AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಿಎಎ ವಿರೋಧಿಸಿ ಹೊಸ ವರ್ಷದಿಂದ ಮತ್ತೊಂದು ಸುತ್ತಿನ ಹೋರಾಟ

ದೆಹಲಿ: ದೇಶದಲ್ಲಿ ಎನ್ಆರ್​ಸಿ, ಸಿಎಎ ವಿರೋಧಿ ಪ್ರತಿಭಟನೆಗಳು ಸದ್ಯಕ್ಕೆ ಮುಗಿಯುವ ಲಕ್ಷಣಗಳು ಕಾಣುತ್ತಿಲ್ಲ. ಕೇಂದ್ರ ಸರ್ಕಾರದ ವಿರುದ್ಧ ಮತ್ತೊಂದು ಹಂತದ ಹೋರಾಟಕ್ಕೆ ಎಡಪಕ್ಷಗಳು ಸಿದ್ಧತೆ ನಡೆಸಿವೆ. ಹೊಸ ವರ್ಷದಿಂದ ಮತ್ತೊಮ್ಮೆ ಪ್ರತಿಭಟನೆಗಳು ಆರಂಭವಾಗಲಿವೆ. ನಡುರೋಡಲ್ಲೇ ಹಿಂಸಾಚಾರ. ಕಂಡಲ್ಲೇ ಕಲ್ಲೇಟು. ಬಸ್​, ರೈಲು ಧಗಧಗ. ರೈಲು ನಿಲ್ದಾಣವೂ ಧ್ವಂಸ. ಪೌರತ್ವ ಕಾಯ್ದೆ ಮತ್ತು ಎನ್​ಆರ್​ಸಿ ಕಿಚ್ಚಿಗೆ ಇಡೀ ದೇಶದ ಹೊತ್ತಿ ಉರಿದು ಬಿಡ್ತು. ಪ್ರತಿಭಟನೆ ಜ್ವಾಲೆ ದಶದಿಕ್ಕಿನಲ್ಲೂ ಧಗಧಗಿಸಿ ತಣ್ಣಗಾಯ್ತು ಅನ್ನೋವಷ್ಟರಲ್ಲೇ ಮತ್ತೆ ಹೋರಾಟ ಭುಗಿಲೇಳೋ ಸಾಧ್ಯತೆ ಇದೆ. […]

ಸಿಎಎ ವಿರೋಧಿಸಿ ಹೊಸ ವರ್ಷದಿಂದ ಮತ್ತೊಂದು ಸುತ್ತಿನ ಹೋರಾಟ
ಸಾಧು ಶ್ರೀನಾಥ್​
|

Updated on: Dec 27, 2019 | 7:51 AM

Share

ದೆಹಲಿ: ದೇಶದಲ್ಲಿ ಎನ್ಆರ್​ಸಿ, ಸಿಎಎ ವಿರೋಧಿ ಪ್ರತಿಭಟನೆಗಳು ಸದ್ಯಕ್ಕೆ ಮುಗಿಯುವ ಲಕ್ಷಣಗಳು ಕಾಣುತ್ತಿಲ್ಲ. ಕೇಂದ್ರ ಸರ್ಕಾರದ ವಿರುದ್ಧ ಮತ್ತೊಂದು ಹಂತದ ಹೋರಾಟಕ್ಕೆ ಎಡಪಕ್ಷಗಳು ಸಿದ್ಧತೆ ನಡೆಸಿವೆ. ಹೊಸ ವರ್ಷದಿಂದ ಮತ್ತೊಮ್ಮೆ ಪ್ರತಿಭಟನೆಗಳು ಆರಂಭವಾಗಲಿವೆ.

ನಡುರೋಡಲ್ಲೇ ಹಿಂಸಾಚಾರ. ಕಂಡಲ್ಲೇ ಕಲ್ಲೇಟು. ಬಸ್​, ರೈಲು ಧಗಧಗ. ರೈಲು ನಿಲ್ದಾಣವೂ ಧ್ವಂಸ. ಪೌರತ್ವ ಕಾಯ್ದೆ ಮತ್ತು ಎನ್​ಆರ್​ಸಿ ಕಿಚ್ಚಿಗೆ ಇಡೀ ದೇಶದ ಹೊತ್ತಿ ಉರಿದು ಬಿಡ್ತು. ಪ್ರತಿಭಟನೆ ಜ್ವಾಲೆ ದಶದಿಕ್ಕಿನಲ್ಲೂ ಧಗಧಗಿಸಿ ತಣ್ಣಗಾಯ್ತು ಅನ್ನೋವಷ್ಟರಲ್ಲೇ ಮತ್ತೆ ಹೋರಾಟ ಭುಗಿಲೇಳೋ ಸಾಧ್ಯತೆ ಇದೆ.

ಹೊಸ ವರ್ಷದಿಂದ ಮತ್ತೊಂದು ಸುತ್ತಿನ ಹೋರಾಟ..! ದೇಶಾದ್ಯಂತ ಪ್ರತಿಭಟನೆಗಳು ತಣ್ಣಗಾಗುವ ಲಕ್ಷಣಗಳು ಕಾಣುತ್ತಿಲ್ಲ. ಪಶ್ಚಿಮ ಬಂಗಾಳ, ಉತ್ತರಪ್ರದೇಶ, ಈಶಾನ್ಯ ರಾಜ್ಯಗಳಲ್ಲಿ ಪ್ರತಿದಿನ ಪ್ರತಿಭಟನೆಗಳು ನಡೆಯುತ್ತಲೇ ಇವೆ. ಹಿಂಸಾಚಾರ, ಗಲಭೆ ಕಡಿಮೆಯಾಗಿರಬಹುದು. ಆದ್ರೆ ಸಂಘಟಿತ ಪ್ರತಿಭಟನೆಗಳು ಪ್ರತಿದಿನ ಮುಂದುವರಿಯುತ್ತಲೇ ಇವೆ.

ಇದ್ರ ಬೆನ್ನಲ್ಲೇ ಈ ಪ್ರತಿಭಟನೆಯನ್ನ ಮತ್ತೊಂದು ಹಂತಕ್ಕೆ ಕೊಂಡೊಯ್ಯಲು ಎಡಪಕ್ಷಗಳು ನಿರ್ಧರಿಸಿವೆ. ಹೊಸ ವರ್ಷದ ಆರಂಭದ ದಿನದಿಂದ 8 ದಿನಗಳ ಕಾಲ ದೇಶಾದ್ಯಂತ ಸರಣಿ ಪ್ರತಿಭಟನೆಗಳನ್ನು ನಡೆಸಲು ಪ್ಲ್ಯಾನ್ ಮಾಡಿವೆ. ಜನವರಿ 1 ರಿಂದ 8ರ ವರೆಗೂ ದೇಶದ ಪ್ರಮುಖ ನಗರಗಳಲ್ಲಿ ಕೇಂದ್ರ ಸರ್ಕಾರದ ಜನವಿರೋಧಿ ನೀತಿಗಳ ವಿರುದ್ಧ ಜನಾಂದೋಲಕ್ಕೆ ಕರೆ ನೀಡಿವೆ.

‘ಹೊಸ’ ಹೋರಾಟ..! ಈ ಬಾರಿ ಪ್ರತಿಭಟನೆಯಲ್ಲಿ ಪೌರತ್ವ ತಿದ್ದುಪಡಿ ಕಾಯ್ದೆ, ಎನ್​ಆರ್​ಸಿ ಬಗ್ಗೆ ಮಾತ್ರ ಧ್ವನಿ ಎತ್ತುತ್ತಿಲ್ಲ. ಒಟ್ಟಾರೆ ದೇಶದ ಸಮಸ್ಯೆಗಳ ಬಗ್ಗೆ ಹೋರಾಟ ನಡೆಯಲಿವೆ. ಆರ್ಥಿಕ ಹಿಂಜರಿತ, ಉದ್ಯೋಗ ನಷ್ಟ ಮತ್ತು ನಿರುದ್ಯೋಗ, ಕೃಷಿ ವಲಯದಲ್ಲಾಗುತ್ತಿರುವ ಹಿನ್ನಡೆ ಮತ್ತು ಸಮಸ್ಯೆಗಳ ಬಗ್ಗೆ ಕೇಂದ್ರ ಸರ್ಕಾರವನ್ನು ಎಚ್ಚರಿಸುವ ಜನಾಂದೋಲನವಾಗಿರಲಿದೆ ಅಂತಾ ಎಡಪಕ್ಷಗಳ ನಾಯಕರು ಹೇಳಿದ್ದಾರೆ.

ಈಗಾಗ್ಲೇ ಪೌರತ್ವ ತಿದ್ದುಪಡಿ ಕಾಯ್ದೆ ವಿರುದ್ಧದ ಹೋರಾಟಕ್ಕೆ ಮೋದಿ ಸರ್ಕಾರ ನಡುಗಿ ಹೋಗಿದೆ. ಎನ್​ಆರ್ ಸಿ ಜಾರಿ ಮಾಡಲ್ಲ.. ಸರ್ಕಾರದ ವಿಷಯ ಎನ್​ಆರ್​ಸಿ ಜಾರಿ ಅಲ್ಲವೇ ಅಲ್ಲ ಎಂದಿದೆ. ಆದ್ರೂ ವಿರೋಧಪಕ್ಷಗಳಿಗೆ ಮೋದಿ ಸರ್ಕಾರದ ವಿರುದ್ಧ ನಂಬಿಕೆ ಬಂದಿರುವಂತೆ ಕಾಣ್ತಿಲ್ಲ. ಹೀಗಾಗಿ, ಮತ್ತೊಂದು ಸುತ್ತಿನ ಹೋರಾಟ ನಡೆಸಲು ನಿರ್ಧರಿಸಿದ್ದಾರೆ.

ಅಕ್ರಮ ಗಣಿಗಾರಿಕೆ ನಿಲ್ಲಿಸದ್ದಕ್ಕೆ ರಣಚಂಡಿಯಾದ ಮಹಿಳಾ ಅಧಿಕಾರಿ
ಅಕ್ರಮ ಗಣಿಗಾರಿಕೆ ನಿಲ್ಲಿಸದ್ದಕ್ಕೆ ರಣಚಂಡಿಯಾದ ಮಹಿಳಾ ಅಧಿಕಾರಿ
ಅಕ್ರಮ ಸಂಬಂಧ ಬಯಲಿಗೆಳೆದಿದ್ದಕ್ಕೆ, ಮಾವನಿಗೆ ಬೆಂಕಿ ಹಚ್ಚಿದ ಸೊಸೆ
ಅಕ್ರಮ ಸಂಬಂಧ ಬಯಲಿಗೆಳೆದಿದ್ದಕ್ಕೆ, ಮಾವನಿಗೆ ಬೆಂಕಿ ಹಚ್ಚಿದ ಸೊಸೆ
‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು