AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚೀನಾ ಕಮ್ಯೂನಿಸ್ಟ್​ ಪಕ್ಷದ ಶತಮಾನೋತ್ಸವ ಕಾರ್ಯಕ್ರಮದಲ್ಲಿ ಪಾಲ್ಗೊಂಡ ಭಾರತದ ಎಡಪಕ್ಷಗಳ ನಾಯಕರು..!

2020ರ ಮೇ ತಿಂಗಳಿಂದಲೂ ಭಾರತ-ಚೀನಾ ಸೇನೆಗಳ ನಡುವೆ ಒಂದಲ್ಲ ಒಂದು ಸಂಘರ್ಷ ನಡೆಯುತ್ತಲೇ ಇದೆ. ಅದರಲ್ಲೂ ಕಳೆದ ಜುಲೈನಲ್ಲಿ ಪೂರ್ವ ಲಡಾಖನ್​ ಗಲ್ವಾನ್​ ಕಣಿವೆಯಲ್ಲಿ ಎರಡೂ ದೇಶಗಳ ಸೈನಿಕರು ಹೊಡೆದಾಡಿಕೊಂಡು, ಭಾರತದ 20 ಯೋಧರು ಪ್ರಾಣಬಿಟ್ಟಿದ್ದಾರೆ.

ಚೀನಾ ಕಮ್ಯೂನಿಸ್ಟ್​ ಪಕ್ಷದ ಶತಮಾನೋತ್ಸವ ಕಾರ್ಯಕ್ರಮದಲ್ಲಿ ಪಾಲ್ಗೊಂಡ ಭಾರತದ ಎಡಪಕ್ಷಗಳ ನಾಯಕರು..!
ಚೀನಾ ರಾಯಭಾರಿ ಕಚೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಪಾಲ್ಗೊಂಡ ನಾಯಕರು
TV9 Web
| Updated By: Lakshmi Hegde|

Updated on: Jul 29, 2021 | 3:49 PM

Share

ದೆಹಲಿ: ಚೀನಾ ಕಮ್ಯೂನಿಸ್ಟ್ ಪಕ್ಷದ ಶತಮಾನೋತ್ಸವ ಸ್ಮರಣಾರ್ಥ ಚೀನಾ ರಾಯಭಾರಿ ಕಚೇರಿಯಲ್ಲಿ ಬುಧವಾರ ಆಯೋಜಿಸಲಾಗಿದ್ದ ಕಾರ್ಯಕ್ರಮದಲ್ಲಿ ಸಿಪಿಐ(ಎಂ) ಪಕ್ಷದ ನಾಯಕ ಸೀತಾರಾಮ್​ ಯೆಚೂರಿ, ಸಿಪಿಐನ ಡಿ.ರಾಜಾ ಸೇರಿ ಬೇರೆ ಕೆಲವು ಎಡ ಪಕ್ಷಗಳ ನಾಯಕರು ಪಾಲ್ಗೊಂಡಿದ್ದರು. ಕಳೆದ ವರ್ಷ ಗಲ್ವಾನ್​ ಕಣಿವೆಯಲ್ಲಿ ಚೀನಾ ಸೈನಿಕರ ದಾಳಿಯಲ್ಲಿ ಭಾರತೀಯ ಯೋಧರು ಮೃತಪಟ್ಟ ನಂತರ, ಚೀನಾ ವಿರುದ್ಧ ವಾಗ್ದಾಳಿ ನಡೆಸಿದ್ದ ಎಡಪಕ್ಷಗಳ ನಾಯಕರೇ ಇಂದು, ಅಲ್ಲಿನ ಕಮ್ಯೂನಿಸ್ಟ್ ಪಕ್ಷದ ಶತಮಾನೋತ್ಸವ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದು ಅಚ್ಚರಿಗೆ ಕಾರಣವಾಗಿದೆ.

ಚೀನಾದ ಕಮ್ಯೂನಿಸ್ಟ್​ ಪಕ್ಷ ನಿರ್ಮಾಣಗೊಂಡು ನೂರು ವರ್ಷಗಳೇ ಕಳೆದಿವೆ. ಇದೇ ತಿಂಗಳ ಪ್ರಾರಂಭದಲ್ಲಿ, ಚೀನಾದ ಟಿಯಾನನ್ಮೆನ್ ಸ್ಕ್ವೇರ್​​ನಲ್ಲಿ​ ಅದ್ದೂರಿ ಸಮಾರಂಭ ನಡೆದಿತ್ತು. ಚೀನಾದ ಅಧ್ಯಕ್ಷ ಷಿ ಜಿನ್​ಪಿಂಗ್​ ಅಂದು ದೇಶವನ್ನುದ್ದೇಶಿಸಿ ಮಾತನಾಡಿದ್ದರು. ಯಾವುದೇ ವಿದೇಶೀ ಶಕ್ತಿಗಳೂ ಚೀನಾವನ್ನು ಏನೂ ಮಾಡಲು ಸಾಧ್ಯವಿಲ್ಲ ಎಂದಿದ್ದರು.

2020ರ ಮೇ ತಿಂಗಳಿಂದಲೂ ಭಾರತ-ಚೀನಾ ಸೇನೆಗಳ ನಡುವೆ ಒಂದಲ್ಲ ಒಂದು ಸಂಘರ್ಷ ನಡೆಯುತ್ತಲೇ ಇದೆ. ಅದರಲ್ಲೂ ಕಳೆದ ಜುಲೈನಲ್ಲಿ ಪೂರ್ವ ಲಡಾಖನ್​ ಗಲ್ವಾನ್​ ಕಣಿವೆಯಲ್ಲಿ ಎರಡೂ ದೇಶಗಳ ಸೈನಿಕರು ಹೊಡೆದಾಡಿಕೊಂಡು, ಭಾರತದ 20 ಯೋಧರು ಪ್ರಾಣಬಿಟ್ಟಿದ್ದಾರೆ. ಅದಾದ ಮೇಲೆ ಮಿಲಿಟರಿ ಹಂತದಲ್ಲಿ ಹಲವು ಸುತ್ತಿನ ಮಾತುಕತೆಗಳು ನಡೆದಿದ್ದರೂ, ಚೀನಾ ಎಲ್​ಎಸಿ ಬಳಿ ನಿರಂತರವಾಗಿ ತನ್ನ ಸೇನಾ ಕಾರ್ಯಚಟುವಟಿಕೆಗಳನ್ನು ನಡೆಸುತ್ತಿದೆ. ಚೀನಾ ಭಾರತದ ಮೇಲೆ ದಾಳಿ ಮಾಡಿದಾಗ ಕೇಂದ್ರ ಸರ್ಕಾರದ ವಿರುದ್ಧ ಮಾತನಾಡಿದ್ದ ಭಾರತದ ಎಡ ಪಕ್ಷಗಳೆಲ್ಲ ಈಗ ಚೀನಾಕ್ಕೆ ಸಂಬಂಧಪಟ್ಟ ಸಮಾರಂಭದಲ್ಲಿ ಪಾಲ್ಗೊಂಡಿದ್ದು ನಿಜಕ್ಕೂ ಅಚ್ಚರಿ ಮೂಡಿಸಿದೆ.

ಇದನ್ನೂ ಓದಿ: ಅಶ್ಲೀಲ ಸಿನಿಮಾ ದಂಧೆಗೆ ಹುಡುಗಿಯರನ್ನು ಹೇಗೆ ತಳ್ಳುತ್ತಿದ್ದರು? ಯುವತಿಯರನ್ನು ಬೆಚ್ಚಿ ಬೀಳಿಸುವ ವಿವರ ಇಲ್ಲಿದೆ

Left leaders attend Chinese Communist Party centenary event

ಸುಳ್ಳು ಹೇಳಿದ್ರೆ ಒದ್ದು ಒಳಗೆ ಹಾಕ್ತೀನಿ: ಸಚಿವ ಎಂಬಿ ಪಾಟೀಲ್
ಸುಳ್ಳು ಹೇಳಿದ್ರೆ ಒದ್ದು ಒಳಗೆ ಹಾಕ್ತೀನಿ: ಸಚಿವ ಎಂಬಿ ಪಾಟೀಲ್
ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು
ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ