AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಏಕಾಏಕಿ ಚಿಂತಾಜನಕ ಸ್ಥಿತಿಗೆ ತಿರುಗಿದ ಎಸ್​​ಪಿಬಿ ಆರೋಗ್ಯ

ಕೊವಿಡ್-19 ಸೋಂಕಿಗೀಡಾಗಿ ಆಗಸ್ಟ 5 ನೇ ತಾರೀಖಿನಿಂದ ಚೆನೈನ ಖಾಸಗಿ ಆಸ್ಪತ್ರೆಯೊಂದರಲ್ಲಿ ಚಿಕಿತ್ಸೆ ಪಡೆಯುತ್ತಿರುವ ಲೆಜೆಂಡರಿ ಹಿನ್ನೆಲೆ ಗಾಯಕ ಎಸ್ ಪಿ ಬಾಲಸುಬ್ರಮಣ್ಯಂ ಅವರ ಆರೋಗ್ಯ ಕಳೆದ 24 ಗಂಟೆಗಳಲ್ಲಿ ಇದ್ದಕ್ಕಿದ್ದಂತೆ ತೀವ್ರ ಚಿಂತಾಜನಕವಾಗಿದೆಯೆಂದು ಅಸ್ಪತ್ರೆ ಇಂದು ಬಿಡುಗಡೆ ಮಾಡಿರುವ ಬುಲೆಟಿನ್​ನಲ್ಲಿ ಹೇಳಲಾಗಿದೆ. ಬುಲೆಟಿನ್ ಪ್ರಕಾರ ಎಸ್​ಪಿಬಿ ಅವರಿಗೆ ಇಸಿಎಮ್ಒ ಮತ್ತು ಇನ್ನಿತರ ಜೀವರಕ್ಷಕ ಸಾಧನಗಳ ಮೂಲಕ ಚಿಕಿತ್ಸೆ ಮುಂದುವರಿಸಲಾಗಿದೆ. ‘‘ಕಳೆದ 24 ಗಂಟೆಗಳಲ್ಲಿ ಅವರ ಆರೋಗ್ಯ ತೀವ್ರ ಚಿಂತಾಜನಕ ಸ್ಥಿತಿ ತಲುಪಿದ್ದರಿಂದ ಜೀವರಕ್ಷಕ ಸಾಧನಗಳನ್ನು ಹೆಚ್ಚಿಸಲಾಗಿದೆ. […]

ಏಕಾಏಕಿ ಚಿಂತಾಜನಕ ಸ್ಥಿತಿಗೆ ತಿರುಗಿದ ಎಸ್​​ಪಿಬಿ ಆರೋಗ್ಯ
ಅರುಣ್​ ಕುಮಾರ್​ ಬೆಳ್ಳಿ
| Edited By: |

Updated on:Sep 25, 2020 | 3:09 PM

Share

ಕೊವಿಡ್-19 ಸೋಂಕಿಗೀಡಾಗಿ ಆಗಸ್ಟ 5 ನೇ ತಾರೀಖಿನಿಂದ ಚೆನೈನ ಖಾಸಗಿ ಆಸ್ಪತ್ರೆಯೊಂದರಲ್ಲಿ ಚಿಕಿತ್ಸೆ ಪಡೆಯುತ್ತಿರುವ ಲೆಜೆಂಡರಿ ಹಿನ್ನೆಲೆ ಗಾಯಕ ಎಸ್ ಪಿ ಬಾಲಸುಬ್ರಮಣ್ಯಂ ಅವರ ಆರೋಗ್ಯ ಕಳೆದ 24 ಗಂಟೆಗಳಲ್ಲಿ ಇದ್ದಕ್ಕಿದ್ದಂತೆ ತೀವ್ರ ಚಿಂತಾಜನಕವಾಗಿದೆಯೆಂದು ಅಸ್ಪತ್ರೆ ಇಂದು ಬಿಡುಗಡೆ ಮಾಡಿರುವ ಬುಲೆಟಿನ್​ನಲ್ಲಿ ಹೇಳಲಾಗಿದೆ.

ಬುಲೆಟಿನ್ ಪ್ರಕಾರ ಎಸ್​ಪಿಬಿ ಅವರಿಗೆ ಇಸಿಎಮ್ಒ ಮತ್ತು ಇನ್ನಿತರ ಜೀವರಕ್ಷಕ ಸಾಧನಗಳ ಮೂಲಕ ಚಿಕಿತ್ಸೆ ಮುಂದುವರಿಸಲಾಗಿದೆ.

‘‘ಕಳೆದ 24 ಗಂಟೆಗಳಲ್ಲಿ ಅವರ ಆರೋಗ್ಯ ತೀವ್ರ ಚಿಂತಾಜನಕ ಸ್ಥಿತಿ ತಲುಪಿದ್ದರಿಂದ ಜೀವರಕ್ಷಕ ಸಾಧನಗಳನ್ನು ಹೆಚ್ಚಿಸಲಾಗಿದೆ. ಅವರ ಆರೋಗ್ಯ ಬಹಳ ಗಂಭೀರವಾಗಿದೆ. ಪರಿಣಿತ ವೈದ್ಯರ ತಂಡವೊಂದು ಅವರ ದೇಹಸ್ಥತಿಯನ್ನು ಸೂಕ್ಷ್ಮವಾಗಿ ಮಾನಿಟರ್ ಮಾಡುತ್ತಿದೆ,’’ ಎಂದು ಬುಲೆಟಿನ್​ನಲ್ಲಿ ಹೇಳಲಾಗಿದೆ.

ಕೊವಿಡ್-19 ಟೆಸ್ಟ್ ಪಾಸಿಟಿವ್ ರಿಪೋರ್ಟ್ ಬಂದ ನಂತರ ಆಸ್ಪತ್ರೆಗೆ ದಾಖಲಾದ ಅವರು ಇತ್ತೀಚಿಗೆ ಚೇತರಿಸಿಕೊಂಡಿದ್ದರು. ಅವರ ಮಗ ಎಸ್ ಪಿ ಚರಣ್ ಹೇಳಿದ ಹಾಗೆ, ಬೆಡ್ ಮಲಗಿದ್ದುಕೊಂಡೇ ಅವರು ತಮ್ಮ ಟ್ಯಾಬ್ಲೆಟ್ ಕಂಪ್ಯೂಟರ್​ನಲ್ಲಿ ಟೆನಿಸ್ ಮತ್ತು ಕ್ರಿಕೆಟ್ ಪಂದ್ಯಗಳನ್ನು ವೀಕ್ಷಿಸುತ್ತಿದ್ದರಂತೆ. ಇಂಡಿಯನ್ ಪ್ರಿಮೀಯರ್ ಲೀಗ್ ಶುರುವಾಗುವುದನ್ನು ಬಹಳ ಕಾತರದಿಂದ ಎದುರು ನೋಡುತ್ತ್ತಿದ್ದರೆಂದು ಚರಣ್ ಹೇಳಿದ್ದರು.

ಅವರು ಚೇತರಿಸಿಕೊಂಡ ವಿಷಯ ಕೇಳಿ ಸಂತೋಷದಿಂದ ಕುಣಿದಾಡಿದ್ದ ಅವರ ಕೋಟ್ಯಾಂತರ ಅಭಿಮಾನಿಗಳು ಇವತ್ತಿನ ಬೆಳವಣಿಗೆ ಬಗ್ಗೆ ಕೇಳಿ ಆತಂಕಗೊಂಡಿದ್ದಾರೆ.

Published On - 8:57 pm, Thu, 24 September 20

Follow Us
ಅಗಲಿದ ಅಮ್ಮನಿಗೆ ವಿಕೆಟ್ ಅರ್ಪಿಸಿದ ಮುಖೇಶ್ ಚೌಧರಿ
ಅಗಲಿದ ಅಮ್ಮನಿಗೆ ವಿಕೆಟ್ ಅರ್ಪಿಸಿದ ಮುಖೇಶ್ ಚೌಧರಿ
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!