ವ್ಯಕ್ತಿಯ ಮೇಲೆ ಚಿರತೆ ಅಟ್ಯಾಕ್ ಮಾಡಿದಾಗ ನಾಯಿಗಳು ಏನು ಮಾಡಿದವು? ವಿಡಿಯೋ ಇದೆ

ಹೈದರಾಬಾದ್‌: ಕೊರೊನಾ ಲಾಕ್​ಡೌನ್​ನಿಂದ ಮಾನವ ಸಂಚಾರವಿಲ್ಲದೆ ಎಲ್ಲಾ ನಗರಗಳು ಸ್ತಬ್ಧಗೊಂಡಿವೆ. ಇದೇ ಸಮಯದಲ್ಲಿ ಕಾಡು ಪ್ರಾಣಿಗಳು ನಗರಗಳಿಗೆ ಎಂಟ್ರಿ ಕೊಡುತ್ತಿರುವುದು ಸಾಮಾನ್ಯವಾಗಿದೆ. ಸದ್ಯ ಹೈದರಾಬಾದ್​ನ ಮಹಾನಗರದಲ್ಲಿ ಚಿರತೆ ಮನುಷ್ಯನ ಮೇಲೆ ಅಟ್ಯಾಕ್ ಮಾಡಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಸಿಕ್ಕಾಪಟ್ಟೆ ವೈರಲ್ ಆಗುತ್ತಿದೆ. ಮೇ 14ರಂದು ಈ ಘಟನೆ ನಡೆದಿದೆ. ಮೊದಲಿಗೆ ಇಬ್ಬರು ಮನುಷ್ಯರನ್ನು ಚಿರತೆ ಬೆನ್ನಟ್ಟುತ್ತೆ. ಚಿರತೆ ಸಮೀಪಿಸುವ ವೇಳೆಗೆ ಅದರಲ್ಲಿ ಒಬ್ಬ ಪಕ್ಕದಲ್ಲೇ ಇರುವ ಟ್ರಕ್​ ಮೇಲೆ ಹತ್ತಿ ರಕ್ಷಿಸಿಕೊಳ್ಳುತ್ತಾನೆ. ಆದ್ರೆ ಮತ್ತೊಬ್ಬ ಟ್ರಕ್ ಹತ್ತಲು […]

ವ್ಯಕ್ತಿಯ ಮೇಲೆ ಚಿರತೆ ಅಟ್ಯಾಕ್ ಮಾಡಿದಾಗ ನಾಯಿಗಳು ಏನು ಮಾಡಿದವು? ವಿಡಿಯೋ ಇದೆ
ಸಾಧು ಶ್ರೀನಾಥ್​

Updated on: May 19, 2020 | 2:10 PM

ಹೈದರಾಬಾದ್‌: ಕೊರೊನಾ ಲಾಕ್​ಡೌನ್​ನಿಂದ ಮಾನವ ಸಂಚಾರವಿಲ್ಲದೆ ಎಲ್ಲಾ ನಗರಗಳು ಸ್ತಬ್ಧಗೊಂಡಿವೆ. ಇದೇ ಸಮಯದಲ್ಲಿ ಕಾಡು ಪ್ರಾಣಿಗಳು ನಗರಗಳಿಗೆ ಎಂಟ್ರಿ ಕೊಡುತ್ತಿರುವುದು ಸಾಮಾನ್ಯವಾಗಿದೆ. ಸದ್ಯ ಹೈದರಾಬಾದ್​ನ ಮಹಾನಗರದಲ್ಲಿ ಚಿರತೆ ಮನುಷ್ಯನ ಮೇಲೆ ಅಟ್ಯಾಕ್ ಮಾಡಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಸಿಕ್ಕಾಪಟ್ಟೆ ವೈರಲ್ ಆಗುತ್ತಿದೆ.

ಮೇ 14ರಂದು ಈ ಘಟನೆ ನಡೆದಿದೆ. ಮೊದಲಿಗೆ ಇಬ್ಬರು ಮನುಷ್ಯರನ್ನು ಚಿರತೆ ಬೆನ್ನಟ್ಟುತ್ತೆ. ಚಿರತೆ ಸಮೀಪಿಸುವ ವೇಳೆಗೆ ಅದರಲ್ಲಿ ಒಬ್ಬ ಪಕ್ಕದಲ್ಲೇ ಇರುವ ಟ್ರಕ್​ ಮೇಲೆ ಹತ್ತಿ ರಕ್ಷಿಸಿಕೊಳ್ಳುತ್ತಾನೆ. ಆದ್ರೆ ಮತ್ತೊಬ್ಬ ಟ್ರಕ್ ಹತ್ತಲು ಪ್ರಯತ್ನಿಸುವ ವೇಳೆಗೆ ಚಿರತೆ ಅಟ್ಯಾಕ್ ಮಾಡಿ ಕಾಲನ್ನು ಹಿಡಿದುಕೊಳ್ಳುತ್ತೆ. ಆತ ಕಾಲನ್ನು ಅಲುಗಾಡಿಸಿದಾಗ ಚಿರತೆ ಆತನನ್ನು ಬಿಟ್ಟುಬಿಡುತ್ತೆ.

ಇದೇ ವೇಳೆ 6 ನಾಯಿಗಳು ಚಿರತೆಯನ್ನು ಸುತ್ತುವರೆಯುತ್ತೆ. ನಂತರ ಇನ್ನೂ ಒಂದು ನಾಯಿಯೂ ಸೇರಿಕೊಳ್ಳುತ್ತೆ. ಏಳೂ ನಾಯಿಗಳು ಚಿರತೆಯನ್ನ ನೋಡಿ ಬೊಗಳುತ್ತವೆ. ಆಗ ಅಲ್ಲಿಂದ ತಪ್ಪಿಸಿಕೊಳ್ಳಲು ಚಿರತೆ ಅಂಗಡಿಯ ಷಟರ್ ಮೇಲೆ ಹಾರಲು ಯತ್ನಿಸುತ್ತೆ. ಆದ್ರೆ ಸಾಧ್ಯವಾಗುವುದಿಲ್ಲ. ಈ ವೇಳೆ ಕೋರೆಹಲ್ಲುಗಳನ್ನ ತೋರಿಸಿಕೊಂಡು ನಾಯಿಗಳ ಮೇಲೆ ಅಟ್ಯಾಕ್ ಮಾಡಲು ಮುಂದಾಗುತ್ತೆ. ನಂತರ ನಾಯಿಗಳು ಅಲ್ಲಿಂದ ತೆರಳಿದ ಬಳಿಕ ಚಿರತೆ ಲಾರಿ ಕೆಳಗೆ ಬಚ್ಚಿಟ್ಟುಕೊಂಡು, ಪರಾರಿಯಾಗುತ್ತೆ.

Published On - 12:23 pm, Tue, 19 May 20

sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Follow Us