗತ್ತೋ ಅಷ್ಟು ಬೇಗ ಪೋಲ್ಯಾಂಡ್ ತಲುಪಿಕೊಳ್ಳಿ. ಅದಕ್ಕಾಗಿ ಬುಡೋಮಿಯರ್ಜ್ ಗಡಿ ಮಾರ್ಗವನ್ನು ಆಯ್ಕೆ ಮಾಡಿಕೊಳ್ಳಿ ಎಂದು ಹೇಳಿತ್ತು.

ನಿನ್ನೆ ಕೀವ್​​ನಲ್ಲಿರುವ ಭಾರತೀಯ ನಾಗರಿಕರಿಗೂ ಕೂಡ ಆದಷ್ಟು ಬೇಗ ಕೀವ್​ ಬಿಡುವಂತೆ ರಾಯಭಾರಿ ಕಚೇರಿ ಸೂಚನೆ ನೀಡಿತ್ತು. ಲಭ್ಯ ಇರುವ ರೈಲು ಮತ್ತು ಇತರ ಸಂಚಾರ ವ್ಯವಸ್ಥೆಯ ಮೂಲಕ ಕೀವ್​​ನಿಂದ ಹೊರಟು, ಗಡಿ ದೇಶಗಳನ್ನು ತಲುಪಿಕೊಳ್ಳಿ ಎಂದು ಹೇಳಿತ್ತು. ಸದ್ಯ ರಷ್ಯಾದಲ್ಲಿ ಖಾರ್ಕೀವ್​, ಸುಮಿ ಮತ್ತು ಕೀವ್​ ಭಾಗಗಳಲ್ಲಿ ರಷ್ಯಾ ಆಕ್ರಮಣ ಹೆಚ್ಚಿದೆ. ಭಾರತೀಯರ ಸ್ಥಳಾಂತರ ಕಾರ್ಯಕ್ಕೆ ರಷ್ಯಾ ಆಗಲೀ, ಉಕ್ರೇನ್ ಆಗಲೀ ತಡೆ ಮಾಡದೆ ಇದ್ದರೂ, ಗಡಿ ಭಾಗಗಳಲ್ಲಿ ಜನಸಂಖ್ಯೆ ಹೆಚ್ಚಿರುವ ಕಾರಣ ಟ್ರಾಫಿಕ್​ ಉಂಟಾಗುತ್ತಿದೆ.

ಇದನ್ನೂ ಓದಿ: Breaking: ಉಕ್ರೇನ್​​ನಲ್ಲಿ ಭಾರತದ ಇನ್ನೊಬ್ಬ ವಿದ್ಯಾರ್ಥಿ ಸಾವು; ಇಸ್ಕೆಮಿಕ್ ಸ್ಟ್ರೋಕ್​​​ನಿಂದ ಮೃತಪಟ್ಟ ಪಂಜಾಬ್​​ ಯುವಕ

Follow Us
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಜಿಬಿಎ ಚುನಾವಣೆಗೆ ಕೊನೆಗೂ ಮುಹೂರ್ತ: ಎಲೆಕ್ಷನ್​​ ಯಾವಾಗ ಗೊತ್ತಾ?
ಜಿಬಿಎ ಚುನಾವಣೆಗೆ ಕೊನೆಗೂ ಮುಹೂರ್ತ: ಎಲೆಕ್ಷನ್​​ ಯಾವಾಗ ಗೊತ್ತಾ?
ವಿಜಯ್​​ರನ್ನು ದೇವರೇ ಕಾಪಾಡಬೇಕು ಎಂದ ಹೆಚ್​​ಡಿಕೆ: ಕಾರಣ ಇಲ್ಲಿದೆ
ವಿಜಯ್​​ರನ್ನು ದೇವರೇ ಕಾಪಾಡಬೇಕು ಎಂದ ಹೆಚ್​​ಡಿಕೆ: ಕಾರಣ ಇಲ್ಲಿದೆ
ಅಂಜನಾದ್ರಿ ಹನುಮನಿಗೆ 2.5 ಕೋಟಿ ರೂ. ಮೌಲ್ಯದ ಚಿನ್ನದ ಕಿರೀಟ!
ಅಂಜನಾದ್ರಿ ಹನುಮನಿಗೆ 2.5 ಕೋಟಿ ರೂ. ಮೌಲ್ಯದ ಚಿನ್ನದ ಕಿರೀಟ!