AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಎಐಸಿಸಿ ಅಧ್ಯಕ್ಷ ಖರ್ಗೆಗೆ ಕೋರ್ಟ್​ನಿಂದ ಜಾಮೀನು ಸಹಿತ ವಾರಂಟ್: ಸೆ. 19ರಂದು ವಿಚಾರಣೆಗೆ ಹಾಜರಾಗುವಂತೆ ಸೂಚನೆ

ಬಜರಂಗ ದಳ ಮಾನಹಾನಿ ಪ್ರಕರಣಕ್ಕೆ ಸಂಬಂಧಿಸಿದಂತೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ವಿರುದ್ಧ ಪಂಜಾಬ್‌ನ ಸಂಗ್ರೂರ್ ನ್ಯಾಯಾಲಯ ಜಾಮೀನು ಸಹಿತ ವಾರಂಟ್ ಹೊರಡಿಸಿದ್ದು, ಸೆಪ್ಟೆಂಬರ್ 19 ರಂದು ಹಾಜರಾಗಲು ಸೂಚಿಸಿದೆ. ಕರ್ನಾಟಕ ಚುನಾವಣೆಯ ಸಂದರ್ಭದಲ್ಲಿ ಕಾಂಗ್ರೆಸ್ ತನ್ನ ಪ್ರಣಾಳಿಕೆಯಲ್ಲಿ ಬಜರಂಗ ದಳವನ್ನು ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ (PFI) ಸೇರಿದಂತೆ ಇತರ ಸಂಘಟನೆಗಳೊಂದಿಗೆ ಹೋಲಿಕೆ ಮಾಡಿತ್ತು. ಇದರಿಂದ ಬಜರಂಗ ದಳದ ಘನತೆ ಮತ್ತು ಪ್ರತಿಷ್ಠೆಗೆ ಧಕ್ಕೆಯಾಗಿದೆ ಎಂದು ದೂರುದಾರರು ಆರೋಪಿಸಿದ್ದರು.

ಎಐಸಿಸಿ ಅಧ್ಯಕ್ಷ ಖರ್ಗೆಗೆ ಕೋರ್ಟ್​ನಿಂದ ಜಾಮೀನು ಸಹಿತ ವಾರಂಟ್: ಸೆ. 19ರಂದು ವಿಚಾರಣೆಗೆ ಹಾಜರಾಗುವಂತೆ ಸೂಚನೆ
ಮಲ್ಲಿಕಾರ್ಜುನ ಖರ್ಗೆImage Credit source: PTI
ಪ್ರಸನ್ನ ಹೆಗಡೆ
|

Updated on:Jul 29, 2026 | 7:02 PM

Share

ಮುಖ್ಯಾಂಶಗಳು

  • ಮಲ್ಲಿಕಾರ್ಜುನ ಖರ್ಗೆಗೆ ಜಾಮೀನು ಸಹಿತ ವಾರಂಟ್
  • ಪಂಜಾಬ್‌ನ ಸಂಗ್ರೂರ್ ನ್ಯಾಯಾಲಯದಿಂದ ಆದೇಶ
  • ಸೆ. 19ರಂದು ಕೋರ್ಟ್​​ಗೆ ಹಾಜರಾಗುವಂತೆ ಸೂಚನೆ

ಸಂಗ್ರೂರ್, ಜುಲೈ 29: ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ವಿರುದ್ಧ ಪಂಜಾಬ್‌ನ ಸಂಗ್ರೂರ್ ನ್ಯಾಯಾಲಯ ಜಾಮೀನು ಸಹಿತ ವಾರಂಟ್ ಹೊರಡಿಸಿದೆ. 2026ರ ಸೆಪ್ಟೆಂಬರ್ 19ರಂದು ನ್ಯಾಯಾಲಯಕ್ಕೆ ಖುದ್ದಾಗಿ ಹಾಜರಾಗಿ ಜಾಮೀನು ಪಡೆಯುವಂತೆ ಖರ್ಗೆಗೆ ಸೂಚನೆ ನೀಡಲಾಗಿದೆ. ಸಂಗ್ರೂರ್ ನಿವಾಸಿ ಹಾಗೂ ಬಜರಂಗ ದಳದ ಕಾರ್ಯಕರ್ತ ಹಿತೇಶ್ ಭಾರ್ದ್ವಾಜ್ 2023ರಲ್ಲಿ ದಾಖಲಿಸಿದ್ದ ಮಾನಹಾನಿ ದೂರಿನ ಆಧಾರದ ಮೇಲೆ ನ್ಯಾಯಾಲಯ ಈ ಕ್ರಮ ಕೈಗೊಂಡಿದೆ. ಕರ್ನಾಟಕ ವಿಧಾನಸಭೆ ಚುನಾವಣೆಯ ವೇಳೆ ಮಲ್ಲಿಕಾರ್ಜುನ ಖರ್ಗೆ ನೀಡಿದ್ದ ಹೇಳಿಕೆಯನ್ನು ಪ್ರಶ್ನಿಸಿ ಈ ದೂರು ಸಲ್ಲಿಸಲಾಗಿತ್ತು.

ಪ್ರಕರಣ ಏನು?

ದೂರುದಾರ ಹಿತೇಶ್ ಭಾರ್ದ್ವಾಜ್ ಅವರ ಆರೋಪದ ಪ್ರಕಾರ, ಕರ್ನಾಟಕ ಚುನಾವಣೆಯ ಸಂದರ್ಭದಲ್ಲಿ ಕಾಂಗ್ರೆಸ್ ತನ್ನ ಪ್ರಣಾಳಿಕೆಯಲ್ಲಿ ಬಜರಂಗ ದಳವನ್ನು ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ (PFI) ಸೇರಿದಂತೆ ಇತರ ಸಂಘಟನೆಗಳೊಂದಿಗೆ ಹೋಲಿಕೆ ಮಾಡಿತ್ತು. ಇದರಿಂದ ಬಜರಂಗ ದಳದ ಘನತೆ ಮತ್ತು ಪ್ರತಿಷ್ಠೆಗೆ ಧಕ್ಕೆಯಾಗಿದೆ ಎಂದು ಅವರು ಆರೋಪಿಸಿದ್ದರು. ಅಕ್ರಮ ಸಂಘಟನೆಗಳೊಂದಿಗೆ ಬಜರಂಗ ದಳವನ್ನು ಸಂಪರ್ಕಿಸಿರುವುದರಿಂದ ಅದರ ಸದಸ್ಯರು ಮತ್ತು ಬೆಂಬಲಿಗರ ಮಾನಹಾನಿಯಾಗಿದೆ ಎಂದು ಭಾರ್ದ್ವಾಜ್ ವಾದಿಸಿದ್ದರು. ಈ ಹಿನ್ನೆಲೆಯಲ್ಲಿ 100 ಕೋಟಿ ಮಾನಹಾನಿ ಪರಿಹಾರ ಹಾಗೂ 10 ಲಕ್ಷ ಕಾನೂನು ವೆಚ್ಚ ನೀಡುವಂತೆ ಅವರು ನ್ಯಾಯಾಲಯಕ್ಕೆ ಮನವಿ ಮಾಡಿದ್ದರು.

ಇದನ್ನೂ ಓದಿ: ವಿದ್ಯಾರ್ಥಿ ಚಳವಳಿಯಲ್ಲಿದ್ದ ಮೇಲೆ ಬಂಧನ ಎದುರಿಸಲು ಸಿದ್ಧರಿರಬೇಕು: ಪ್ರತಿಭಟನಾಕಾರರ ಮೇಲಿನ ಪೊಲೀಸ್ ಕ್ರಮ ಸಮರ್ಥಿಸಿಕೊಂಡ ಜೆಪಿ ನಡ್ಡಾ

ಕಾಂಗ್ರೆಸ್ ಪ್ರಣಾಳಿಕೆ ವಿವಾದ

ಕರ್ನಾಟಕ ವಿಧಾನಸಭೆ ಚುನಾವಣೆಗೆ ಮುನ್ನ ಕಾಂಗ್ರೆಸ್ ತನ್ನ ಚುನಾವಣಾ ಪ್ರಣಾಳಿಕೆಯಲ್ಲಿ ಅಧಿಕಾರಕ್ಕೆ ಬಂದರೆ ಬಜರಂಗ ದಳ, PFI ಹಾಗೂ ಇತರ ದ್ವೇಷ ಹರಡುವ ಸಂಘಟನೆಗಳ ವಿರುದ್ಧ ಕಾನೂನು ಪ್ರಕಾರ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಘೋಷಿಸಿತ್ತು. ಈ ಹೇಳಿಕೆ ದೇಶಾದ್ಯಂತ ತೀವ್ರ ರಾಜಕೀಯ ವಿವಾದಕ್ಕೆ ಕಾರಣವಾಗಿತ್ತು. ಬಳಿಕ ಹಿತೇಶ್ ಭಾರ್ದ್ವಾಜ್ ಖರ್ಗೆ ವಿರುದ್ಧ ಕಾನೂನು ಕ್ರಮಕ್ಕೆ ಒತ್ತಾಯಿಸಿ ದೂರು ದಾಖಲಿಸಿದ್ದರು.

ಮುಂದಿನ ವಿಚಾರಣೆಗೆ ಹಾಜರಾಗುವಂತೆ ಸೂಚನೆ

ಈ ಹಿಂದೆ ನ್ಯಾಯಾಲಯವು ಪ್ರಕರಣವನ್ನು ನಾಗರಿಕ (ಸಿವಿಲ್) ಸ್ವರೂಪದ್ದೆಂದು ಪರಿಗಣಿಸಿತ್ತು. ಆದರೆ ಈಗ ಇದನ್ನು ಕ್ರಿಮಿನಲ್ ಪ್ರಕರಣವಾಗಿ ಪರಿಗಣಿಸಿ ವಿಚಾರಣೆ ನಡೆಸುತ್ತಿದೆ. ಸೆಪ್ಟೆಂಬರ್ 19ರಂದು ಮಲ್ಲಿಕಾರ್ಜುನ ಖರ್ಗೆ ನ್ಯಾಯಾಲಯಕ್ಕೆ ಹಾಜರಾಗದಿದ್ದರೆ, ಅವರ ವಿರುದ್ಧ ಜಾಮೀನುರಹಿತ ವಾರಂಟ್ (NBW) ಹೊರಡಿಸುವ ಸಾಧ್ಯತೆ ಇದೆ ಎಂದು ತಿಳಿಸಲಾಗಿದೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Published On - 2:54 pm, Wed, 29 July 26

Follow Us
‘ಪವಿತ್ರಾಗೌಡ ಮೆಂಟಲಿ ಡಿಸ್ಟರ್ಬ್ ಆಗಿದ್ದಾರೆ’ ಎಂದ ನಾಗಲಕ್ಷ್ಮೀ ಚೌಧರಿ
‘ಪವಿತ್ರಾಗೌಡ ಮೆಂಟಲಿ ಡಿಸ್ಟರ್ಬ್ ಆಗಿದ್ದಾರೆ’ ಎಂದ ನಾಗಲಕ್ಷ್ಮೀ ಚೌಧರಿ
ದರ್ಶನ್ ಭೇಟಿ ಬಳಿಕ ಮನಸ್ತಾಪದ ಬಗ್ಗೆ ಪ್ರತಿಕ್ರಿಯೆ ನೀಡಿದ ಧನ್ವೀರ್ ಗೌಡ
ದರ್ಶನ್ ಭೇಟಿ ಬಳಿಕ ಮನಸ್ತಾಪದ ಬಗ್ಗೆ ಪ್ರತಿಕ್ರಿಯೆ ನೀಡಿದ ಧನ್ವೀರ್ ಗೌಡ
ದರ್ಶನ್ ನೋಡಲು ಒಟ್ಟಿಗೆ ಜೈಲಿಗೆ ಬಂದ ಮೀನಾ, ಧನ್ವೀರ್ ಗೌಡ, ವಿಜಯಲಕ್ಷ್ಮಿ
ದರ್ಶನ್ ನೋಡಲು ಒಟ್ಟಿಗೆ ಜೈಲಿಗೆ ಬಂದ ಮೀನಾ, ಧನ್ವೀರ್ ಗೌಡ, ವಿಜಯಲಕ್ಷ್ಮಿ
ಯಾವುದೇ ಕೈದಿಗೆ ಜೈಲಲ್ಲಿ ವಿಐಪಿ ಸೌಲಭ್ಯ ಕೊಡಲ್ಲ: ಗೃಹ ಸಚಿವ
ಯಾವುದೇ ಕೈದಿಗೆ ಜೈಲಲ್ಲಿ ವಿಐಪಿ ಸೌಲಭ್ಯ ಕೊಡಲ್ಲ: ಗೃಹ ಸಚಿವ
ತುಮಕೂರು KSRTC ಬಸ್ ನಿಲ್ದಾಣದಲ್ಲಿ ರೊಚ್ಚಿಗೆದ್ದ ವಿದ್ಯಾರ್ಥಿಗಳು
ತುಮಕೂರು KSRTC ಬಸ್ ನಿಲ್ದಾಣದಲ್ಲಿ ರೊಚ್ಚಿಗೆದ್ದ ವಿದ್ಯಾರ್ಥಿಗಳು
‘ಓಣಂ’ ಸಡಗರ: ಕೇರಳಂ ಸಂಸ್ಕೃತಿ ಅನಾವರಣಗೊಳಿಸಿದ ವಿದ್ಯಾರ್ಥಿಗಳು
‘ಓಣಂ’ ಸಡಗರ: ಕೇರಳಂ ಸಂಸ್ಕೃತಿ ಅನಾವರಣಗೊಳಿಸಿದ ವಿದ್ಯಾರ್ಥಿಗಳು
ಹನೂರು ಪ್ರಕರಣ: ಅಜ್ಞಾತ ಸ್ಥಳದಿಂದ ವಿಡಿಯೋ ರಿಲೀಸ್​ ಮಾಡಿದ ಮಹಿಮದಾಸ್
ಹನೂರು ಪ್ರಕರಣ: ಅಜ್ಞಾತ ಸ್ಥಳದಿಂದ ವಿಡಿಯೋ ರಿಲೀಸ್​ ಮಾಡಿದ ಮಹಿಮದಾಸ್
ಕಾರ್ಕಳದ ದುರ್ಗಾ ಫಾಲ್ಸ್‌ನಲ್ಲಿ ಸ್ಥಳೀಯರ ಸಾಹಸಮಯ ಕಾರ್ಯಾಚರಣೆ
ಕಾರ್ಕಳದ ದುರ್ಗಾ ಫಾಲ್ಸ್‌ನಲ್ಲಿ ಸ್ಥಳೀಯರ ಸಾಹಸಮಯ ಕಾರ್ಯಾಚರಣೆ
ಸ್ಕ್ಯಾನ್ ಮಾಡಿ, ದೂರು ನೀಡಿ; ಕಳಪೆ ಆಹಾರ, ನಕಲಿ ಔಷಧಿಗೆ ಬ್ರೇಕ್!
ಸ್ಕ್ಯಾನ್ ಮಾಡಿ, ದೂರು ನೀಡಿ; ಕಳಪೆ ಆಹಾರ, ನಕಲಿ ಔಷಧಿಗೆ ಬ್ರೇಕ್!
ಜೈಲಿನಲ್ಲಿ ಪವಿತ್ರಾ ಗೌಡಗೆ ವಿಪರೀತ ಜ್ವರ; ವಿಚಾರಣೆಗೆ ಗೈರು
ಜೈಲಿನಲ್ಲಿ ಪವಿತ್ರಾ ಗೌಡಗೆ ವಿಪರೀತ ಜ್ವರ; ವಿಚಾರಣೆಗೆ ಗೈರು