AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಏಕಾಏಕಿ ಚಿಂತಾಜನಕ ಸ್ಥಿತಿಗೆ ತಿರುಗಿದ ಎಸ್​​ಪಿಬಿ ಆರೋಗ್ಯ

ಕೊವಿಡ್-19 ಸೋಂಕಿಗೀಡಾಗಿ ಆಗಸ್ಟ 5 ನೇ ತಾರೀಖಿನಿಂದ ಚೆನೈನ ಖಾಸಗಿ ಆಸ್ಪತ್ರೆಯೊಂದರಲ್ಲಿ ಚಿಕಿತ್ಸೆ ಪಡೆಯುತ್ತಿರುವ ಲೆಜೆಂಡರಿ ಹಿನ್ನೆಲೆ ಗಾಯಕ ಎಸ್ ಪಿ ಬಾಲಸುಬ್ರಮಣ್ಯಂ ಅವರ ಆರೋಗ್ಯ ಕಳೆದ 24 ಗಂಟೆಗಳಲ್ಲಿ ಇದ್ದಕ್ಕಿದ್ದಂತೆ ತೀವ್ರ ಚಿಂತಾಜನಕವಾಗಿದೆಯೆಂದು ಅಸ್ಪತ್ರೆ ಇಂದು ಬಿಡುಗಡೆ ಮಾಡಿರುವ ಬುಲೆಟಿನ್​ನಲ್ಲಿ ಹೇಳಲಾಗಿದೆ. ಬುಲೆಟಿನ್ ಪ್ರಕಾರ ಎಸ್​ಪಿಬಿ ಅವರಿಗೆ ಇಸಿಎಮ್ಒ ಮತ್ತು ಇನ್ನಿತರ ಜೀವರಕ್ಷಕ ಸಾಧನಗಳ ಮೂಲಕ ಚಿಕಿತ್ಸೆ ಮುಂದುವರಿಸಲಾಗಿದೆ. ‘‘ಕಳೆದ 24 ಗಂಟೆಗಳಲ್ಲಿ ಅವರ ಆರೋಗ್ಯ ತೀವ್ರ ಚಿಂತಾಜನಕ ಸ್ಥಿತಿ ತಲುಪಿದ್ದರಿಂದ ಜೀವರಕ್ಷಕ ಸಾಧನಗಳನ್ನು ಹೆಚ್ಚಿಸಲಾಗಿದೆ. […]

ಏಕಾಏಕಿ ಚಿಂತಾಜನಕ ಸ್ಥಿತಿಗೆ ತಿರುಗಿದ ಎಸ್​​ಪಿಬಿ ಆರೋಗ್ಯ
ಅರುಣ್​ ಕುಮಾರ್​ ಬೆಳ್ಳಿ
| Edited By: |

Updated on:Sep 25, 2020 | 3:09 PM

Share

ಕೊವಿಡ್-19 ಸೋಂಕಿಗೀಡಾಗಿ ಆಗಸ್ಟ 5 ನೇ ತಾರೀಖಿನಿಂದ ಚೆನೈನ ಖಾಸಗಿ ಆಸ್ಪತ್ರೆಯೊಂದರಲ್ಲಿ ಚಿಕಿತ್ಸೆ ಪಡೆಯುತ್ತಿರುವ ಲೆಜೆಂಡರಿ ಹಿನ್ನೆಲೆ ಗಾಯಕ ಎಸ್ ಪಿ ಬಾಲಸುಬ್ರಮಣ್ಯಂ ಅವರ ಆರೋಗ್ಯ ಕಳೆದ 24 ಗಂಟೆಗಳಲ್ಲಿ ಇದ್ದಕ್ಕಿದ್ದಂತೆ ತೀವ್ರ ಚಿಂತಾಜನಕವಾಗಿದೆಯೆಂದು ಅಸ್ಪತ್ರೆ ಇಂದು ಬಿಡುಗಡೆ ಮಾಡಿರುವ ಬುಲೆಟಿನ್​ನಲ್ಲಿ ಹೇಳಲಾಗಿದೆ.

ಬುಲೆಟಿನ್ ಪ್ರಕಾರ ಎಸ್​ಪಿಬಿ ಅವರಿಗೆ ಇಸಿಎಮ್ಒ ಮತ್ತು ಇನ್ನಿತರ ಜೀವರಕ್ಷಕ ಸಾಧನಗಳ ಮೂಲಕ ಚಿಕಿತ್ಸೆ ಮುಂದುವರಿಸಲಾಗಿದೆ.

‘‘ಕಳೆದ 24 ಗಂಟೆಗಳಲ್ಲಿ ಅವರ ಆರೋಗ್ಯ ತೀವ್ರ ಚಿಂತಾಜನಕ ಸ್ಥಿತಿ ತಲುಪಿದ್ದರಿಂದ ಜೀವರಕ್ಷಕ ಸಾಧನಗಳನ್ನು ಹೆಚ್ಚಿಸಲಾಗಿದೆ. ಅವರ ಆರೋಗ್ಯ ಬಹಳ ಗಂಭೀರವಾಗಿದೆ. ಪರಿಣಿತ ವೈದ್ಯರ ತಂಡವೊಂದು ಅವರ ದೇಹಸ್ಥತಿಯನ್ನು ಸೂಕ್ಷ್ಮವಾಗಿ ಮಾನಿಟರ್ ಮಾಡುತ್ತಿದೆ,’’ ಎಂದು ಬುಲೆಟಿನ್​ನಲ್ಲಿ ಹೇಳಲಾಗಿದೆ.

ಕೊವಿಡ್-19 ಟೆಸ್ಟ್ ಪಾಸಿಟಿವ್ ರಿಪೋರ್ಟ್ ಬಂದ ನಂತರ ಆಸ್ಪತ್ರೆಗೆ ದಾಖಲಾದ ಅವರು ಇತ್ತೀಚಿಗೆ ಚೇತರಿಸಿಕೊಂಡಿದ್ದರು. ಅವರ ಮಗ ಎಸ್ ಪಿ ಚರಣ್ ಹೇಳಿದ ಹಾಗೆ, ಬೆಡ್ ಮಲಗಿದ್ದುಕೊಂಡೇ ಅವರು ತಮ್ಮ ಟ್ಯಾಬ್ಲೆಟ್ ಕಂಪ್ಯೂಟರ್​ನಲ್ಲಿ ಟೆನಿಸ್ ಮತ್ತು ಕ್ರಿಕೆಟ್ ಪಂದ್ಯಗಳನ್ನು ವೀಕ್ಷಿಸುತ್ತಿದ್ದರಂತೆ. ಇಂಡಿಯನ್ ಪ್ರಿಮೀಯರ್ ಲೀಗ್ ಶುರುವಾಗುವುದನ್ನು ಬಹಳ ಕಾತರದಿಂದ ಎದುರು ನೋಡುತ್ತ್ತಿದ್ದರೆಂದು ಚರಣ್ ಹೇಳಿದ್ದರು.

ಅವರು ಚೇತರಿಸಿಕೊಂಡ ವಿಷಯ ಕೇಳಿ ಸಂತೋಷದಿಂದ ಕುಣಿದಾಡಿದ್ದ ಅವರ ಕೋಟ್ಯಾಂತರ ಅಭಿಮಾನಿಗಳು ಇವತ್ತಿನ ಬೆಳವಣಿಗೆ ಬಗ್ಗೆ ಕೇಳಿ ಆತಂಕಗೊಂಡಿದ್ದಾರೆ.

Published On - 8:57 pm, Thu, 24 September 20

Follow Us
Arun Belly
Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.

Read More
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ