AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನೊಯ್ಡಾದ ರೆಸಿಡೆನ್ಷಿಯಲ್ ಪ್ರದೇಶದಲ್ಲಿ ಮತ್ತೆ ಚಿರತೆ ಪ್ರತ್ಯಕ್ಷ; ಅರಣ್ಯಾಧಿಕಾರಿಗಳಿಂದ ತೀವ್ರ ಹುಡುಕಾಟ

ನೋಯ್ಡಾದ ಸೆಕ್ಟರ್ 16ರಲ್ಲಿ ಅಜ್ನಾರಾ ಲೀ ಗಾರ್ಡನ್ ಸೊಸೈಟಿಯಲ್ಲಿ ನಿರ್ಮಾಣ ಹಂತದಲ್ಲಿದ್ದ ಕಟ್ಟಡದಲ್ಲಿ ಚಿರತೆ ಕಾಣಿಸಿಕೊಂಡಿದೆ. ಚಿರತೆಯ ಪತ್ತೆಗೆ ಅರಣ್ಯ ಇಲಾಖೆ ಶೋಧ ಕಾರ್ಯ ಆರಂಭಿಸಿದೆ.

ನೊಯ್ಡಾದ ರೆಸಿಡೆನ್ಷಿಯಲ್ ಪ್ರದೇಶದಲ್ಲಿ ಮತ್ತೆ ಚಿರತೆ ಪ್ರತ್ಯಕ್ಷ; ಅರಣ್ಯಾಧಿಕಾರಿಗಳಿಂದ ತೀವ್ರ ಹುಡುಕಾಟ
ಚಿರತೆಗಾಗಿ ಹುಡುಕಾಡುತ್ತಿರುವ ಅರಣ್ಯ ಇಲಾಖೆ ಸಿಬ್ಬಂದಿ
TV9 Web
| Edited By: |

Updated on: Jan 04, 2023 | 1:36 PM

Share

ನೋಯ್ಡಾ: ನೊಯ್ಡಾದ (Noida) ಅಜ್ನಾರಾ ಲೆ ಗಾರ್ಡನ್ ಸೊಸೈಟಿಯಲ್ಲಿ ಮತ್ತೆ ಚಿರತೆ (Leopard) ಕಾಣಿಸಿಕೊಂಡಿದೆ. ಜನವರಿ 3ರಂದು ಹೌಸಿಂಗ್ ಸೊಸೈಟಿಯ ಆವರಣದಲ್ಲಿ ಚಿರತೆ ಅಡ್ಡಾಡುತ್ತಿರುವುದು ಕಂಡುಬಂದಿದೆ. ಈ ರೆಸಿಡೆನ್ಷಿಯಲ್ ಏರಿಯಾದಲ್ಲಿ ನಿರ್ಮಾಣ ಹಂತದಲ್ಲಿರುವ ಕಟ್ಟಡದ ನೆಲಮಾಳಿಗೆಯತ್ತ ಚಿರತೆ ಓಡುತ್ತಿರುವ ವಿಡಿಯೋ (Video Viral) ಆನ್‌ಲೈನ್‌ನಲ್ಲಿ ಕಾಣಿಸಿಕೊಂಡಿದೆ. ಈ ಚಿರತೆಯ ದೃಶ್ಯವು ನೊಯ್ಡಾದ ಸೆಕ್ಟರ್ 16ರಲ್ಲಿರುವ ಅಜ್ನಾರಾ ಲೆ ಗಾರ್ಡನ್ ಸೊಸೈಟಿಯ ನಿವಾಸಿಗಳಲ್ಲಿ ಭಯವನ್ನು ಉಂಟುಮಾಡಿದೆ.

ಚಿರತೆಯ ಪತ್ತೆಗೆ ಅರಣ್ಯ ಇಲಾಖೆ ಶೋಧ ಕಾರ್ಯ ಆರಂಭಿಸಿದೆ. ನೋಯ್ಡಾದ ಸೆಕ್ಟರ್ 16ರಲ್ಲಿ ಅಜ್ನಾರಾ ಲೀ ಗಾರ್ಡನ್ ಸೊಸೈಟಿಯಲ್ಲಿ ನಿರ್ಮಾಣ ಹಂತದಲ್ಲಿದ್ದ ಕಟ್ಟಡದಲ್ಲಿ ಚಿರತೆ ಕಾಣಿಸಿಕೊಂಡಿದೆ ಎಂದು ಅರಣ್ಯ ಇಲಾಖೆ ಅಧಿಕಾರಿ (ಎಫ್‌ಡಿಒ) ಪ್ರಮೋದ್ ಶ್ರೀವಾಸ್ತವ ಖಚಿತಪಡಿಸಿದ್ದಾರೆ. ಆ ಸ್ಥಳಕ್ಕೆ ಅರಣ್ಯಾಧಿಕಾರಿಗಳ ತಂಡವೊಂದು ಧಾವಿಸಿದೆ. ಚಿರತೆಯನ್ನು ಹಿಡಿಯಲು ಅರಣ್ಯಾಧಿಕಾರಿಗಳ ತಂಡಕ್ಕೆ ಸಹಾಯ ಮಾಡಲು ಮೀರತ್‌ನ ತಜ್ಞರನ್ನು ಸಹ ನಿಯೋಜಿಸಲಾಗಿದೆ. ಚಿರತೆಯನ್ನು ಹಿಡಿಯಲು ಅರಣ್ಯ ಇಲಾಖೆಯಿಂದ ಬೋನು ಹಾಕಲು ಆದೇಶಿಸಲಾಗಿದೆ.

ಇದನ್ನೂ ಓದಿ: Mandya News: ಮಂಡ್ಯದಲ್ಲಿ ಮುಂದುವರೆದ ಚಿರತೆ ದಾಳಿ, ಚಿರತೆ ಬಾಯಿಗೆ ತುತ್ತಾದ ಹಸು, ಮಾಲೀಕನ ಗೋಳಾಟ

ಅರಣ್ಯಾಧಿಕಾರಿಗಳ ತಂಡ ಚಿರತೆಯನ್ನು ಹಿಡಿಯಲು ಹಲವು ಗಂಟೆಗಳ ಕಾಲ ಪ್ರಯತ್ನಿಸಿತು. ಆದರೆ ಯಶಸ್ವಿಯಾಗಲಿಲ್ಲ. ನಿರ್ಮಾಣ ಹಂತದಲ್ಲಿರುವ ಸೊಸೈಟಿಯ ಕಟ್ಟಡದಲ್ಲಿ ಚಿರತೆಗೆ ಓಡಲು ಮತ್ತು ಅಡಗಿಕೊಳ್ಳಲು ಸಾಕಷ್ಟು ಜಾಗವಿದ್ದುದರಿಂದ ಚಿರತೆ ತಪ್ಪಿಸಿಕೊಂಡಿತು.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಬೆಂಗಳೂರಿನಲ್ಲಿ 3 ವರ್ಷಗಳಲ್ಲಿ 19 ಸಾವಿರ ಮರಗಳಿಗೆ ಕೊಡಲಿ!
ಬೆಂಗಳೂರಿನಲ್ಲಿ 3 ವರ್ಷಗಳಲ್ಲಿ 19 ಸಾವಿರ ಮರಗಳಿಗೆ ಕೊಡಲಿ!
ಇಂದು ಆಷಾಢ ಅಮಾವಾಸ್ಯೆ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇಂದು ಆಷಾಢ ಅಮಾವಾಸ್ಯೆ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇರಾನ್ ಜಲಾಂತರ್ಗಾಮಿ ಕೇಂದ್ರದ ಮೇಲೆ ಅಮೆರಿಕದಿಂದ ಕಡಲ ಡ್ರೋನ್ ದಾಳಿ
ಇರಾನ್ ಜಲಾಂತರ್ಗಾಮಿ ಕೇಂದ್ರದ ಮೇಲೆ ಅಮೆರಿಕದಿಂದ ಕಡಲ ಡ್ರೋನ್ ದಾಳಿ
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​