AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

2 ಹನಿ ಲಿಂಬೆ ರಸ ಮೂಗಿನಲ್ಲಿ ಹಾಕಿದರೆ ಕೊರೊನಾ ನಿವಾರಣೆ?- ಫ್ಯಾಕ್ಟ್​ಚೆಕ್​ನಲ್ಲಿ ಬಯಲಾಯ್ತು ಸತ್ಯ.. ದಯವಿಟ್ಟು ಇಂಥದ್ದು ಮಾಡ್ಬೇಡಿ ಎಂದ ವೈದ್ಯರು

ಹಾಗಂತ ಲಿಂಬೆಯಿಂದ ಆರೋಗ್ಯಕ್ಕೆ ತುಂಬ ಉಪಯೋಗ ಇದೆ. ಆದರೆ ಕೊವಿಡ್​ 19 ಸೋಂಕಿತರಿಗೆ ಲಿಂಬುವನ್ನು ಅತ್ಯುತ್ತಮ ಔಷಧವಾಗಿ ಯಾವುದೇ ವೈದ್ಯರೂ ಇದುವರೆಗೆ ಪರಿಗಣಿಸಿಲ್ಲ.

2 ಹನಿ ಲಿಂಬೆ ರಸ ಮೂಗಿನಲ್ಲಿ ಹಾಕಿದರೆ ಕೊರೊನಾ ನಿವಾರಣೆ?- ಫ್ಯಾಕ್ಟ್​ಚೆಕ್​ನಲ್ಲಿ ಬಯಲಾಯ್ತು ಸತ್ಯ.. ದಯವಿಟ್ಟು ಇಂಥದ್ದು ಮಾಡ್ಬೇಡಿ ಎಂದ ವೈದ್ಯರು
ಲಿಂಬೆರಸದ ಪ್ರಾತಿನಿಧಿಕ ಚಿತ್ರ
Lakshmi Hegde
|

Updated on: May 05, 2021 | 12:59 PM

Share

ಇತ್ತೀಚೆಗೆ ಸಾಮಾಜಿಕ ಜಾಲತಾಣಗಳಲ್ಲಿ ಒಂದು ವಿಷಯ ಹರಿದಾಡುತ್ತಿದೆ. ಎರಡು ಹನಿ ಲಿಂಬೆ ರಸವನ್ನು ಮೂಗಿನ ಹೊಳ್ಳೆಗೆ ಹಾಕಿದರೆ ಕೊರೊನಾ ಸೋಂಕಿನಿಂದ ಪಾರಾಗಬಹುದು ಎಂಬ ಸಂದೇಶ ಅದು. ಹೀಗೆ ಮೂಗಿನಲ್ಲಿ ಎರಡು ಹನಿ ಲಿಂಬೆ ರಸ ಹಾಕಿಕೊಳ್ಳುವುದರಿಂದ ರೋಗನಿರೋಧಕ ಶಕ್ತಿ ಹೆಚ್ಚುತ್ತದೆ. ದೇಹದಲ್ಲಿ ಆಕ್ಸಿಜನ್ ಪ್ರಮಾಣವೂ ಹೆಚ್ಚುತ್ತದೆ. ಈ ಮೂಲಕ ಕೊರೊನಾದಿಂದ ಬೇಗನೇ ಪಾರಾಗಬಹುದು ಎಂಬ ವಿವರಗಳುಳ್ಳ ಪೋಸ್ಟ್ ತುಂಬ ವೈರಲ್ ಆಗುತ್ತಿದೆ. ಅದರಲ್ಲೂ ವ್ಯಕ್ತಿಯೋರ್ವ ತಾನು ಲಿಂಬೆ ರಸವನ್ನು ಮೂಗಿಗೆ ಬಿಟ್ಟುಕೊಂಡೇ ಕೊರೊನಾದಿಂದ ಪಾರಾಗಿದ್ದೇನೆ ಎಂದು ಹೇಳುತ್ತಿರುವ ವಿಡಿಯೋ ಕೂಡ ವೈರಲ್ ಆಗಿದೆ. ಇನ್ನು ಈ ವಿಚಾರದ ಪರ-ವಿರೋಧ ಚರ್ಚೆಗಳು ನಡೆಯುತ್ತಿದ್ದರೂ ಒಂದು ಸ್ಪಷ್ಟತೆಯಿಲ್ಲ. ಮೂಗಿನ ಹೊಳ್ಳೆಗೆ ಲಿಂಬೆ ರಸ ಹಾಕುವುದು ಎಷ್ಟು ಪರಿಣಾಮಕಾರಿ ಎಂಬುದು ಗೊತ್ತಿಲ್ಲ .

ಹಾಗಂತ ಲಿಂಬೆಯಿಂದ ಆರೋಗ್ಯಕ್ಕೆ ತುಂಬ ಉಪಯೋಗ ಇದೆ. ಆದರೆ ಕೊವಿಡ್​ 19 ಸೋಂಕಿತರಿಗೆ ಲಿಂಬುವನ್ನು ಅತ್ಯುತ್ತಮ ಔಷಧವಾಗಿ ಯಾವುದೇ ವೈದ್ಯರೂ ಇದುವರೆಗೆ ಪರಿಗಣಿಸಿಲ್ಲ. ಈ ರೋಗಕ್ಕೆ ವೈದ್ಯಕೀಯ ಲೋಕ ಬೇರೆಯದ್ದೇ ಸ್ವರೂಪದ ಔಷಧಗಳನ್ನು ಕೊಡುತ್ತದೆ. ಹೀಗೆ ಸೋಷಿಯಲ್ ಮೀಡಿಯಾಗಳಲ್ಲಿ ಲಿಂಬೆರಸದ ಬಗ್ಗೆ ಚರ್ಚೆ ಹೆಚ್ಚಾದ ಬೆನ್ನಲ್ಲೇ ಪಿಐಬಿ ಫ್ಯಾಕ್ಟ್​ಚೆಕ್​ ನಡೆಸಿದೆ. ಲಿಂಬೆ ರಸ ಮೂಗಿನಹೊಳ್ಳೆಗೆ ಹಾಕಿಕೊಂಡರೆ ಕೊರೊನಾ ಸೋಂಕು ಕಡಿಮೆಯಾಗುತ್ತದೆ ಎಂಬುದಕ್ಕೆ ವೈಜ್ಞಾನಿಕವಾಗಿ ಯಾವುದೇ ಪುರಾವೆ ಇಲ್ಲ ಎಂದು ಹೇಳಿದೆ. ಹಾಗೇ ಲಿಂಬೆ ರಸವನ್ನು ಮೂಗಿನ ಹೊಳ್ಳೆಗೆ ಬಿಟ್ಟಾಕ್ಷಣ ಕೊರೊನಾ ಸೋಂಕು ನಿವಾರಣೆಯಾಗುವುದಿಲ್ಲ. ಇದು ಕೊವಿಡ್ 19ಗೆ ಚಿಕಿತ್ಸೆ ಅಲ್ಲ ಎಂದು ಸ್ಪಷ್ಟಪಡಿಸಿದೆ.

ಪಿಐಬಿಯ ಅಧಿಕೃತ ಟ್ವಿಟರ್​ ಖಾತೆಯಲ್ಲಿ ಈ ಫ್ಯಾಕ್ಟ್​​ಚೆಕ್​ ಪೋಸ್ಟ್​​ ಮಾಡಲಾಗಿದೆ. ಸೋಷಿಯಲ್​ ಮೀಡಿಯಾಗಳಲ್ಲಿ ವೈರಲ್ ಆಗುತ್ತಿರುವ ವಿಡಿಯೋದಲ್ಲಿ, ಎರಡು ಹನಿ ಲಿಂಬೆರಸ ಕೊರೊನಾ ವೈರಸ್​ನ್ನು ಕೊಲ್ಲುತ್ತದೆ ಎಂದು ಹೇಳಲಾಗಿದೆ. ಆದರೆ ಇದೊಂದು ಫೇಕ್​ ವಿಡಿಯೋ. ಯಾವುದೇ ವೈಜ್ಞಾನಿಕ ಪುರಾವೆಗಳಿಲ್ಲ ಎಂದು ಟ್ವೀಟ್ ಮಾಡಿದೆ.

ಇಂಥ ಪ್ರಯೋಗಗಳನ್ನು ಮಾಡಬೇಡಿ ಇನ್ನು ಕೊರೊನಾ ಸೋಂಕಿತರು ಮನೆಯಲ್ಲಿ ಯಾವುದೇ ರೀತಿಯ ಪ್ರಯೋಗಗಳನ್ನು ಮಾಡಬಾರದು ಎಂದು ಮುಂಬೈನ ಆಸ್ಪತ್ರೆಯೊಂದರ ವೈದ್ಯ ಡಾ. ಚಂದ್ರವೀರ್ ಸಿಂಗ್ ಹೇಳಿದ್ದಾರೆ. ಲಿಂಬೆಯಲ್ಲಿ ವಿಟಮಿನ್ ಸಿ ಇರುತ್ತದೆ. ರೋಗನಿರೋಧಕ ಶಕ್ತಿಯನ್ನೂ ಹೆಚ್ಚಿಸುತ್ತದೆ. ಹಾಗಂತ ಅದರ ಹನಿಯನ್ನು ಮೂಗಿನಲ್ಲಿ ಬಿಡಬಾರದು. ಇದು ಮೂಗಿನ ಲೋಳೆಪೊರೆಯನ್ನು ಹಾನಿಮಾಡುತ್ತದೆ ಮತ್ತು ಸೈನಟೈಸ್​ಗೆ ಕಾರಣವಾಗುತ್ತದೆ ಎಂದು ಎಚ್ಚರಿಕೆ ನೀಡಿದ್ದಾರೆ.

ಹುಲಿಗೆಮ್ಮ ದೇವಿ ಹುಂಡಿಲಿ ಅಪಾರ ಆಭರಣ! 44 ದಿನಗಳಲ್ಲಿ 1.09 ಕೋಟಿ ಸಂಗ್ರಹ!
ಹುಲಿಗೆಮ್ಮ ದೇವಿ ಹುಂಡಿಲಿ ಅಪಾರ ಆಭರಣ! 44 ದಿನಗಳಲ್ಲಿ 1.09 ಕೋಟಿ ಸಂಗ್ರಹ!
ಗಿಲ್ಲಿ ಕಂಡ್ರೆ ರಕ್ಷಿತಾಗೆ ಅದೆಷ್ಟು ಪ್ರೀತಿ ನೋಡಿ; ಈ ವಿಡಿಯೋನೆ ಸಾಕ್ಷಿ
ಗಿಲ್ಲಿ ಕಂಡ್ರೆ ರಕ್ಷಿತಾಗೆ ಅದೆಷ್ಟು ಪ್ರೀತಿ ನೋಡಿ; ಈ ವಿಡಿಯೋನೆ ಸಾಕ್ಷಿ
S ಅಕ್ಷರದಿಂದ ಶುರುವಾಗುವ ಹೆಸರುಗಳಿಗೆ ಈ ವರ್ಷ ಅದೃಷ್ಟವೋ ಅದೃಷ್ಟ
S ಅಕ್ಷರದಿಂದ ಶುರುವಾಗುವ ಹೆಸರುಗಳಿಗೆ ಈ ವರ್ಷ ಅದೃಷ್ಟವೋ ಅದೃಷ್ಟ
ಇಂದು ಈ ರಾಶಿಯವರಿಗೆ ಐದು ಗ್ರಹಗಳ ಶುಭಫಲ ಇರಲಿದೆ
ಇಂದು ಈ ರಾಶಿಯವರಿಗೆ ಐದು ಗ್ರಹಗಳ ಶುಭಫಲ ಇರಲಿದೆ
ದಾರಿ ತಪ್ಪಿ ಊರೊಳಗೆ ಬಂದ ಜಿಂಕೆಯ ಬೆನ್ನಟ್ಟಿದ ನಾಯಿಗಳು; ಆಮೇಲೇನಾಯ್ತು?
ದಾರಿ ತಪ್ಪಿ ಊರೊಳಗೆ ಬಂದ ಜಿಂಕೆಯ ಬೆನ್ನಟ್ಟಿದ ನಾಯಿಗಳು; ಆಮೇಲೇನಾಯ್ತು?
ಸೊಸೆಗೆ ನೌಕರಿ ಕೊಟ್ಟಿಲ್ಲವೆಂದು ಅಂಗನವಾಡಿಗೆ ಬೀಗ ಜಡಿದ ಮಾಲೀಕ!
ಸೊಸೆಗೆ ನೌಕರಿ ಕೊಟ್ಟಿಲ್ಲವೆಂದು ಅಂಗನವಾಡಿಗೆ ಬೀಗ ಜಡಿದ ಮಾಲೀಕ!
ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ