AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚೀನಾ ಕಮ್ಯೂನಿಸ್ಟ್​ ಪಕ್ಷದ ಶತಮಾನೋತ್ಸವ ಕಾರ್ಯಕ್ರಮದಲ್ಲಿ ಪಾಲ್ಗೊಂಡ ಭಾರತದ ಎಡಪಕ್ಷಗಳ ನಾಯಕರು..!

2020ರ ಮೇ ತಿಂಗಳಿಂದಲೂ ಭಾರತ-ಚೀನಾ ಸೇನೆಗಳ ನಡುವೆ ಒಂದಲ್ಲ ಒಂದು ಸಂಘರ್ಷ ನಡೆಯುತ್ತಲೇ ಇದೆ. ಅದರಲ್ಲೂ ಕಳೆದ ಜುಲೈನಲ್ಲಿ ಪೂರ್ವ ಲಡಾಖನ್​ ಗಲ್ವಾನ್​ ಕಣಿವೆಯಲ್ಲಿ ಎರಡೂ ದೇಶಗಳ ಸೈನಿಕರು ಹೊಡೆದಾಡಿಕೊಂಡು, ಭಾರತದ 20 ಯೋಧರು ಪ್ರಾಣಬಿಟ್ಟಿದ್ದಾರೆ.

ಚೀನಾ ಕಮ್ಯೂನಿಸ್ಟ್​ ಪಕ್ಷದ ಶತಮಾನೋತ್ಸವ ಕಾರ್ಯಕ್ರಮದಲ್ಲಿ ಪಾಲ್ಗೊಂಡ ಭಾರತದ ಎಡಪಕ್ಷಗಳ ನಾಯಕರು..!
ಚೀನಾ ರಾಯಭಾರಿ ಕಚೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಪಾಲ್ಗೊಂಡ ನಾಯಕರು
TV9 Web
| Edited By: |

Updated on: Jul 29, 2021 | 3:49 PM

Share

ದೆಹಲಿ: ಚೀನಾ ಕಮ್ಯೂನಿಸ್ಟ್ ಪಕ್ಷದ ಶತಮಾನೋತ್ಸವ ಸ್ಮರಣಾರ್ಥ ಚೀನಾ ರಾಯಭಾರಿ ಕಚೇರಿಯಲ್ಲಿ ಬುಧವಾರ ಆಯೋಜಿಸಲಾಗಿದ್ದ ಕಾರ್ಯಕ್ರಮದಲ್ಲಿ ಸಿಪಿಐ(ಎಂ) ಪಕ್ಷದ ನಾಯಕ ಸೀತಾರಾಮ್​ ಯೆಚೂರಿ, ಸಿಪಿಐನ ಡಿ.ರಾಜಾ ಸೇರಿ ಬೇರೆ ಕೆಲವು ಎಡ ಪಕ್ಷಗಳ ನಾಯಕರು ಪಾಲ್ಗೊಂಡಿದ್ದರು. ಕಳೆದ ವರ್ಷ ಗಲ್ವಾನ್​ ಕಣಿವೆಯಲ್ಲಿ ಚೀನಾ ಸೈನಿಕರ ದಾಳಿಯಲ್ಲಿ ಭಾರತೀಯ ಯೋಧರು ಮೃತಪಟ್ಟ ನಂತರ, ಚೀನಾ ವಿರುದ್ಧ ವಾಗ್ದಾಳಿ ನಡೆಸಿದ್ದ ಎಡಪಕ್ಷಗಳ ನಾಯಕರೇ ಇಂದು, ಅಲ್ಲಿನ ಕಮ್ಯೂನಿಸ್ಟ್ ಪಕ್ಷದ ಶತಮಾನೋತ್ಸವ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದು ಅಚ್ಚರಿಗೆ ಕಾರಣವಾಗಿದೆ.

ಚೀನಾದ ಕಮ್ಯೂನಿಸ್ಟ್​ ಪಕ್ಷ ನಿರ್ಮಾಣಗೊಂಡು ನೂರು ವರ್ಷಗಳೇ ಕಳೆದಿವೆ. ಇದೇ ತಿಂಗಳ ಪ್ರಾರಂಭದಲ್ಲಿ, ಚೀನಾದ ಟಿಯಾನನ್ಮೆನ್ ಸ್ಕ್ವೇರ್​​ನಲ್ಲಿ​ ಅದ್ದೂರಿ ಸಮಾರಂಭ ನಡೆದಿತ್ತು. ಚೀನಾದ ಅಧ್ಯಕ್ಷ ಷಿ ಜಿನ್​ಪಿಂಗ್​ ಅಂದು ದೇಶವನ್ನುದ್ದೇಶಿಸಿ ಮಾತನಾಡಿದ್ದರು. ಯಾವುದೇ ವಿದೇಶೀ ಶಕ್ತಿಗಳೂ ಚೀನಾವನ್ನು ಏನೂ ಮಾಡಲು ಸಾಧ್ಯವಿಲ್ಲ ಎಂದಿದ್ದರು.

2020ರ ಮೇ ತಿಂಗಳಿಂದಲೂ ಭಾರತ-ಚೀನಾ ಸೇನೆಗಳ ನಡುವೆ ಒಂದಲ್ಲ ಒಂದು ಸಂಘರ್ಷ ನಡೆಯುತ್ತಲೇ ಇದೆ. ಅದರಲ್ಲೂ ಕಳೆದ ಜುಲೈನಲ್ಲಿ ಪೂರ್ವ ಲಡಾಖನ್​ ಗಲ್ವಾನ್​ ಕಣಿವೆಯಲ್ಲಿ ಎರಡೂ ದೇಶಗಳ ಸೈನಿಕರು ಹೊಡೆದಾಡಿಕೊಂಡು, ಭಾರತದ 20 ಯೋಧರು ಪ್ರಾಣಬಿಟ್ಟಿದ್ದಾರೆ. ಅದಾದ ಮೇಲೆ ಮಿಲಿಟರಿ ಹಂತದಲ್ಲಿ ಹಲವು ಸುತ್ತಿನ ಮಾತುಕತೆಗಳು ನಡೆದಿದ್ದರೂ, ಚೀನಾ ಎಲ್​ಎಸಿ ಬಳಿ ನಿರಂತರವಾಗಿ ತನ್ನ ಸೇನಾ ಕಾರ್ಯಚಟುವಟಿಕೆಗಳನ್ನು ನಡೆಸುತ್ತಿದೆ. ಚೀನಾ ಭಾರತದ ಮೇಲೆ ದಾಳಿ ಮಾಡಿದಾಗ ಕೇಂದ್ರ ಸರ್ಕಾರದ ವಿರುದ್ಧ ಮಾತನಾಡಿದ್ದ ಭಾರತದ ಎಡ ಪಕ್ಷಗಳೆಲ್ಲ ಈಗ ಚೀನಾಕ್ಕೆ ಸಂಬಂಧಪಟ್ಟ ಸಮಾರಂಭದಲ್ಲಿ ಪಾಲ್ಗೊಂಡಿದ್ದು ನಿಜಕ್ಕೂ ಅಚ್ಚರಿ ಮೂಡಿಸಿದೆ.

ಇದನ್ನೂ ಓದಿ: ಅಶ್ಲೀಲ ಸಿನಿಮಾ ದಂಧೆಗೆ ಹುಡುಗಿಯರನ್ನು ಹೇಗೆ ತಳ್ಳುತ್ತಿದ್ದರು? ಯುವತಿಯರನ್ನು ಬೆಚ್ಚಿ ಬೀಳಿಸುವ ವಿವರ ಇಲ್ಲಿದೆ

Left leaders attend Chinese Communist Party centenary event

ಜೆಡಿಎಸ್-ಬಿಜೆಪಿ ಮೈತ್ರಿಯಲ್ಲಿ ಅಸಮಾಧಾನ ಸ್ಫೋಟ: ಪ್ರೀತಂಗೆ ನಿಖಿಲ್ ಕೌಂಟರ್
ಜೆಡಿಎಸ್-ಬಿಜೆಪಿ ಮೈತ್ರಿಯಲ್ಲಿ ಅಸಮಾಧಾನ ಸ್ಫೋಟ: ಪ್ರೀತಂಗೆ ನಿಖಿಲ್ ಕೌಂಟರ್
ಬೆಂಗಳೂರಲ್ಲಿ ಬಿಎಂಟಿಸಿಯಿಂದ ಮತ್ತೊಂದು ಡೆಡ್ಲಿ ಆ್ಯಕ್ಸಿಡೆಂಟ್!
ಬೆಂಗಳೂರಲ್ಲಿ ಬಿಎಂಟಿಸಿಯಿಂದ ಮತ್ತೊಂದು ಡೆಡ್ಲಿ ಆ್ಯಕ್ಸಿಡೆಂಟ್!
‘ನನ್ನನ್ನು ಹಾಗೆ ಕರೀ ಬೇಡಿ ಪ್ಲೀಸ್’; ಎಲ್ಲರ ಎದುರು ಕೋರಿಕೊಂಡ ಗಿಲ್ಲಿ ನಟ
‘ನನ್ನನ್ನು ಹಾಗೆ ಕರೀ ಬೇಡಿ ಪ್ಲೀಸ್’; ಎಲ್ಲರ ಎದುರು ಕೋರಿಕೊಂಡ ಗಿಲ್ಲಿ ನಟ
ಮೋದಿ ವಿರುದ್ಧ ಕಾಂಗ್ರೆಸ್ ಫ್ಲೆಕ್ಸ್: ಪೊಲೀಸ್ ದೂರು ದಾಖಲಿಸಿದ ಬಿಜೆಪಿ
ಮೋದಿ ವಿರುದ್ಧ ಕಾಂಗ್ರೆಸ್ ಫ್ಲೆಕ್ಸ್: ಪೊಲೀಸ್ ದೂರು ದಾಖಲಿಸಿದ ಬಿಜೆಪಿ
ಪತ್ನಿಗೆ ಡಿವೋರ್ಸ್​​ ನೀಡದೆ 2ನೇ ಮದುವೆಗೆ ಯತ್ನ: ವ್ಯಕ್ತಿಗೆ ಡಬಲ್​​ ಶಾಕ್​
ಪತ್ನಿಗೆ ಡಿವೋರ್ಸ್​​ ನೀಡದೆ 2ನೇ ಮದುವೆಗೆ ಯತ್ನ: ವ್ಯಕ್ತಿಗೆ ಡಬಲ್​​ ಶಾಕ್​
ಕಲಾಕಾರ ಈ ಕಮಲಾಕರ: ಜ್ಯೋತಿಷಿಯ ನವರಂಗಿ ಆಟದ ಸ್ಪೋಟಕ ಆಡಿಯೋ ಇಲ್ಲಿದೆ
ಕಲಾಕಾರ ಈ ಕಮಲಾಕರ: ಜ್ಯೋತಿಷಿಯ ನವರಂಗಿ ಆಟದ ಸ್ಪೋಟಕ ಆಡಿಯೋ ಇಲ್ಲಿದೆ
ಲಂಬೋರ್ಘಿನಿ ಕಾರನ್ನು ಪಾದಚಾರಿಗಳ ಮೇಲೆ ಹತ್ತಿಸಿದ ತಂಬಾಕು ಉದ್ಯಮಿ ಮಗ
ಲಂಬೋರ್ಘಿನಿ ಕಾರನ್ನು ಪಾದಚಾರಿಗಳ ಮೇಲೆ ಹತ್ತಿಸಿದ ತಂಬಾಕು ಉದ್ಯಮಿ ಮಗ
ಸಿದ್ಧಾರೂಢರ ದರ್ಶನ ಪಡೆದು ಧ್ಯಾನ ಮಾಡಿದ ಸೋನು ನಿಗಮ್​​
ಸಿದ್ಧಾರೂಢರ ದರ್ಶನ ಪಡೆದು ಧ್ಯಾನ ಮಾಡಿದ ಸೋನು ನಿಗಮ್​​
ನಾಯಕ ಎಂದರೆ ಕೇವಲ ಚುನಾವಣೆಗಳಲ್ಲಿ ಸ್ಪರ್ಧಿಸುವುದಲ್ಲ: ಮೋದಿ
ನಾಯಕ ಎಂದರೆ ಕೇವಲ ಚುನಾವಣೆಗಳಲ್ಲಿ ಸ್ಪರ್ಧಿಸುವುದಲ್ಲ: ಮೋದಿ
ಮೆಟ್ರೋ ದರ ಏರಿಕೆ ವಿರುದ್ಧ ಪ್ರತಿಭಟಿಸಿದ ತೇಜಸ್ವಿ ಸೂರ್ಯ ಪೊಲೀಸ್ ವಶಕ್ಕೆ
ಮೆಟ್ರೋ ದರ ಏರಿಕೆ ವಿರುದ್ಧ ಪ್ರತಿಭಟಿಸಿದ ತೇಜಸ್ವಿ ಸೂರ್ಯ ಪೊಲೀಸ್ ವಶಕ್ಕೆ