ಪ್ರಧಾನಿ ಮೋದಿ ಪ್ರಮಾಣವಚನ ಸಮಾರಂಭದಲ್ಲಿ ಕಾಣಿಸಿಕೊಂಡ ನಿಗೂಢ ಪ್ರಾಣಿ ಯಾವುದು? ದೆಹಲಿ ಪೊಲೀಸ್ ಹೇಳಿದ್ದೇನು?

ಪ್ರಧಾನಿ ನರೇಂದ್ರ ಮೋದಿ ಪ್ರಮಾಣವಚನ ಸಮಾರಂಭದಲ್ಲಿ ವೇದಿಕೆಯ ಹಿಂಭಾಗ ಪ್ರಾಣಿಯೊಂದು ಗೋಚರವಾಗಿದ್ದು, ಕೆಲವರು ಅದನ್ನು ಬೆಕ್ಕು ಎಂದರೆ ಕೆಲವರು ನಾಯಿ, ಚಿರತೆ ಇರಬಹುದು ಎಂದು ಊಹಿಸಿದ್ದರು ಅದಕ್ಕೆ ದೆಹಲಿ ಪೊಲೀಸರು ಸ್ಪಷ್ಟನೆ ನೀಡಿದ್ದಾರೆ.

ಪ್ರಧಾನಿ ಮೋದಿ ಪ್ರಮಾಣವಚನ ಸಮಾರಂಭದಲ್ಲಿ ಕಾಣಿಸಿಕೊಂಡ ನಿಗೂಢ ಪ್ರಾಣಿ ಯಾವುದು? ದೆಹಲಿ ಪೊಲೀಸ್ ಹೇಳಿದ್ದೇನು?
Follow us
|

Updated on: Jun 11, 2024 | 10:10 AM

ಪ್ರಧಾನಿ ನರೇಂದ್ರ ಮೋದಿ(Narendra Modi) ಪ್ರಮಾಣವಚನ ಕಾರ್ಯಕ್ರಮದಂದು ವೇದಿಕೆ ಹಿಂಭಾಗ ಕಾಣಿಸಿಕೊಂಡ ನಿಗೂಢ ಪ್ರಾಣಿಯ ಕುರಿತು ಎಲ್ಲೆಡೆ ಚರ್ಚೆ ನಡೆಯುತ್ತಿದೆ. ಪ್ರಧಾನಿ ನರೇಂದ್ರ ಮೋದಿ ಜೂನ್​ 9ರಂದು ಮೂರನೇ ಅವಧಿಗೆ ಪ್ರಧಾನಿಯಾಗಿ ಪ್ರಮಾಣವಚನ ಸ್ವೀಕರಿಸಿದ್ದಾರೆ. ವಿಡಿಯೋವೊಂದರಲ್ಲಿ ಸಚಿವರು ಪ್ರಮಾಣವಚನ ಸ್ವೀಕರಿಸುವಾಗ ವೇದಿಕೆ ಹಿಂಭಾಗ ಪ್ರಾಣಿಯೊಂದು ಹಾದು ಹೋಗುವುದನ್ನು ಕಾಣಬಹುದು. ಆ ಪ್ರಾಣಿ ಚಿರತೆಯಾಗಿರಬಹುದಾ ಎಂದು ಹಲವು ಮಂದಿ ಪ್ರಶ್ನೆ ಮಾಡಿದ್ದರು ಆದರೆ ಅದಕ್ಕೆ ದೆಹಲಿ ಪೊಲೀಸ್​ ಸ್ಪಷ್ಟನೆ ನೀಡಿದೆ.

ದೆಹಲಿ ಪೊಲೀಸರು ಈ ಸುದ್ದಿಯನ್ನು ವದಂತಿ ಎಂದು ಕರೆದಿದ್ದಾರೆ ವರದಿಗಳನ್ನು ನಿರಾಕರಿಸಿದ ದೆಹಲಿ ಪೊಲೀಸರು ಸಾಮಾಜಿಕ ಜಾಲತಾಣದಲ್ಲಿ ಬರೆದುಕೊಂಡಿದ್ದಾರೆ. ದೆಹಲಿ ಪೊಲೀಸರು ತನ್ನ ಎರಡನೇ ಪೋಸ್ಟ್‌ನಲ್ಲಿ , ಕೆಲವು ಮಾಧ್ಯಮಗಳು ಮತ್ತು ಸಾಮಾಜಿಕ ಮಾಧ್ಯಮ ಹ್ಯಾಂಡಲ್‌ಗಳು ನಿನ್ನೆ ರಾಷ್ಟ್ರಪತಿ ಭವನದಲ್ಲಿ ನಡೆದ ಪ್ರಮಾಣವಚನ ಸಮಾರಂಭದ ನೇರ ಪ್ರಸಾರದಲ್ಲಿ ತೆಗೆದ ಪ್ರಾಣಿಯ ಚಿತ್ರವನ್ನು ತೋರಿಸುತ್ತಿವೆ ಮತ್ತು ಅದು ಕಾಡು ಪ್ರಾಣಿ ಎಂದು ಹೇಳುತ್ತಿದೆ. ಅದು ಸಂಪೂರ್ಣ ಸುಳ್ಳು ಎಂದು ಹೇಳಿದೆ.

ದುರ್ಗಾದಾಸ್​ ಪ್ರಮಾಣವಚನ ತೆಗೆದುಕೊಳ್ಳುತ್ತಿರುವ ಸಂದರ್ಭ ದುರ್ಗಾದಾಸ್ ಅವರು ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸುತ್ತಿದ್ದ ಸಂದರ್ಭ. ಈ ವೇಳೆ ರಾಷ್ಟ್ರಪತಿ ಭವನದ ಹಿಂದೆ ಯಾವುದೋ ಪ್ರಾಣಿ ನಡೆದುಕೊಂಡು ಬರುತ್ತಿರುವುದು ಕ್ಯಾಮರಾದಲ್ಲಿ ಕಂಡುಬಂದಿದೆ. ವಿಡಿಯೋದಲ್ಲಿ ಕಾಣಸಿಗುವ ಈ ಪ್ರಾಣಿಯನ್ನು ಕೆಲವರು ಚಿರತೆ ಎಂದು ಕರೆದರೆ ಕೆಲವರು ಬೆಕ್ಕು ಎಂದು ಕರೆದಿದ್ದಾರೆ.

ಮತ್ತಷ್ಟು ಓದಿ: Modi 3.0 Cabinet: ಮೋದಿ 3ನೇ ಬಾರಿಗೆ ಪ್ರಧಾನಿಯಾಗಿ ಪ್ರಮಾಣವಚನ ಸ್ವೀಕರಿಸಿದ ಬಳಿಕ ತೆಗೆದುಕೊಂಡ ಮೊದಲ ನಿರ್ಧಾರ ಇದು

ಇದು ಯಾವ ಪ್ರಾಣಿ ಎಂದು ತಿಳಿಯಲು ಜನರು ಕಾತುರರಾಗಿದ್ದರು ಮತ್ತು ಇಷ್ಟು ಭದ್ರತೆಯ ನಡುವೆ ಚಿರತೆ ರಾಷ್ಟ್ರಪತಿ ಭವನವನ್ನು ಹೇಗೆ ತಲುಪಿತು? ದೇಶಾದ್ಯಂತ ಮಾಧ್ಯಮ ಚಾನೆಲ್‌ಗಳು ಮತ್ತು ಸಾಮಾಜಿಕ ಮಾಧ್ಯಮಗಳಲ್ಲಿ ಈ ಕುರಿತು ವಿವಿಧ ರೀತಿಯ ಸುದ್ದಿಗಳನ್ನು ಹರಡಲಾಯಿತು. ಆದರೆ, ಇದೀಗ ದೆಹಲಿ ಪೊಲೀಸರು ಅಧಿಕೃತವಾಗಿ ಆ ಪ್ರಾಣಿ ನಿಗೂಢ ಪ್ರಾಣಿಯಲ್ಲ, ರಾಷ್ಟ್ರಪತಿ ಭವನದ ಸಾಕು ಬೆಕ್ಕು ಎಂದು ಖಚಿತಪಡಿಸಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ತಾಜಾ ಸುದ್ದಿ
Nithya Bhavishya: ಶನಿವಾರದ ನಿಮ್ಮ ರಾಶಿ ಭವಿಷ್ಯ ತಿಳಿಯಿರಿ
Nithya Bhavishya: ಶನಿವಾರದ ನಿಮ್ಮ ರಾಶಿ ಭವಿಷ್ಯ ತಿಳಿಯಿರಿ
ಟ್ರಾಫಿಕ್ ರೂಲ್ಸ್​ ಉಲ್ಲಂಘಿಸುವವರೇ ಹುಷಾರ್​! ಬಂದಿದೆ ಉನ್ನತ ತಂತ್ರಜ್ಞಾನ
ಟ್ರಾಫಿಕ್ ರೂಲ್ಸ್​ ಉಲ್ಲಂಘಿಸುವವರೇ ಹುಷಾರ್​! ಬಂದಿದೆ ಉನ್ನತ ತಂತ್ರಜ್ಞಾನ
ಮಂಗಳೂರು: ಸುಂಟರಗಾಳಿಗೆ ಧರೆಗೆ ಉರುಳಿದ ವಿದ್ಯುತ್ ಕಂಬ, ಮರ; ವಿಡಿಯೋ ನೋಡಿ
ಮಂಗಳೂರು: ಸುಂಟರಗಾಳಿಗೆ ಧರೆಗೆ ಉರುಳಿದ ವಿದ್ಯುತ್ ಕಂಬ, ಮರ; ವಿಡಿಯೋ ನೋಡಿ
ಚಾಮುಂಡಿ ದರ್ಶನಕ್ಕೆ ಬಂದ ದಿನಕರ್, ಚಿಕ್ಕಣ್ಣ; ಜನಜಂಗುಳಿಯಲ್ಲಿ ಹೈರಾಣು
ಚಾಮುಂಡಿ ದರ್ಶನಕ್ಕೆ ಬಂದ ದಿನಕರ್, ಚಿಕ್ಕಣ್ಣ; ಜನಜಂಗುಳಿಯಲ್ಲಿ ಹೈರಾಣು
‘ಮಾರ್ಟಿನ್’ ಮನಸ್ತಾಪ; ಕಮಿಷನ್ ಆರೋಪಕ್ಕೆ ಎ.ಪಿ. ಅರ್ಜುನ್ ಸುದ್ದಿಗೋಷ್ಠಿ
‘ಮಾರ್ಟಿನ್’ ಮನಸ್ತಾಪ; ಕಮಿಷನ್ ಆರೋಪಕ್ಕೆ ಎ.ಪಿ. ಅರ್ಜುನ್ ಸುದ್ದಿಗೋಷ್ಠಿ
ಕುಮಾರಸ್ವಾಮಿಯವರಿಗೆ ರಾಮನಗರ ಜನರ ನಾಡಿಮಿಡಿತ ಗೊತ್ತಿಲ್ಲ:ಇಕ್ಬಾಲ್ ಹುಸ್ಸೇನ್
ಕುಮಾರಸ್ವಾಮಿಯವರಿಗೆ ರಾಮನಗರ ಜನರ ನಾಡಿಮಿಡಿತ ಗೊತ್ತಿಲ್ಲ:ಇಕ್ಬಾಲ್ ಹುಸ್ಸೇನ್
ನನಗೆ ಸೈಟು ಸಿಕ್ಕಿದ್ದು ನಿಜ ಆದರೆ ಅದು 1984ರಲ್ಲಿ: ಹೆಚ್ ಡಿ ಕುಮಾರಸ್ವಾಮಿ
ನನಗೆ ಸೈಟು ಸಿಕ್ಕಿದ್ದು ನಿಜ ಆದರೆ ಅದು 1984ರಲ್ಲಿ: ಹೆಚ್ ಡಿ ಕುಮಾರಸ್ವಾಮಿ
ರಾಮನಗರ ಇನ್ನು ಮುಂದೆ ರಾಮನಗರವಲ್ಲ ಬೆಂಗಳೂರು ದಕ್ಷಿಣ ಜಿಲ್ಲೆ!
ರಾಮನಗರ ಇನ್ನು ಮುಂದೆ ರಾಮನಗರವಲ್ಲ ಬೆಂಗಳೂರು ದಕ್ಷಿಣ ಜಿಲ್ಲೆ!
ಆಫೀಸಲ್ಲಿ ಗಬಕ್ಕಂತ ಹಾವು ಹಿಡಿದ ಮಹಿಳೆ, ನೋಡಿದರೆ ಎದೆ ಝಲ್ಲೆನ್ನುತ್ತೆ!
ಆಫೀಸಲ್ಲಿ ಗಬಕ್ಕಂತ ಹಾವು ಹಿಡಿದ ಮಹಿಳೆ, ನೋಡಿದರೆ ಎದೆ ಝಲ್ಲೆನ್ನುತ್ತೆ!
ನದಿಲಿ ಕೊಚ್ಚಿಕೊಂಡು ಹೋಗ್ತಿದ್ದ ಹಸು ಉಳಿಸಲು ಜೀವ ಪಣಕ್ಕಿಟ್ಟ ಹೋಂ ಗಾರ್ಡ್ಸ್
ನದಿಲಿ ಕೊಚ್ಚಿಕೊಂಡು ಹೋಗ್ತಿದ್ದ ಹಸು ಉಳಿಸಲು ಜೀವ ಪಣಕ್ಕಿಟ್ಟ ಹೋಂ ಗಾರ್ಡ್ಸ್