AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚೀನಾ ಕಮ್ಯೂನಿಸ್ಟ್​ ಪಕ್ಷದ ಶತಮಾನೋತ್ಸವ ಕಾರ್ಯಕ್ರಮದಲ್ಲಿ ಪಾಲ್ಗೊಂಡ ಭಾರತದ ಎಡಪಕ್ಷಗಳ ನಾಯಕರು..!

2020ರ ಮೇ ತಿಂಗಳಿಂದಲೂ ಭಾರತ-ಚೀನಾ ಸೇನೆಗಳ ನಡುವೆ ಒಂದಲ್ಲ ಒಂದು ಸಂಘರ್ಷ ನಡೆಯುತ್ತಲೇ ಇದೆ. ಅದರಲ್ಲೂ ಕಳೆದ ಜುಲೈನಲ್ಲಿ ಪೂರ್ವ ಲಡಾಖನ್​ ಗಲ್ವಾನ್​ ಕಣಿವೆಯಲ್ಲಿ ಎರಡೂ ದೇಶಗಳ ಸೈನಿಕರು ಹೊಡೆದಾಡಿಕೊಂಡು, ಭಾರತದ 20 ಯೋಧರು ಪ್ರಾಣಬಿಟ್ಟಿದ್ದಾರೆ.

ಚೀನಾ ಕಮ್ಯೂನಿಸ್ಟ್​ ಪಕ್ಷದ ಶತಮಾನೋತ್ಸವ ಕಾರ್ಯಕ್ರಮದಲ್ಲಿ ಪಾಲ್ಗೊಂಡ ಭಾರತದ ಎಡಪಕ್ಷಗಳ ನಾಯಕರು..!
ಚೀನಾ ರಾಯಭಾರಿ ಕಚೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಪಾಲ್ಗೊಂಡ ನಾಯಕರು
TV9 Web
| Edited By: |

Updated on: Jul 29, 2021 | 3:49 PM

Share

ದೆಹಲಿ: ಚೀನಾ ಕಮ್ಯೂನಿಸ್ಟ್ ಪಕ್ಷದ ಶತಮಾನೋತ್ಸವ ಸ್ಮರಣಾರ್ಥ ಚೀನಾ ರಾಯಭಾರಿ ಕಚೇರಿಯಲ್ಲಿ ಬುಧವಾರ ಆಯೋಜಿಸಲಾಗಿದ್ದ ಕಾರ್ಯಕ್ರಮದಲ್ಲಿ ಸಿಪಿಐ(ಎಂ) ಪಕ್ಷದ ನಾಯಕ ಸೀತಾರಾಮ್​ ಯೆಚೂರಿ, ಸಿಪಿಐನ ಡಿ.ರಾಜಾ ಸೇರಿ ಬೇರೆ ಕೆಲವು ಎಡ ಪಕ್ಷಗಳ ನಾಯಕರು ಪಾಲ್ಗೊಂಡಿದ್ದರು. ಕಳೆದ ವರ್ಷ ಗಲ್ವಾನ್​ ಕಣಿವೆಯಲ್ಲಿ ಚೀನಾ ಸೈನಿಕರ ದಾಳಿಯಲ್ಲಿ ಭಾರತೀಯ ಯೋಧರು ಮೃತಪಟ್ಟ ನಂತರ, ಚೀನಾ ವಿರುದ್ಧ ವಾಗ್ದಾಳಿ ನಡೆಸಿದ್ದ ಎಡಪಕ್ಷಗಳ ನಾಯಕರೇ ಇಂದು, ಅಲ್ಲಿನ ಕಮ್ಯೂನಿಸ್ಟ್ ಪಕ್ಷದ ಶತಮಾನೋತ್ಸವ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದು ಅಚ್ಚರಿಗೆ ಕಾರಣವಾಗಿದೆ.

ಚೀನಾದ ಕಮ್ಯೂನಿಸ್ಟ್​ ಪಕ್ಷ ನಿರ್ಮಾಣಗೊಂಡು ನೂರು ವರ್ಷಗಳೇ ಕಳೆದಿವೆ. ಇದೇ ತಿಂಗಳ ಪ್ರಾರಂಭದಲ್ಲಿ, ಚೀನಾದ ಟಿಯಾನನ್ಮೆನ್ ಸ್ಕ್ವೇರ್​​ನಲ್ಲಿ​ ಅದ್ದೂರಿ ಸಮಾರಂಭ ನಡೆದಿತ್ತು. ಚೀನಾದ ಅಧ್ಯಕ್ಷ ಷಿ ಜಿನ್​ಪಿಂಗ್​ ಅಂದು ದೇಶವನ್ನುದ್ದೇಶಿಸಿ ಮಾತನಾಡಿದ್ದರು. ಯಾವುದೇ ವಿದೇಶೀ ಶಕ್ತಿಗಳೂ ಚೀನಾವನ್ನು ಏನೂ ಮಾಡಲು ಸಾಧ್ಯವಿಲ್ಲ ಎಂದಿದ್ದರು.

2020ರ ಮೇ ತಿಂಗಳಿಂದಲೂ ಭಾರತ-ಚೀನಾ ಸೇನೆಗಳ ನಡುವೆ ಒಂದಲ್ಲ ಒಂದು ಸಂಘರ್ಷ ನಡೆಯುತ್ತಲೇ ಇದೆ. ಅದರಲ್ಲೂ ಕಳೆದ ಜುಲೈನಲ್ಲಿ ಪೂರ್ವ ಲಡಾಖನ್​ ಗಲ್ವಾನ್​ ಕಣಿವೆಯಲ್ಲಿ ಎರಡೂ ದೇಶಗಳ ಸೈನಿಕರು ಹೊಡೆದಾಡಿಕೊಂಡು, ಭಾರತದ 20 ಯೋಧರು ಪ್ರಾಣಬಿಟ್ಟಿದ್ದಾರೆ. ಅದಾದ ಮೇಲೆ ಮಿಲಿಟರಿ ಹಂತದಲ್ಲಿ ಹಲವು ಸುತ್ತಿನ ಮಾತುಕತೆಗಳು ನಡೆದಿದ್ದರೂ, ಚೀನಾ ಎಲ್​ಎಸಿ ಬಳಿ ನಿರಂತರವಾಗಿ ತನ್ನ ಸೇನಾ ಕಾರ್ಯಚಟುವಟಿಕೆಗಳನ್ನು ನಡೆಸುತ್ತಿದೆ. ಚೀನಾ ಭಾರತದ ಮೇಲೆ ದಾಳಿ ಮಾಡಿದಾಗ ಕೇಂದ್ರ ಸರ್ಕಾರದ ವಿರುದ್ಧ ಮಾತನಾಡಿದ್ದ ಭಾರತದ ಎಡ ಪಕ್ಷಗಳೆಲ್ಲ ಈಗ ಚೀನಾಕ್ಕೆ ಸಂಬಂಧಪಟ್ಟ ಸಮಾರಂಭದಲ್ಲಿ ಪಾಲ್ಗೊಂಡಿದ್ದು ನಿಜಕ್ಕೂ ಅಚ್ಚರಿ ಮೂಡಿಸಿದೆ.

ಇದನ್ನೂ ಓದಿ: ಅಶ್ಲೀಲ ಸಿನಿಮಾ ದಂಧೆಗೆ ಹುಡುಗಿಯರನ್ನು ಹೇಗೆ ತಳ್ಳುತ್ತಿದ್ದರು? ಯುವತಿಯರನ್ನು ಬೆಚ್ಚಿ ಬೀಳಿಸುವ ವಿವರ ಇಲ್ಲಿದೆ

Left leaders attend Chinese Communist Party centenary event

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ