AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚೀನಾ ಕಮ್ಯೂನಿಸ್ಟ್​ ಪಕ್ಷದ ಶತಮಾನೋತ್ಸವ ಕಾರ್ಯಕ್ರಮದಲ್ಲಿ ಪಾಲ್ಗೊಂಡ ಭಾರತದ ಎಡಪಕ್ಷಗಳ ನಾಯಕರು..!

2020ರ ಮೇ ತಿಂಗಳಿಂದಲೂ ಭಾರತ-ಚೀನಾ ಸೇನೆಗಳ ನಡುವೆ ಒಂದಲ್ಲ ಒಂದು ಸಂಘರ್ಷ ನಡೆಯುತ್ತಲೇ ಇದೆ. ಅದರಲ್ಲೂ ಕಳೆದ ಜುಲೈನಲ್ಲಿ ಪೂರ್ವ ಲಡಾಖನ್​ ಗಲ್ವಾನ್​ ಕಣಿವೆಯಲ್ಲಿ ಎರಡೂ ದೇಶಗಳ ಸೈನಿಕರು ಹೊಡೆದಾಡಿಕೊಂಡು, ಭಾರತದ 20 ಯೋಧರು ಪ್ರಾಣಬಿಟ್ಟಿದ್ದಾರೆ.

ಚೀನಾ ಕಮ್ಯೂನಿಸ್ಟ್​ ಪಕ್ಷದ ಶತಮಾನೋತ್ಸವ ಕಾರ್ಯಕ್ರಮದಲ್ಲಿ ಪಾಲ್ಗೊಂಡ ಭಾರತದ ಎಡಪಕ್ಷಗಳ ನಾಯಕರು..!
ಚೀನಾ ರಾಯಭಾರಿ ಕಚೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಪಾಲ್ಗೊಂಡ ನಾಯಕರು
TV9 Web
| Edited By: |

Updated on: Jul 29, 2021 | 3:49 PM

Share

ದೆಹಲಿ: ಚೀನಾ ಕಮ್ಯೂನಿಸ್ಟ್ ಪಕ್ಷದ ಶತಮಾನೋತ್ಸವ ಸ್ಮರಣಾರ್ಥ ಚೀನಾ ರಾಯಭಾರಿ ಕಚೇರಿಯಲ್ಲಿ ಬುಧವಾರ ಆಯೋಜಿಸಲಾಗಿದ್ದ ಕಾರ್ಯಕ್ರಮದಲ್ಲಿ ಸಿಪಿಐ(ಎಂ) ಪಕ್ಷದ ನಾಯಕ ಸೀತಾರಾಮ್​ ಯೆಚೂರಿ, ಸಿಪಿಐನ ಡಿ.ರಾಜಾ ಸೇರಿ ಬೇರೆ ಕೆಲವು ಎಡ ಪಕ್ಷಗಳ ನಾಯಕರು ಪಾಲ್ಗೊಂಡಿದ್ದರು. ಕಳೆದ ವರ್ಷ ಗಲ್ವಾನ್​ ಕಣಿವೆಯಲ್ಲಿ ಚೀನಾ ಸೈನಿಕರ ದಾಳಿಯಲ್ಲಿ ಭಾರತೀಯ ಯೋಧರು ಮೃತಪಟ್ಟ ನಂತರ, ಚೀನಾ ವಿರುದ್ಧ ವಾಗ್ದಾಳಿ ನಡೆಸಿದ್ದ ಎಡಪಕ್ಷಗಳ ನಾಯಕರೇ ಇಂದು, ಅಲ್ಲಿನ ಕಮ್ಯೂನಿಸ್ಟ್ ಪಕ್ಷದ ಶತಮಾನೋತ್ಸವ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದು ಅಚ್ಚರಿಗೆ ಕಾರಣವಾಗಿದೆ.

ಚೀನಾದ ಕಮ್ಯೂನಿಸ್ಟ್​ ಪಕ್ಷ ನಿರ್ಮಾಣಗೊಂಡು ನೂರು ವರ್ಷಗಳೇ ಕಳೆದಿವೆ. ಇದೇ ತಿಂಗಳ ಪ್ರಾರಂಭದಲ್ಲಿ, ಚೀನಾದ ಟಿಯಾನನ್ಮೆನ್ ಸ್ಕ್ವೇರ್​​ನಲ್ಲಿ​ ಅದ್ದೂರಿ ಸಮಾರಂಭ ನಡೆದಿತ್ತು. ಚೀನಾದ ಅಧ್ಯಕ್ಷ ಷಿ ಜಿನ್​ಪಿಂಗ್​ ಅಂದು ದೇಶವನ್ನುದ್ದೇಶಿಸಿ ಮಾತನಾಡಿದ್ದರು. ಯಾವುದೇ ವಿದೇಶೀ ಶಕ್ತಿಗಳೂ ಚೀನಾವನ್ನು ಏನೂ ಮಾಡಲು ಸಾಧ್ಯವಿಲ್ಲ ಎಂದಿದ್ದರು.

2020ರ ಮೇ ತಿಂಗಳಿಂದಲೂ ಭಾರತ-ಚೀನಾ ಸೇನೆಗಳ ನಡುವೆ ಒಂದಲ್ಲ ಒಂದು ಸಂಘರ್ಷ ನಡೆಯುತ್ತಲೇ ಇದೆ. ಅದರಲ್ಲೂ ಕಳೆದ ಜುಲೈನಲ್ಲಿ ಪೂರ್ವ ಲಡಾಖನ್​ ಗಲ್ವಾನ್​ ಕಣಿವೆಯಲ್ಲಿ ಎರಡೂ ದೇಶಗಳ ಸೈನಿಕರು ಹೊಡೆದಾಡಿಕೊಂಡು, ಭಾರತದ 20 ಯೋಧರು ಪ್ರಾಣಬಿಟ್ಟಿದ್ದಾರೆ. ಅದಾದ ಮೇಲೆ ಮಿಲಿಟರಿ ಹಂತದಲ್ಲಿ ಹಲವು ಸುತ್ತಿನ ಮಾತುಕತೆಗಳು ನಡೆದಿದ್ದರೂ, ಚೀನಾ ಎಲ್​ಎಸಿ ಬಳಿ ನಿರಂತರವಾಗಿ ತನ್ನ ಸೇನಾ ಕಾರ್ಯಚಟುವಟಿಕೆಗಳನ್ನು ನಡೆಸುತ್ತಿದೆ. ಚೀನಾ ಭಾರತದ ಮೇಲೆ ದಾಳಿ ಮಾಡಿದಾಗ ಕೇಂದ್ರ ಸರ್ಕಾರದ ವಿರುದ್ಧ ಮಾತನಾಡಿದ್ದ ಭಾರತದ ಎಡ ಪಕ್ಷಗಳೆಲ್ಲ ಈಗ ಚೀನಾಕ್ಕೆ ಸಂಬಂಧಪಟ್ಟ ಸಮಾರಂಭದಲ್ಲಿ ಪಾಲ್ಗೊಂಡಿದ್ದು ನಿಜಕ್ಕೂ ಅಚ್ಚರಿ ಮೂಡಿಸಿದೆ.

ಇದನ್ನೂ ಓದಿ: ಅಶ್ಲೀಲ ಸಿನಿಮಾ ದಂಧೆಗೆ ಹುಡುಗಿಯರನ್ನು ಹೇಗೆ ತಳ್ಳುತ್ತಿದ್ದರು? ಯುವತಿಯರನ್ನು ಬೆಚ್ಚಿ ಬೀಳಿಸುವ ವಿವರ ಇಲ್ಲಿದೆ

Left leaders attend Chinese Communist Party centenary event

Follow Us
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ