AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

2 ಹನಿ ಲಿಂಬೆ ರಸ ಮೂಗಿನಲ್ಲಿ ಹಾಕಿದರೆ ಕೊರೊನಾ ನಿವಾರಣೆ?- ಫ್ಯಾಕ್ಟ್​ಚೆಕ್​ನಲ್ಲಿ ಬಯಲಾಯ್ತು ಸತ್ಯ.. ದಯವಿಟ್ಟು ಇಂಥದ್ದು ಮಾಡ್ಬೇಡಿ ಎಂದ ವೈದ್ಯರು

ಹಾಗಂತ ಲಿಂಬೆಯಿಂದ ಆರೋಗ್ಯಕ್ಕೆ ತುಂಬ ಉಪಯೋಗ ಇದೆ. ಆದರೆ ಕೊವಿಡ್​ 19 ಸೋಂಕಿತರಿಗೆ ಲಿಂಬುವನ್ನು ಅತ್ಯುತ್ತಮ ಔಷಧವಾಗಿ ಯಾವುದೇ ವೈದ್ಯರೂ ಇದುವರೆಗೆ ಪರಿಗಣಿಸಿಲ್ಲ.

2 ಹನಿ ಲಿಂಬೆ ರಸ ಮೂಗಿನಲ್ಲಿ ಹಾಕಿದರೆ ಕೊರೊನಾ ನಿವಾರಣೆ?- ಫ್ಯಾಕ್ಟ್​ಚೆಕ್​ನಲ್ಲಿ ಬಯಲಾಯ್ತು ಸತ್ಯ.. ದಯವಿಟ್ಟು ಇಂಥದ್ದು ಮಾಡ್ಬೇಡಿ ಎಂದ ವೈದ್ಯರು
ಲಿಂಬೆರಸದ ಪ್ರಾತಿನಿಧಿಕ ಚಿತ್ರ
Lakshmi Hegde
|

Updated on: May 05, 2021 | 12:59 PM

Share

ಇತ್ತೀಚೆಗೆ ಸಾಮಾಜಿಕ ಜಾಲತಾಣಗಳಲ್ಲಿ ಒಂದು ವಿಷಯ ಹರಿದಾಡುತ್ತಿದೆ. ಎರಡು ಹನಿ ಲಿಂಬೆ ರಸವನ್ನು ಮೂಗಿನ ಹೊಳ್ಳೆಗೆ ಹಾಕಿದರೆ ಕೊರೊನಾ ಸೋಂಕಿನಿಂದ ಪಾರಾಗಬಹುದು ಎಂಬ ಸಂದೇಶ ಅದು. ಹೀಗೆ ಮೂಗಿನಲ್ಲಿ ಎರಡು ಹನಿ ಲಿಂಬೆ ರಸ ಹಾಕಿಕೊಳ್ಳುವುದರಿಂದ ರೋಗನಿರೋಧಕ ಶಕ್ತಿ ಹೆಚ್ಚುತ್ತದೆ. ದೇಹದಲ್ಲಿ ಆಕ್ಸಿಜನ್ ಪ್ರಮಾಣವೂ ಹೆಚ್ಚುತ್ತದೆ. ಈ ಮೂಲಕ ಕೊರೊನಾದಿಂದ ಬೇಗನೇ ಪಾರಾಗಬಹುದು ಎಂಬ ವಿವರಗಳುಳ್ಳ ಪೋಸ್ಟ್ ತುಂಬ ವೈರಲ್ ಆಗುತ್ತಿದೆ. ಅದರಲ್ಲೂ ವ್ಯಕ್ತಿಯೋರ್ವ ತಾನು ಲಿಂಬೆ ರಸವನ್ನು ಮೂಗಿಗೆ ಬಿಟ್ಟುಕೊಂಡೇ ಕೊರೊನಾದಿಂದ ಪಾರಾಗಿದ್ದೇನೆ ಎಂದು ಹೇಳುತ್ತಿರುವ ವಿಡಿಯೋ ಕೂಡ ವೈರಲ್ ಆಗಿದೆ. ಇನ್ನು ಈ ವಿಚಾರದ ಪರ-ವಿರೋಧ ಚರ್ಚೆಗಳು ನಡೆಯುತ್ತಿದ್ದರೂ ಒಂದು ಸ್ಪಷ್ಟತೆಯಿಲ್ಲ. ಮೂಗಿನ ಹೊಳ್ಳೆಗೆ ಲಿಂಬೆ ರಸ ಹಾಕುವುದು ಎಷ್ಟು ಪರಿಣಾಮಕಾರಿ ಎಂಬುದು ಗೊತ್ತಿಲ್ಲ .

ಹಾಗಂತ ಲಿಂಬೆಯಿಂದ ಆರೋಗ್ಯಕ್ಕೆ ತುಂಬ ಉಪಯೋಗ ಇದೆ. ಆದರೆ ಕೊವಿಡ್​ 19 ಸೋಂಕಿತರಿಗೆ ಲಿಂಬುವನ್ನು ಅತ್ಯುತ್ತಮ ಔಷಧವಾಗಿ ಯಾವುದೇ ವೈದ್ಯರೂ ಇದುವರೆಗೆ ಪರಿಗಣಿಸಿಲ್ಲ. ಈ ರೋಗಕ್ಕೆ ವೈದ್ಯಕೀಯ ಲೋಕ ಬೇರೆಯದ್ದೇ ಸ್ವರೂಪದ ಔಷಧಗಳನ್ನು ಕೊಡುತ್ತದೆ. ಹೀಗೆ ಸೋಷಿಯಲ್ ಮೀಡಿಯಾಗಳಲ್ಲಿ ಲಿಂಬೆರಸದ ಬಗ್ಗೆ ಚರ್ಚೆ ಹೆಚ್ಚಾದ ಬೆನ್ನಲ್ಲೇ ಪಿಐಬಿ ಫ್ಯಾಕ್ಟ್​ಚೆಕ್​ ನಡೆಸಿದೆ. ಲಿಂಬೆ ರಸ ಮೂಗಿನಹೊಳ್ಳೆಗೆ ಹಾಕಿಕೊಂಡರೆ ಕೊರೊನಾ ಸೋಂಕು ಕಡಿಮೆಯಾಗುತ್ತದೆ ಎಂಬುದಕ್ಕೆ ವೈಜ್ಞಾನಿಕವಾಗಿ ಯಾವುದೇ ಪುರಾವೆ ಇಲ್ಲ ಎಂದು ಹೇಳಿದೆ. ಹಾಗೇ ಲಿಂಬೆ ರಸವನ್ನು ಮೂಗಿನ ಹೊಳ್ಳೆಗೆ ಬಿಟ್ಟಾಕ್ಷಣ ಕೊರೊನಾ ಸೋಂಕು ನಿವಾರಣೆಯಾಗುವುದಿಲ್ಲ. ಇದು ಕೊವಿಡ್ 19ಗೆ ಚಿಕಿತ್ಸೆ ಅಲ್ಲ ಎಂದು ಸ್ಪಷ್ಟಪಡಿಸಿದೆ.

ಪಿಐಬಿಯ ಅಧಿಕೃತ ಟ್ವಿಟರ್​ ಖಾತೆಯಲ್ಲಿ ಈ ಫ್ಯಾಕ್ಟ್​​ಚೆಕ್​ ಪೋಸ್ಟ್​​ ಮಾಡಲಾಗಿದೆ. ಸೋಷಿಯಲ್​ ಮೀಡಿಯಾಗಳಲ್ಲಿ ವೈರಲ್ ಆಗುತ್ತಿರುವ ವಿಡಿಯೋದಲ್ಲಿ, ಎರಡು ಹನಿ ಲಿಂಬೆರಸ ಕೊರೊನಾ ವೈರಸ್​ನ್ನು ಕೊಲ್ಲುತ್ತದೆ ಎಂದು ಹೇಳಲಾಗಿದೆ. ಆದರೆ ಇದೊಂದು ಫೇಕ್​ ವಿಡಿಯೋ. ಯಾವುದೇ ವೈಜ್ಞಾನಿಕ ಪುರಾವೆಗಳಿಲ್ಲ ಎಂದು ಟ್ವೀಟ್ ಮಾಡಿದೆ.

ಇಂಥ ಪ್ರಯೋಗಗಳನ್ನು ಮಾಡಬೇಡಿ ಇನ್ನು ಕೊರೊನಾ ಸೋಂಕಿತರು ಮನೆಯಲ್ಲಿ ಯಾವುದೇ ರೀತಿಯ ಪ್ರಯೋಗಗಳನ್ನು ಮಾಡಬಾರದು ಎಂದು ಮುಂಬೈನ ಆಸ್ಪತ್ರೆಯೊಂದರ ವೈದ್ಯ ಡಾ. ಚಂದ್ರವೀರ್ ಸಿಂಗ್ ಹೇಳಿದ್ದಾರೆ. ಲಿಂಬೆಯಲ್ಲಿ ವಿಟಮಿನ್ ಸಿ ಇರುತ್ತದೆ. ರೋಗನಿರೋಧಕ ಶಕ್ತಿಯನ್ನೂ ಹೆಚ್ಚಿಸುತ್ತದೆ. ಹಾಗಂತ ಅದರ ಹನಿಯನ್ನು ಮೂಗಿನಲ್ಲಿ ಬಿಡಬಾರದು. ಇದು ಮೂಗಿನ ಲೋಳೆಪೊರೆಯನ್ನು ಹಾನಿಮಾಡುತ್ತದೆ ಮತ್ತು ಸೈನಟೈಸ್​ಗೆ ಕಾರಣವಾಗುತ್ತದೆ ಎಂದು ಎಚ್ಚರಿಕೆ ನೀಡಿದ್ದಾರೆ.

Video: ತಂದೆ ತಾಯಿ ಜಗಳದಲ್ಲಿ ಮಗಳು ಸತ್ತೇ ಹೋದಳು!
Video: ತಂದೆ ತಾಯಿ ಜಗಳದಲ್ಲಿ ಮಗಳು ಸತ್ತೇ ಹೋದಳು!
ಎಣ್ಣೆ ನಶೆಯಲ್ಲಿ ನಾಯಿ ಜೊತೆ ಯುವಕನ ಡ್ಯಾನ್ಸ್​​: ವಿಡಿಯೋ ವೈರಲ್​
ಎಣ್ಣೆ ನಶೆಯಲ್ಲಿ ನಾಯಿ ಜೊತೆ ಯುವಕನ ಡ್ಯಾನ್ಸ್​​: ವಿಡಿಯೋ ವೈರಲ್​
‘ನಗ್ತಾ ಇರಿ, ಖುಷಿಯಾಗಿರಿ’; ಮಾತಿನ ಮೂಲಕ ವಿಶ್ ಮಾಡಿದ ಸುದೀಪ್
‘ನಗ್ತಾ ಇರಿ, ಖುಷಿಯಾಗಿರಿ’; ಮಾತಿನ ಮೂಲಕ ವಿಶ್ ಮಾಡಿದ ಸುದೀಪ್
ನಮಗೊಂದು ಟ್ವೀಟ್ ಮಾಡಿಕೊಡಿ: ಕೇರಳ ಸಿಎಂಗೆ ದುಂಬಾಲು ಬಿದ್ದ ಬಿಜೆಪಿ!
ನಮಗೊಂದು ಟ್ವೀಟ್ ಮಾಡಿಕೊಡಿ: ಕೇರಳ ಸಿಎಂಗೆ ದುಂಬಾಲು ಬಿದ್ದ ಬಿಜೆಪಿ!
ಹೊಸ ವರ್ಷಾಚರಣೆ ವೇಳೆ ಸ್ವಿಟ್ಜರ್​ಲ್ಯಾಂಡ್​ನ ಬಾರ್‌ನಲ್ಲಿ ಬಾಂಬ್ ಸ್ಫೋಟ
ಹೊಸ ವರ್ಷಾಚರಣೆ ವೇಳೆ ಸ್ವಿಟ್ಜರ್​ಲ್ಯಾಂಡ್​ನ ಬಾರ್‌ನಲ್ಲಿ ಬಾಂಬ್ ಸ್ಫೋಟ
ಹೊಸ ವರ್ಷದ ದಿನ ನಮ್ಮ ಮೆಟ್ರೋಗೆ ಬಂಪರ್​ ಆದಾಯ: ಕಲೆಕ್ಷನ್​ ಎಷ್ಟು?
ಹೊಸ ವರ್ಷದ ದಿನ ನಮ್ಮ ಮೆಟ್ರೋಗೆ ಬಂಪರ್​ ಆದಾಯ: ಕಲೆಕ್ಷನ್​ ಎಷ್ಟು?
ಪರೋಕ್ಷವಾಗಿ ಸಿಎಂ ಆಗುವ ಆಸೆ ವ್ಯಕ್ತಪಡಿಸಿದ ಡಾ. ಜಿ. ಪರಮೇಶ್ವರ್
ಪರೋಕ್ಷವಾಗಿ ಸಿಎಂ ಆಗುವ ಆಸೆ ವ್ಯಕ್ತಪಡಿಸಿದ ಡಾ. ಜಿ. ಪರಮೇಶ್ವರ್
ಹೂ, ಎಲೆಗಳ ಸಿಂಗಾರ; ವಿಶೇಷ ಅಲಂಕಾರದಲ್ಲಿ ಕಂಗೊಳಿಸಿದ ನಾಡ ದೇವತೆ
ಹೂ, ಎಲೆಗಳ ಸಿಂಗಾರ; ವಿಶೇಷ ಅಲಂಕಾರದಲ್ಲಿ ಕಂಗೊಳಿಸಿದ ನಾಡ ದೇವತೆ
ಮಂತ್ರಾಲಯದಲ್ಲಿ ಹೊಸ ವರ್ಷದ ಸಂಭ್ರಮ: ಸಾಗರೋಪಾದಿಯಲ್ಲಿ ಹರಿದುಬಂದ ಭಕ್ತರು
ಮಂತ್ರಾಲಯದಲ್ಲಿ ಹೊಸ ವರ್ಷದ ಸಂಭ್ರಮ: ಸಾಗರೋಪಾದಿಯಲ್ಲಿ ಹರಿದುಬಂದ ಭಕ್ತರು
ಪಕ್ಕದಮನೆಯವರ ಬಗ್ಗೆ ಮಾತನಾಡಲ್ಲ; ವಿಜಯಲಕ್ಷ್ಮೀ ಬಗ್ಗೆ ಸುದೀಪ್ ಮಾತು
ಪಕ್ಕದಮನೆಯವರ ಬಗ್ಗೆ ಮಾತನಾಡಲ್ಲ; ವಿಜಯಲಕ್ಷ್ಮೀ ಬಗ್ಗೆ ಸುದೀಪ್ ಮಾತು