AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚೀನಾ ಕಮ್ಯೂನಿಸ್ಟ್​ ಪಕ್ಷದ ಶತಮಾನೋತ್ಸವ ಕಾರ್ಯಕ್ರಮದಲ್ಲಿ ಪಾಲ್ಗೊಂಡ ಭಾರತದ ಎಡಪಕ್ಷಗಳ ನಾಯಕರು..!

2020ರ ಮೇ ತಿಂಗಳಿಂದಲೂ ಭಾರತ-ಚೀನಾ ಸೇನೆಗಳ ನಡುವೆ ಒಂದಲ್ಲ ಒಂದು ಸಂಘರ್ಷ ನಡೆಯುತ್ತಲೇ ಇದೆ. ಅದರಲ್ಲೂ ಕಳೆದ ಜುಲೈನಲ್ಲಿ ಪೂರ್ವ ಲಡಾಖನ್​ ಗಲ್ವಾನ್​ ಕಣಿವೆಯಲ್ಲಿ ಎರಡೂ ದೇಶಗಳ ಸೈನಿಕರು ಹೊಡೆದಾಡಿಕೊಂಡು, ಭಾರತದ 20 ಯೋಧರು ಪ್ರಾಣಬಿಟ್ಟಿದ್ದಾರೆ.

ಚೀನಾ ಕಮ್ಯೂನಿಸ್ಟ್​ ಪಕ್ಷದ ಶತಮಾನೋತ್ಸವ ಕಾರ್ಯಕ್ರಮದಲ್ಲಿ ಪಾಲ್ಗೊಂಡ ಭಾರತದ ಎಡಪಕ್ಷಗಳ ನಾಯಕರು..!
ಚೀನಾ ರಾಯಭಾರಿ ಕಚೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಪಾಲ್ಗೊಂಡ ನಾಯಕರು
TV9 Web
| Edited By: |

Updated on: Jul 29, 2021 | 3:49 PM

Share

ದೆಹಲಿ: ಚೀನಾ ಕಮ್ಯೂನಿಸ್ಟ್ ಪಕ್ಷದ ಶತಮಾನೋತ್ಸವ ಸ್ಮರಣಾರ್ಥ ಚೀನಾ ರಾಯಭಾರಿ ಕಚೇರಿಯಲ್ಲಿ ಬುಧವಾರ ಆಯೋಜಿಸಲಾಗಿದ್ದ ಕಾರ್ಯಕ್ರಮದಲ್ಲಿ ಸಿಪಿಐ(ಎಂ) ಪಕ್ಷದ ನಾಯಕ ಸೀತಾರಾಮ್​ ಯೆಚೂರಿ, ಸಿಪಿಐನ ಡಿ.ರಾಜಾ ಸೇರಿ ಬೇರೆ ಕೆಲವು ಎಡ ಪಕ್ಷಗಳ ನಾಯಕರು ಪಾಲ್ಗೊಂಡಿದ್ದರು. ಕಳೆದ ವರ್ಷ ಗಲ್ವಾನ್​ ಕಣಿವೆಯಲ್ಲಿ ಚೀನಾ ಸೈನಿಕರ ದಾಳಿಯಲ್ಲಿ ಭಾರತೀಯ ಯೋಧರು ಮೃತಪಟ್ಟ ನಂತರ, ಚೀನಾ ವಿರುದ್ಧ ವಾಗ್ದಾಳಿ ನಡೆಸಿದ್ದ ಎಡಪಕ್ಷಗಳ ನಾಯಕರೇ ಇಂದು, ಅಲ್ಲಿನ ಕಮ್ಯೂನಿಸ್ಟ್ ಪಕ್ಷದ ಶತಮಾನೋತ್ಸವ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದು ಅಚ್ಚರಿಗೆ ಕಾರಣವಾಗಿದೆ.

ಚೀನಾದ ಕಮ್ಯೂನಿಸ್ಟ್​ ಪಕ್ಷ ನಿರ್ಮಾಣಗೊಂಡು ನೂರು ವರ್ಷಗಳೇ ಕಳೆದಿವೆ. ಇದೇ ತಿಂಗಳ ಪ್ರಾರಂಭದಲ್ಲಿ, ಚೀನಾದ ಟಿಯಾನನ್ಮೆನ್ ಸ್ಕ್ವೇರ್​​ನಲ್ಲಿ​ ಅದ್ದೂರಿ ಸಮಾರಂಭ ನಡೆದಿತ್ತು. ಚೀನಾದ ಅಧ್ಯಕ್ಷ ಷಿ ಜಿನ್​ಪಿಂಗ್​ ಅಂದು ದೇಶವನ್ನುದ್ದೇಶಿಸಿ ಮಾತನಾಡಿದ್ದರು. ಯಾವುದೇ ವಿದೇಶೀ ಶಕ್ತಿಗಳೂ ಚೀನಾವನ್ನು ಏನೂ ಮಾಡಲು ಸಾಧ್ಯವಿಲ್ಲ ಎಂದಿದ್ದರು.

2020ರ ಮೇ ತಿಂಗಳಿಂದಲೂ ಭಾರತ-ಚೀನಾ ಸೇನೆಗಳ ನಡುವೆ ಒಂದಲ್ಲ ಒಂದು ಸಂಘರ್ಷ ನಡೆಯುತ್ತಲೇ ಇದೆ. ಅದರಲ್ಲೂ ಕಳೆದ ಜುಲೈನಲ್ಲಿ ಪೂರ್ವ ಲಡಾಖನ್​ ಗಲ್ವಾನ್​ ಕಣಿವೆಯಲ್ಲಿ ಎರಡೂ ದೇಶಗಳ ಸೈನಿಕರು ಹೊಡೆದಾಡಿಕೊಂಡು, ಭಾರತದ 20 ಯೋಧರು ಪ್ರಾಣಬಿಟ್ಟಿದ್ದಾರೆ. ಅದಾದ ಮೇಲೆ ಮಿಲಿಟರಿ ಹಂತದಲ್ಲಿ ಹಲವು ಸುತ್ತಿನ ಮಾತುಕತೆಗಳು ನಡೆದಿದ್ದರೂ, ಚೀನಾ ಎಲ್​ಎಸಿ ಬಳಿ ನಿರಂತರವಾಗಿ ತನ್ನ ಸೇನಾ ಕಾರ್ಯಚಟುವಟಿಕೆಗಳನ್ನು ನಡೆಸುತ್ತಿದೆ. ಚೀನಾ ಭಾರತದ ಮೇಲೆ ದಾಳಿ ಮಾಡಿದಾಗ ಕೇಂದ್ರ ಸರ್ಕಾರದ ವಿರುದ್ಧ ಮಾತನಾಡಿದ್ದ ಭಾರತದ ಎಡ ಪಕ್ಷಗಳೆಲ್ಲ ಈಗ ಚೀನಾಕ್ಕೆ ಸಂಬಂಧಪಟ್ಟ ಸಮಾರಂಭದಲ್ಲಿ ಪಾಲ್ಗೊಂಡಿದ್ದು ನಿಜಕ್ಕೂ ಅಚ್ಚರಿ ಮೂಡಿಸಿದೆ.

ಇದನ್ನೂ ಓದಿ: ಅಶ್ಲೀಲ ಸಿನಿಮಾ ದಂಧೆಗೆ ಹುಡುಗಿಯರನ್ನು ಹೇಗೆ ತಳ್ಳುತ್ತಿದ್ದರು? ಯುವತಿಯರನ್ನು ಬೆಚ್ಚಿ ಬೀಳಿಸುವ ವಿವರ ಇಲ್ಲಿದೆ

Left leaders attend Chinese Communist Party centenary event

Follow Us
Web contact
Web contact

TV9 Kannada

Read More
ಡಿಕೆ ಶಿವಕುಮಾರ್ ಸಿಎಂ ಆಗುತ್ತಿದ್ದಂತೆಯೇ ಹಲವು ಅಧಿಕಾರಿಗಳಿಗೆ ಗೇಟ್ ಪಾಸ್
ಡಿಕೆ ಶಿವಕುಮಾರ್ ಸಿಎಂ ಆಗುತ್ತಿದ್ದಂತೆಯೇ ಹಲವು ಅಧಿಕಾರಿಗಳಿಗೆ ಗೇಟ್ ಪಾಸ್
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ