AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅರ್ಜೆಂಟ್ ಆಗಿ ಖಾರ್ಕೀವ್​​ನಿಂದ ಹೊರಟುಬಿಡಿ; ಅಲ್ಲಿರುವ ಭಾರತೀಯರಿಗೆ ರಾಯಭಾರಿ ಕಚೇರಿಯಿಂದ ಬಂತು ತುರ್ತು ಸಂದೇಶ

ನಿನ್ನೆ ಕೀವ್​​ನಲ್ಲಿರುವ ಭಾರತೀಯ ನಾಗರಿಕರಿಗೂ ಕೂಡ ಆದಷ್ಟು ಬೇಗ ಕೀವ್​ ಬಿಡುವಂತೆ ರಾಯಭಾರಿ ಕಚೇರಿ ಸೂಚನೆ ನೀಡಿತ್ತು. ಲಭ್ಯ ಇರುವ ರೈಲು ಮತ್ತು ಇತರ ಸಂಚಾರ ವ್ಯವಸ್ಥೆಯ ಮೂಲಕ ಕೀವ್​​ನಿಂದ ಹೊರಟು, ಗಡಿ ದೇಶಗಳನ್ನು ತಲುಪಿಕೊಳ್ಳಿ ಎಂದು ಹೇಳಿತ್ತು.

ಅರ್ಜೆಂಟ್ ಆಗಿ ಖಾರ್ಕೀವ್​​ನಿಂದ ಹೊರಟುಬಿಡಿ; ಅಲ್ಲಿರುವ ಭಾರತೀಯರಿಗೆ ರಾಯಭಾರಿ ಕಚೇರಿಯಿಂದ ಬಂತು ತುರ್ತು ಸಂದೇಶ
ಸಾಂದರ್ಭಿಕ ಚಿತ್ರ
TV9 Web
| Edited By: |

Updated on: Mar 02, 2022 | 5:48 PM

Share

ಉಕ್ರೆನ್​ನ ಎರಡನೇ ದೊಡ್ಡ ನಗರವಾದ ಖಾರ್ಕೀವ್(Kharkiv)​ ರಷ್ಯಾ ಆಕ್ರಮಣಕ್ಕೆ ಹೊತ್ತಿ ಉರಿಯುತ್ತಿರುವ ಬೆನ್ನಲ್ಲೇ ಉಕ್ರೇನ್​​ನಲ್ಲಿರುವ ಭಾರತೀಯ ರಾಯಭಾರಿ ಕಚೇರಿ ಹೊಸದಾದ  ಅಡ್ವೈಸರಿಯನ್ನು ಹೊರಡಿಸಿದೆ. ಖಾರ್ಕೀವ್​​ನಲ್ಲಿರುವ ಪ್ರತಿಯೊಬ್ಬ ಭಾರತೀಯರೂ ತುರ್ತಾಗಿ ನಗರವನ್ನು ತೊರೆಯಿರಿ. ಈಗ ಎದುರಾಗಿರುವ ಪರಿಸ್ಥಿತಿಯಲ್ಲಿ ಖಾರ್ಕೀವ್​ ಯಾವ ಕಾರಣಕ್ಕೂ ಸುರಕ್ಷಿತವಲ್ಲ. ಹಾಗಾಗಿ ಭಾರತೀಯರು ಅರ್ಜೆಂಟ್ ಆಗಿ ಪೆಸೊಚಿನ್, ಬಾಬಾಯೆ ಮತ್ತು ಬೆಜ್ಲ್ಯುಡೋವ್ಕಾ ವಸಾಹತು ಪ್ರದೇಶಗಳಿಗೆ ತಲುಪಿಕೊಳ್ಳುವಂತೆ ಹೇಳಿದೆ.

ಉಕ್ರೇನ್​​ನಲ್ಲಿರುವ ರಾಯಭಾರಿ ಕಚೇರಿ ಟ್ವೀಟ್ ಮೂಲಕ ಈ ಮನವಿ ಮಾಡಿದೆ. ಹಾಗೇ, ಟ್ವೀಟ್​ನಲ್ಲಿ ಪ್ರತಿ ಅಕ್ಷರವನ್ನೂ ಕ್ಯಾಪಿಟಲ್​ ಅಕ್ಷರಗಳಲ್ಲಿಯೇ ಇಡುವ ಮೂಲಕ, ಇದೊಂದು ಅತ್ಯಂತ ಮಹತ್ವದ ಅಡ್ವೈಸರಿ ಎಂಬುದನ್ನು ಸ್ಪಷ್ಟಪಡಿಸಿದೆ. ಹಾಗೇ, ಇಲ್ಲಿರುವ ಭಾರತೀಯರ ಸುರಕ್ಷತೆ ಮತ್ತು ಭದ್ರತೆ ದೃಷ್ಟಿಯಿಂದ ಅವರು ಖಾರ್ಕೀವ್​ನಿಂದ ಹೊರಡಲೇಬೇಕು ಎಂದು ಒತ್ತಿ ಹೇಳಿದೆ. ಇದಕ್ಕೂ ಮೊದಲು ಪೋಲ್ಯಾಂಡ್​ನಲ್ಲಿರುವ ಭಾರತೀಯ ರಾಯಭಾರಿ ಕಚೇರಿಯೂ ಅಡ್ವೈಸರಿ ಬಿಡುಗಡೆ ಮಾಡಿ, ಉಕ್ರೇನ್​​ನ ಪಶ್ಚಿಮ ಗಡಿ ಸಮೀಪದಲ್ಲಿರುವ ಭಾರತೀಯರು ಎಷ್ಟಾಗತ್ತೋ ಅಷ್ಟು ಬೇಗ ಪೋಲ್ಯಾಂಡ್ ತಲುಪಿಕೊಳ್ಳಿ. ಅದಕ್ಕಾಗಿ ಬುಡೋಮಿಯರ್ಜ್ ಗಡಿ ಮಾರ್ಗವನ್ನು ಆಯ್ಕೆ ಮಾಡಿಕೊಳ್ಳಿ ಎಂದು ಹೇಳಿತ್ತು.

ನಿನ್ನೆ ಕೀವ್​​ನಲ್ಲಿರುವ ಭಾರತೀಯ ನಾಗರಿಕರಿಗೂ ಕೂಡ ಆದಷ್ಟು ಬೇಗ ಕೀವ್​ ಬಿಡುವಂತೆ ರಾಯಭಾರಿ ಕಚೇರಿ ಸೂಚನೆ ನೀಡಿತ್ತು. ಲಭ್ಯ ಇರುವ ರೈಲು ಮತ್ತು ಇತರ ಸಂಚಾರ ವ್ಯವಸ್ಥೆಯ ಮೂಲಕ ಕೀವ್​​ನಿಂದ ಹೊರಟು, ಗಡಿ ದೇಶಗಳನ್ನು ತಲುಪಿಕೊಳ್ಳಿ ಎಂದು ಹೇಳಿತ್ತು. ಸದ್ಯ ರಷ್ಯಾದಲ್ಲಿ ಖಾರ್ಕೀವ್​, ಸುಮಿ ಮತ್ತು ಕೀವ್​ ಭಾಗಗಳಲ್ಲಿ ರಷ್ಯಾ ಆಕ್ರಮಣ ಹೆಚ್ಚಿದೆ. ಭಾರತೀಯರ ಸ್ಥಳಾಂತರ ಕಾರ್ಯಕ್ಕೆ ರಷ್ಯಾ ಆಗಲೀ, ಉಕ್ರೇನ್ ಆಗಲೀ ತಡೆ ಮಾಡದೆ ಇದ್ದರೂ, ಗಡಿ ಭಾಗಗಳಲ್ಲಿ ಜನಸಂಖ್ಯೆ ಹೆಚ್ಚಿರುವ ಕಾರಣ ಟ್ರಾಫಿಕ್​ ಉಂಟಾಗುತ್ತಿದೆ.

ಇದನ್ನೂ ಓದಿ: Breaking: ಉಕ್ರೇನ್​​ನಲ್ಲಿ ಭಾರತದ ಇನ್ನೊಬ್ಬ ವಿದ್ಯಾರ್ಥಿ ಸಾವು; ಇಸ್ಕೆಮಿಕ್ ಸ್ಟ್ರೋಕ್​​​ನಿಂದ ಮೃತಪಟ್ಟ ಪಂಜಾಬ್​​ ಯುವಕ

ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ