AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಏಕಾಏಕಿ ಚಿಂತಾಜನಕ ಸ್ಥಿತಿಗೆ ತಿರುಗಿದ ಎಸ್​​ಪಿಬಿ ಆರೋಗ್ಯ

ಕೊವಿಡ್-19 ಸೋಂಕಿಗೀಡಾಗಿ ಆಗಸ್ಟ 5 ನೇ ತಾರೀಖಿನಿಂದ ಚೆನೈನ ಖಾಸಗಿ ಆಸ್ಪತ್ರೆಯೊಂದರಲ್ಲಿ ಚಿಕಿತ್ಸೆ ಪಡೆಯುತ್ತಿರುವ ಲೆಜೆಂಡರಿ ಹಿನ್ನೆಲೆ ಗಾಯಕ ಎಸ್ ಪಿ ಬಾಲಸುಬ್ರಮಣ್ಯಂ ಅವರ ಆರೋಗ್ಯ ಕಳೆದ 24 ಗಂಟೆಗಳಲ್ಲಿ ಇದ್ದಕ್ಕಿದ್ದಂತೆ ತೀವ್ರ ಚಿಂತಾಜನಕವಾಗಿದೆಯೆಂದು ಅಸ್ಪತ್ರೆ ಇಂದು ಬಿಡುಗಡೆ ಮಾಡಿರುವ ಬುಲೆಟಿನ್​ನಲ್ಲಿ ಹೇಳಲಾಗಿದೆ. ಬುಲೆಟಿನ್ ಪ್ರಕಾರ ಎಸ್​ಪಿಬಿ ಅವರಿಗೆ ಇಸಿಎಮ್ಒ ಮತ್ತು ಇನ್ನಿತರ ಜೀವರಕ್ಷಕ ಸಾಧನಗಳ ಮೂಲಕ ಚಿಕಿತ್ಸೆ ಮುಂದುವರಿಸಲಾಗಿದೆ. ‘‘ಕಳೆದ 24 ಗಂಟೆಗಳಲ್ಲಿ ಅವರ ಆರೋಗ್ಯ ತೀವ್ರ ಚಿಂತಾಜನಕ ಸ್ಥಿತಿ ತಲುಪಿದ್ದರಿಂದ ಜೀವರಕ್ಷಕ ಸಾಧನಗಳನ್ನು ಹೆಚ್ಚಿಸಲಾಗಿದೆ. […]

ಏಕಾಏಕಿ ಚಿಂತಾಜನಕ ಸ್ಥಿತಿಗೆ ತಿರುಗಿದ ಎಸ್​​ಪಿಬಿ ಆರೋಗ್ಯ
ಅರುಣ್​ ಕುಮಾರ್​ ಬೆಳ್ಳಿ
ಅರುಣ್​ ಕುಮಾರ್​ ಬೆಳ್ಳಿ| Edited By: ಸಾಧು ಶ್ರೀನಾಥ್​|

Updated on:Sep 25, 2020 | 3:09 PM

Share

ಕೊವಿಡ್-19 ಸೋಂಕಿಗೀಡಾಗಿ ಆಗಸ್ಟ 5 ನೇ ತಾರೀಖಿನಿಂದ ಚೆನೈನ ಖಾಸಗಿ ಆಸ್ಪತ್ರೆಯೊಂದರಲ್ಲಿ ಚಿಕಿತ್ಸೆ ಪಡೆಯುತ್ತಿರುವ ಲೆಜೆಂಡರಿ ಹಿನ್ನೆಲೆ ಗಾಯಕ ಎಸ್ ಪಿ ಬಾಲಸುಬ್ರಮಣ್ಯಂ ಅವರ ಆರೋಗ್ಯ ಕಳೆದ 24 ಗಂಟೆಗಳಲ್ಲಿ ಇದ್ದಕ್ಕಿದ್ದಂತೆ ತೀವ್ರ ಚಿಂತಾಜನಕವಾಗಿದೆಯೆಂದು ಅಸ್ಪತ್ರೆ ಇಂದು ಬಿಡುಗಡೆ ಮಾಡಿರುವ ಬುಲೆಟಿನ್​ನಲ್ಲಿ ಹೇಳಲಾಗಿದೆ.

ಬುಲೆಟಿನ್ ಪ್ರಕಾರ ಎಸ್​ಪಿಬಿ ಅವರಿಗೆ ಇಸಿಎಮ್ಒ ಮತ್ತು ಇನ್ನಿತರ ಜೀವರಕ್ಷಕ ಸಾಧನಗಳ ಮೂಲಕ ಚಿಕಿತ್ಸೆ ಮುಂದುವರಿಸಲಾಗಿದೆ.

‘‘ಕಳೆದ 24 ಗಂಟೆಗಳಲ್ಲಿ ಅವರ ಆರೋಗ್ಯ ತೀವ್ರ ಚಿಂತಾಜನಕ ಸ್ಥಿತಿ ತಲುಪಿದ್ದರಿಂದ ಜೀವರಕ್ಷಕ ಸಾಧನಗಳನ್ನು ಹೆಚ್ಚಿಸಲಾಗಿದೆ. ಅವರ ಆರೋಗ್ಯ ಬಹಳ ಗಂಭೀರವಾಗಿದೆ. ಪರಿಣಿತ ವೈದ್ಯರ ತಂಡವೊಂದು ಅವರ ದೇಹಸ್ಥತಿಯನ್ನು ಸೂಕ್ಷ್ಮವಾಗಿ ಮಾನಿಟರ್ ಮಾಡುತ್ತಿದೆ,’’ ಎಂದು ಬುಲೆಟಿನ್​ನಲ್ಲಿ ಹೇಳಲಾಗಿದೆ.

ಕೊವಿಡ್-19 ಟೆಸ್ಟ್ ಪಾಸಿಟಿವ್ ರಿಪೋರ್ಟ್ ಬಂದ ನಂತರ ಆಸ್ಪತ್ರೆಗೆ ದಾಖಲಾದ ಅವರು ಇತ್ತೀಚಿಗೆ ಚೇತರಿಸಿಕೊಂಡಿದ್ದರು. ಅವರ ಮಗ ಎಸ್ ಪಿ ಚರಣ್ ಹೇಳಿದ ಹಾಗೆ, ಬೆಡ್ ಮಲಗಿದ್ದುಕೊಂಡೇ ಅವರು ತಮ್ಮ ಟ್ಯಾಬ್ಲೆಟ್ ಕಂಪ್ಯೂಟರ್​ನಲ್ಲಿ ಟೆನಿಸ್ ಮತ್ತು ಕ್ರಿಕೆಟ್ ಪಂದ್ಯಗಳನ್ನು ವೀಕ್ಷಿಸುತ್ತಿದ್ದರಂತೆ. ಇಂಡಿಯನ್ ಪ್ರಿಮೀಯರ್ ಲೀಗ್ ಶುರುವಾಗುವುದನ್ನು ಬಹಳ ಕಾತರದಿಂದ ಎದುರು ನೋಡುತ್ತ್ತಿದ್ದರೆಂದು ಚರಣ್ ಹೇಳಿದ್ದರು.

ಅವರು ಚೇತರಿಸಿಕೊಂಡ ವಿಷಯ ಕೇಳಿ ಸಂತೋಷದಿಂದ ಕುಣಿದಾಡಿದ್ದ ಅವರ ಕೋಟ್ಯಾಂತರ ಅಭಿಮಾನಿಗಳು ಇವತ್ತಿನ ಬೆಳವಣಿಗೆ ಬಗ್ಗೆ ಕೇಳಿ ಆತಂಕಗೊಂಡಿದ್ದಾರೆ.

Published On - 8:57 pm, Thu, 24 September 20

Follow Us
Arun Belly
Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.

ಡಿಕೆ ಶಿವಕುಮಾರ್ ಸಿಎಂ ಆಗುತ್ತಿದ್ದಂತೆಯೇ ಹಲವು ಅಧಿಕಾರಿಗಳಿಗೆ ಗೇಟ್ ಪಾಸ್
ಡಿಕೆ ಶಿವಕುಮಾರ್ ಸಿಎಂ ಆಗುತ್ತಿದ್ದಂತೆಯೇ ಹಲವು ಅಧಿಕಾರಿಗಳಿಗೆ ಗೇಟ್ ಪಾಸ್
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ