AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಏಕಾಏಕಿ ಚಿಂತಾಜನಕ ಸ್ಥಿತಿಗೆ ತಿರುಗಿದ ಎಸ್​​ಪಿಬಿ ಆರೋಗ್ಯ

ಕೊವಿಡ್-19 ಸೋಂಕಿಗೀಡಾಗಿ ಆಗಸ್ಟ 5 ನೇ ತಾರೀಖಿನಿಂದ ಚೆನೈನ ಖಾಸಗಿ ಆಸ್ಪತ್ರೆಯೊಂದರಲ್ಲಿ ಚಿಕಿತ್ಸೆ ಪಡೆಯುತ್ತಿರುವ ಲೆಜೆಂಡರಿ ಹಿನ್ನೆಲೆ ಗಾಯಕ ಎಸ್ ಪಿ ಬಾಲಸುಬ್ರಮಣ್ಯಂ ಅವರ ಆರೋಗ್ಯ ಕಳೆದ 24 ಗಂಟೆಗಳಲ್ಲಿ ಇದ್ದಕ್ಕಿದ್ದಂತೆ ತೀವ್ರ ಚಿಂತಾಜನಕವಾಗಿದೆಯೆಂದು ಅಸ್ಪತ್ರೆ ಇಂದು ಬಿಡುಗಡೆ ಮಾಡಿರುವ ಬುಲೆಟಿನ್​ನಲ್ಲಿ ಹೇಳಲಾಗಿದೆ. ಬುಲೆಟಿನ್ ಪ್ರಕಾರ ಎಸ್​ಪಿಬಿ ಅವರಿಗೆ ಇಸಿಎಮ್ಒ ಮತ್ತು ಇನ್ನಿತರ ಜೀವರಕ್ಷಕ ಸಾಧನಗಳ ಮೂಲಕ ಚಿಕಿತ್ಸೆ ಮುಂದುವರಿಸಲಾಗಿದೆ. ‘‘ಕಳೆದ 24 ಗಂಟೆಗಳಲ್ಲಿ ಅವರ ಆರೋಗ್ಯ ತೀವ್ರ ಚಿಂತಾಜನಕ ಸ್ಥಿತಿ ತಲುಪಿದ್ದರಿಂದ ಜೀವರಕ್ಷಕ ಸಾಧನಗಳನ್ನು ಹೆಚ್ಚಿಸಲಾಗಿದೆ. […]

ಏಕಾಏಕಿ ಚಿಂತಾಜನಕ ಸ್ಥಿತಿಗೆ ತಿರುಗಿದ ಎಸ್​​ಪಿಬಿ ಆರೋಗ್ಯ
ಅರುಣ್​ ಕುಮಾರ್​ ಬೆಳ್ಳಿ
| Edited By: |

Updated on:Sep 25, 2020 | 3:09 PM

Share

ಕೊವಿಡ್-19 ಸೋಂಕಿಗೀಡಾಗಿ ಆಗಸ್ಟ 5 ನೇ ತಾರೀಖಿನಿಂದ ಚೆನೈನ ಖಾಸಗಿ ಆಸ್ಪತ್ರೆಯೊಂದರಲ್ಲಿ ಚಿಕಿತ್ಸೆ ಪಡೆಯುತ್ತಿರುವ ಲೆಜೆಂಡರಿ ಹಿನ್ನೆಲೆ ಗಾಯಕ ಎಸ್ ಪಿ ಬಾಲಸುಬ್ರಮಣ್ಯಂ ಅವರ ಆರೋಗ್ಯ ಕಳೆದ 24 ಗಂಟೆಗಳಲ್ಲಿ ಇದ್ದಕ್ಕಿದ್ದಂತೆ ತೀವ್ರ ಚಿಂತಾಜನಕವಾಗಿದೆಯೆಂದು ಅಸ್ಪತ್ರೆ ಇಂದು ಬಿಡುಗಡೆ ಮಾಡಿರುವ ಬುಲೆಟಿನ್​ನಲ್ಲಿ ಹೇಳಲಾಗಿದೆ.

ಬುಲೆಟಿನ್ ಪ್ರಕಾರ ಎಸ್​ಪಿಬಿ ಅವರಿಗೆ ಇಸಿಎಮ್ಒ ಮತ್ತು ಇನ್ನಿತರ ಜೀವರಕ್ಷಕ ಸಾಧನಗಳ ಮೂಲಕ ಚಿಕಿತ್ಸೆ ಮುಂದುವರಿಸಲಾಗಿದೆ.

‘‘ಕಳೆದ 24 ಗಂಟೆಗಳಲ್ಲಿ ಅವರ ಆರೋಗ್ಯ ತೀವ್ರ ಚಿಂತಾಜನಕ ಸ್ಥಿತಿ ತಲುಪಿದ್ದರಿಂದ ಜೀವರಕ್ಷಕ ಸಾಧನಗಳನ್ನು ಹೆಚ್ಚಿಸಲಾಗಿದೆ. ಅವರ ಆರೋಗ್ಯ ಬಹಳ ಗಂಭೀರವಾಗಿದೆ. ಪರಿಣಿತ ವೈದ್ಯರ ತಂಡವೊಂದು ಅವರ ದೇಹಸ್ಥತಿಯನ್ನು ಸೂಕ್ಷ್ಮವಾಗಿ ಮಾನಿಟರ್ ಮಾಡುತ್ತಿದೆ,’’ ಎಂದು ಬುಲೆಟಿನ್​ನಲ್ಲಿ ಹೇಳಲಾಗಿದೆ.

ಕೊವಿಡ್-19 ಟೆಸ್ಟ್ ಪಾಸಿಟಿವ್ ರಿಪೋರ್ಟ್ ಬಂದ ನಂತರ ಆಸ್ಪತ್ರೆಗೆ ದಾಖಲಾದ ಅವರು ಇತ್ತೀಚಿಗೆ ಚೇತರಿಸಿಕೊಂಡಿದ್ದರು. ಅವರ ಮಗ ಎಸ್ ಪಿ ಚರಣ್ ಹೇಳಿದ ಹಾಗೆ, ಬೆಡ್ ಮಲಗಿದ್ದುಕೊಂಡೇ ಅವರು ತಮ್ಮ ಟ್ಯಾಬ್ಲೆಟ್ ಕಂಪ್ಯೂಟರ್​ನಲ್ಲಿ ಟೆನಿಸ್ ಮತ್ತು ಕ್ರಿಕೆಟ್ ಪಂದ್ಯಗಳನ್ನು ವೀಕ್ಷಿಸುತ್ತಿದ್ದರಂತೆ. ಇಂಡಿಯನ್ ಪ್ರಿಮೀಯರ್ ಲೀಗ್ ಶುರುವಾಗುವುದನ್ನು ಬಹಳ ಕಾತರದಿಂದ ಎದುರು ನೋಡುತ್ತ್ತಿದ್ದರೆಂದು ಚರಣ್ ಹೇಳಿದ್ದರು.

ಅವರು ಚೇತರಿಸಿಕೊಂಡ ವಿಷಯ ಕೇಳಿ ಸಂತೋಷದಿಂದ ಕುಣಿದಾಡಿದ್ದ ಅವರ ಕೋಟ್ಯಾಂತರ ಅಭಿಮಾನಿಗಳು ಇವತ್ತಿನ ಬೆಳವಣಿಗೆ ಬಗ್ಗೆ ಕೇಳಿ ಆತಂಕಗೊಂಡಿದ್ದಾರೆ.

Published On - 8:57 pm, Thu, 24 September 20

ಮೈಲಾರಿಗೆ 14 ನ್ಯಾಯಾಂಗ ಬಂಧನ: ಜೈಲಿಗೆ ಹೋಗುವ ಮುನ್ನ ಸಿಂಗರ್ ಹೇಳಿದ್ದೇನು?
ಮೈಲಾರಿಗೆ 14 ನ್ಯಾಯಾಂಗ ಬಂಧನ: ಜೈಲಿಗೆ ಹೋಗುವ ಮುನ್ನ ಸಿಂಗರ್ ಹೇಳಿದ್ದೇನು?
ಬಿಗ್ ಬಾಸ್: ಸುದೀಪ್ ನಿರೂಪಣೆ ಟೀಕಿಸಿದವರಿಗೆ ವಿನಯ್ ಗೌಡ ಖಡಕ್ ತಿರುಗೇಟು
ಬಿಗ್ ಬಾಸ್: ಸುದೀಪ್ ನಿರೂಪಣೆ ಟೀಕಿಸಿದವರಿಗೆ ವಿನಯ್ ಗೌಡ ಖಡಕ್ ತಿರುಗೇಟು
ಬೆಂಗಳೂರಿನಲ್ಲಿ ಐಪಿಎಲ್ ಉದ್ಘಾಟನಾ ಪಂದ್ಯ ನಡೆಸಲು ಬಿಸಿಸಿಐ ಗ್ರೀನ್ ಸಿಗ್ನಲ್
ಬೆಂಗಳೂರಿನಲ್ಲಿ ಐಪಿಎಲ್ ಉದ್ಘಾಟನಾ ಪಂದ್ಯ ನಡೆಸಲು ಬಿಸಿಸಿಐ ಗ್ರೀನ್ ಸಿಗ್ನಲ್
ತನ್ನ ಪತ್ನಿ ಜತೆ ಸಹೋದರ ಲವ್ವಿಡವ್ವಿ: ತಮ್ಮನನ್ನು ಕೊಂದ ಅಣ್ಣ,
ತನ್ನ ಪತ್ನಿ ಜತೆ ಸಹೋದರ ಲವ್ವಿಡವ್ವಿ: ತಮ್ಮನನ್ನು ಕೊಂದ ಅಣ್ಣ,
ಯಾರು ಗೆಲ್ಲಬಹುದು, ಯಾರು ಚೆನ್ನಾಗಿ ಆಡ್ತಿದ್ದಾರೆ: ವಿನಯ್ ಹೇಳಿದ್ದೇನು?
ಯಾರು ಗೆಲ್ಲಬಹುದು, ಯಾರು ಚೆನ್ನಾಗಿ ಆಡ್ತಿದ್ದಾರೆ: ವಿನಯ್ ಹೇಳಿದ್ದೇನು?
ಸಚಿವ ನಿತಿನ್ ಗಡ್ಕರಿ ಕಿವಿಯಲ್ಲಿ ಟಿಎಂಸಿ ಸಂಸದ ಗುಟ್ಟಾಗಿ ಹೇಳಿದ್ದೇನು?
ಸಚಿವ ನಿತಿನ್ ಗಡ್ಕರಿ ಕಿವಿಯಲ್ಲಿ ಟಿಎಂಸಿ ಸಂಸದ ಗುಟ್ಟಾಗಿ ಹೇಳಿದ್ದೇನು?
ತಮ್ಮದೇ ಕಾರಿನಲ್ಲಿ ಮೋದಿಯನ್ನು ಬೀಳ್ಕೊಟ್ಟ ಇಥಿಯೋಪಿಯನ್ ಪ್ರಧಾನಿ
ತಮ್ಮದೇ ಕಾರಿನಲ್ಲಿ ಮೋದಿಯನ್ನು ಬೀಳ್ಕೊಟ್ಟ ಇಥಿಯೋಪಿಯನ್ ಪ್ರಧಾನಿ
ತನ್ನ ಪ್ರಾಣವನ್ನೂ ಲೆಕ್ಕಿಸದೆ ಸೈಕಲ್​ನಿಂದ ಬಿದ್ದ ತಮ್ಮನನ್ನು ಕಾಪಾಡಿದ ಅಣ್ಣ
ತನ್ನ ಪ್ರಾಣವನ್ನೂ ಲೆಕ್ಕಿಸದೆ ಸೈಕಲ್​ನಿಂದ ಬಿದ್ದ ತಮ್ಮನನ್ನು ಕಾಪಾಡಿದ ಅಣ್ಣ
ಚೈತ್ರಾಗೆ ಕೀ ಕೊಟ್ಟ ಗಿಲ್ಲಿ: ನಕ್ಕು ಸುಸ್ತಾದ ರಜತ್-ರಘು
ಚೈತ್ರಾಗೆ ಕೀ ಕೊಟ್ಟ ಗಿಲ್ಲಿ: ನಕ್ಕು ಸುಸ್ತಾದ ರಜತ್-ರಘು
ಗೃಹಲಕ್ಷ್ಮಿ ಬಗ್ಗೆ ತಪ್ಪು ಮಾಹಿತಿ: ವಿಷಾದ ವ್ಯಕ್ತಪಡಿಸಿದ ಹೆಬ್ಬಾಳ್ಕರ್
ಗೃಹಲಕ್ಷ್ಮಿ ಬಗ್ಗೆ ತಪ್ಪು ಮಾಹಿತಿ: ವಿಷಾದ ವ್ಯಕ್ತಪಡಿಸಿದ ಹೆಬ್ಬಾಳ್ಕರ್